AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತೀ ವೇಗದ ಶತಕ ಸಿಡಿಸಿ ದಾಖಲೆ ಬರೆದ ಸ್ಮೃತಿ ಮಂಧಾನ

India Women vs Ireland Women: ಐರ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ ಸ್ಪೋಟಕ ಸೆಂಚುರಿ ಸಿಡಿಸಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಈ ದಾಖಲೆಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Jan 15, 2025 | 1:12 PM

Share
ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ಐರ್ಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಹಂಗಾಮಿ ನಾಯಕಿ ಸ್ಮೃತಿ ಮಂಧಾನ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಭಾರತದ ಪರ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚರಿ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.

ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ಐರ್ಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಹಂಗಾಮಿ ನಾಯಕಿ ಸ್ಮೃತಿ ಮಂಧಾನ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಭಾರತದ ಪರ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚರಿ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ ಪ್ರತೀಕಾ ಎಚ್ಚರಿಕೆಯ ಬ್ಯಾಟಿಂಗ್​ ಪ್ರದರ್ಶಿಸಿದರೆ, ಮತ್ತೊಂದೆಡೆ ಸ್ಮೃತಿ ಮಂಧಾನ ಸ್ಪೋಟಕ ಇನಿಂಗ್ಸ್ ಆಡಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ ಪ್ರತೀಕಾ ಎಚ್ಚರಿಕೆಯ ಬ್ಯಾಟಿಂಗ್​ ಪ್ರದರ್ಶಿಸಿದರೆ, ಮತ್ತೊಂದೆಡೆ ಸ್ಮೃತಿ ಮಂಧಾನ ಸ್ಪೋಟಕ ಇನಿಂಗ್ಸ್ ಆಡಿದರು.

2 / 5
ಬಿರುಸಿನ ಬ್ಯಾಟಿಂಗ್​ನೊಂದಿಗೆ ಐರ್ಲೆಂಡ್ ಬೌಲರ್​​ಗಳ ಬೆಂಡೆತ್ತಿದ ಸ್ಮೃತಿ ಕೇವಲ 70 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗದ ಶತಕ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಬಿರುಸಿನ ಬ್ಯಾಟಿಂಗ್​ನೊಂದಿಗೆ ಐರ್ಲೆಂಡ್ ಬೌಲರ್​​ಗಳ ಬೆಂಡೆತ್ತಿದ ಸ್ಮೃತಿ ಕೇವಲ 70 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗದ ಶತಕ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.

3 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಹೆಸರಿನಲ್ಲಿತ್ತು. 2024 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ಕೇವಲ 87 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಹೆಸರಿನಲ್ಲಿತ್ತು. 2024 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ಕೇವಲ 87 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು.

4 / 5
ಇದೀಗ ಈ ದಾಖಲೆಯನ್ನು ಮುರಿದು ಸ್ಮೃತಿ ಮಂಧಾನ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ 80 ಎಸೆತಗಳನ್ನು ಎದುರಿಸಿದ ಸ್ಮೃತಿ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್​​ಗಳೊಂದಿಗೆ 135 ರನ್ ಬಾರಿಸಿ ಔಟಾದರು. ಇದೀಗ ಬ್ಯಾಟಿಂಗ್ ಮುಂದುವರೆಸಿರುವ ಟೀಮ್ ಇಂಡಿಯಾ 30 ಓವರ್​​ಗಳ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 256 ರನ್ ಕಲೆಹಾಕಿದೆ.

ಇದೀಗ ಈ ದಾಖಲೆಯನ್ನು ಮುರಿದು ಸ್ಮೃತಿ ಮಂಧಾನ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ 80 ಎಸೆತಗಳನ್ನು ಎದುರಿಸಿದ ಸ್ಮೃತಿ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್​​ಗಳೊಂದಿಗೆ 135 ರನ್ ಬಾರಿಸಿ ಔಟಾದರು. ಇದೀಗ ಬ್ಯಾಟಿಂಗ್ ಮುಂದುವರೆಸಿರುವ ಟೀಮ್ ಇಂಡಿಯಾ 30 ಓವರ್​​ಗಳ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 256 ರನ್ ಕಲೆಹಾಕಿದೆ.

5 / 5
Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್