AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ನಿವೃತ್ತಿ ಘೋಷಿಸಲು ನಿರ್ಧರಿಸಿದ ಸೋಫಿ ಡಿವೈನ್

Sophie Devine: ಸೋಫಿ ಡಿವೈನ್ ನ್ಯೂಝಿಲೆಂಡ್ ಪರ ಈವರೆಗೆ 151 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 139 ಇನಿಂಗ್ಸ್ ಆಡಿರುವ ಅವರು 8 ಭರ್ಜರಿ ಶತಕ ಹಾಗೂ 16 ಅರ್ಧಶತಕಗಳೊಂದಿಗೆ 3990 ರನ್ ಕಲೆಹಾಕಿದ್ದಾರೆ. ಅಲ್ಲದೆ ಈ ಅವಧಿಯಲ್ಲಿ 70 ಸಿಕ್ಸ್​ ಹಾಗೂ 385 ಫೋರ್​ಗಳನ್ನು ಬಾರಿಸಿ ಅಬ್ಬರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 18, 2025 | 7:55 AM

Share
ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಅದು ಕೂಡ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವಿಶ್ವಕಪ್ ಮೂಲಕ ಎಂಬುದು ವಿಶೇಷ. ಸೆಪ್ಟೆಂಬರ್ 30 ರಿಂದ ಶುರುವಾಗಲಿರುವ ಈ ಬಾರಿಯ ಒಡಿಐ ವರ್ಲ್ಡ್​​ಕಪ್​ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯವಹಿಸಲಿದೆ. ಈ ಟೂರ್ನಿಯ ಬಹುತೇಕ ಪಂದ್ಯಗಳು ಭಾರತದಲ್ಲೇ ನಡೆಯಲಿದೆ.

ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಅದು ಕೂಡ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವಿಶ್ವಕಪ್ ಮೂಲಕ ಎಂಬುದು ವಿಶೇಷ. ಸೆಪ್ಟೆಂಬರ್ 30 ರಿಂದ ಶುರುವಾಗಲಿರುವ ಈ ಬಾರಿಯ ಒಡಿಐ ವರ್ಲ್ಡ್​​ಕಪ್​ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯವಹಿಸಲಿದೆ. ಈ ಟೂರ್ನಿಯ ಬಹುತೇಕ ಪಂದ್ಯಗಳು ಭಾರತದಲ್ಲೇ ನಡೆಯಲಿದೆ.

1 / 5
ಈ ಪಂದ್ಯಗಳ ಮೂಲಕ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಅದುವೇ ಸೋಫಿ ಡಿವೈನ್ ಅವರ ಕೊನೆಯ ಏಕದಿನ ಪಂದ್ಯವಾಗಿರಲಿದೆ. ಇತ್ತ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಪಾಕ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಮಾತ್ರ ಅಂತಿಮ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸಲಾಗುತ್ತದೆ.

ಈ ಪಂದ್ಯಗಳ ಮೂಲಕ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಅದುವೇ ಸೋಫಿ ಡಿವೈನ್ ಅವರ ಕೊನೆಯ ಏಕದಿನ ಪಂದ್ಯವಾಗಿರಲಿದೆ. ಇತ್ತ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಪಾಕ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಮಾತ್ರ ಅಂತಿಮ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸಲಾಗುತ್ತದೆ.

2 / 5
ಇನ್ನು ಬೇರೆ ಯಾವುದೇ ತಂಡಗಳು ಫೈನಲ್​ಗೆ ಪ್ರವೇಶಿಸಿದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಸೋಫಿ ಡಿವೈನ್ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಏಕದಿನ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಒಂದು ವೇಳೆ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಲು ವಿಫಲರಾದರೆ, ಕಿವೀಸ್ ಪಡೆ ಆಡುವ ಕೊನೆಯ ಪಂದ್ಯವೇ ಸೋಫಿ ಅವರ ಅಂತಿಮ ಒಡಿಐ ಪಂದ್ಯವಾಗಿರಲಿದೆ.

ಇನ್ನು ಬೇರೆ ಯಾವುದೇ ತಂಡಗಳು ಫೈನಲ್​ಗೆ ಪ್ರವೇಶಿಸಿದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಸೋಫಿ ಡಿವೈನ್ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಏಕದಿನ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಒಂದು ವೇಳೆ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಲು ವಿಫಲರಾದರೆ, ಕಿವೀಸ್ ಪಡೆ ಆಡುವ ಕೊನೆಯ ಪಂದ್ಯವೇ ಸೋಫಿ ಅವರ ಅಂತಿಮ ಒಡಿಐ ಪಂದ್ಯವಾಗಿರಲಿದೆ.

3 / 5
ಅಂದಹಾಗೆ ಸೋಫಿ ಡಿವೈನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿ. ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಡಿವೈನ್ 2024 ರಲ್ಲಿ ರಾಯಲ್ ಪಡೆ ಚಾಂಪಿಯನ್ ಪಟ್ಟಕ್ಕೇರಲು ಪ್ರಮುಖ ಪಾತ್ರವಹಿಸಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು 2025 ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

ಅಂದಹಾಗೆ ಸೋಫಿ ಡಿವೈನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿ. ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಡಿವೈನ್ 2024 ರಲ್ಲಿ ರಾಯಲ್ ಪಡೆ ಚಾಂಪಿಯನ್ ಪಟ್ಟಕ್ಕೇರಲು ಪ್ರಮುಖ ಪಾತ್ರವಹಿಸಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು 2025 ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

4 / 5
ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿರುವ ಸೋಫಿ ಡಿವೈನ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಕಾಣಿಸಿಕೊಳ್ಳುವುದಾಗಿ 35 ವರ್ಷದ ಕಿವೀಸ್ ಆಟಗಾರ್ತಿ ತಿಳಿಸಿದ್ದಾರೆ. ಅದರಂತೆ ಈ ಬಾರಿಯ ವಿಶ್ವಕಪ್ ಸೋಫಿ ಡಿವೈನ್ ಪಾಲಿನ ಕೊನೆಯ ಐಸಿಸಿ ಏಕದಿನ ಟೂರ್ನಿ ಆಗಿರಲಿದೆ.

ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿರುವ ಸೋಫಿ ಡಿವೈನ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಕಾಣಿಸಿಕೊಳ್ಳುವುದಾಗಿ 35 ವರ್ಷದ ಕಿವೀಸ್ ಆಟಗಾರ್ತಿ ತಿಳಿಸಿದ್ದಾರೆ. ಅದರಂತೆ ಈ ಬಾರಿಯ ವಿಶ್ವಕಪ್ ಸೋಫಿ ಡಿವೈನ್ ಪಾಲಿನ ಕೊನೆಯ ಐಸಿಸಿ ಏಕದಿನ ಟೂರ್ನಿ ಆಗಿರಲಿದೆ.

5 / 5
Follow Us
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?