AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಸೇರಿದ ಬಳಿಕ ಸಪ್ಪೆಯಾದ ಸಾಲ್ಟ್

Phil Salt: ಐಪಿಎಲ್ 2024 ರಲ್ಲಿ ಫಿಲ್ ಸಾಲ್ಟ್ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ಕೆಕೆಆರ್ ಪರ 12 ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಇನಿಂಗ್ಸ್​ ಆರಂಭಿಸಿದ್ದ ಸಾಲ್ಟ್ 4 ಅರ್ಧಶತಕಗಳೊಂದಿಗೆ ಒಟ್ಟು 435 ರನ್ ಬಾರಿಸಿ ಅಬ್ಬರಿಸಿದ್ದರು. ಈ ಟೂರ್ನಿಯ ಬೆನ್ನಲ್ಲೇ ಇಂಗ್ಲೆಂಡ್ ಪರ ಕೂಡ ಆರಂಭಿಕನಾಗಿ ಸಿಡಿಲಬ್ಬರದ ಮುಂದುವರೆಸಿದ್ದರು. ಈ ಭರ್ಜರಿ ಪ್ರದರ್ಶನವನ್ನು ಗಮನಿಸಿದ ಆರ್​ಸಿಬಿ ಸಾಲ್ಟ್ ಅವರನ್ನು ಈ ಬಾರಿ ಆರಂಭಿಕನಾಗಿ ಆಯ್ಕೆ ಮಾಡಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Jan 29, 2025 | 12:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬರೋಬ್ಬರಿ 11 ಕೋಟಿ ರೂ. ನೀಡಿ ಇಂಗ್ಲೆಂಡ್ ದಾಂಡಿಗ ಫಿಲ್ ಸಾಲ್ಟ್ ಅವರನ್ನು ಖರೀದಿಸಿತು. ಈ ಖರೀದಿಗೆ ಮುಖ್ಯ ಕಾರಣ ಸಾಲ್ಟ್ ಅವರ ಸಿಡಿಲಬ್ಬರದ ಬ್ಯಾಟಿಂಗ್​. ಆದರೆ ಆರ್​ಸಿಬಿ ಸೇರಿದ ಬಳಿಕ ಸಾಲ್ಟ್ ಅವರ ಸಿಡಿಲಬ್ಬರದ ಮಾಯವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬರೋಬ್ಬರಿ 11 ಕೋಟಿ ರೂ. ನೀಡಿ ಇಂಗ್ಲೆಂಡ್ ದಾಂಡಿಗ ಫಿಲ್ ಸಾಲ್ಟ್ ಅವರನ್ನು ಖರೀದಿಸಿತು. ಈ ಖರೀದಿಗೆ ಮುಖ್ಯ ಕಾರಣ ಸಾಲ್ಟ್ ಅವರ ಸಿಡಿಲಬ್ಬರದ ಬ್ಯಾಟಿಂಗ್​. ಆದರೆ ಆರ್​ಸಿಬಿ ಸೇರಿದ ಬಳಿಕ ಸಾಲ್ಟ್ ಅವರ ಸಿಡಿಲಬ್ಬರದ ಮಾಯವಾಗಿದೆ.

1 / 5
ಹೌದು, ಮೆಗಾ ಹರಾಜಿಗೂ ಮುನ್ನ ಫಿಲ್ ಸಾಲ್ಟ್ ಭರ್ಜರಿ ಫಾರ್ಮ್​ನಲ್ಲಿದ್ದರು. ಆರ್​ಸಿಬಿ ಸೇರುವ ಮುನ್ನ ಆಡಿದ 4 ಪಂದ್ಯಗಳಲ್ಲಿ 103, 41, 33 ಹಾಗೂ 58 ರನ್​ಗಳ ಸ್ಪೋಟಕ ಇನಿಂಗ್ಸ್ ಆಡಿ ಅಬ್ಬರಿಸಿದ್ದರು. ಈ ಸಿಡಿಲಬ್ಬರದ ಬ್ಯಾಟಿಂಗ್ ನೋಡಿದ್ದ ಆರ್​ಸಿಬಿ ಫ್ರಾಂಚೈಸಿ ಫಿಲ್ ಸಾಲ್ಟ್ ಖರೀದಿಗಾಗಿ ಮೆಗಾ ಹರಾಜಿನಲ್ಲಿ ಭರ್ಜರಿ ಪೈಪೋಟಿ ನಡೆಸಿತು.

