Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಮೈಲುಗಲ್ಲು ದಾಟಿದ ಸ್ಮೃತಿ ಮಂಧಾನ

WPL 2025: ವುಮೆನ್ಸ್ ಪ್ರೀಮಿಯರ್‌ ಲೀಗ್‌‌ನ 4ನೇ ಪಂದ್ಯದಲ್ಲಿ RCB ತಂಡ 8 ವಿಕೆಟ್‌ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 142 ರನ್ ಗಳ ಗುರಿಯನ್ನು ಆರ್ ಸಿ ಬಿ 16.2 ಓವರುಗಳಲ್ಲಿ ಚೇಸ್ ಮಾಡಿದೆ. ಈ ಪಂದ್ಯದ ಮೂಲಕ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ವಿಶೇಷ ದಾಖಲೆಯನ್ನು ಸಹ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 18, 2025 | 7:29 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಸ್ಮೃತಿ ಈ ಸಾಧನೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಸ್ಮೃತಿ ಈ ಸಾಧನೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಮೊದಲು ಬ್ಯಾಟ್ ಮಾಡಿ ಡೆಲ್ಲಿ ಕ್ಯಾಪಿಟಲ್ಸ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಆದರೆ ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೊಡ್ರಿಗಸ್ ಬಾರಿಸಿದ 34 ರನ್ ಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 19.3 ಓವರುಗಳಲ್ಲಿ 141 ರನ್ ಕಲೆಹಾಕಿತು.

ಅದರಂತೆ ಮೊದಲು ಬ್ಯಾಟ್ ಮಾಡಿ ಡೆಲ್ಲಿ ಕ್ಯಾಪಿಟಲ್ಸ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಆದರೆ ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೊಡ್ರಿಗಸ್ ಬಾರಿಸಿದ 34 ರನ್ ಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 19.3 ಓವರುಗಳಲ್ಲಿ 141 ರನ್ ಕಲೆಹಾಕಿತು.

2 / 6
ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಸ್ಮೃತಿ ಮಂಧಾನ ಹಾಗೂ ಡೇನಿಯಲ್ ವ್ಯಾಟ್ ಸ್ಪೋಟಕ ಆರಂಭ ಒದಗಿಸಿದ್ದರು. ಅಲ್ಲದೆ ಮೊದಲ ವಿಕೆಟ್ 107 ರನ್ ಪೇರಿಸಿದ ಬಳಿಕ ವ್ಯಾಟ್ (42) ವಿಕೆಟ್ ಒಪ್ಪಿಸಿದರು. ಇದಾಗ್ಯೂ ಸ್ಮೃತಿ ಅಬ್ಬರ ಮುಂದುವರೆದಿತ್ತು.

ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಸ್ಮೃತಿ ಮಂಧಾನ ಹಾಗೂ ಡೇನಿಯಲ್ ವ್ಯಾಟ್ ಸ್ಪೋಟಕ ಆರಂಭ ಒದಗಿಸಿದ್ದರು. ಅಲ್ಲದೆ ಮೊದಲ ವಿಕೆಟ್ 107 ರನ್ ಪೇರಿಸಿದ ಬಳಿಕ ವ್ಯಾಟ್ (42) ವಿಕೆಟ್ ಒಪ್ಪಿಸಿದರು. ಇದಾಗ್ಯೂ ಸ್ಮೃತಿ ಅಬ್ಬರ ಮುಂದುವರೆದಿತ್ತು.

3 / 6
ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳನ್ನು ಮನಸೋ ಇಚ್ಛೆ ದಂಡಿಸಿದ ಸ್ಮೃತಿ ಮಂಧಾನ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 47 ಎಸೆತಗಳಲ್ಲಿ 3 ಸಿಕ್ಸ್, 10 ಫೋರ್ ಗಳೊಂದಿಗೆ 81 ರನ್ ಚಚ್ಚಿದರು.

ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳನ್ನು ಮನಸೋ ಇಚ್ಛೆ ದಂಡಿಸಿದ ಸ್ಮೃತಿ ಮಂಧಾನ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 47 ಎಸೆತಗಳಲ್ಲಿ 3 ಸಿಕ್ಸ್, 10 ಫೋರ್ ಗಳೊಂದಿಗೆ 81 ರನ್ ಚಚ್ಚಿದರು.

4 / 6
ಈ 81 ರನ್ ಗಳೊಂದಿಗೆ ಸ್ಮೃತಿ ಮಂಧಾನ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 500 ರನ್ ಪೂರೈಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಆರ್​ಸಿಬಿ ತಂಡದ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಆರ್​ಸಿಬಿ ಪರ 20 ಪಂದ್ಯಗಳನ್ನಾಡಿರುವ ಸ್ಮೃತಿ 3 ಅರ್ಧಶತಕಗಳೊಂದಿಗೆ ಈವರೆಗೆ 539 ರನ್ ಕಲೆಹಾಕಿದ್ದಾರೆ.

ಈ 81 ರನ್ ಗಳೊಂದಿಗೆ ಸ್ಮೃತಿ ಮಂಧಾನ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 500 ರನ್ ಪೂರೈಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಆರ್​ಸಿಬಿ ತಂಡದ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಆರ್​ಸಿಬಿ ಪರ 20 ಪಂದ್ಯಗಳನ್ನಾಡಿರುವ ಸ್ಮೃತಿ 3 ಅರ್ಧಶತಕಗಳೊಂದಿಗೆ ಈವರೆಗೆ 539 ರನ್ ಕಲೆಹಾಕಿದ್ದಾರೆ.

5 / 6
ಇನ್ನು ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಹೆಸರಿನಲ್ಲಿದೆ. ಈವರೆಗೆ 20 ಪಂದ್ಯಗಳನ್ನಾಡಿರುವ ಮೆಗ್ ಲ್ಯಾನಿಂಗ್ 6 ಅರ್ಧಶತಕಗಳೊಂದಿಗೆ ಒಟ್ಟು 708 ರನ್ ಬಾರಿಸಿ  ಈ ದಾಖಲೆ ನಿರ್ಮಿಸಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿರುವುದು ಆರ್​ಸಿಬಿಯ ಎಲ್ಲಿಸ್ ಪೆರ್ರಿ. 19 ಪಂದ್ಯಗಳನ್ನಾಡಿರುವ ಪೆರ್ರಿ ಈವರೆಗೆ 664 ರನ್ ಕಲೆಹಾಕಿದ್ದಾರೆ.

ಇನ್ನು ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಹೆಸರಿನಲ್ಲಿದೆ. ಈವರೆಗೆ 20 ಪಂದ್ಯಗಳನ್ನಾಡಿರುವ ಮೆಗ್ ಲ್ಯಾನಿಂಗ್ 6 ಅರ್ಧಶತಕಗಳೊಂದಿಗೆ ಒಟ್ಟು 708 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿರುವುದು ಆರ್​ಸಿಬಿಯ ಎಲ್ಲಿಸ್ ಪೆರ್ರಿ. 19 ಪಂದ್ಯಗಳನ್ನಾಡಿರುವ ಪೆರ್ರಿ ಈವರೆಗೆ 664 ರನ್ ಕಲೆಹಾಕಿದ್ದಾರೆ.

6 / 6
Follow us
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