AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧ ಅಬ್ಬರ… 48 ವರ್ಷಗಳ ಹಳೆಯ ದಾಖಲೆ ಧೂಳೀಪಟ

Sonal Dinusha Records: ಕೊಲಂಬೋದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್‌ನ ಅಂತಿಮ ದಿನ, ಲಂಕಾ ಆಲ್-ರೌಂಡರ್ ಸೋನಲ್ ದಿನುಷಾ ಬಲಿಷ್ಠ ಭಾರತೀಯ ಬೌಲಿಂಗ್ ದಾಳಿಯನ್ನು ದಿಟ್ಟವಾಗಿ ಎದುರಿಸಿ 48 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಈ ಪ್ರದರ್ಶನದೊಂದಿಗೆ ದಿನುಷಾ ವಿಶ್ವ ಕ್ರಿಕೆಟ್‌ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 27, 2026 | 2:13 PM

Share
ವಿಶ್ವ ಕ್ರಿಕೆಟ್‌ನ ಯಾವುದೇ ಯುವ ಬ್ಯಾಟರ್‌ಗೆ ಟೀಮ್ ಇಂಡಿಯಾದ ಬಲಿಷ್ಠ ಬೌಲಿಂಗ್ ಪಡೆಯನ್ನು ಎದುರಿಸುವುದೆಂದರೆ ಅದೊಂದು ಅಗ್ನಿಪರೀಕ್ಷೆ. ಆದರೆ, ಶ್ರೀಲಂಕಾದ 25 ವರ್ಷದ ಯುವ ಆಲ್-ರೌಂಡರ್ ಸೋನಲ್ ದಿನುಷಾ ಪಾಲಿಗೆ ಭಾರತದ ಬೌಲಿಂಗ್ ತೀರಾ ಸುಲಭವಾದಂತೆ ಕಾಣುತ್ತಿದೆ! ಇದಕ್ಕೆ ಸಾಕ್ಷಿ ಕಳೆದ 4 ಇನಿಂಗ್ಸ್​​​ಗಳಲ್ಲಿ ಅವರು ಕಲೆಹಾಕಿದ ರನ್​ ರಾಶಿ. (PC: Getty Images)

ವಿಶ್ವ ಕ್ರಿಕೆಟ್‌ನ ಯಾವುದೇ ಯುವ ಬ್ಯಾಟರ್‌ಗೆ ಟೀಮ್ ಇಂಡಿಯಾದ ಬಲಿಷ್ಠ ಬೌಲಿಂಗ್ ಪಡೆಯನ್ನು ಎದುರಿಸುವುದೆಂದರೆ ಅದೊಂದು ಅಗ್ನಿಪರೀಕ್ಷೆ. ಆದರೆ, ಶ್ರೀಲಂಕಾದ 25 ವರ್ಷದ ಯುವ ಆಲ್-ರೌಂಡರ್ ಸೋನಲ್ ದಿನುಷಾ ಪಾಲಿಗೆ ಭಾರತದ ಬೌಲಿಂಗ್ ತೀರಾ ಸುಲಭವಾದಂತೆ ಕಾಣುತ್ತಿದೆ! ಇದಕ್ಕೆ ಸಾಕ್ಷಿ ಕಳೆದ 4 ಇನಿಂಗ್ಸ್​​​ಗಳಲ್ಲಿ ಅವರು ಕಲೆಹಾಕಿದ ರನ್​ ರಾಶಿ. (PC: Getty Images)

1 / 5
ಭಾರತದ ವಿರುದ್ಧ ಆಡಿದ ತನ್ನ ಮೊದಲ ನಾಲ್ಕೂ ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಸತತವಾಗಿ 50ಕ್ಕೂ ಹೆಚ್ಚು ರನ್ ಗಳಿಸಿರುವ ಸೋನಲ್ ದಿನುಷಾ, ಟೆಸ್ಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ ವಿರುದ್ಧ ಈ ಅಪರೂಪದ ಸಾಧನೆ ಮಾಡಿದ 'ಏಷ್ಯಾದ ಮೊದಲ' ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. (PC: Getty Images)

ಭಾರತದ ವಿರುದ್ಧ ಆಡಿದ ತನ್ನ ಮೊದಲ ನಾಲ್ಕೂ ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಸತತವಾಗಿ 50ಕ್ಕೂ ಹೆಚ್ಚು ರನ್ ಗಳಿಸಿರುವ ಸೋನಲ್ ದಿನುಷಾ, ಟೆಸ್ಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ ವಿರುದ್ಧ ಈ ಅಪರೂಪದ ಸಾಧನೆ ಮಾಡಿದ 'ಏಷ್ಯಾದ ಮೊದಲ' ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. (PC: Getty Images)

