AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ರ‍್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನ 1 ಟು 3

ICC Rankings: ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಹಿಳಾ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾದ ಏಕೈಕ ಬ್ಯಾಟರ್ ಸ್ಮೃತಿ ಮಂಧಾನ. ಭಾರತ ತಂಡದ ಆರಂಭಿಕ ಆಟಗಾರ್ತಿ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Jul 02, 2025 | 2:54 PM

Share
ಐಸಿಸಿ ಮಹಿಳಾ ಬ್ಯಾಟರ್​​ಗಳ ನೂತನ ರ‍್ಯಾಂಕಿಂಗ್​ ಪಟ್ಟಿ ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಟಾಪ್-3 ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲೂ ಅಗ್ರ ಮೂರಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರ್ತಿ ಸ್ಮೃತಿ ಮಂಧಾನ.

ಐಸಿಸಿ ಮಹಿಳಾ ಬ್ಯಾಟರ್​​ಗಳ ನೂತನ ರ‍್ಯಾಂಕಿಂಗ್​ ಪಟ್ಟಿ ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಟಾಪ್-3 ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲೂ ಅಗ್ರ ಮೂರಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರ್ತಿ ಸ್ಮೃತಿ ಮಂಧಾನ.

1 / 5
ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಸ್ಮೃತಿ ಮಂಧಾನ ಇದೀಗ ಮಹಿಳಾ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಮೃತಿ ಮೂರನೇ ಸ್ಥಾನಕ್ಕೇರಿದ್ದಾರೆ. ಒಟ್ಟು 771 ಅಂಕಗಳನ್ನು ಪಡೆದಿರುವ ಸ್ಮೃತಿ ಮುಂದಿನ ಮ್ಯಾಚ್​ಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ದ್ವಿತೀಯ ಸ್ಥಾನಕ್ಕೇರಬಹುದು.

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಸ್ಮೃತಿ ಮಂಧಾನ ಇದೀಗ ಮಹಿಳಾ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಮೃತಿ ಮೂರನೇ ಸ್ಥಾನಕ್ಕೇರಿದ್ದಾರೆ. ಒಟ್ಟು 771 ಅಂಕಗಳನ್ನು ಪಡೆದಿರುವ ಸ್ಮೃತಿ ಮುಂದಿನ ಮ್ಯಾಚ್​ಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ದ್ವಿತೀಯ ಸ್ಥಾನಕ್ಕೇರಬಹುದು.

2 / 5
ಮತ್ತೊಂದೆಡೆ ಏಕದಿನ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 727 ಅಂಕಗಳನ್ನು ಪಡೆದಿರುವ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ 725 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಮತ್ತೊಂದೆಡೆ ಏಕದಿನ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 727 ಅಂಕಗಳನ್ನು ಪಡೆದಿರುವ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ 725 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

3 / 5
ವಿಶೇಷ ಎಂದರೆ ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಏಕದಿನ ಹಾಗೂ ಟಿ20 ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಈ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಪಾರುಪತ್ಯ ಮೆರೆದ ಭಾರತದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಏಕದಿನ ಹಾಗೂ ಟಿ20 ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಈ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಪಾರುಪತ್ಯ ಮೆರೆದ ಭಾರತದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಸದ್ಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ಸ್ಮೃತಿ ಮಂಧಾನ ಮುಂದಿನ ಮೂರು ಮ್ಯಾಚ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ, ಆಸ್ಟ್ರೇಲಿಯಾದ ಬೆತ್ ಮೂನಿ (794) ಹಾಗೂ ವೆಸ್ಟ್ ಇಂಡೀಸ್​ನ ಹೇಲಿ ಮ್ಯಾಥ್ಯೂಸ್ (774) ಅನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಬಹುದು. ಹೀಗಾಗಿ ಆಂಗ್ಲರ ವಿರುದ್ಧದ ಸರಣಿಯು ಸ್ಮೃತಿ ಪಾಲಿಗೆ ತುಂಬಾ ಮಹತ್ವದ್ದಾಗಿ ಮಾರ್ಪಟ್ಟಿದೆ.

ಸದ್ಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ಸ್ಮೃತಿ ಮಂಧಾನ ಮುಂದಿನ ಮೂರು ಮ್ಯಾಚ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ, ಆಸ್ಟ್ರೇಲಿಯಾದ ಬೆತ್ ಮೂನಿ (794) ಹಾಗೂ ವೆಸ್ಟ್ ಇಂಡೀಸ್​ನ ಹೇಲಿ ಮ್ಯಾಥ್ಯೂಸ್ (774) ಅನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಬಹುದು. ಹೀಗಾಗಿ ಆಂಗ್ಲರ ವಿರುದ್ಧದ ಸರಣಿಯು ಸ್ಮೃತಿ ಪಾಲಿಗೆ ತುಂಬಾ ಮಹತ್ವದ್ದಾಗಿ ಮಾರ್ಪಟ್ಟಿದೆ.

5 / 5

Published On - 2:54 pm, Wed, 2 July 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!