- Kannada News Photo gallery Cricket photos Sourav Ganguly breaks silence on Virat Kohli's explosive remarks
Sourav Ganguly: ವಿರಾಟ್ ಕೊಹ್ಲಿ ವಿಚಾರದಲ್ಲಿ ಕೊನೆಗೂ ಮೌನ ಮುರಿದ ಸೌರವ್ ಗಂಗೂಲಿ
Virat Kohli vs Sourav Ganguly: ವಿರಾಟ್ ಕೊಹ್ಲಿಯ ಹೇಳಿಕೆಗಳ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. (ಡೈಲಿಹಂಟ್ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)
Updated on:Dec 16, 2021 | 8:26 PM

ಟೀಮ್ ಇಂಡಿಯಾ ಕ್ಯಾಪ್ಟನ್ಸಿ ವಿವಾದದ ಬಗ್ಗೆ ಇದೀಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೌನ ಮುರಿದಿದ್ದಾರೆ. ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕೊಹ್ಲಿ ಹಲವು ವಿಚಾರಗಳನ್ನು ಬಹಿರಂಗಪಡಿಸಿದ್ದರು. ಈ ವೇಳೆ ಬಿಸಿಸಿಐ ಹಾಗೂ ಸೌರವ್ ಗಂಗೂಲಿ ನನ್ನೊಂದಿಗೆ ಟಿ20 ಕ್ಯಾಪ್ಟನ್ಸಿ ಬಿಡದಂತೆ ಯಾವುದೇ ಮನವಿ ಮಾಡಿರಲಿಲ್ಲ ಎಂದು ತಿಳಿಸಿದ್ದರು.

ಅಷ್ಟೇ ಅಲ್ಲದೆ ಏಕದಿನ ತಂಡದ ನಾಯಕನ ಸ್ಥಾನದಿಂದ ವಜಾಗೊಳಿಸುವ ಕೇವಲ ಒಂದುವರೆ ಗಂಟೆ ಮೊದಲು ನನಗೆ ಕರೆ ಮಾಡಿ ತಿಳಿಸಲಾಗಿತ್ತು. ಈ ಬಗ್ಗೆ ಯಾವುದೇ ಚರ್ಚೆ ನಡೆಸಿರಲಿಲ್ಲ ಎಂದು ಕೊಹ್ಲಿ ತಿಳಿಸಿದ್ದರು.

ಆದರೆ ಅತ್ತ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ವಜಾಗೊಳಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಟಿ20 ನಾಯಕತ್ವ ತ್ಯಜಿಸದಂತೆ ಬಿಸಿಸಿಐ ವಿರಾಟ್ ಕೊಹ್ಲಿ ಅವರಲ್ಲಿ ಮನವಿ ಮಾಡಿತ್ತು. ಅಷ್ಟೇ ಅಲ್ಲದೆ ನಾನು ಕೂಡ ಅವರೊಂದಿಗೆ ಈ ಚರ್ಚಿಸಿದ್ದೆ. ಇದಾಗ್ಯೂ ಅವರು ನಮ್ಮ ಮಾತು ಕೇಳಿರಲಿಲ್ಲ ಎಂದು ತಿಳಿಸಿದ್ದರು.

ಅಷ್ಟೇ ಅಲ್ಲದೆ ಅವರು ಟಿ20 ನಾಯಕತ್ವ ತ್ಯಜಿಸಿದ ಪರಿಣಾಮ, ಆಯ್ಕೆದಾರರು ಏಕದಿನ ಹಾಗೂ ಟಿ20 ತಂಡಕ್ಕೆ ಒಬ್ಬನೇ ನಾಯಕನನ್ನು ಆಯ್ಕೆ ಮಾಡಿದೆ ಎಂದು ಹೇಳಿದ್ದರು. ಆದರೆ ಈ ಬಗ್ಗೆ ಯಾರು ಕೂಡ ನನ್ನೊಂದಿಗೆ ಚರ್ಚಿಸಿಲ್ಲ ಎಂಬುದನ್ನು ಕೊಹ್ಲಿ ತಿಳಿಸುವ ಮೂಲಕ ಬಿಸಿಸಿಐ ಹೇಳುತ್ತಿರುವುದು ಸುಳ್ಳು ಎಂದು ಪರೋಕ್ಷವಾಗಿ ತಿಳಿಸಿದ್ದರು.

ಕೊಹ್ಲಿಯ ಈ ನೇರ ನುಡಿಗಳಿಂದಾಗಿ ಬಿಸಿಸಿಐ ಮುಜುಗರಕ್ಕೊಳಗಾಗಿತ್ತು. ಇದೀಗ ವಿರಾಟ್ ಕೊಹ್ಲಿಯ ಹೇಳಿಕೆಗಳ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ವಿಚಾರದ ಬಗ್ಗೆ ತಾನು ಸದ್ಯ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ಈ ವಿಚಾರವನ್ನು ಬಿಸಿಸಿಐ ಸೂಕ್ತವಾಗಿ ನಿಭಾಯಿಸಲಿದೆ. ಹೀಗಾಗಿ ಸದ್ಯ ನಾನು ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ಸೌರವ್ ಗಂಗೂಲಿ ತಿಳಿಸಿದ್ದಾರೆ. ಇದರೊಂದಿಗೆ ಬಿಸಿಸಿಐನ ಮುಂದಿನ ನಡೆಯೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಒಟ್ಟಿನಲ್ಲಿ ವಿರಾಟ್ ಕೊಹ್ಲಿಯ ಬಹಿರಂಗ ಹೇಳಿಕೆಗಳಿಂದ ಇದೀಗ ಬಿಸಿಸಿಐ ಮುಜುಗರಕ್ಕೊಳಗಾಗಿರುವುದಂತು ಸ್ಪಷ್ಟ.
Published On - 8:26 pm, Thu, 16 December 21




