Team India: ಹರ್ಮನ್ಪ್ರೀತ್ ಸ್ಥಾನಕ್ಕೆ ಕುತ್ತು; ಯಾರಾಗಲಿದ್ದಾರೆ ಮುಂದಿನ ಕ್ಯಾಪ್ಟನ್?
Team India: ಟಿ20 ವಿಶ್ವಕಪ್ನಿಂದ ಖಾಲಿ ಕೈಯಲ್ಲಿ ವಾಪಸ್ಸಾಗಿರುವ ಭಾರತ ಮಹಿಳಾ ತಂಡದ ನಾಯಕಿಯ ಬದಲಾವಣೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅದರಂತೆ ಹರ್ಮನ್ಪ್ರೀತ್ ಕೌರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸುವ ಬಗ್ಗೆ ಮಾತುಕತೆ ಜೋರಾಗಿದೆ. ಅನುಭವಿ ಆಟಗಾರರು ಹಾಗೂ ಮಾಜಿ ಮಹಿಳಾ ಕ್ರಿಕೆಟರ್ಗಳು ಹರ್ಮನ್ಪ್ರೀತ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಿಸಿಸಿಐ ಕೂಡ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
1 / 10
ಯುಎಇಯಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ನ ಗುಂಪು ಹಂತದ ಪಂದ್ಯಗಳು ಮುಗಿದಿದ್ದು, ಸೆಮಿಫೈನಲ್ಗೆ 4 ತಂಡಗಳು ಅರ್ಹತೆ ಪಡೆದುಕೊಂಡಿವೆ. ಎ ಗುಂಪಿನಿಂದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಅರ್ಹತೆ ಪಡೆದಿದ್ದರೆ, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಬಿ ಗುಂಪಿನಿಂದ ಸ್ಥಾನ ಪಡೆದಿವೆ. ಆದರೆ ಪ್ರಶಸ್ತಿಗೆ ಪ್ರಬಲ ಸ್ಪರ್ಧಿ ಎನಿಸಿಕೊಡಿದ್ದ ಭಾರತ ವನಿತಾ ಪಡೆ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದೆ.
2 / 10
ವಿಶ್ವಕಪ್ ಆರಂಭಕ್ಕೂ ಮುನ್ನವೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ನಮ್ಮ ತಂಡ ಎಲ್ಲಾ ವಿಭಾಗದಲ್ಲೂ ಬಲಿಷ್ಠವಾಗಿದೆ. ಹೀಗಾಗಿ ನಾವು ಈ ಬಾರಿ ವಿಶ್ವಕಪ್ ಗೆಲ್ಲುವ ಪ್ರಬಲ ಸ್ಪರ್ಧಿಯಾಗಿದ್ದೇವೆ ಎಂದಿದ್ದರು. ಆದರೆ ಇಡೀ ಟೂರ್ನಿಯಲ್ಲಿ ತಂಡದ ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ತೀರ ಕಳಪೆಯಾಗಿತ್ತು.
3 / 10
ಇದಲ್ಲದೆ ನಾಯಕಿಯ ನಿರ್ಧಾರಗಳು ಸಾಕಷ್ಟು ಗೊಂದಲದಿಂದ ಕೂಡಿದ್ದವು. ಇದರ ಜೊತೆಗೆ ಒಬ್ಬ ಆಟಗಾರ್ತಿಯಾಗಿಯೂ ಹರ್ಮನ್ಪ್ರೀತ್ ಕೌರ್ ಅವರ ಪ್ರದರ್ಶನ ಅಷ್ಟಕಷ್ಟೆಯಾಗಿತ್ತು. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಹರ್ಮನ್ಪ್ರೀತ್ ಅವರ ಆಮೆಗತಿಯ ಇನ್ನಿಂಗ್ಸ್ ತಂಡದ ಸೋಲಿಗೆ ಪ್ರಮುಖ ಕಾರಣ ಎಂಬುದು ಎಲ್ಲರಿಗೂ ತಿಳಿದಿರುವಂತದ್ದೆ.
4 / 10
ಇದೀಗ ಟಿ20 ವಿಶ್ವಕಪ್ನಿಂದ ಖಾಲಿ ಕೈಯಲ್ಲಿ ವಾಪಸ್ಸಾಗಿರುವ ಭಾರತ ಮಹಿಳಾ ತಂಡದ ನಾಯಕಿಯ ಬದಲಾವಣೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅದರಂತೆ ಹರ್ಮನ್ಪ್ರೀತ್ ಕೌರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸುವ ಬಗ್ಗೆ ಮಾತುಕತೆ ಜೋರಾಗಿದೆ. ಅನುಭವಿ ಆಟಗಾರರು ಹಾಗೂ ಮಾಜಿ ಮಹಿಲಾ ಕ್ರಿಕೆಟರ್ಗಳು ಹರ್ಮನ್ಪ್ರೀತ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಿಸಿಸಿಐ ಕೂಡ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
5 / 10
ಬಿಸಿಸಿಐನ ಈ ಯೋಚನೆಗೆ ಕಾರಣವೂ ಇದ್ದು, ಪ್ರಸ್ತುತ ತಂಡವನ್ನು ಮುನ್ನಡೆಸುತ್ತಿರುವ ಹರ್ಮನ್ಪ್ರೀತ್ ಅವರಿಗೆ 35 ವರ್ಷ. ಹೀಗಾಗಿ ವಯಸ್ಸಿನ ಕಾರಣ ಒಂದಾದರೆ, ಮುಂದಿನ ವರ್ಷ ಏಕದಿನ ವಿಶ್ವಕಪ್ ನಡೆಯಲ್ಲಿದೆ. ಆ ವೇಳೆಗೆ ಟೀಂ ಇಂಡಿಯಾವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಸಲುವಾಗಿ ಹೊಸ ನಾಯಕತ್ವದ ಹುಡುಕಾಟಕ್ಕೆ ಬಿಸಿಸಿಐ ಮುಂದಾಗಿದೆ.
