AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿಯನ್ನು ಟೀಕಿಸಿದ್ದಕ್ಕಾಗಿ ಕೊಲೆ ಬೆದರಿಕೆ; ಅಳಲು ತೊಡಿಕೊಂಡ ಮಾಜಿ ಕ್ರಿಕೆಟಿಗ

IPL 2024: ವಿರಾಟ್ ಕೊಹ್ಲಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಪ್ರಾಣ ಬೆದರಿಕೆ ಕೂಡ ಬಂದಿತ್ತು ಎಂಬ ಸ್ಫೋಟಕ ವಿಚಾರವನ್ನು ಮಾಜಿ ಕ್ರಿಕೆಟಿಗರೊಬ್ಬರು ಬಹಿರಂಗಪಡಿಸಿದ್ದಾರೆ. ಅಷ್ಟಕ್ಕೂ ಈ ಪ್ರಾಣ ಬೆದರಿಕೆಗೆ ಒಳಗಾದ ಆಟಗಾರ ಮತ್ತ್ಯಾರು ಅಲ್ಲ, ನ್ಯೂಜಿಲೆಂಡ್‌ನ ಮಾಜಿ ವೇಗದ ಬೌಲರ್ ಮತ್ತು ವೀಕ್ಷಕ ವಿವರಣೆಗಾರ ಸೈಮನ್ ಡೌಲ್.

ಪೃಥ್ವಿಶಂಕರ
|

Updated on: May 30, 2024 | 4:14 PM

Share
ಇತ್ತೀಚೆಗಷ್ಟೇ ಮುಗಿದ 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್​ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ 741 ರನ್ ಕಲೆಹಾಕುವ ಮೂಲಕ ಈ ಸೀಸನ್‌ನಲ್ಲಿ ಅಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದಲ್ಲದೆ ಆರೆಂಜ್ ಕ್ಯಾಪ್ ಕೂಡ ಗೆದ್ದಿದ್ದರು. ಆದರೆ ಈ ಸಾಧನೆಯ ನಡುವೆಯೂ ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಹಲವು ಬಾರಿ ಪ್ರಶ್ನೆಗಳು ಎದ್ದಿದ್ದವು.

ಇತ್ತೀಚೆಗಷ್ಟೇ ಮುಗಿದ 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್​ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ 741 ರನ್ ಕಲೆಹಾಕುವ ಮೂಲಕ ಈ ಸೀಸನ್‌ನಲ್ಲಿ ಅಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದಲ್ಲದೆ ಆರೆಂಜ್ ಕ್ಯಾಪ್ ಕೂಡ ಗೆದ್ದಿದ್ದರು. ಆದರೆ ಈ ಸಾಧನೆಯ ನಡುವೆಯೂ ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಹಲವು ಬಾರಿ ಪ್ರಶ್ನೆಗಳು ಎದ್ದಿದ್ದವು.

1 / 8
ಟೀಂ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಸೇರಿದಂತೆ ಅನೇಕ ಮಾಜಿ ಕ್ರಿಕೆಟಿಗರು ಸ್ಟ್ರೈಕ್ ರೇಟ್ ವಿಚಾರದಲ್ಲಿ ಕೊಹ್ಲಿಯನ್ನು  ಟೀಕಿಸಿದ್ದರು. ಈ ಟೀಕೆಗಳಿಗೆಲ್ಲ ಉತ್ತರಿಸಿದ್ದ ಕೊಹ್ಲಿ, ಮೈದಾನದಲ್ಲಿ ಆಡುವವರಿಗೆ ಮಾತ್ರ ಆಟದ ಗಂಭೀರತೆ ಅರ್ಥವಾಗುತ್ತದೆ ಎಂದು ಹೇಳುವ ಮೂಲಕ ಎಲ್ಲರ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದರು.

