ಮಾರ್ಚ್​​ನಲ್ಲಿ ನಾಯಕತ್ವದಿಂದ ಸೂರ್ಯಕುಮಾರ್ ಯಾದವ್ ವಜಾ

Updated on: Oct 05, 2025 | 10:58 AM

Team India Captain: ಭಾರತ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಏಕದಿನ ಹಾಗೂ ಟೆಸ್ಟ್ ತಂಡಗಳಿಗೆ ಶುಭ್​ಮನ್ ಗಿಲ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇನ್ನು ಟಿ20 ತಂಡದ ಕ್ಯಾಪ್ಟನ್ ಆಗಿ ಸೂರ್ಯಕುಮಾರ್ ಯಾದವ್ ಮುಂದುವರೆದಿದ್ದಾರೆ. ಅತ್ತ ಈ ಹಿಂದೆ ಮೂರು ಸ್ವರೂಪಗಳಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ರೋಹಿತ್ ಶರ್ಮಾ ಏಕದಿನ ತಂಡದಲ್ಲಿ ಬ್ಯಾಟರ್ ಆಗಿ ಆಯ್ಕೆಯಾಗಿದ್ದಾರೆ.

1 / 5
ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕ್ಯಾಪ್ಟನ್ ಆಗಿ ಪಾದಾರ್ಪಣೆ ಮಾಡಿದ್ದ ಗಿಲ್, ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕ್ಯಾಪ್ಟನ್ ಆಗಿ ಪಾದಾರ್ಪಣೆ ಮಾಡಿದ್ದ ಗಿಲ್, ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

2 / 5
ಇದಕ್ಕೂ ಮುನ್ನ ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇದೀಗ ಈ ಜವಾಬ್ದಾರಿಯುತ ಸ್ಥಾನಗಳನ್ನು ಶುಭ್​ಮನ್ ಗಿಲ್ ಅಲಂಕರಿಸಿದ್ದಾರೆ. ಇನ್ನು ಟಿ20 ತಂಡದ ನಾಯಕತ್ವ ಒಲಿಯಲು ಗಿಲ್ ಮಾರ್ಚ್​ವರೆಗೆ ಕಾಯಲೇಬೇಕು.

ಇದಕ್ಕೂ ಮುನ್ನ ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇದೀಗ ಈ ಜವಾಬ್ದಾರಿಯುತ ಸ್ಥಾನಗಳನ್ನು ಶುಭ್​ಮನ್ ಗಿಲ್ ಅಲಂಕರಿಸಿದ್ದಾರೆ. ಇನ್ನು ಟಿ20 ತಂಡದ ನಾಯಕತ್ವ ಒಲಿಯಲು ಗಿಲ್ ಮಾರ್ಚ್​ವರೆಗೆ ಕಾಯಲೇಬೇಕು.

3 / 5
ಅಂದರೆ 2026ರ ಟಿ20 ವಿಶ್ವಕಪ್​ವರೆಗೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗಿ ಮುಂದುವರೆಯಲಿದ್ದಾರೆ. ಈ ಟಿ20 ವಿಶ್ವಕಪ್ ಬಳಿಕ ಸೂರ್ಯಕುಮಾರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಅಂದರೆ 2026ರ ಟಿ20 ವಿಶ್ವಕಪ್​ವರೆಗೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗಿ ಮುಂದುವರೆಯಲಿದ್ದಾರೆ. ಈ ಟಿ20 ವಿಶ್ವಕಪ್ ಬಳಿಕ ಸೂರ್ಯಕುಮಾರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

4 / 5
ಅಲ್ಲದೆ ಮೂರು ಸ್ವರೂಪಗಳಿಗೂ ಏಕೈಕ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಟೆಸ್ಟ್​ ಹಾಗೂ ಏಕದಿನ ತಂಡಗಳ ನಾಯಕನಾಗಿ ಆಯ್ಕೆಯಾಗಿರುವ ಶುಭ್​ಮನ್​ ಗಿಲ್​ಗೆ ಟಿ20 ತಂಡದ ಕ್ಯಾಪ್ಟನ್ ಪಟ್ಟ ಸಿಗುವುದು ಖಚಿತ ಎನ್ನಬಹುದು. 

ಅಲ್ಲದೆ ಮೂರು ಸ್ವರೂಪಗಳಿಗೂ ಏಕೈಕ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಟೆಸ್ಟ್​ ಹಾಗೂ ಏಕದಿನ ತಂಡಗಳ ನಾಯಕನಾಗಿ ಆಯ್ಕೆಯಾಗಿರುವ ಶುಭ್​ಮನ್​ ಗಿಲ್​ಗೆ ಟಿ20 ತಂಡದ ಕ್ಯಾಪ್ಟನ್ ಪಟ್ಟ ಸಿಗುವುದು ಖಚಿತ ಎನ್ನಬಹುದು. 

5 / 5
ಈ ಮೂಲಕ ಮೂರು ಸ್ವರೂಪಗಳಲ್ಲೂ ಭಾರತ ತಂಡದ ನಾಯಕನಾಗಿ ಆಯ್ಕೆಯಾದ ಆಟಗಾರ ಎನಿಸಿಕೊಳ್ಳಲು ಶುಭ್​ಮನ್ ಗಿಲ್ ಮಾರ್ಚ್ ತಿಂಗಳವರೆಗೆ ಕಾಯಬೇಕು. ಏಕೆಂದರೆ 2026ರ ಟಿ20 ವಿಶ್ವಕಪ್ ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿದ್ದು, ಈ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಲಿದ್ದಾರೆ.

ಈ ಮೂಲಕ ಮೂರು ಸ್ವರೂಪಗಳಲ್ಲೂ ಭಾರತ ತಂಡದ ನಾಯಕನಾಗಿ ಆಯ್ಕೆಯಾದ ಆಟಗಾರ ಎನಿಸಿಕೊಳ್ಳಲು ಶುಭ್​ಮನ್ ಗಿಲ್ ಮಾರ್ಚ್ ತಿಂಗಳವರೆಗೆ ಕಾಯಬೇಕು. ಏಕೆಂದರೆ 2026ರ ಟಿ20 ವಿಶ್ವಕಪ್ ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿದ್ದು, ಈ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಲಿದ್ದಾರೆ.