ಹೌದು, ಮೆಗಾ ಹರಾಜಿಗೂ ಮುನ್ನ ಫಿಲ್ ಸಾಲ್ಟ್ ಭರ್ಜರಿ ಫಾರ್ಮ್​ನಲ್ಲಿದ್ದರು. ಆರ್​ಸಿಬಿ ಸೇರುವ ಮುನ್ನ ಆಡಿದ 4 ಪಂದ್ಯಗಳಲ್ಲಿ 103, 41, 33 ಹಾಗೂ 58 ರನ್​ಗಳ ಸ್ಪೋಟಕ ಇನಿಂಗ್ಸ್ ಆಡಿ ಅಬ್ಬರಿಸಿದ್ದರು. ಈ ಸಿಡಿಲಬ್ಬರದ ಬ್ಯಾಟಿಂಗ್ ನೋಡಿದ್ದ ಆರ್​ಸಿಬಿ ಫ್ರಾಂಚೈಸಿ ಫಿಲ್ ಸಾಲ್ಟ್ ಖರೀದಿಗಾಗಿ ಮೆಗಾ ಹರಾಜಿನಲ್ಲಿ ಭರ್ಜರಿ ಪೈಪೋಟಿ ನಡೆಸಿತು.

2 / 5
ಈ ಪೈಪೋಟಿಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬರೋಬ್ಬರಿ 11 ಕೋಟಿ ರೂ. ನೀಡಿ ಸಾಲ್ಟ್ ಅವರನ್ನು ಖರೀದಿಸಿದೆ. ಆದರೆ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಫಿಲ್ ಸಾಲ್ಟ್ ಅವರ ಬ್ಯಾಟ್ ಸೈಲೆಂಟ್ ಆಗಿದೆ. ಕೊನೆಯ ಮೂರು ಪಂದ್ಯಗಳಲ್ಲೂ ಒಂದಂಕಿ ರನ್​ಗಳಿಸುವಷ್ಟರಲ್ಲಿ ಪೆವಿಲಿಯನ್ ಸೇರಿದ್ದಾರೆ.

ಈ ಪೈಪೋಟಿಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬರೋಬ್ಬರಿ 11 ಕೋಟಿ ರೂ. ನೀಡಿ ಸಾಲ್ಟ್ ಅವರನ್ನು ಖರೀದಿಸಿದೆ. ಆದರೆ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಫಿಲ್ ಸಾಲ್ಟ್ ಅವರ ಬ್ಯಾಟ್ ಸೈಲೆಂಟ್ ಆಗಿದೆ. ಕೊನೆಯ ಮೂರು ಪಂದ್ಯಗಳಲ್ಲೂ ಒಂದಂಕಿ ರನ್​ಗಳಿಸುವಷ್ಟರಲ್ಲಿ ಪೆವಿಲಿಯನ್ ಸೇರಿದ್ದಾರೆ.

3 / 5
ಫಿಲ್ ಸಾಲ್ಟ್ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾದ ಬಳಿಕ ಟೀಮ್ ಇಂಡಿಯಾ ವಿರುದ್ಧ ಮೂರು ಪಂದ್ಯಗಳನ್ನಾಡಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಮೊದಲ ಮ್ಯಾಚ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದ ಸಾಲ್ಟ್, ಚೆನ್ನೈನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ರಾಜ್​ಕೋಟ್​ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ 5 ರನ್​ಗಳಿಸಿ ನಿರಾಸೆ ಮೂಡಿಸಿದ್ದಾರೆ.

