AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಫಿಲ್ ಸಾಲ್ಟ್ ಜೊತೆ ಮೊಹಮ್ಮದ್ ಸಿರಾಜ್ ಕಿರಿಕ್

Siraj and Salt Fight Video: ಈ ಕಠಿಣ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಡೇವಿಡ್ ವಾರ್ನರ್ ಹಾಗೂ ಫಿಲ್ ಸಾಲ್ಟ್ ಭರ್ಜರಿ ಆರಂಭ ಒದಗಿಸಿದ್ದರು. ಆರಂಭದಲ್ಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಆರ್​ಸಿಬಿ ಬೌಲರ್​ಗಳ ಬೆಂಡೆತ್ತಿದರು.

TV9 Web
| Updated By: ಝಾಹಿರ್ ಯೂಸುಫ್

Updated on: May 06, 2023 | 10:59 PM

IPL 2023 DC vs RCB: ಐಪಿಎಲ್​ನ 50ನೇ ಪಂದ್ಯದಲ್ಲಿ ಆರ್​ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಫಿಲ್ ಸಾಲ್ಟ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಿತ್ತು.

IPL 2023 DC vs RCB: ಐಪಿಎಲ್​ನ 50ನೇ ಪಂದ್ಯದಲ್ಲಿ ಆರ್​ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಫಿಲ್ ಸಾಲ್ಟ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಿತ್ತು.

1 / 9
ವಿರಾಟ್ ಕೊಹ್ಲಿ (55) ಹಾಗೂ ಮಹಿಪಾಲ್ ಲೋಮ್ರರ್​ (54) ಅವರ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 180 ರನ್​ ಕಲೆಹಾಕಿತು.

ವಿರಾಟ್ ಕೊಹ್ಲಿ (55) ಹಾಗೂ ಮಹಿಪಾಲ್ ಲೋಮ್ರರ್​ (54) ಅವರ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 180 ರನ್​ ಕಲೆಹಾಕಿತು.

2 / 9
ಈ ಕಠಿಣ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಡೇವಿಡ್ ವಾರ್ನರ್ ಹಾಗೂ ಫಿಲ್ ಸಾಲ್ಟ್ ಭರ್ಜರಿ ಆರಂಭ ಒದಗಿಸಿದ್ದರು. ಆರಂಭದಲ್ಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಆರ್​ಸಿಬಿ ಬೌಲರ್​ಗಳ ಬೆಂಡೆತ್ತಿದರು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಡೇವಿಡ್ ವಾರ್ನರ್ ಹಾಗೂ ಫಿಲ್ ಸಾಲ್ಟ್ ಭರ್ಜರಿ ಆರಂಭ ಒದಗಿಸಿದ್ದರು. ಆರಂಭದಲ್ಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಆರ್​ಸಿಬಿ ಬೌಲರ್​ಗಳ ಬೆಂಡೆತ್ತಿದರು.

3 / 9
ಅದರಲ್ಲೂ ಮೊಹಮ್ಮದ್ ಸಿರಾಜ್ ಎಸೆದ 5ನೇ ಓವರ್​ನ ಮೊದಲೆರಡು ಎಸೆತಗಳಲ್ಲಿ ಸಾಲ್ಟ್ ಭರ್ಜರಿ ಸಿಕ್ಸ್ ಸಿಡಿಸಿದರು. ಇನ್ನು 3ನೇ ಎಸೆತದಲ್ಲಿ ಫೋರ್ ಬಾರಿಸಿದರು. ಆದರೆ ಸಿರಾಜ್ 4ನೇ ಎಸೆತವನ್ನು ಬೌನ್ಸರ್ ಎಸೆದರು.

