AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಸಿಎಸ್​ಕೆ ತಂಡದಿಂದ ಈ ಮೂವರನ್ನು ಹೊರಹಾಕಬೇಕು ಎಂದ ಸುರೇಶ್ ರೈನಾ

CSK IPL 2026 Auction: ಐಪಿಎಲ್ 2026 ಮಿನಿ ಹರಾಜಿಗೆ ಮುನ್ನ, ಸುರೇಶ್ ರೈನಾ CSKಗೆ ಪ್ರಮುಖ ಸಲಹೆ ನೀಡಿದ್ದಾರೆ. ಧೋನಿ, ಜಡೇಜಾ, ರುತುರಾಜ್, ನೂರ್ ಅಹ್ಮದ್ ಅವರನ್ನು ಉಳಿಸಿಕೊಳ್ಳಲು ರೈನಾ ಸೂಚಿಸಿದ್ದಾರೆ. ಡೆವೊನ್ ಕಾನ್ವೇ, ವಿಜಯ್ ಶಂಕರ್, ದೀಪಕ್ ಹೂಡಾ ಅವರನ್ನು ಬಿಡುಗಡೆ ಮಾಡಿ, ಸ್ಥಳೀಯ ಆಟಗಾರರನ್ನು ಸೇರಿಸಿಕೊಳ್ಳಲು ಸಲಹೆ ನೀಡಿದ್ದಾರೆ.

ಪೃಥ್ವಿಶಂಕರ
|

Updated on: Nov 10, 2025 | 6:59 PM

Share
ಐಪಿಎಲ್ 2026 ರ ಮಿನಿ ಹರಾಜು ಮುಂದಿನ ತಿಂಗಳು ಡಿಸೆಂಬರ್‌ನಲ್ಲಿ ನಡೆಯಲಿದೆ. ಹರಾಜಿಗೆ ಮುನ್ನ, ಆಟಗಾರರ ಬಿಡುಗಡೆ, ಉಳಿಸಿಕೊಳ್ಳುವಿಕೆ ಮತ್ತು ವಿನಿಮಯದ ಬಗ್ಗೆ ಊಹಾಪೋಹಗಳು ಹರಡಿವೆ. ಏತನ್ಮಧ್ಯೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಬ್ಯಾಟ್ಸ್‌ಮನ್ ಸುರೇಶ್ ರೈನಾ, ಸಿಎಸ್‌ಕೆ ಫ್ರಾಂಚೈಸಿ ತಂಡದಲ್ಲಿ ಉಳಿಸಿಕೊಳ್ಳಬೇಕಾದ ಮತ್ತು ಬಿಡುಗಡೆ ಮಾಡಬೇಕಾದ ಪ್ರಮುಖ ಆಟಗಾರರನ್ನು ಹೆಸರಿಸಿದ್ದಾರೆ.

ಐಪಿಎಲ್ 2026 ರ ಮಿನಿ ಹರಾಜು ಮುಂದಿನ ತಿಂಗಳು ಡಿಸೆಂಬರ್‌ನಲ್ಲಿ ನಡೆಯಲಿದೆ. ಹರಾಜಿಗೆ ಮುನ್ನ, ಆಟಗಾರರ ಬಿಡುಗಡೆ, ಉಳಿಸಿಕೊಳ್ಳುವಿಕೆ ಮತ್ತು ವಿನಿಮಯದ ಬಗ್ಗೆ ಊಹಾಪೋಹಗಳು ಹರಡಿವೆ. ಏತನ್ಮಧ್ಯೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಬ್ಯಾಟ್ಸ್‌ಮನ್ ಸುರೇಶ್ ರೈನಾ, ಸಿಎಸ್‌ಕೆ ಫ್ರಾಂಚೈಸಿ ತಂಡದಲ್ಲಿ ಉಳಿಸಿಕೊಳ್ಳಬೇಕಾದ ಮತ್ತು ಬಿಡುಗಡೆ ಮಾಡಬೇಕಾದ ಪ್ರಮುಖ ಆಟಗಾರರನ್ನು ಹೆಸರಿಸಿದ್ದಾರೆ.

