AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ನಿವೃತ್ತಿ ಘೋಷಿಸಲು ನಿರ್ಧರಿಸಿದ ಸೋಫಿ ಡಿವೈನ್

Sophie Devine: ಸೋಫಿ ಡಿವೈನ್ ನ್ಯೂಝಿಲೆಂಡ್ ಪರ ಈವರೆಗೆ 151 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 139 ಇನಿಂಗ್ಸ್ ಆಡಿರುವ ಅವರು 8 ಭರ್ಜರಿ ಶತಕ ಹಾಗೂ 16 ಅರ್ಧಶತಕಗಳೊಂದಿಗೆ 3990 ರನ್ ಕಲೆಹಾಕಿದ್ದಾರೆ. ಅಲ್ಲದೆ ಈ ಅವಧಿಯಲ್ಲಿ 70 ಸಿಕ್ಸ್​ ಹಾಗೂ 385 ಫೋರ್​ಗಳನ್ನು ಬಾರಿಸಿ ಅಬ್ಬರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 18, 2025 | 7:55 AM

Share
ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಅದು ಕೂಡ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವಿಶ್ವಕಪ್ ಮೂಲಕ ಎಂಬುದು ವಿಶೇಷ. ಸೆಪ್ಟೆಂಬರ್ 30 ರಿಂದ ಶುರುವಾಗಲಿರುವ ಈ ಬಾರಿಯ ಒಡಿಐ ವರ್ಲ್ಡ್​​ಕಪ್​ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯವಹಿಸಲಿದೆ. ಈ ಟೂರ್ನಿಯ ಬಹುತೇಕ ಪಂದ್ಯಗಳು ಭಾರತದಲ್ಲೇ ನಡೆಯಲಿದೆ.

ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಅದು ಕೂಡ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವಿಶ್ವಕಪ್ ಮೂಲಕ ಎಂಬುದು ವಿಶೇಷ. ಸೆಪ್ಟೆಂಬರ್ 30 ರಿಂದ ಶುರುವಾಗಲಿರುವ ಈ ಬಾರಿಯ ಒಡಿಐ ವರ್ಲ್ಡ್​​ಕಪ್​ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯವಹಿಸಲಿದೆ. ಈ ಟೂರ್ನಿಯ ಬಹುತೇಕ ಪಂದ್ಯಗಳು ಭಾರತದಲ್ಲೇ ನಡೆಯಲಿದೆ.

1 / 5
ಈ ಪಂದ್ಯಗಳ ಮೂಲಕ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಅದುವೇ ಸೋಫಿ ಡಿವೈನ್ ಅವರ ಕೊನೆಯ ಏಕದಿನ ಪಂದ್ಯವಾಗಿರಲಿದೆ. ಇತ್ತ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಪಾಕ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಮಾತ್ರ ಅಂತಿಮ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸಲಾಗುತ್ತದೆ.

ಈ ಪಂದ್ಯಗಳ ಮೂಲಕ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಅದುವೇ ಸೋಫಿ ಡಿವೈನ್ ಅವರ ಕೊನೆಯ ಏಕದಿನ ಪಂದ್ಯವಾಗಿರಲಿದೆ. ಇತ್ತ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಪಾಕ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಮಾತ್ರ ಅಂತಿಮ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸಲಾಗುತ್ತದೆ.

2 / 5
ಇನ್ನು ಬೇರೆ ಯಾವುದೇ ತಂಡಗಳು ಫೈನಲ್​ಗೆ ಪ್ರವೇಶಿಸಿದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಸೋಫಿ ಡಿವೈನ್ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಏಕದಿನ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಒಂದು ವೇಳೆ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಲು ವಿಫಲರಾದರೆ, ಕಿವೀಸ್ ಪಡೆ ಆಡುವ ಕೊನೆಯ ಪಂದ್ಯವೇ ಸೋಫಿ ಅವರ ಅಂತಿಮ ಒಡಿಐ ಪಂದ್ಯವಾಗಿರಲಿದೆ.

ಇನ್ನು ಬೇರೆ ಯಾವುದೇ ತಂಡಗಳು ಫೈನಲ್​ಗೆ ಪ್ರವೇಶಿಸಿದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಸೋಫಿ ಡಿವೈನ್ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಏಕದಿನ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಒಂದು ವೇಳೆ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಲು ವಿಫಲರಾದರೆ, ಕಿವೀಸ್ ಪಡೆ ಆಡುವ ಕೊನೆಯ ಪಂದ್ಯವೇ ಸೋಫಿ ಅವರ ಅಂತಿಮ ಒಡಿಐ ಪಂದ್ಯವಾಗಿರಲಿದೆ.

3 / 5
ಅಂದಹಾಗೆ ಸೋಫಿ ಡಿವೈನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿ. ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಡಿವೈನ್ 2024 ರಲ್ಲಿ ರಾಯಲ್ ಪಡೆ ಚಾಂಪಿಯನ್ ಪಟ್ಟಕ್ಕೇರಲು ಪ್ರಮುಖ ಪಾತ್ರವಹಿಸಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು 2025 ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

ಅಂದಹಾಗೆ ಸೋಫಿ ಡಿವೈನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿ. ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಡಿವೈನ್ 2024 ರಲ್ಲಿ ರಾಯಲ್ ಪಡೆ ಚಾಂಪಿಯನ್ ಪಟ್ಟಕ್ಕೇರಲು ಪ್ರಮುಖ ಪಾತ್ರವಹಿಸಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು 2025 ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

4 / 5
ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿರುವ ಸೋಫಿ ಡಿವೈನ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಕಾಣಿಸಿಕೊಳ್ಳುವುದಾಗಿ 35 ವರ್ಷದ ಕಿವೀಸ್ ಆಟಗಾರ್ತಿ ತಿಳಿಸಿದ್ದಾರೆ. ಅದರಂತೆ ಈ ಬಾರಿಯ ವಿಶ್ವಕಪ್ ಸೋಫಿ ಡಿವೈನ್ ಪಾಲಿನ ಕೊನೆಯ ಐಸಿಸಿ ಏಕದಿನ ಟೂರ್ನಿ ಆಗಿರಲಿದೆ.

ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿರುವ ಸೋಫಿ ಡಿವೈನ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಕಾಣಿಸಿಕೊಳ್ಳುವುದಾಗಿ 35 ವರ್ಷದ ಕಿವೀಸ್ ಆಟಗಾರ್ತಿ ತಿಳಿಸಿದ್ದಾರೆ. ಅದರಂತೆ ಈ ಬಾರಿಯ ವಿಶ್ವಕಪ್ ಸೋಫಿ ಡಿವೈನ್ ಪಾಲಿನ ಕೊನೆಯ ಐಸಿಸಿ ಏಕದಿನ ಟೂರ್ನಿ ಆಗಿರಲಿದೆ.

5 / 5
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​