AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಕುಮಾರ್ ಯಾದವ್ ವಿಶ್ವ ದಾಖಲೆ ಮುರಿದ ಸಿಕಂದರ್ ರಾಝ

Sikandar Raza Records: ಝಿಂಬಾಬ್ವೆ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಹಾಗೂ 5 ವಿಕೆಟ್ ಕಬಳಿಸಿದ ದಾಖಲೆ ಹೊಂದಿರುವ ಸಿಕಂದರ್ ರಾಝ ಇದೀಗ ಭರ್ಜರಿ ವರ್ಲ್ಡ್ ರೆಕಾರ್ಡ್​ವೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಸ್ಪೋಟಕ ಸೆಂಚುರಿ ಸಿಡಿಸಿ ಪ್ಲೇಯರ್ ಆಫ್ ಮ್ಯಾಚ್ ಪ್ರಶಸ್ತಿ ಪಡೆಯುವ ಮೂಲಕ.

ಝಾಹಿರ್ ಯೂಸುಫ್
|

Updated on:Oct 24, 2024 | 11:08 AM

Share
ಟಿ20 ಕ್ರಿಕೆಟ್​ನಲ್ಲಿ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅವರ ವಿಶ್ವ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಟಿ20 ಕ್ರಿಕೆಟ್​ನಲ್ಲಿ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅವರ ವಿಶ್ವ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 7
ನೈರೋಬಿಯಾದಲ್ಲಿ ನಡೆದ ಟಿ20 ವಿಶ್ವಕಪ್​ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಗ್ಯಾಂಬಿಯಾ ವಿರುದ್ಧ ಸಿಕಂದರ್ ರಾಝ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಅಲ್ಲದೆ 43 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 133 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ಪರಿಣಾಮ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್ ಕಲೆಹಾಕಿತು.

ನೈರೋಬಿಯಾದಲ್ಲಿ ನಡೆದ ಟಿ20 ವಿಶ್ವಕಪ್​ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಗ್ಯಾಂಬಿಯಾ ವಿರುದ್ಧ ಸಿಕಂದರ್ ರಾಝ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಅಲ್ಲದೆ 43 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 133 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ಪರಿಣಾಮ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್ ಕಲೆಹಾಕಿತು.

2 / 7
345 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗ್ಯಾಂಬಿಯಾ ತಂಡವು 14.4 ಓವರ್​ಗಳಲ್ಲಿ 54 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಝಿಂಬಾಬ್ವೆ ತಂಡವು 290 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದ ಸಿಕಂದರ್ ರಾಝಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

345 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗ್ಯಾಂಬಿಯಾ ತಂಡವು 14.4 ಓವರ್​ಗಳಲ್ಲಿ 54 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಝಿಂಬಾಬ್ವೆ ತಂಡವು 290 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದ ಸಿಕಂದರ್ ರಾಝಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

3 / 7
ಈ ಪಂದ್ಯ ಶ್ರೇಷ್ಠ ಪ್ರಶಸ್ತಿಯೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರನೆಂಬ ವಿಶ್ವ ದಾಖಲೆ ಸಿಕಂದರ್ ರಾಝ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

ಈ ಪಂದ್ಯ ಶ್ರೇಷ್ಠ ಪ್ರಶಸ್ತಿಯೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರನೆಂಬ ವಿಶ್ವ ದಾಖಲೆ ಸಿಕಂದರ್ ರಾಝ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

4 / 7
ಟೀಮ್ ಇಂಡಿಯಾ ಪರ 74 ಟಿ20 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಯಾದವ್ ಒಟ್ಟು 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 15 ಕ್ಕಿಂತ ಹೆಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ 74 ಟಿ20 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಯಾದವ್ ಒಟ್ಟು 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 15 ಕ್ಕಿಂತ ಹೆಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ.

5 / 7
ಇನ್ನು ಭಾರತದ ಪರ 125 ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಕೂಡ 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೀಗ ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯನ್ನು ಸಿಕಂದರ್ ರಾಝ ಹಿಂದಿಕ್ಕಿದ್ದಾರೆ.

ಇನ್ನು ಭಾರತದ ಪರ 125 ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಕೂಡ 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೀಗ ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯನ್ನು ಸಿಕಂದರ್ ರಾಝ ಹಿಂದಿಕ್ಕಿದ್ದಾರೆ.

6 / 7
ಝಿಂಬಾಬ್ವೆ ಪರ 95 ಟಿ20 ಪಂದ್ಯಗಳನ್ನಾಡಿರುವ ಸಿಕಂದರ್ ರಾಝ ಒಟ್ಟು 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಿಂಬಾಬ್ವೆ ಪರ 95 ಟಿ20 ಪಂದ್ಯಗಳನ್ನಾಡಿರುವ ಸಿಕಂದರ್ ರಾಝ ಒಟ್ಟು 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

7 / 7

Published On - 11:08 am, Thu, 24 October 24

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?