1 / 5
ವಾಸ್ತವವಾಗಿ ಮಿನಿ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿರುವ ಸಂಜು ಸ್ಯಾಮ್ಸನ್​ರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳುವ ಇರಾದೆಯೊಂದಿಗೆ ಸಿಎಸ್​ಕೆ ಫ್ರಾಂಚೈಸಿ, ತಂಡದಲ್ಲಿರುವ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ಸ್ಯಾಮ್ ಕರನ್ ಅವರನ್ನು ಬಿಟ್ಟುಕೊಡಲು ಮುಂದಾಗಿದೆ. ಆದರೆ ಈ ಒಪ್ಪಂದದ ಬಗ್ಗೆ ಅಪಸ್ವರ ಎತ್ತಿರುವ ರೈನಾ, ಜಡೇಜಾ ಸಿಎಸ್​ಕೆ ತಂಡದಲ್ಲೇ ಇರಬೇಕು ಎಂದಿದ್ದಾರೆ.

ವಾಸ್ತವವಾಗಿ ಮಿನಿ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿರುವ ಸಂಜು ಸ್ಯಾಮ್ಸನ್​ರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳುವ ಇರಾದೆಯೊಂದಿಗೆ ಸಿಎಸ್​ಕೆ ಫ್ರಾಂಚೈಸಿ, ತಂಡದಲ್ಲಿರುವ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ಸ್ಯಾಮ್ ಕರನ್ ಅವರನ್ನು ಬಿಟ್ಟುಕೊಡಲು ಮುಂದಾಗಿದೆ. ಆದರೆ ಈ ಒಪ್ಪಂದದ ಬಗ್ಗೆ ಅಪಸ್ವರ ಎತ್ತಿರುವ ರೈನಾ, ಜಡೇಜಾ ಸಿಎಸ್​ಕೆ ತಂಡದಲ್ಲೇ ಇರಬೇಕು ಎಂದಿದ್ದಾರೆ.

2 / 5
ರವೀಂದ್ರ ಜಡೇಜಾ ಅವರೊಂದಿಗೆ ಅಫ್ಘಾನಿಸ್ತಾದ ಯುವ ಸ್ಪಿನ್ನರ್ ನೂರ್ ಅಹ್ಮದ್ ಅವರನ್ನು ಉಳಿಸಿಕೊಳ್ಳಬೇಕು ಎಂದಿದ್ದಾರೆ. ಇವರ ಜೊತೆಗೆ ತಂಡದ ಹಾಲಿ ನಾಯಕ ಎಂಎಸ್ ಧೋನಿ ಮುಂಬರುವ ಸೀಸನ್​ನಲ್ಲಿ ಆಡುವ ಕಾರಣದಿಂದಾಗಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕು. ಹಾಗೆಯೇ ತಂಡದ ಮಾಜಿ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕು ಎಂದು ರೈನಾ ಹೇಳಿದ್ದಾರೆ.

ರವೀಂದ್ರ ಜಡೇಜಾ ಅವರೊಂದಿಗೆ ಅಫ್ಘಾನಿಸ್ತಾದ ಯುವ ಸ್ಪಿನ್ನರ್ ನೂರ್ ಅಹ್ಮದ್ ಅವರನ್ನು ಉಳಿಸಿಕೊಳ್ಳಬೇಕು ಎಂದಿದ್ದಾರೆ. ಇವರ ಜೊತೆಗೆ ತಂಡದ ಹಾಲಿ ನಾಯಕ ಎಂಎಸ್ ಧೋನಿ ಮುಂಬರುವ ಸೀಸನ್​ನಲ್ಲಿ ಆಡುವ ಕಾರಣದಿಂದಾಗಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕು. ಹಾಗೆಯೇ ತಂಡದ ಮಾಜಿ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕು ಎಂದು ರೈನಾ ಹೇಳಿದ್ದಾರೆ.

3 / 5
ಯಾರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಸ್ಪಷ್ಟಪಡಿಸಿರುವ ರೈನಾ, ಯಾರನ್ನು ತಂಡದಿಂದ ಹೊರಗಿಡಬೇಕು ಎಂಬುದನ್ನು ವಿವರಿಸಿದ್ದಾರೆ. ರೈನಾ ಪ್ರಕಾರ, ನ್ಯೂಜಿಲೆಂಡ್ ತಂಡದ ಆರಂಭಿಕ ಡೆವೊನ್ ಕಾನ್ವೇ ಅವರನ್ನು ತಂಡದಿಂದ ಬಿಡುಗಡೆ ಮಾಡಬೇಕು. ಏಕೆಂದರೆ ಸಿಎಸ್‌ಕೆಗೆ ಸ್ಥಳೀಯ ಆರಂಭಿಕ ಆಟಗಾರನ ಅಗತ್ಯವಿದೆ. ಹೀಗಾಗಿ ಕಾನ್ವೇ ಬದಲಿಗೆ ಮಿನಿ ಹರಾಜಿನಲ್ಲಿ ಸ್ಥಳೀಯ ಆಟಗಾರನನ್ನು ಸಿಎಸ್​ಕೆ ಖರೀದಿಸಬೇಕು ಎಂದಿದ್ದಾರೆ.

ಯಾರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಸ್ಪಷ್ಟಪಡಿಸಿರುವ ರೈನಾ, ಯಾರನ್ನು ತಂಡದಿಂದ ಹೊರಗಿಡಬೇಕು ಎಂಬುದನ್ನು ವಿವರಿಸಿದ್ದಾರೆ. ರೈನಾ ಪ್ರಕಾರ, ನ್ಯೂಜಿಲೆಂಡ್ ತಂಡದ ಆರಂಭಿಕ ಡೆವೊನ್ ಕಾನ್ವೇ ಅವರನ್ನು ತಂಡದಿಂದ ಬಿಡುಗಡೆ ಮಾಡಬೇಕು. ಏಕೆಂದರೆ ಸಿಎಸ್‌ಕೆಗೆ ಸ್ಥಳೀಯ ಆರಂಭಿಕ ಆಟಗಾರನ ಅಗತ್ಯವಿದೆ. ಹೀಗಾಗಿ ಕಾನ್ವೇ ಬದಲಿಗೆ ಮಿನಿ ಹರಾಜಿನಲ್ಲಿ ಸ್ಥಳೀಯ ಆಟಗಾರನನ್ನು ಸಿಎಸ್​ಕೆ ಖರೀದಿಸಬೇಕು ಎಂದಿದ್ದಾರೆ.

4 / 5
ಕಾನ್ವೇ ಜೊತೆಗೆ ತಂಡದಲ್ಲಿ ಸಾಕಷ್ಟು ಅವಕಾಶ ಪಡೆದರೂ ಪರಿಣಾಮಕಾರಿ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಟೀಂ ಇಂಡಿಯಾದ ಆಲ್‌ರೌಂಡರ್ ವಿಜಯ್ ಶಂಕರ್ ಅವರನ್ನೂ ಬಿಡುಗಡೆ ಮಾಡಬೇಕು. ಇವರ ಜೊತೆಗೆ ದೀಪಕ್ ಹೂಡಾ ಅವರನ್ನು ಸಹ ಬಿಡುಗಡೆ ಮಾಡಬೇಕು. ಇವರನ್ನೆಲ್ಲ ತಂಡದಿಂದ ಹೊರಗಿಟ್ಟು ಮಿನಿ ಹರಾಜಿನಲ್ಲಿ ತಂಡಕ್ಕೆ ಬೇಕಾದ ಸಂಯೋಜನೆಯನ್ನು ಒದಗಿಸಬಲ್ಲ ಅನೇಕ ಆಟಗಾರರನ್ನು ಖರೀದಿಸಬೇಕು ಎಂದು ರೈನಾ ಹೇಳಿದ್ದಾರೆ.

ಕಾನ್ವೇ ಜೊತೆಗೆ ತಂಡದಲ್ಲಿ ಸಾಕಷ್ಟು ಅವಕಾಶ ಪಡೆದರೂ ಪರಿಣಾಮಕಾರಿ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಟೀಂ ಇಂಡಿಯಾದ ಆಲ್‌ರೌಂಡರ್ ವಿಜಯ್ ಶಂಕರ್ ಅವರನ್ನೂ ಬಿಡುಗಡೆ ಮಾಡಬೇಕು. ಇವರ ಜೊತೆಗೆ ದೀಪಕ್ ಹೂಡಾ ಅವರನ್ನು ಸಹ ಬಿಡುಗಡೆ ಮಾಡಬೇಕು. ಇವರನ್ನೆಲ್ಲ ತಂಡದಿಂದ ಹೊರಗಿಟ್ಟು ಮಿನಿ ಹರಾಜಿನಲ್ಲಿ ತಂಡಕ್ಕೆ ಬೇಕಾದ ಸಂಯೋಜನೆಯನ್ನು ಒದಗಿಸಬಲ್ಲ ಅನೇಕ ಆಟಗಾರರನ್ನು ಖರೀದಿಸಬೇಕು ಎಂದು ರೈನಾ ಹೇಳಿದ್ದಾರೆ.

5 / 5
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