ಟೀಂ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಸೇರಿದಂತೆ ಅನೇಕ ಮಾಜಿ ಕ್ರಿಕೆಟಿಗರು ಸ್ಟ್ರೈಕ್ ರೇಟ್ ವಿಚಾರದಲ್ಲಿ ಕೊಹ್ಲಿಯನ್ನು ಟೀಕಿಸಿದ್ದರು. ಈ ಟೀಕೆಗಳಿಗೆಲ್ಲ ಉತ್ತರಿಸಿದ್ದ ಕೊಹ್ಲಿ, ಮೈದಾನದಲ್ಲಿ ಆಡುವವರಿಗೆ ಮಾತ್ರ ಆಟದ ಗಂಭೀರತೆ ಅರ್ಥವಾಗುತ್ತದೆ ಎಂದು ಹೇಳುವ ಮೂಲಕ ಎಲ್ಲರ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದರು.

2 / 8
ಈ ನಡುವೆ ಮಾಜಿ ಅನುಭವಿಯೊಬ್ಬರು ವಿರಾಟ್ ಕೊಹ್ಲಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಪ್ರಾಣ ಬೆದರಿಕೆ ಕೂಡ ಬಂದಿತ್ತು ಎಂಬ ಸ್ಫೋಟಕ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಷ್ಟಕ್ಕೂ ಈ ಪ್ರಾಣ ಬೆದರಿಕೆಗೆ ಒಳಗಾದ ಆಟಗಾರ ಮತ್ತ್ಯಾರು ಅಲ್ಲ. ನ್ಯೂಜಿಲೆಂಡ್‌ನ ಮಾಜಿ ವೇಗದ ಬೌಲರ್ ಮತ್ತು ವೀಕ್ಷಕ ವಿವರಣೆಗಾರ ಸೈಮನ್ ಡೌಲ್.

ಈ ನಡುವೆ ಮಾಜಿ ಅನುಭವಿಯೊಬ್ಬರು ವಿರಾಟ್ ಕೊಹ್ಲಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಪ್ರಾಣ ಬೆದರಿಕೆ ಕೂಡ ಬಂದಿತ್ತು ಎಂಬ ಸ್ಫೋಟಕ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಷ್ಟಕ್ಕೂ ಈ ಪ್ರಾಣ ಬೆದರಿಕೆಗೆ ಒಳಗಾದ ಆಟಗಾರ ಮತ್ತ್ಯಾರು ಅಲ್ಲ. ನ್ಯೂಜಿಲೆಂಡ್‌ನ ಮಾಜಿ ವೇಗದ ಬೌಲರ್ ಮತ್ತು ವೀಕ್ಷಕ ವಿವರಣೆಗಾರ ಸೈಮನ್ ಡೌಲ್.

3 / 8
ಸುನಿಲ್ ಗವಾಸ್ಕರ್ ಜೊತೆಗೆ ಸೈಮನ್ ಡೌಲ್ ಕೂಡ ವಿರಾಟ್ ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ಹೇಳಿಕೊಂಡಿರುವ ಅವರು, ‘ಕೊಹ್ಲಿ ಶ್ರೇಷ್ಠ ಆಟಗಾರನಾಗಿ ಪ್ರಾಬಲ್ಯ ಸಾಧಿಸುವುದನ್ನು ನಾನು ನೋಡಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಅವರ ಸ್ಟ್ರೈಕ್ ರೇಟ್ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

ಸುನಿಲ್ ಗವಾಸ್ಕರ್ ಜೊತೆಗೆ ಸೈಮನ್ ಡೌಲ್ ಕೂಡ ವಿರಾಟ್ ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ಹೇಳಿಕೊಂಡಿರುವ ಅವರು, ‘ಕೊಹ್ಲಿ ಶ್ರೇಷ್ಠ ಆಟಗಾರನಾಗಿ ಪ್ರಾಬಲ್ಯ ಸಾಧಿಸುವುದನ್ನು ನಾನು ನೋಡಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಅವರ ಸ್ಟ್ರೈಕ್ ರೇಟ್ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

