AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಇವರಂತೆ ಭಾರತ ತಂಡದ ಹೊಸ ನಾಯಕ

India Test Team Captain: ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ವಿದಾಯದ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಈ ಕುತೂಹಲಕ್ಕೆ ಬಿಸಿಸಿಐ ಶೀಘ್ರದಲ್ಲೇ ತೆರೆ ಎಳೆಯಲಿದ್ದು, ಯುವ ಆಟಗಾರನಿಗೆ ಕ್ಯಾಪ್ಟನ್ ಪಟ್ಟ ನೀಡಲು ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: May 11, 2025 | 9:04 AM

Share
ರೋಹಿತ್ ಶರ್ಮಾ (Rohit Sharma) ನಿವೃತ್ತಿ ಬೆನ್ನಲ್ಲೇ ಭಾರತ ಟೆಸ್ಟ್ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಯ ಮುಂದೆ ಶುಭ್​ಮನ್ ಗಿಲ್, ಕೆಎಲ್ ರಾಹುಲ್, ರಿಷಭ್ ಪಂತ್ ಹಾಗೂ ಜಸ್​ಪ್ರೀತ್ ಬುಮ್ರಾ ಆಯ್ಕೆಗಳಿದ್ದವು. ಹೀಗಾಗಿ ಇವರಲ್ಲಿ ಒಬ್ಬರು ಕ್ಯಾಪ್ಟನ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿತ್ತು.

ರೋಹಿತ್ ಶರ್ಮಾ (Rohit Sharma) ನಿವೃತ್ತಿ ಬೆನ್ನಲ್ಲೇ ಭಾರತ ಟೆಸ್ಟ್ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಯ ಮುಂದೆ ಶುಭ್​ಮನ್ ಗಿಲ್, ಕೆಎಲ್ ರಾಹುಲ್, ರಿಷಭ್ ಪಂತ್ ಹಾಗೂ ಜಸ್​ಪ್ರೀತ್ ಬುಮ್ರಾ ಆಯ್ಕೆಗಳಿದ್ದವು. ಹೀಗಾಗಿ ಇವರಲ್ಲಿ ಒಬ್ಬರು ಕ್ಯಾಪ್ಟನ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿತ್ತು.

1 / 5
ಅದರಂತೆ ಇದೀಗ ಆಯ್ಕೆ ಸಮಿತಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್​ಗೆ ನಾಯಕತ್ವ ನೀಡಲು ನಿರ್ಧರಿಸಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಭವಿಷ್ಯದ ದೃಷ್ಟಿಯಿಂದ ಗಿಲ್​ಗೆ ಕ್ಯಾಪ್ಟನ್ ಪಟ್ಟ ಕಟ್ಟಲು ಬಿಸಿಸಿಐ ನಿರ್ಧರಿಸಿದ್ದು, ಮೇ 23 ರಂದು ಇದರ ಅಧಿಕೃತ ಘೋಷಣೆಯಾಗಲಿದೆ.

ಅದರಂತೆ ಇದೀಗ ಆಯ್ಕೆ ಸಮಿತಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್​ಗೆ ನಾಯಕತ್ವ ನೀಡಲು ನಿರ್ಧರಿಸಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಭವಿಷ್ಯದ ದೃಷ್ಟಿಯಿಂದ ಗಿಲ್​ಗೆ ಕ್ಯಾಪ್ಟನ್ ಪಟ್ಟ ಕಟ್ಟಲು ಬಿಸಿಸಿಐ ನಿರ್ಧರಿಸಿದ್ದು, ಮೇ 23 ರಂದು ಇದರ ಅಧಿಕೃತ ಘೋಷಣೆಯಾಗಲಿದೆ.

2 / 5
ಇನ್ನು ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಅವರ ಹೆಸರು ಮುಂಚೂಣಿಯಲ್ಲಿದ್ದರೂ, ಇದೀಗ ರಿಷಭ್ ಪಂತ್ ಹೆಸರು ಕೂಡ ಮುನ್ನಲೆಗೆ ಬಂದಿದೆ. ಹೀಗಾಗಿ ವೈಸ್ ಕ್ಯಾಪ್ಟನ್ ಪಟ್ಟ ಪಂತ್ ಪಾಲಾಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯಾಗಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಶುಭ್​ಮನ್ ಗಿಲ್ ಹಾಗೂ ರಿಷಭ್ ಪಂತ್ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಇನ್ನು ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಅವರ ಹೆಸರು ಮುಂಚೂಣಿಯಲ್ಲಿದ್ದರೂ, ಇದೀಗ ರಿಷಭ್ ಪಂತ್ ಹೆಸರು ಕೂಡ ಮುನ್ನಲೆಗೆ ಬಂದಿದೆ. ಹೀಗಾಗಿ ವೈಸ್ ಕ್ಯಾಪ್ಟನ್ ಪಟ್ಟ ಪಂತ್ ಪಾಲಾಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯಾಗಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಶುಭ್​ಮನ್ ಗಿಲ್ ಹಾಗೂ ರಿಷಭ್ ಪಂತ್ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

3 / 5
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಆಂಗ್ಲರ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಮೂಲಕ ಭಾರತದ ಪರ ನಾಯಕನಾಗಿ ಶುಭ್​ಮನ್ ಗಿಲ್ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಆಂಗ್ಲರ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಮೂಲಕ ಭಾರತದ ಪರ ನಾಯಕನಾಗಿ ಶುಭ್​ಮನ್ ಗಿಲ್ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.

4 / 5
ಇದಕ್ಕೂ ಮುನ್ನ ಶುಭ್​ಮನ್ ಗಿಲ್ ಪಂಜಾಬ್ ರಾಜ್ಯ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಭಾರತ ಟಿ20 ಹಾಗೂ ಏಕದಿನ ತಂಡಗಳ ಉಪನಾಯಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಗಿಲ್​ಗೆ ಪೂರ್ಣ ಪ್ರಮಾಣದ ಜವಾಬ್ದಾರಿವಹಿಸಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ರೋಹಿತ್ ಶರ್ಮಾ ಉತ್ತರಾಧಿಕಾರಿಯಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಇದಕ್ಕೂ ಮುನ್ನ ಶುಭ್​ಮನ್ ಗಿಲ್ ಪಂಜಾಬ್ ರಾಜ್ಯ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಭಾರತ ಟಿ20 ಹಾಗೂ ಏಕದಿನ ತಂಡಗಳ ಉಪನಾಯಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಗಿಲ್​ಗೆ ಪೂರ್ಣ ಪ್ರಮಾಣದ ಜವಾಬ್ದಾರಿವಹಿಸಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ರೋಹಿತ್ ಶರ್ಮಾ ಉತ್ತರಾಧಿಕಾರಿಯಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

5 / 5
Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?