ಅದರಲ್ಲೂ ಮೊಹಮ್ಮದ್ ಸಿರಾಜ್ ಎಸೆದ 5ನೇ ಓವರ್​ನ ಮೊದಲೆರಡು ಎಸೆತಗಳಲ್ಲಿ ಸಾಲ್ಟ್ ಭರ್ಜರಿ ಸಿಕ್ಸ್ ಸಿಡಿಸಿದರು. ಇನ್ನು 3ನೇ ಎಸೆತದಲ್ಲಿ ಫೋರ್ ಬಾರಿಸಿದರು. ಆದರೆ ಸಿರಾಜ್ 4ನೇ ಎಸೆತವನ್ನು ಬೌನ್ಸರ್ ಎಸೆದರು.

4 / 9
ಅತ್ತ ಮಾರಕ ಬೌನ್ಸರ್​ಗೆ ಉತ್ತರಿಸಲಾಗದೇ ಫಿಲ್ ಸಾಲ್ಟ್ ಅದೇನೋ ಗೊಣಗಿದ್ದಾರೆ. ಇತ್ತ ಮೊದಲೇ ಸಿಕ್ಸ್-ಫೋರ್ ಹೊಡೆಸಿಕೊಂಡು ಕುಪಿತಗೊಂಡಿದ್ದ ಮೊಹಮ್ಮದ್ ಸಿರಾಜ್ ಅವರ ಸಹನೆಯ ಕಟ್ಟೆ ಒಡೆದಿದೆ.

ಅತ್ತ ಮಾರಕ ಬೌನ್ಸರ್​ಗೆ ಉತ್ತರಿಸಲಾಗದೇ ಫಿಲ್ ಸಾಲ್ಟ್ ಅದೇನೋ ಗೊಣಗಿದ್ದಾರೆ. ಇತ್ತ ಮೊದಲೇ ಸಿಕ್ಸ್-ಫೋರ್ ಹೊಡೆಸಿಕೊಂಡು ಕುಪಿತಗೊಂಡಿದ್ದ ಮೊಹಮ್ಮದ್ ಸಿರಾಜ್ ಅವರ ಸಹನೆಯ ಕಟ್ಟೆ ಒಡೆದಿದೆ.

5 / 9
ಅಲ್ಲದೆ ಸೀದಾ ಹೋಗಿ ಫಿಲ್ ಸಾಲ್ಟ್ ಜೊತೆಗೆ ಕಿರಿಕ್​ಗೆ ಇಳಿದಿದ್ದಾರೆ. ಹಾಗೆಯೇ ಮಾತಿನ ಚಕಮಕಿ ನಡುವೆ ಸಾಲ್ಟ್​ಗೆ ಮುಚ್ಕೊಂಡಿರಬೇಕು ಎಂದು ಕೈ ತೋರಿಸಿ ಸೂಚನೆ ನೀಡಿದ್ದಾರೆ. ಇದರ ನಡುವೆ ​ನಾನ್​ ಸ್ಟ್ರೈಕ್​ನಲ್ಲಿದ್ದ ಡೇವಿಡ್ ವಾರ್ನರ್ ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದರು.

ಅಲ್ಲದೆ ಸೀದಾ ಹೋಗಿ ಫಿಲ್ ಸಾಲ್ಟ್ ಜೊತೆಗೆ ಕಿರಿಕ್​ಗೆ ಇಳಿದಿದ್ದಾರೆ. ಹಾಗೆಯೇ ಮಾತಿನ ಚಕಮಕಿ ನಡುವೆ ಸಾಲ್ಟ್​ಗೆ ಮುಚ್ಕೊಂಡಿರಬೇಕು ಎಂದು ಕೈ ತೋರಿಸಿ ಸೂಚನೆ ನೀಡಿದ್ದಾರೆ. ಇದರ ನಡುವೆ ​ನಾನ್​ ಸ್ಟ್ರೈಕ್​ನಲ್ಲಿದ್ದ ಡೇವಿಡ್ ವಾರ್ನರ್ ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದರು.

