AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ರ‍್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನ 1 ಟು 3

ICC Rankings: ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಹಿಳಾ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾದ ಏಕೈಕ ಬ್ಯಾಟರ್ ಸ್ಮೃತಿ ಮಂಧಾನ. ಭಾರತ ತಂಡದ ಆರಂಭಿಕ ಆಟಗಾರ್ತಿ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Jul 02, 2025 | 2:54 PM

Share
ಐಸಿಸಿ ಮಹಿಳಾ ಬ್ಯಾಟರ್​​ಗಳ ನೂತನ ರ‍್ಯಾಂಕಿಂಗ್​ ಪಟ್ಟಿ ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಟಾಪ್-3 ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲೂ ಅಗ್ರ ಮೂರಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರ್ತಿ ಸ್ಮೃತಿ ಮಂಧಾನ.

ಐಸಿಸಿ ಮಹಿಳಾ ಬ್ಯಾಟರ್​​ಗಳ ನೂತನ ರ‍್ಯಾಂಕಿಂಗ್​ ಪಟ್ಟಿ ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಟಾಪ್-3 ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲೂ ಅಗ್ರ ಮೂರಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರ್ತಿ ಸ್ಮೃತಿ ಮಂಧಾನ.

1 / 5
ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಸ್ಮೃತಿ ಮಂಧಾನ ಇದೀಗ ಮಹಿಳಾ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಮೃತಿ ಮೂರನೇ ಸ್ಥಾನಕ್ಕೇರಿದ್ದಾರೆ. ಒಟ್ಟು 771 ಅಂಕಗಳನ್ನು ಪಡೆದಿರುವ ಸ್ಮೃತಿ ಮುಂದಿನ ಮ್ಯಾಚ್​ಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ದ್ವಿತೀಯ ಸ್ಥಾನಕ್ಕೇರಬಹುದು.

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಸ್ಮೃತಿ ಮಂಧಾನ ಇದೀಗ ಮಹಿಳಾ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಮೃತಿ ಮೂರನೇ ಸ್ಥಾನಕ್ಕೇರಿದ್ದಾರೆ. ಒಟ್ಟು 771 ಅಂಕಗಳನ್ನು ಪಡೆದಿರುವ ಸ್ಮೃತಿ ಮುಂದಿನ ಮ್ಯಾಚ್​ಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ದ್ವಿತೀಯ ಸ್ಥಾನಕ್ಕೇರಬಹುದು.

2 / 5
ಮತ್ತೊಂದೆಡೆ ಏಕದಿನ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 727 ಅಂಕಗಳನ್ನು ಪಡೆದಿರುವ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ 725 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಮತ್ತೊಂದೆಡೆ ಏಕದಿನ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 727 ಅಂಕಗಳನ್ನು ಪಡೆದಿರುವ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ 725 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

3 / 5
ವಿಶೇಷ ಎಂದರೆ ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಏಕದಿನ ಹಾಗೂ ಟಿ20 ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಈ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಪಾರುಪತ್ಯ ಮೆರೆದ ಭಾರತದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಏಕದಿನ ಹಾಗೂ ಟಿ20 ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಈ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಪಾರುಪತ್ಯ ಮೆರೆದ ಭಾರತದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಸದ್ಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ಸ್ಮೃತಿ ಮಂಧಾನ ಮುಂದಿನ ಮೂರು ಮ್ಯಾಚ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ, ಆಸ್ಟ್ರೇಲಿಯಾದ ಬೆತ್ ಮೂನಿ (794) ಹಾಗೂ ವೆಸ್ಟ್ ಇಂಡೀಸ್​ನ ಹೇಲಿ ಮ್ಯಾಥ್ಯೂಸ್ (774) ಅನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಬಹುದು. ಹೀಗಾಗಿ ಆಂಗ್ಲರ ವಿರುದ್ಧದ ಸರಣಿಯು ಸ್ಮೃತಿ ಪಾಲಿಗೆ ತುಂಬಾ ಮಹತ್ವದ್ದಾಗಿ ಮಾರ್ಪಟ್ಟಿದೆ.

ಸದ್ಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ಸ್ಮೃತಿ ಮಂಧಾನ ಮುಂದಿನ ಮೂರು ಮ್ಯಾಚ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ, ಆಸ್ಟ್ರೇಲಿಯಾದ ಬೆತ್ ಮೂನಿ (794) ಹಾಗೂ ವೆಸ್ಟ್ ಇಂಡೀಸ್​ನ ಹೇಲಿ ಮ್ಯಾಥ್ಯೂಸ್ (774) ಅನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಬಹುದು. ಹೀಗಾಗಿ ಆಂಗ್ಲರ ವಿರುದ್ಧದ ಸರಣಿಯು ಸ್ಮೃತಿ ಪಾಲಿಗೆ ತುಂಬಾ ಮಹತ್ವದ್ದಾಗಿ ಮಾರ್ಪಟ್ಟಿದೆ.

5 / 5

Published On - 2:54 pm, Wed, 2 July 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