4 / 8
ವಾಸ್ತವವಾಗಿ ವೀಕ್ಷಕ ವಿವರಣೆ ನೀಡುವ ಸಂದರ್ಭದಲ್ಲಿ ಸೈಮನ್, ‘ಬಹುಶಃ ಕೊಹ್ಲಿ ಔಟಾಗುವ ಆತಂಕದಲ್ಲಿ ಬ್ಯಾಟ್ ಬೀಸುತ್ತಿದ್ದಾರೆ. ನಾನು ಬಾಬರ್ ಆಝಂಗೂ ಇದೇ ಮಾತನ್ನು ಹೇಳಿದ್ದೆ. ಇದಕ್ಕೆ ಉತ್ತರಿಸಿದ್ದ ಬಾಬರ್, ನನ್ನ ಕೋಚ್ ಕೂಡ ಅದನ್ನೇ ಹೇಳಿದ್ದರು ಎಂದು ನನ್ನ ಬಳಿ ಹೇಳಿಕೊಂಡಿದ್ದರು’.

ವಾಸ್ತವವಾಗಿ ವೀಕ್ಷಕ ವಿವರಣೆ ನೀಡುವ ಸಂದರ್ಭದಲ್ಲಿ ಸೈಮನ್, ‘ಬಹುಶಃ ಕೊಹ್ಲಿ ಔಟಾಗುವ ಆತಂಕದಲ್ಲಿ ಬ್ಯಾಟ್ ಬೀಸುತ್ತಿದ್ದಾರೆ. ನಾನು ಬಾಬರ್ ಆಝಂಗೂ ಇದೇ ಮಾತನ್ನು ಹೇಳಿದ್ದೆ. ಇದಕ್ಕೆ ಉತ್ತರಿಸಿದ್ದ ಬಾಬರ್, ನನ್ನ ಕೋಚ್ ಕೂಡ ಅದನ್ನೇ ಹೇಳಿದ್ದರು ಎಂದು ನನ್ನ ಬಳಿ ಹೇಳಿಕೊಂಡಿದ್ದರು’.

5 / 8
‘ಆದರೆ ವಿರಾಟ್ ಕೊಹ್ಲಿ ವಿಚಾರದಲ್ಲಿ ಹೀಗಾಗಲಿಲ್ಲ. ಈ ವರ್ಷ ನಾನು ವಿರಾಟ್ ಕೊಹ್ಲಿಯ ಸಿಕ್ಸರ್‌ಗಳನ್ನು ಹೊಡೆಯುವ ಉದ್ದೇಶವನ್ನು ನಿಜವಾಗಿಯೂ ಇಷ್ಟಪಟ್ಟೆ. ಹೀಗಾಗಿ ಕೊಹ್ಲಿ ಔಟಾಗುವ ಬಗ್ಗೆ ಚಿಂತಿಸಬಾರದು ಎಂದು ನಾನು ನಂಬುತ್ತೇನೆ’.

‘ಆದರೆ ವಿರಾಟ್ ಕೊಹ್ಲಿ ವಿಚಾರದಲ್ಲಿ ಹೀಗಾಗಲಿಲ್ಲ. ಈ ವರ್ಷ ನಾನು ವಿರಾಟ್ ಕೊಹ್ಲಿಯ ಸಿಕ್ಸರ್‌ಗಳನ್ನು ಹೊಡೆಯುವ ಉದ್ದೇಶವನ್ನು ನಿಜವಾಗಿಯೂ ಇಷ್ಟಪಟ್ಟೆ. ಹೀಗಾಗಿ ಕೊಹ್ಲಿ ಔಟಾಗುವ ಬಗ್ಗೆ ಚಿಂತಿಸಬಾರದು ಎಂದು ನಾನು ನಂಬುತ್ತೇನೆ’.

6 / 8
‘ಇಲ್ಲಿಯವರೆಗೆ ನಾನು ವಿರಾಟ್ ಕೊಹ್ಲಿ ಬಗ್ಗೆ ಸಾವಿರಾರು ಪಾಸಿಟಿವ್ ವಿಷಯಗಳನ್ನು ಹೇಳಿದ್ದೇನೆ. ಆದರೆ ನಾನು ಅವರ ಬಗ್ಗೆ ಒಂದೇ ಒಂದು ನೆಗೆಟಿವ್ ವಿಷಯವನ್ನು ಹೇಳಿದಾಗ ನನ್ನನ್ನು ಕೊಹ್ಲಿಯ ದ್ವೇಷಿ ಎಂದು ಪರಿಗಣಿಸಲಾಗಿದೆ. ನನಗೆ ಕೊಲೆ ಬೆದರಿಕೆ ಕೂಡ ಬರುತ್ತಿದೆ. ಇದು ನಾಚಿಕೆಗೇಡಿನ ಸಂಗತಿ’.

‘ಇಲ್ಲಿಯವರೆಗೆ ನಾನು ವಿರಾಟ್ ಕೊಹ್ಲಿ ಬಗ್ಗೆ ಸಾವಿರಾರು ಪಾಸಿಟಿವ್ ವಿಷಯಗಳನ್ನು ಹೇಳಿದ್ದೇನೆ. ಆದರೆ ನಾನು ಅವರ ಬಗ್ಗೆ ಒಂದೇ ಒಂದು ನೆಗೆಟಿವ್ ವಿಷಯವನ್ನು ಹೇಳಿದಾಗ ನನ್ನನ್ನು ಕೊಹ್ಲಿಯ ದ್ವೇಷಿ ಎಂದು ಪರಿಗಣಿಸಲಾಗಿದೆ. ನನಗೆ ಕೊಲೆ ಬೆದರಿಕೆ ಕೂಡ ಬರುತ್ತಿದೆ. ಇದು ನಾಚಿಕೆಗೇಡಿನ ಸಂಗತಿ’.

7 / 8
‘ಈ ವರ್ಷ ನಾನು ಕೊಹ್ಲಿಯ ಸ್ಲಾಗ್ ಸ್ವೀಪ್ ಶಾಟ್ ಅನ್ನು ಇಷ್ಟಪಟ್ಟೆ. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕು ನನಗಿದೆ. ನಾನು ಭಾರತಕ್ಕೆ ಬರಲು ಮತ್ತು ಇಲ್ಲಿ ಕೊಡುಗೆ ನೀಡಲು ಇಷ್ಟಪಡುತ್ತೇನೆ. ಕೊಹ್ಲಿ, ನಾನು ಹೇಳಿದ್ದು ತಪ್ಪು ಎಂದು ಸಾಬೀತುಪಡಿಸಲು ಪ್ರಯತ್ನಿಸಿದರೆ ಅದಕ್ಕಿಂತ ಉತ್ತಮವಾದ ವಿಷಯ ಯಾವುದಿದೆ ಹೇಳಿ?’ ಎಂದು ಸೈಮನ್ ಹೇಳಿಕೊಂಡಿದ್ದಾರೆ.

‘ಈ ವರ್ಷ ನಾನು ಕೊಹ್ಲಿಯ ಸ್ಲಾಗ್ ಸ್ವೀಪ್ ಶಾಟ್ ಅನ್ನು ಇಷ್ಟಪಟ್ಟೆ. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕು ನನಗಿದೆ. ನಾನು ಭಾರತಕ್ಕೆ ಬರಲು ಮತ್ತು ಇಲ್ಲಿ ಕೊಡುಗೆ ನೀಡಲು ಇಷ್ಟಪಡುತ್ತೇನೆ. ಕೊಹ್ಲಿ, ನಾನು ಹೇಳಿದ್ದು ತಪ್ಪು ಎಂದು ಸಾಬೀತುಪಡಿಸಲು ಪ್ರಯತ್ನಿಸಿದರೆ ಅದಕ್ಕಿಂತ ಉತ್ತಮವಾದ ವಿಷಯ ಯಾವುದಿದೆ ಹೇಳಿ?’ ಎಂದು ಸೈಮನ್ ಹೇಳಿಕೊಂಡಿದ್ದಾರೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!