AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ರ‍್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನ 1 ಟು 3

ICC Rankings: ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಹಿಳಾ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾದ ಏಕೈಕ ಬ್ಯಾಟರ್ ಸ್ಮೃತಿ ಮಂಧಾನ. ಭಾರತ ತಂಡದ ಆರಂಭಿಕ ಆಟಗಾರ್ತಿ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Jul 02, 2025 | 2:54 PM

Share
ಐಸಿಸಿ ಮಹಿಳಾ ಬ್ಯಾಟರ್​​ಗಳ ನೂತನ ರ‍್ಯಾಂಕಿಂಗ್​ ಪಟ್ಟಿ ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಟಾಪ್-3 ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲೂ ಅಗ್ರ ಮೂರಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರ್ತಿ ಸ್ಮೃತಿ ಮಂಧಾನ.

ಐಸಿಸಿ ಮಹಿಳಾ ಬ್ಯಾಟರ್​​ಗಳ ನೂತನ ರ‍್ಯಾಂಕಿಂಗ್​ ಪಟ್ಟಿ ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಟಾಪ್-3 ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲೂ ಅಗ್ರ ಮೂರಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರ್ತಿ ಸ್ಮೃತಿ ಮಂಧಾನ.

1 / 5
ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಸ್ಮೃತಿ ಮಂಧಾನ ಇದೀಗ ಮಹಿಳಾ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಮೃತಿ ಮೂರನೇ ಸ್ಥಾನಕ್ಕೇರಿದ್ದಾರೆ. ಒಟ್ಟು 771 ಅಂಕಗಳನ್ನು ಪಡೆದಿರುವ ಸ್ಮೃತಿ ಮುಂದಿನ ಮ್ಯಾಚ್​ಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ದ್ವಿತೀಯ ಸ್ಥಾನಕ್ಕೇರಬಹುದು.

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಸ್ಮೃತಿ ಮಂಧಾನ ಇದೀಗ ಮಹಿಳಾ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಮೃತಿ ಮೂರನೇ ಸ್ಥಾನಕ್ಕೇರಿದ್ದಾರೆ. ಒಟ್ಟು 771 ಅಂಕಗಳನ್ನು ಪಡೆದಿರುವ ಸ್ಮೃತಿ ಮುಂದಿನ ಮ್ಯಾಚ್​ಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ದ್ವಿತೀಯ ಸ್ಥಾನಕ್ಕೇರಬಹುದು.

2 / 5
ಮತ್ತೊಂದೆಡೆ ಏಕದಿನ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 727 ಅಂಕಗಳನ್ನು ಪಡೆದಿರುವ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ 725 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಮತ್ತೊಂದೆಡೆ ಏಕದಿನ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 727 ಅಂಕಗಳನ್ನು ಪಡೆದಿರುವ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ 725 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

3 / 5
ವಿಶೇಷ ಎಂದರೆ ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಏಕದಿನ ಹಾಗೂ ಟಿ20 ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಈ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಪಾರುಪತ್ಯ ಮೆರೆದ ಭಾರತದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಏಕದಿನ ಹಾಗೂ ಟಿ20 ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಈ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಪಾರುಪತ್ಯ ಮೆರೆದ ಭಾರತದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಸದ್ಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ಸ್ಮೃತಿ ಮಂಧಾನ ಮುಂದಿನ ಮೂರು ಮ್ಯಾಚ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ, ಆಸ್ಟ್ರೇಲಿಯಾದ ಬೆತ್ ಮೂನಿ (794) ಹಾಗೂ ವೆಸ್ಟ್ ಇಂಡೀಸ್​ನ ಹೇಲಿ ಮ್ಯಾಥ್ಯೂಸ್ (774) ಅನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಬಹುದು. ಹೀಗಾಗಿ ಆಂಗ್ಲರ ವಿರುದ್ಧದ ಸರಣಿಯು ಸ್ಮೃತಿ ಪಾಲಿಗೆ ತುಂಬಾ ಮಹತ್ವದ್ದಾಗಿ ಮಾರ್ಪಟ್ಟಿದೆ.

ಸದ್ಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ಸ್ಮೃತಿ ಮಂಧಾನ ಮುಂದಿನ ಮೂರು ಮ್ಯಾಚ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ, ಆಸ್ಟ್ರೇಲಿಯಾದ ಬೆತ್ ಮೂನಿ (794) ಹಾಗೂ ವೆಸ್ಟ್ ಇಂಡೀಸ್​ನ ಹೇಲಿ ಮ್ಯಾಥ್ಯೂಸ್ (774) ಅನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಬಹುದು. ಹೀಗಾಗಿ ಆಂಗ್ಲರ ವಿರುದ್ಧದ ಸರಣಿಯು ಸ್ಮೃತಿ ಪಾಲಿಗೆ ತುಂಬಾ ಮಹತ್ವದ್ದಾಗಿ ಮಾರ್ಪಟ್ಟಿದೆ.

5 / 5

Published On - 2:54 pm, Wed, 2 July 25

Follow Us
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು