AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ನಿವೃತ್ತಿ ಘೋಷಿಸಲು ನಿರ್ಧರಿಸಿದ ಸೋಫಿ ಡಿವೈನ್

Sophie Devine: ಸೋಫಿ ಡಿವೈನ್ ನ್ಯೂಝಿಲೆಂಡ್ ಪರ ಈವರೆಗೆ 151 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 139 ಇನಿಂಗ್ಸ್ ಆಡಿರುವ ಅವರು 8 ಭರ್ಜರಿ ಶತಕ ಹಾಗೂ 16 ಅರ್ಧಶತಕಗಳೊಂದಿಗೆ 3990 ರನ್ ಕಲೆಹಾಕಿದ್ದಾರೆ. ಅಲ್ಲದೆ ಈ ಅವಧಿಯಲ್ಲಿ 70 ಸಿಕ್ಸ್​ ಹಾಗೂ 385 ಫೋರ್​ಗಳನ್ನು ಬಾರಿಸಿ ಅಬ್ಬರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 18, 2025 | 7:55 AM

Share
ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಅದು ಕೂಡ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವಿಶ್ವಕಪ್ ಮೂಲಕ ಎಂಬುದು ವಿಶೇಷ. ಸೆಪ್ಟೆಂಬರ್ 30 ರಿಂದ ಶುರುವಾಗಲಿರುವ ಈ ಬಾರಿಯ ಒಡಿಐ ವರ್ಲ್ಡ್​​ಕಪ್​ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯವಹಿಸಲಿದೆ. ಈ ಟೂರ್ನಿಯ ಬಹುತೇಕ ಪಂದ್ಯಗಳು ಭಾರತದಲ್ಲೇ ನಡೆಯಲಿದೆ.

ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಅದು ಕೂಡ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವಿಶ್ವಕಪ್ ಮೂಲಕ ಎಂಬುದು ವಿಶೇಷ. ಸೆಪ್ಟೆಂಬರ್ 30 ರಿಂದ ಶುರುವಾಗಲಿರುವ ಈ ಬಾರಿಯ ಒಡಿಐ ವರ್ಲ್ಡ್​​ಕಪ್​ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯವಹಿಸಲಿದೆ. ಈ ಟೂರ್ನಿಯ ಬಹುತೇಕ ಪಂದ್ಯಗಳು ಭಾರತದಲ್ಲೇ ನಡೆಯಲಿದೆ.

1 / 5
ಈ ಪಂದ್ಯಗಳ ಮೂಲಕ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಅದುವೇ ಸೋಫಿ ಡಿವೈನ್ ಅವರ ಕೊನೆಯ ಏಕದಿನ ಪಂದ್ಯವಾಗಿರಲಿದೆ. ಇತ್ತ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಪಾಕ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಮಾತ್ರ ಅಂತಿಮ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸಲಾಗುತ್ತದೆ.

ಈ ಪಂದ್ಯಗಳ ಮೂಲಕ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಅದುವೇ ಸೋಫಿ ಡಿವೈನ್ ಅವರ ಕೊನೆಯ ಏಕದಿನ ಪಂದ್ಯವಾಗಿರಲಿದೆ. ಇತ್ತ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಪಾಕ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಮಾತ್ರ ಅಂತಿಮ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸಲಾಗುತ್ತದೆ.

2 / 5
ಇನ್ನು ಬೇರೆ ಯಾವುದೇ ತಂಡಗಳು ಫೈನಲ್​ಗೆ ಪ್ರವೇಶಿಸಿದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಸೋಫಿ ಡಿವೈನ್ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಏಕದಿನ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಒಂದು ವೇಳೆ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಲು ವಿಫಲರಾದರೆ, ಕಿವೀಸ್ ಪಡೆ ಆಡುವ ಕೊನೆಯ ಪಂದ್ಯವೇ ಸೋಫಿ ಅವರ ಅಂತಿಮ ಒಡಿಐ ಪಂದ್ಯವಾಗಿರಲಿದೆ.

ಇನ್ನು ಬೇರೆ ಯಾವುದೇ ತಂಡಗಳು ಫೈನಲ್​ಗೆ ಪ್ರವೇಶಿಸಿದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಸೋಫಿ ಡಿವೈನ್ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಏಕದಿನ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಒಂದು ವೇಳೆ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಲು ವಿಫಲರಾದರೆ, ಕಿವೀಸ್ ಪಡೆ ಆಡುವ ಕೊನೆಯ ಪಂದ್ಯವೇ ಸೋಫಿ ಅವರ ಅಂತಿಮ ಒಡಿಐ ಪಂದ್ಯವಾಗಿರಲಿದೆ.

3 / 5
ಅಂದಹಾಗೆ ಸೋಫಿ ಡಿವೈನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿ. ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಡಿವೈನ್ 2024 ರಲ್ಲಿ ರಾಯಲ್ ಪಡೆ ಚಾಂಪಿಯನ್ ಪಟ್ಟಕ್ಕೇರಲು ಪ್ರಮುಖ ಪಾತ್ರವಹಿಸಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು 2025 ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

ಅಂದಹಾಗೆ ಸೋಫಿ ಡಿವೈನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿ. ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಡಿವೈನ್ 2024 ರಲ್ಲಿ ರಾಯಲ್ ಪಡೆ ಚಾಂಪಿಯನ್ ಪಟ್ಟಕ್ಕೇರಲು ಪ್ರಮುಖ ಪಾತ್ರವಹಿಸಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು 2025 ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

4 / 5
ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿರುವ ಸೋಫಿ ಡಿವೈನ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಕಾಣಿಸಿಕೊಳ್ಳುವುದಾಗಿ 35 ವರ್ಷದ ಕಿವೀಸ್ ಆಟಗಾರ್ತಿ ತಿಳಿಸಿದ್ದಾರೆ. ಅದರಂತೆ ಈ ಬಾರಿಯ ವಿಶ್ವಕಪ್ ಸೋಫಿ ಡಿವೈನ್ ಪಾಲಿನ ಕೊನೆಯ ಐಸಿಸಿ ಏಕದಿನ ಟೂರ್ನಿ ಆಗಿರಲಿದೆ.

ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿರುವ ಸೋಫಿ ಡಿವೈನ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಕಾಣಿಸಿಕೊಳ್ಳುವುದಾಗಿ 35 ವರ್ಷದ ಕಿವೀಸ್ ಆಟಗಾರ್ತಿ ತಿಳಿಸಿದ್ದಾರೆ. ಅದರಂತೆ ಈ ಬಾರಿಯ ವಿಶ್ವಕಪ್ ಸೋಫಿ ಡಿವೈನ್ ಪಾಲಿನ ಕೊನೆಯ ಐಸಿಸಿ ಏಕದಿನ ಟೂರ್ನಿ ಆಗಿರಲಿದೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್