ಫಿಲ್ ಸಾಲ್ಟ್ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾದ ಬಳಿಕ ಟೀಮ್ ಇಂಡಿಯಾ ವಿರುದ್ಧ ಮೂರು ಪಂದ್ಯಗಳನ್ನಾಡಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಮೊದಲ ಮ್ಯಾಚ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದ ಸಾಲ್ಟ್, ಚೆನ್ನೈನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ರಾಜ್​ಕೋಟ್​ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ 5 ರನ್​ಗಳಿಸಿ ನಿರಾಸೆ ಮೂಡಿಸಿದ್ದಾರೆ.

4 / 5
ಅಂದರೆ ಆರ್​ಸಿಬಿಗೆ ಬರುವ ಮುನ್ನ ಸಿಡಿಲಬ್ಬರದ ಪ್ರದರ್ಶಿಸಿದ್ದ ಸಾಲ್ಟ್, ಆರ್​ಸಿಬಿಗೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಮಂಕಾಗಿದ್ದಾರೆ. ಅದು ಕೂಡ ಕಳೆದ ಮೂರು ಪಂದ್ಯಗಳಲ್ಲಿ ಒಂದಂಕಿ ರನ್​ಗಳಿಸುವ ಮೂಲಕ ಎಂಬುದೇ ಅಚ್ಚರಿ. ಇದೀಗ ಮೂರು ಪಂದ್ಯಗಳಲ್ಲಿ ವಿಫಲರಾಗಿರುವ ಫಿಲ್ ಸಾಲ್ಟ್ ಅವರನ್ನು ನಾಲ್ಕನೇ ಮ್ಯಾಚ್​ನಲ್ಲಿ ಇಂಗ್ಲೆಂಡ್ ಕಣಕ್ಕಿಳಿಸಲಿದೆಯಾ ಎಂಬುದೇ ಪ್ರಶ್ನೆ. ಒಂದು ವೇಳೆ ಕಣಕ್ಕಿಳಿಸದಿದ್ದರೆ ಸಾಲ್ಟ್ ಇಂಗ್ಲೆಂಡ್ ಪಾಲಿಗೂ ರುಚಿಸುತ್ತಿಲ್ಲ ಎಂಬುದು ಕನ್ಫರ್ಮ್​ ಆಗಲಿದೆ.

ಅಂದರೆ ಆರ್​ಸಿಬಿಗೆ ಬರುವ ಮುನ್ನ ಸಿಡಿಲಬ್ಬರದ ಪ್ರದರ್ಶಿಸಿದ್ದ ಸಾಲ್ಟ್, ಆರ್​ಸಿಬಿಗೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಮಂಕಾಗಿದ್ದಾರೆ. ಅದು ಕೂಡ ಕಳೆದ ಮೂರು ಪಂದ್ಯಗಳಲ್ಲಿ ಒಂದಂಕಿ ರನ್​ಗಳಿಸುವ ಮೂಲಕ ಎಂಬುದೇ ಅಚ್ಚರಿ. ಇದೀಗ ಮೂರು ಪಂದ್ಯಗಳಲ್ಲಿ ವಿಫಲರಾಗಿರುವ ಫಿಲ್ ಸಾಲ್ಟ್ ಅವರನ್ನು ನಾಲ್ಕನೇ ಮ್ಯಾಚ್​ನಲ್ಲಿ ಇಂಗ್ಲೆಂಡ್ ಕಣಕ್ಕಿಳಿಸಲಿದೆಯಾ ಎಂಬುದೇ ಪ್ರಶ್ನೆ. ಒಂದು ವೇಳೆ ಕಣಕ್ಕಿಳಿಸದಿದ್ದರೆ ಸಾಲ್ಟ್ ಇಂಗ್ಲೆಂಡ್ ಪಾಲಿಗೂ ರುಚಿಸುತ್ತಿಲ್ಲ ಎಂಬುದು ಕನ್ಫರ್ಮ್​ ಆಗಲಿದೆ.

5 / 5

Published On - 10:30 am, Wed, 29 January 25

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