AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ನಿವೃತ್ತಿ ಘೋಷಿಸಲು ನಿರ್ಧರಿಸಿದ ಸೋಫಿ ಡಿವೈನ್

Sophie Devine: ಸೋಫಿ ಡಿವೈನ್ ನ್ಯೂಝಿಲೆಂಡ್ ಪರ ಈವರೆಗೆ 151 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 139 ಇನಿಂಗ್ಸ್ ಆಡಿರುವ ಅವರು 8 ಭರ್ಜರಿ ಶತಕ ಹಾಗೂ 16 ಅರ್ಧಶತಕಗಳೊಂದಿಗೆ 3990 ರನ್ ಕಲೆಹಾಕಿದ್ದಾರೆ. ಅಲ್ಲದೆ ಈ ಅವಧಿಯಲ್ಲಿ 70 ಸಿಕ್ಸ್​ ಹಾಗೂ 385 ಫೋರ್​ಗಳನ್ನು ಬಾರಿಸಿ ಅಬ್ಬರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 18, 2025 | 7:55 AM

Share
ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಅದು ಕೂಡ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವಿಶ್ವಕಪ್ ಮೂಲಕ ಎಂಬುದು ವಿಶೇಷ. ಸೆಪ್ಟೆಂಬರ್ 30 ರಿಂದ ಶುರುವಾಗಲಿರುವ ಈ ಬಾರಿಯ ಒಡಿಐ ವರ್ಲ್ಡ್​​ಕಪ್​ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯವಹಿಸಲಿದೆ. ಈ ಟೂರ್ನಿಯ ಬಹುತೇಕ ಪಂದ್ಯಗಳು ಭಾರತದಲ್ಲೇ ನಡೆಯಲಿದೆ.

ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಅದು ಕೂಡ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವಿಶ್ವಕಪ್ ಮೂಲಕ ಎಂಬುದು ವಿಶೇಷ. ಸೆಪ್ಟೆಂಬರ್ 30 ರಿಂದ ಶುರುವಾಗಲಿರುವ ಈ ಬಾರಿಯ ಒಡಿಐ ವರ್ಲ್ಡ್​​ಕಪ್​ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯವಹಿಸಲಿದೆ. ಈ ಟೂರ್ನಿಯ ಬಹುತೇಕ ಪಂದ್ಯಗಳು ಭಾರತದಲ್ಲೇ ನಡೆಯಲಿದೆ.

1 / 5
ಈ ಪಂದ್ಯಗಳ ಮೂಲಕ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಅದುವೇ ಸೋಫಿ ಡಿವೈನ್ ಅವರ ಕೊನೆಯ ಏಕದಿನ ಪಂದ್ಯವಾಗಿರಲಿದೆ. ಇತ್ತ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಪಾಕ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಮಾತ್ರ ಅಂತಿಮ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸಲಾಗುತ್ತದೆ.

ಈ ಪಂದ್ಯಗಳ ಮೂಲಕ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಅದುವೇ ಸೋಫಿ ಡಿವೈನ್ ಅವರ ಕೊನೆಯ ಏಕದಿನ ಪಂದ್ಯವಾಗಿರಲಿದೆ. ಇತ್ತ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಪಾಕ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಮಾತ್ರ ಅಂತಿಮ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸಲಾಗುತ್ತದೆ.

2 / 5
ಇನ್ನು ಬೇರೆ ಯಾವುದೇ ತಂಡಗಳು ಫೈನಲ್​ಗೆ ಪ್ರವೇಶಿಸಿದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಸೋಫಿ ಡಿವೈನ್ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಏಕದಿನ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಒಂದು ವೇಳೆ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಲು ವಿಫಲರಾದರೆ, ಕಿವೀಸ್ ಪಡೆ ಆಡುವ ಕೊನೆಯ ಪಂದ್ಯವೇ ಸೋಫಿ ಅವರ ಅಂತಿಮ ಒಡಿಐ ಪಂದ್ಯವಾಗಿರಲಿದೆ.

ಇನ್ನು ಬೇರೆ ಯಾವುದೇ ತಂಡಗಳು ಫೈನಲ್​ಗೆ ಪ್ರವೇಶಿಸಿದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಸೋಫಿ ಡಿವೈನ್ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಏಕದಿನ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಒಂದು ವೇಳೆ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಲು ವಿಫಲರಾದರೆ, ಕಿವೀಸ್ ಪಡೆ ಆಡುವ ಕೊನೆಯ ಪಂದ್ಯವೇ ಸೋಫಿ ಅವರ ಅಂತಿಮ ಒಡಿಐ ಪಂದ್ಯವಾಗಿರಲಿದೆ.

3 / 5
ಅಂದಹಾಗೆ ಸೋಫಿ ಡಿವೈನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿ. ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಡಿವೈನ್ 2024 ರಲ್ಲಿ ರಾಯಲ್ ಪಡೆ ಚಾಂಪಿಯನ್ ಪಟ್ಟಕ್ಕೇರಲು ಪ್ರಮುಖ ಪಾತ್ರವಹಿಸಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು 2025 ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

ಅಂದಹಾಗೆ ಸೋಫಿ ಡಿವೈನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿ. ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಡಿವೈನ್ 2024 ರಲ್ಲಿ ರಾಯಲ್ ಪಡೆ ಚಾಂಪಿಯನ್ ಪಟ್ಟಕ್ಕೇರಲು ಪ್ರಮುಖ ಪಾತ್ರವಹಿಸಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು 2025 ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

4 / 5
ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿರುವ ಸೋಫಿ ಡಿವೈನ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಕಾಣಿಸಿಕೊಳ್ಳುವುದಾಗಿ 35 ವರ್ಷದ ಕಿವೀಸ್ ಆಟಗಾರ್ತಿ ತಿಳಿಸಿದ್ದಾರೆ. ಅದರಂತೆ ಈ ಬಾರಿಯ ವಿಶ್ವಕಪ್ ಸೋಫಿ ಡಿವೈನ್ ಪಾಲಿನ ಕೊನೆಯ ಐಸಿಸಿ ಏಕದಿನ ಟೂರ್ನಿ ಆಗಿರಲಿದೆ.

ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿರುವ ಸೋಫಿ ಡಿವೈನ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಕಾಣಿಸಿಕೊಳ್ಳುವುದಾಗಿ 35 ವರ್ಷದ ಕಿವೀಸ್ ಆಟಗಾರ್ತಿ ತಿಳಿಸಿದ್ದಾರೆ. ಅದರಂತೆ ಈ ಬಾರಿಯ ವಿಶ್ವಕಪ್ ಸೋಫಿ ಡಿವೈನ್ ಪಾಲಿನ ಕೊನೆಯ ಐಸಿಸಿ ಏಕದಿನ ಟೂರ್ನಿ ಆಗಿರಲಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