AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ರ‍್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನ 1 ಟು 3

ICC Rankings: ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಹಿಳಾ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾದ ಏಕೈಕ ಬ್ಯಾಟರ್ ಸ್ಮೃತಿ ಮಂಧಾನ. ಭಾರತ ತಂಡದ ಆರಂಭಿಕ ಆಟಗಾರ್ತಿ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Jul 02, 2025 | 2:54 PM

Share
ಐಸಿಸಿ ಮಹಿಳಾ ಬ್ಯಾಟರ್​​ಗಳ ನೂತನ ರ‍್ಯಾಂಕಿಂಗ್​ ಪಟ್ಟಿ ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಟಾಪ್-3 ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲೂ ಅಗ್ರ ಮೂರಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರ್ತಿ ಸ್ಮೃತಿ ಮಂಧಾನ.

ಐಸಿಸಿ ಮಹಿಳಾ ಬ್ಯಾಟರ್​​ಗಳ ನೂತನ ರ‍್ಯಾಂಕಿಂಗ್​ ಪಟ್ಟಿ ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಟಾಪ್-3 ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲೂ ಅಗ್ರ ಮೂರಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರ್ತಿ ಸ್ಮೃತಿ ಮಂಧಾನ.

1 / 5
ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಸ್ಮೃತಿ ಮಂಧಾನ ಇದೀಗ ಮಹಿಳಾ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಮೃತಿ ಮೂರನೇ ಸ್ಥಾನಕ್ಕೇರಿದ್ದಾರೆ. ಒಟ್ಟು 771 ಅಂಕಗಳನ್ನು ಪಡೆದಿರುವ ಸ್ಮೃತಿ ಮುಂದಿನ ಮ್ಯಾಚ್​ಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ದ್ವಿತೀಯ ಸ್ಥಾನಕ್ಕೇರಬಹುದು.

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಸ್ಮೃತಿ ಮಂಧಾನ ಇದೀಗ ಮಹಿಳಾ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಮೃತಿ ಮೂರನೇ ಸ್ಥಾನಕ್ಕೇರಿದ್ದಾರೆ. ಒಟ್ಟು 771 ಅಂಕಗಳನ್ನು ಪಡೆದಿರುವ ಸ್ಮೃತಿ ಮುಂದಿನ ಮ್ಯಾಚ್​ಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ದ್ವಿತೀಯ ಸ್ಥಾನಕ್ಕೇರಬಹುದು.

2 / 5
ಮತ್ತೊಂದೆಡೆ ಏಕದಿನ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 727 ಅಂಕಗಳನ್ನು ಪಡೆದಿರುವ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ 725 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಮತ್ತೊಂದೆಡೆ ಏಕದಿನ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 727 ಅಂಕಗಳನ್ನು ಪಡೆದಿರುವ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ 725 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

3 / 5
ವಿಶೇಷ ಎಂದರೆ ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಏಕದಿನ ಹಾಗೂ ಟಿ20 ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಈ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಪಾರುಪತ್ಯ ಮೆರೆದ ಭಾರತದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಏಕದಿನ ಹಾಗೂ ಟಿ20 ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಈ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಪಾರುಪತ್ಯ ಮೆರೆದ ಭಾರತದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಸದ್ಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ಸ್ಮೃತಿ ಮಂಧಾನ ಮುಂದಿನ ಮೂರು ಮ್ಯಾಚ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ, ಆಸ್ಟ್ರೇಲಿಯಾದ ಬೆತ್ ಮೂನಿ (794) ಹಾಗೂ ವೆಸ್ಟ್ ಇಂಡೀಸ್​ನ ಹೇಲಿ ಮ್ಯಾಥ್ಯೂಸ್ (774) ಅನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಬಹುದು. ಹೀಗಾಗಿ ಆಂಗ್ಲರ ವಿರುದ್ಧದ ಸರಣಿಯು ಸ್ಮೃತಿ ಪಾಲಿಗೆ ತುಂಬಾ ಮಹತ್ವದ್ದಾಗಿ ಮಾರ್ಪಟ್ಟಿದೆ.

ಸದ್ಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ಸ್ಮೃತಿ ಮಂಧಾನ ಮುಂದಿನ ಮೂರು ಮ್ಯಾಚ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ, ಆಸ್ಟ್ರೇಲಿಯಾದ ಬೆತ್ ಮೂನಿ (794) ಹಾಗೂ ವೆಸ್ಟ್ ಇಂಡೀಸ್​ನ ಹೇಲಿ ಮ್ಯಾಥ್ಯೂಸ್ (774) ಅನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಬಹುದು. ಹೀಗಾಗಿ ಆಂಗ್ಲರ ವಿರುದ್ಧದ ಸರಣಿಯು ಸ್ಮೃತಿ ಪಾಲಿಗೆ ತುಂಬಾ ಮಹತ್ವದ್ದಾಗಿ ಮಾರ್ಪಟ್ಟಿದೆ.

5 / 5

Published On - 2:54 pm, Wed, 2 July 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್