AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​​ನಲ್ಲಿ ನಾಯಕತ್ವದಿಂದ ಸೂರ್ಯಕುಮಾರ್ ಯಾದವ್ ವಜಾ

Team India Captain: ಭಾರತ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಏಕದಿನ ಹಾಗೂ ಟೆಸ್ಟ್ ತಂಡಗಳಿಗೆ ಶುಭ್​ಮನ್ ಗಿಲ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇನ್ನು ಟಿ20 ತಂಡದ ಕ್ಯಾಪ್ಟನ್ ಆಗಿ ಸೂರ್ಯಕುಮಾರ್ ಯಾದವ್ ಮುಂದುವರೆದಿದ್ದಾರೆ. ಅತ್ತ ಈ ಹಿಂದೆ ಮೂರು ಸ್ವರೂಪಗಳಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ರೋಹಿತ್ ಶರ್ಮಾ ಏಕದಿನ ತಂಡದಲ್ಲಿ ಬ್ಯಾಟರ್ ಆಗಿ ಆಯ್ಕೆಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 05, 2025 | 10:58 AM

Share
ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕ್ಯಾಪ್ಟನ್ ಆಗಿ ಪಾದಾರ್ಪಣೆ ಮಾಡಿದ್ದ ಗಿಲ್, ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕ್ಯಾಪ್ಟನ್ ಆಗಿ ಪಾದಾರ್ಪಣೆ ಮಾಡಿದ್ದ ಗಿಲ್, ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

1 / 5
ಇದಕ್ಕೂ ಮುನ್ನ ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇದೀಗ ಈ ಜವಾಬ್ದಾರಿಯುತ ಸ್ಥಾನಗಳನ್ನು ಶುಭ್​ಮನ್ ಗಿಲ್ ಅಲಂಕರಿಸಿದ್ದಾರೆ. ಇನ್ನು ಟಿ20 ತಂಡದ ನಾಯಕತ್ವ ಒಲಿಯಲು ಗಿಲ್ ಮಾರ್ಚ್​ವರೆಗೆ ಕಾಯಲೇಬೇಕು.

ಇದಕ್ಕೂ ಮುನ್ನ ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇದೀಗ ಈ ಜವಾಬ್ದಾರಿಯುತ ಸ್ಥಾನಗಳನ್ನು ಶುಭ್​ಮನ್ ಗಿಲ್ ಅಲಂಕರಿಸಿದ್ದಾರೆ. ಇನ್ನು ಟಿ20 ತಂಡದ ನಾಯಕತ್ವ ಒಲಿಯಲು ಗಿಲ್ ಮಾರ್ಚ್​ವರೆಗೆ ಕಾಯಲೇಬೇಕು.

2 / 5
ಅಂದರೆ 2026ರ ಟಿ20 ವಿಶ್ವಕಪ್​ವರೆಗೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗಿ ಮುಂದುವರೆಯಲಿದ್ದಾರೆ. ಈ ಟಿ20 ವಿಶ್ವಕಪ್ ಬಳಿಕ ಸೂರ್ಯಕುಮಾರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಅಂದರೆ 2026ರ ಟಿ20 ವಿಶ್ವಕಪ್​ವರೆಗೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗಿ ಮುಂದುವರೆಯಲಿದ್ದಾರೆ. ಈ ಟಿ20 ವಿಶ್ವಕಪ್ ಬಳಿಕ ಸೂರ್ಯಕುಮಾರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

3 / 5
ಅಲ್ಲದೆ ಮೂರು ಸ್ವರೂಪಗಳಿಗೂ ಏಕೈಕ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಟೆಸ್ಟ್​ ಹಾಗೂ ಏಕದಿನ ತಂಡಗಳ ನಾಯಕನಾಗಿ ಆಯ್ಕೆಯಾಗಿರುವ ಶುಭ್​ಮನ್​ ಗಿಲ್​ಗೆ ಟಿ20 ತಂಡದ ಕ್ಯಾಪ್ಟನ್ ಪಟ್ಟ ಸಿಗುವುದು ಖಚಿತ ಎನ್ನಬಹುದು. 

ಅಲ್ಲದೆ ಮೂರು ಸ್ವರೂಪಗಳಿಗೂ ಏಕೈಕ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಟೆಸ್ಟ್​ ಹಾಗೂ ಏಕದಿನ ತಂಡಗಳ ನಾಯಕನಾಗಿ ಆಯ್ಕೆಯಾಗಿರುವ ಶುಭ್​ಮನ್​ ಗಿಲ್​ಗೆ ಟಿ20 ತಂಡದ ಕ್ಯಾಪ್ಟನ್ ಪಟ್ಟ ಸಿಗುವುದು ಖಚಿತ ಎನ್ನಬಹುದು. 

4 / 5
ಈ ಮೂಲಕ ಮೂರು ಸ್ವರೂಪಗಳಲ್ಲೂ ಭಾರತ ತಂಡದ ನಾಯಕನಾಗಿ ಆಯ್ಕೆಯಾದ ಆಟಗಾರ ಎನಿಸಿಕೊಳ್ಳಲು ಶುಭ್​ಮನ್ ಗಿಲ್ ಮಾರ್ಚ್ ತಿಂಗಳವರೆಗೆ ಕಾಯಬೇಕು. ಏಕೆಂದರೆ 2026ರ ಟಿ20 ವಿಶ್ವಕಪ್ ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿದ್ದು, ಈ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಲಿದ್ದಾರೆ.

ಈ ಮೂಲಕ ಮೂರು ಸ್ವರೂಪಗಳಲ್ಲೂ ಭಾರತ ತಂಡದ ನಾಯಕನಾಗಿ ಆಯ್ಕೆಯಾದ ಆಟಗಾರ ಎನಿಸಿಕೊಳ್ಳಲು ಶುಭ್​ಮನ್ ಗಿಲ್ ಮಾರ್ಚ್ ತಿಂಗಳವರೆಗೆ ಕಾಯಬೇಕು. ಏಕೆಂದರೆ 2026ರ ಟಿ20 ವಿಶ್ವಕಪ್ ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿದ್ದು, ಈ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಲಿದ್ದಾರೆ.

5 / 5
ದೆಹಲಿಯ ಆಸ್ಪತ್ರೆಗೆ ತೆರಳಿ ಸ್ಫೋಟದ ಗಾಯಾಳುಗಳನ್ನು ಭೇಟಿಯಾದ ಅಮಿತ್ ಶಾ
ದೆಹಲಿಯ ಆಸ್ಪತ್ರೆಗೆ ತೆರಳಿ ಸ್ಫೋಟದ ಗಾಯಾಳುಗಳನ್ನು ಭೇಟಿಯಾದ ಅಮಿತ್ ಶಾ
ದೆಹಲಿ ಸ್ಫೋಟ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಓರ್ವ ಶಂಕಿತ ಪೊಲೀಸ್ ವಶಕ್ಕೆ
ದೆಹಲಿ ಸ್ಫೋಟ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಓರ್ವ ಶಂಕಿತ ಪೊಲೀಸ್ ವಶಕ್ಕೆ
ಕೆಂಪುಕೋಟೆ ಬಳಿಯೇ ಸ್ಫೋಟ: ಒಂದೊಂದು ದೃಶ್ಯವೂ ಭಯಾನಕ!
ಕೆಂಪುಕೋಟೆ ಬಳಿಯೇ ಸ್ಫೋಟ: ಒಂದೊಂದು ದೃಶ್ಯವೂ ಭಯಾನಕ!
ಬ್ರ್ಯಾಟ್ ಸಿನಿಮಾ ನೋಡಿ ಸಿಕ್ಕಾಪಟ್ಟೆ ಮೆಚ್ಚಿಕೊಂಡ ರಿಯಲ್ ಸ್ಟಾರ್ ಉಪೇಂದ್ರ
ಬ್ರ್ಯಾಟ್ ಸಿನಿಮಾ ನೋಡಿ ಸಿಕ್ಕಾಪಟ್ಟೆ ಮೆಚ್ಚಿಕೊಂಡ ರಿಯಲ್ ಸ್ಟಾರ್ ಉಪೇಂದ್ರ
ದಿಲ್ಲಿ ಕೆಂಪುಕೋಟೆ ಬಳಿ ಸ್ಫೋಟ: ಕನಿಷ್ಠ 9 ಜನ ಸಾವು, ಎಲ್ಲೆಡೆ ಹೈಅಲರ್ಟ್​
ದಿಲ್ಲಿ ಕೆಂಪುಕೋಟೆ ಬಳಿ ಸ್ಫೋಟ: ಕನಿಷ್ಠ 9 ಜನ ಸಾವು, ಎಲ್ಲೆಡೆ ಹೈಅಲರ್ಟ್​
ದೆಹಲಿಯಲ್ಲಿ ಕಾರು ಸ್ಫೋಟ; ಧಗಧಗನೆ ಹೊತ್ತಿ ಉರಿದ ವಾಹನಗಳು
ದೆಹಲಿಯಲ್ಲಿ ಕಾರು ಸ್ಫೋಟ; ಧಗಧಗನೆ ಹೊತ್ತಿ ಉರಿದ ವಾಹನಗಳು
ರಕ್ಷಿತಾ ಶೆಟ್ಟಿಗೆ ಕನ್ನಡ ಬರಲ್ಲ ಅನ್ನೋದು ನಾಟಕನಾ? ಉತ್ತರಿಸಿದ ಚಂದ್ರಪ್ರಭ
ರಕ್ಷಿತಾ ಶೆಟ್ಟಿಗೆ ಕನ್ನಡ ಬರಲ್ಲ ಅನ್ನೋದು ನಾಟಕನಾ? ಉತ್ತರಿಸಿದ ಚಂದ್ರಪ್ರಭ
ಜೆಡಿಎಸ್​​ನಿಂದ ರಾಜ್ಯಾದ್ಯಂತ ಬೆಳ್ಳಿ ಹಬ್ಬ ಆಚರಣೆ: HDK ಹೇಳಿದ್ದಿಷ್ಟು
ಜೆಡಿಎಸ್​​ನಿಂದ ರಾಜ್ಯಾದ್ಯಂತ ಬೆಳ್ಳಿ ಹಬ್ಬ ಆಚರಣೆ: HDK ಹೇಳಿದ್ದಿಷ್ಟು
ಹೆಣ್ಮಕ್ಕಳ ಬಗ್ಗೆ ಬೇರೆ ರೀತಿ ಮಾತಾಡಿದ ಧ್ರುವಂತ್: ಗ್ರಹಚಾರ ಬಿಡಿಸಿದ ಕಾವ್ಯ
ಹೆಣ್ಮಕ್ಕಳ ಬಗ್ಗೆ ಬೇರೆ ರೀತಿ ಮಾತಾಡಿದ ಧ್ರುವಂತ್: ಗ್ರಹಚಾರ ಬಿಡಿಸಿದ ಕಾವ್ಯ
ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು ಹಾಲು: ಲಕ್ಷ್ಮಣ ಸವದಿ ಖುಷ್
ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು ಹಾಲು: ಲಕ್ಷ್ಮಣ ಸವದಿ ಖುಷ್