AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಕುಮಾರ್ ಯಾದವ್ ವಿಶ್ವ ದಾಖಲೆ ಮುರಿದ ಸಿಕಂದರ್ ರಾಝ

Sikandar Raza Records: ಝಿಂಬಾಬ್ವೆ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಹಾಗೂ 5 ವಿಕೆಟ್ ಕಬಳಿಸಿದ ದಾಖಲೆ ಹೊಂದಿರುವ ಸಿಕಂದರ್ ರಾಝ ಇದೀಗ ಭರ್ಜರಿ ವರ್ಲ್ಡ್ ರೆಕಾರ್ಡ್​ವೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಸ್ಪೋಟಕ ಸೆಂಚುರಿ ಸಿಡಿಸಿ ಪ್ಲೇಯರ್ ಆಫ್ ಮ್ಯಾಚ್ ಪ್ರಶಸ್ತಿ ಪಡೆಯುವ ಮೂಲಕ.

ಝಾಹಿರ್ ಯೂಸುಫ್
|

Updated on:Oct 24, 2024 | 11:08 AM

ಟಿ20 ಕ್ರಿಕೆಟ್​ನಲ್ಲಿ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅವರ ವಿಶ್ವ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಟಿ20 ಕ್ರಿಕೆಟ್​ನಲ್ಲಿ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅವರ ವಿಶ್ವ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 7
ನೈರೋಬಿಯಾದಲ್ಲಿ ನಡೆದ ಟಿ20 ವಿಶ್ವಕಪ್​ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಗ್ಯಾಂಬಿಯಾ ವಿರುದ್ಧ ಸಿಕಂದರ್ ರಾಝ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಅಲ್ಲದೆ 43 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 133 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ಪರಿಣಾಮ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್ ಕಲೆಹಾಕಿತು.

ನೈರೋಬಿಯಾದಲ್ಲಿ ನಡೆದ ಟಿ20 ವಿಶ್ವಕಪ್​ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಗ್ಯಾಂಬಿಯಾ ವಿರುದ್ಧ ಸಿಕಂದರ್ ರಾಝ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಅಲ್ಲದೆ 43 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 133 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ಪರಿಣಾಮ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್ ಕಲೆಹಾಕಿತು.

2 / 7
345 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗ್ಯಾಂಬಿಯಾ ತಂಡವು 14.4 ಓವರ್​ಗಳಲ್ಲಿ 54 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಝಿಂಬಾಬ್ವೆ ತಂಡವು 290 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದ ಸಿಕಂದರ್ ರಾಝಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

345 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗ್ಯಾಂಬಿಯಾ ತಂಡವು 14.4 ಓವರ್​ಗಳಲ್ಲಿ 54 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಝಿಂಬಾಬ್ವೆ ತಂಡವು 290 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದ ಸಿಕಂದರ್ ರಾಝಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

3 / 7
ಈ ಪಂದ್ಯ ಶ್ರೇಷ್ಠ ಪ್ರಶಸ್ತಿಯೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರನೆಂಬ ವಿಶ್ವ ದಾಖಲೆ ಸಿಕಂದರ್ ರಾಝ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

ಈ ಪಂದ್ಯ ಶ್ರೇಷ್ಠ ಪ್ರಶಸ್ತಿಯೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರನೆಂಬ ವಿಶ್ವ ದಾಖಲೆ ಸಿಕಂದರ್ ರಾಝ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

4 / 7
ಟೀಮ್ ಇಂಡಿಯಾ ಪರ 74 ಟಿ20 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಯಾದವ್ ಒಟ್ಟು 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 15 ಕ್ಕಿಂತ ಹೆಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ 74 ಟಿ20 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಯಾದವ್ ಒಟ್ಟು 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 15 ಕ್ಕಿಂತ ಹೆಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ.

5 / 7
ಇನ್ನು ಭಾರತದ ಪರ 125 ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಕೂಡ 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೀಗ ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯನ್ನು ಸಿಕಂದರ್ ರಾಝ ಹಿಂದಿಕ್ಕಿದ್ದಾರೆ.

ಇನ್ನು ಭಾರತದ ಪರ 125 ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಕೂಡ 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೀಗ ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯನ್ನು ಸಿಕಂದರ್ ರಾಝ ಹಿಂದಿಕ್ಕಿದ್ದಾರೆ.

6 / 7
ಝಿಂಬಾಬ್ವೆ ಪರ 95 ಟಿ20 ಪಂದ್ಯಗಳನ್ನಾಡಿರುವ ಸಿಕಂದರ್ ರಾಝ ಒಟ್ಟು 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಿಂಬಾಬ್ವೆ ಪರ 95 ಟಿ20 ಪಂದ್ಯಗಳನ್ನಾಡಿರುವ ಸಿಕಂದರ್ ರಾಝ ಒಟ್ಟು 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

7 / 7

Published On - 11:08 am, Thu, 24 October 24

Follow us
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್