2 / 5
ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 100 ಹಾಗೂ 84 ರನ್​ ಬಾರಿಸಿದ್ದ ದಿನುಷಾ, ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 103 ರನ್​ಗಳ ಶತಕ ಸಿಡಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್​​​ನಲ್ಲೂ 50+ ಸ್ಕೋರ್​ಗಳಿಸುವ ಮೂಲಕ ಬ್ಯಾಕ್ ಟು ಬ್ಯಾಕ್ 4 ಇನಿಂಗ್ಸ್​ಗಳಲ್ಲಿ 50 ಕ್ಕಿಂತ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆ ನಿರ್ಮಿಸಿದ್ದಾರೆ. (PC: Getty Images)

ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 100 ಹಾಗೂ 84 ರನ್​ ಬಾರಿಸಿದ್ದ ದಿನುಷಾ, ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 103 ರನ್​ಗಳ ಶತಕ ಸಿಡಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್​​​ನಲ್ಲೂ 50+ ಸ್ಕೋರ್​ಗಳಿಸುವ ಮೂಲಕ ಬ್ಯಾಕ್ ಟು ಬ್ಯಾಕ್ 4 ಇನಿಂಗ್ಸ್​ಗಳಲ್ಲಿ 50 ಕ್ಕಿಂತ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆ ನಿರ್ಮಿಸಿದ್ದಾರೆ. (PC: Getty Images)

3 / 5
ಈ ದಾಖಲೆಯೊಂದಿಗೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಇತಿಹಾಸದಲ್ಲೇ ಸತತ 4 ಇನ್ನಿಂಗ್ಸ್‌ಗಳಲ್ಲಿ 50+ ಸ್ಕೋರ್ ಗಳಿಸಿದ ಏಷ್ಯಾದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಪಾಕಿಸ್ತಾನದ ಝಹೀರ್ ಅಬ್ಬಾಸ್ ಅವರ ಹೆಸರಿನಲ್ಲಿತ್ತು. 1978ರಲ್ಲಿ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಸತತ 3 ಇನ್ನಿಂಗ್ಸ್‌ಗಳಲ್ಲಿ 50 ಪ್ಲಸ್ ರನ್ ಗಳಿಸಿ ಈ ದಾಖಲೆ ನಿರ್ಮಿಸಿದ್ದರು. (PC: Getty Images)

ಈ ದಾಖಲೆಯೊಂದಿಗೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಇತಿಹಾಸದಲ್ಲೇ ಸತತ 4 ಇನ್ನಿಂಗ್ಸ್‌ಗಳಲ್ಲಿ 50+ ಸ್ಕೋರ್ ಗಳಿಸಿದ ಏಷ್ಯಾದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಪಾಕಿಸ್ತಾನದ ಝಹೀರ್ ಅಬ್ಬಾಸ್ ಅವರ ಹೆಸರಿನಲ್ಲಿತ್ತು. 1978ರಲ್ಲಿ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಸತತ 3 ಇನ್ನಿಂಗ್ಸ್‌ಗಳಲ್ಲಿ 50 ಪ್ಲಸ್ ರನ್ ಗಳಿಸಿ ಈ ದಾಖಲೆ ನಿರ್ಮಿಸಿದ್ದರು. (PC: Getty Images)

4 / 5
ಇದೀಗ ಸೋನಲ್ ದಿನುಷಾ ಟೀಮ್ ಇಂಡಿಯಾ ವಿರುದ್ಧ ಸತತ 4 ಇನಿಂಗ್ಸ್​ಗಳಲ್ಲೂ 50+ ಸ್ಕೋರ್​ ಗಳಿಸಿದ್ದಾರೆ. ಈ ಮೂಲಕ ಭಾರತದ ವಿರುದ್ಧ ಈ ಸಾಧನೆ ಮಾಡಿದ ಏಷ್ಯಾದ ಮೊದಲ ಬ್ಯಾಟರ್ ಹಾಗೂ ಶ್ರೀಲಂಕಾದ ಏಕೈಕ ದಾಂಡಿಗ ಎನಿಸಿಕೊಂಡಿದ್ದಾರೆ.  (PC: Getty Images)

ಇದೀಗ ಸೋನಲ್ ದಿನುಷಾ ಟೀಮ್ ಇಂಡಿಯಾ ವಿರುದ್ಧ ಸತತ 4 ಇನಿಂಗ್ಸ್​ಗಳಲ್ಲೂ 50+ ಸ್ಕೋರ್​ ಗಳಿಸಿದ್ದಾರೆ. ಈ ಮೂಲಕ ಭಾರತದ ವಿರುದ್ಧ ಈ ಸಾಧನೆ ಮಾಡಿದ ಏಷ್ಯಾದ ಮೊದಲ ಬ್ಯಾಟರ್ ಹಾಗೂ ಶ್ರೀಲಂಕಾದ ಏಕೈಕ ದಾಂಡಿಗ ಎನಿಸಿಕೊಂಡಿದ್ದಾರೆ.  (PC: Getty Images)

5 / 5
Follow Us
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