6 / 9
ಆದರೆ ಮೊದಲೇ ಸಿಡಿಮಿಡಿಗೊಂಡಿದ್ದ ಸಿರಾಜ್ ವಾರ್ನರ್ ಜೊತೆಗೂ ವಾಗ್ವಾದಕ್ಕೆ ಇಳಿದರು. ಅಷ್ಟರಲ್ಲಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಅಂಪೈರ್ ಮಧ್ಯಪ್ರವೇಶಿಸಿ ಜಗಳವನ್ನು ಕೊನೆಗೊಳಿಸಿದರು. ಇದೀಗ ಸಿರಾಜ್ ಅವರ ಈ ಕೋಪತಾಪದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆದರೆ ಮೊದಲೇ ಸಿಡಿಮಿಡಿಗೊಂಡಿದ್ದ ಸಿರಾಜ್ ವಾರ್ನರ್ ಜೊತೆಗೂ ವಾಗ್ವಾದಕ್ಕೆ ಇಳಿದರು. ಅಷ್ಟರಲ್ಲಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಅಂಪೈರ್ ಮಧ್ಯಪ್ರವೇಶಿಸಿ ಜಗಳವನ್ನು ಕೊನೆಗೊಳಿಸಿದರು. ಇದೀಗ ಸಿರಾಜ್ ಅವರ ಈ ಕೋಪತಾಪದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

7 / 9
ಅಂದಹಾಗೆ ಈ ಅತಿರೇಕದ ವರ್ತನೆಗೆ ಮೊಹಮ್ಮದ್ ಸಿರಾಜ್​ಗೆ ದಂಡ ವಿಧಿಸುವ ಸಾಧ್ಯತೆ ಹೆಚ್ಚಿದೆ. ಐಪಿಎಲ್​ ನೀತಿ ಸಂಹಿತೆ ಲೆವೆಲ್-1 ಫೈನ್ ಬಿದ್ದರೆ ಸಿರಾಜ್ 12 ಲಕ್ಷ ರೂ. ದಂಡ ಪಾವತಿಸಬೇಕಾಗಿ ಬರಬಹುದು. ಅಥವಾ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಬಹುದು.

ಅಂದಹಾಗೆ ಈ ಅತಿರೇಕದ ವರ್ತನೆಗೆ ಮೊಹಮ್ಮದ್ ಸಿರಾಜ್​ಗೆ ದಂಡ ವಿಧಿಸುವ ಸಾಧ್ಯತೆ ಹೆಚ್ಚಿದೆ. ಐಪಿಎಲ್​ ನೀತಿ ಸಂಹಿತೆ ಲೆವೆಲ್-1 ಫೈನ್ ಬಿದ್ದರೆ ಸಿರಾಜ್ 12 ಲಕ್ಷ ರೂ. ದಂಡ ಪಾವತಿಸಬೇಕಾಗಿ ಬರಬಹುದು. ಅಥವಾ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಬಹುದು.

8 / 9
ಒಟ್ಟಿನಲ್ಲಿ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ನಡುವಣ ಚಕಮಕಿ ಮರೆಯುವ ಮುನ್ನವೇ ಇದೀಗ ಸಿರಾಜ್ ಸಾಲ್ಟ್ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಇದರಿಂದ ಫೇರ್​ಪ್ಲೇ ಪಾಯಿಂಟ್ಸ್​ನಲ್ಲಿ ಆರ್​ಸಿಬಿ 9ನೇ ಸ್ಥಾನಕ್ಕಿಳಿದಿದೆ.

ಒಟ್ಟಿನಲ್ಲಿ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ನಡುವಣ ಚಕಮಕಿ ಮರೆಯುವ ಮುನ್ನವೇ ಇದೀಗ ಸಿರಾಜ್ ಸಾಲ್ಟ್ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಇದರಿಂದ ಫೇರ್​ಪ್ಲೇ ಪಾಯಿಂಟ್ಸ್​ನಲ್ಲಿ ಆರ್​ಸಿಬಿ 9ನೇ ಸ್ಥಾನಕ್ಕಿಳಿದಿದೆ.

9 / 9
Follow us
ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