6 / 10
ಹೀಗಾಗಿ ಇನ್ನು ಸ್ವಲ್ಪ ದಿನದಲೇ ಹರ್ಮನ್ಪ್ರೀತ್ ಕೌರ್ ನಾಯಕತ್ವ ಕಳೆದುಕೊಳ್ಳುವುದು ಖಚಿತ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಹರ್ಮನ್ಪ್ರೀತ್ ನಾಯಕತ್ವದಿಂದ ಕೆಳಗಿಳಿದರೆ ಅವರ ಸ್ಥಾನಕ್ಕೆ ಯಾರು ಆಯ್ಕೆಯಾಗುತ್ತಾರೆ ಎಂಬುದು ಸದ್ಯಕ್ಕೆ ಹುಟ್ಟಿಕೊಂಡಿರುವ ಪ್ರಶ್ನೆಯಾಗಿದೆ. ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ ಪ್ರಕಾರ ತಂಡದ ನಾಯಕತ್ವಕ್ಕೆ ಇಬ್ಬರು ಆಟಗಾರ್ತಿಯರ ನಡುವೆ ಪೈಪೋಟಿ ಏರ್ಪಟ್ಟಿದೆ.
7 / 10
ಪ್ರಸ್ತುತ ತಂಡದ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಅವರಿಗೆ ನಾಯಕತ್ವ ಸಿಗಬಹುದು ಎಂದು ಹೇಳಲಾಗುತ್ತಿದೆ. ಸ್ಮೃತಿಗೆ ಈಗಾಗಲೇ ತಂಡವನ್ನು ಮುನ್ನಡಿಸಿದ ಅನುಭವ ಒಂದು ಕಡೆಯಾದರೆ, ಐಸಿಸಿ ಟೂರ್ನಿಗಳಾದ ಏಕದಿನ ವಿಶ್ವಕಪ್ ಮತ್ತು ಟಿ20 ವಿಶ್ವಕಪ್ನಂತಹ ದೊಡ್ಡ ಟೂರ್ನಿಗಳಲ್ಲಿ ಆಡಿರುವ ಅನುಭವ ಅವರಿಗಿದೆ.
8 / 10
ಸ್ಮೃತಿ ಮಂಧಾನ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿರುವುದಲ್ಲದೆ, ವಿವಿದ ದೇಶಗಳ ಟಿ20 ಲೀಗ್ಗಳಲ್ಲೂ ಆಡಿದ್ದಾರೆ. ಅಲ್ಲದೆ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ತಮ್ಮ ನಾಯಕತ್ವದಲ್ಲಿ ಆರ್ಸಿಬಿ ತಂಡವನ್ನು ಚಾಂಪಿಯನ್ ಸಹ ಮಾಡಿದ್ದಾರೆ. ಹೀಗಾಗಿ ಅನುಭವದ ಆಧಾರದ ಮೇಲೆ ಸ್ಮೃತಿ ಮಂಧಾನ ನಾಯಕಿಯ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಿದ್ದಾರೆ.
9 / 10
ಸ್ಮೃತಿ ಮಂಧಾನ ಅಲ್ಲದೆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಜೆಮಿಮಾ ರಾಡ್ರಿಗಸ್ ಅವರು ನಾಯಕತ್ವದ ರೇಸ್ನಲ್ಲಿದ್ದಾರೆ. ಸ್ಮೃತಿಯಂತೆ ಜೆಮಿಮಾ ಕೂಡ ಐಸಿಸಿ ಟೂರ್ನಿಯಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಅಲ್ಲದೆ ತಂಡದಲ್ಲಿ ಅವರ ಬಗ್ಗೆ ಒಳ್ಳೇಯ ಅಭಿಪ್ರಾಯವಿದೆ. ಅಲ್ಲದೆ ಜೆಮಿಮಾ ಕೂಡ ಎಲ್ಲಾ ಆಟಗಾರ್ತಿಯರ ಜೊತೆಗೆ ಉತ್ತಮ ಬಾಂಧ್ಯವ ಇಟ್ಟುಕೊಂಡಿದ್ದಾರೆ.
10 / 10
ಹೀಗಾಗಿಯೇ ಹರ್ಮನ್ಪ್ರೀತ್ ಕೌರ್ ನಂತರ ಜೆಮಿಮಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಬೇಕೆಂದು ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಕೂಡ ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನು ವಯಸ್ಸಿನ ವಿಚಾರಕ್ಕೆ ಬಂದರೆ, ಜೆಮಿಮಾ ಅವರಿಗೆ ಇನ್ನು 24 ವರ್ಷ. ಹಾಗಾಗಿ ಅವರಿಗೆ ತಂಡದ ನಾಯಕತ್ವ ನೀಡಿದರೆ, ದೀರ್ಘ ಕಾಲ ಅವರು ಈ ಜವಬ್ದಾರಿಯನ್ನು ನಿರ್ವಹಿಸಬಲ್ಲರು ಎಂಬುದು ಅನುಭವಿಗಳ ಅಭಿಪ್ರಾಯವಾಗಿದೆ.