AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಆಫ್ರಿಕಾ ದಾಂಡಿಗರ ಆರ್ಭಟ: ವಿಶ್ವಕಪ್‌ನಲ್ಲಿ ವಿಶ್ವ ದಾಖಲೆ

South Africa vs Canada: ಕೆನಾಡಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್‌ಗಳಲ್ಲಿ ಬರೋಬ್ಬರಿ 213 ರನ್ ಪೇರಿಸಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಕೆನಡಾ ತಂಡವು 20 ಓವರ್‌ಗಳಲ್ಲಿ ಕಲೆಹಾಕಿದ್ದು 156 ರನ್ಸ್ ಮಾತ್ರ. ಈ ಮೂಲಕ ಸೌತ್ ಆಫ್ರಿಕಾ ತಂಡ 57 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Feb 10, 2026 | 7:32 AM

Share
ಟಿ20 ವಿಶ್ವಕಪ್‌ನ ತನ್ನ ಮೊದಲ ಪಂದ್ಯದಲ್ಲೇ ಸೌತ್ ಆಫ್ರಿಕಾ ತಂಡ ಭರ್ಜರಿ ದಾಖಲೆ ಬರೆದಿದೆ. ಅದು ಸಹ 213 ರನ್ ಗಳನ್ನು ಚಚ್ಚುವ ಮೂಲಕ. ಅಹಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ೨೦ ವಿಶ್ವಕಪ್‌ನ 9ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಿದ್ದವು.

ಟಿ20 ವಿಶ್ವಕಪ್‌ನ ತನ್ನ ಮೊದಲ ಪಂದ್ಯದಲ್ಲೇ ಸೌತ್ ಆಫ್ರಿಕಾ ತಂಡ ಭರ್ಜರಿ ದಾಖಲೆ ಬರೆದಿದೆ. ಅದು ಸಹ 213 ರನ್ ಗಳನ್ನು ಚಚ್ಚುವ ಮೂಲಕ. ಅಹಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ೨೦ ವಿಶ್ವಕಪ್‌ನ 9ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಿದ್ದವು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆನಡಾ ತಂಡದ ನಾಯಕ ದಿಲ್ ಪ್ರೀತ್ ಬಜ್ವಾ ಸೌತ್ ಆಫ್ರಿಕಾ ತಂಡವನ್ನು ಬ್ಯಾಟಿಂಗ್‌ ಗೆ ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡಕ್ಕೆ ಕ್ವಿಂಟನ್ ಡಿಕಾಕ್ ಹಾಗೂ ಐಡೆನ್ ಮಾರ್ಕ್ರಾಮ್ ಭರ್ಜರಿ ಆರಂಭ ಒದಗಿಸಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆನಡಾ ತಂಡದ ನಾಯಕ ದಿಲ್ ಪ್ರೀತ್ ಬಜ್ವಾ ಸೌತ್ ಆಫ್ರಿಕಾ ತಂಡವನ್ನು ಬ್ಯಾಟಿಂಗ್‌ ಗೆ ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡಕ್ಕೆ ಕ್ವಿಂಟನ್ ಡಿಕಾಕ್ ಹಾಗೂ ಐಡೆನ್ ಮಾರ್ಕ್ರಾಮ್ ಭರ್ಜರಿ ಆರಂಭ ಒದಗಿಸಿದ್ದರು.

2 / 6
ಬಿರುಸಿನ ಬ್ಯಾಟಿಂಗ್ ನೊಂದಿಗೆ ಕೆನಡಾ ಬೌಲರ್‌ಗಳನ್ನು ದಂಡಿಸಿದ ಮಾರ್ಕ್ರಾಮ್ ಕೇವಲ 32 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್ ಗಳೊಂದಿಗೆ 59 ರನ್ ಚಚ್ಚಿದರು. ಹಾಗೆಯೇ ರಯಾನ್ ರಿಕೆಲ್ಟನ್ 33 ರನ್ ಬಾರಿಸಿದರೆ, ಡೇವಿಸ್ ಮಿಲ್ಲರ್ 39 ರನ್ ಗಳಿಸಿದರು.

ಬಿರುಸಿನ ಬ್ಯಾಟಿಂಗ್ ನೊಂದಿಗೆ ಕೆನಡಾ ಬೌಲರ್‌ಗಳನ್ನು ದಂಡಿಸಿದ ಮಾರ್ಕ್ರಾಮ್ ಕೇವಲ 32 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್ ಗಳೊಂದಿಗೆ 59 ರನ್ ಚಚ್ಚಿದರು. ಹಾಗೆಯೇ ರಯಾನ್ ರಿಕೆಲ್ಟನ್ 33 ರನ್ ಬಾರಿಸಿದರೆ, ಡೇವಿಸ್ ಮಿಲ್ಲರ್ 39 ರನ್ ಗಳಿಸಿದರು.

3 / 6
ಇನ್ನು ಅಂತಿಮ ಹಂತದಲ್ಲಿ ಟ್ರಿಸ್ಟನ್ ಸ್ಟಬ್ಸ್ ಕೇವಲ 19 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್ ಗಳೊಂದಿಗೆ ಅಜೇಯ 34 ರನ್ ಬಾರಿಸಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 213 ರನ್ ಕಲೆಹಾಕಿತು.

ಇನ್ನು ಅಂತಿಮ ಹಂತದಲ್ಲಿ ಟ್ರಿಸ್ಟನ್ ಸ್ಟಬ್ಸ್ ಕೇವಲ 19 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್ ಗಳೊಂದಿಗೆ ಅಜೇಯ 34 ರನ್ ಬಾರಿಸಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 213 ರನ್ ಕಲೆಹಾಕಿತು.

4 / 6
ಈ 213 ರನ್ ಗಳೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 200+ ಸ್ಕೋರ್ ಗಳಿಸಿದ ತಂಡವೆಂಬ ವಿಶ್ವ ದಾಖಲೆಯನ್ನು ಸೌತ್ ಆಫ್ರಿಕಾ ತನ್ನದಾಗಿಸಿಕೊಂಡಿತು. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್‌ನಲ್ಲಿ 6 ಬಾರಿ 200+ ಸ್ಕೋರ್ ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೂ ಪಾತ್ರವಾಯಿತು.

ಈ 213 ರನ್ ಗಳೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 200+ ಸ್ಕೋರ್ ಗಳಿಸಿದ ತಂಡವೆಂಬ ವಿಶ್ವ ದಾಖಲೆಯನ್ನು ಸೌತ್ ಆಫ್ರಿಕಾ ತನ್ನದಾಗಿಸಿಕೊಂಡಿತು. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್‌ನಲ್ಲಿ 6 ಬಾರಿ 200+ ಸ್ಕೋರ್ ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೂ ಪಾತ್ರವಾಯಿತು.

5 / 6
ಅಚ್ಚರಿ ವಿಷಯ ಎಂದರೆ ಸೌತ್ ಆಫ್ರಿಕಾ ತಂಡವನ್ನು ಹೊರತುಪಡಿಸಿ ಯಾವುದೇ ತಂಡ ವಿಶ್ವಕಪ್‌ನಲ್ಲಿ ಐದಕ್ಕಿಂತ ಹೆಚ್ಚು ಬಾರಿ 200+ ಸ್ಕೋರ್ ಗಳಿಸಿಲ್ಲ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ದ್ವಿತೀಯ ಸ್ಥಾನದಲ್ಲಿದ್ದು, ಮೂರು ಬಾರಿ 200+ ಸ್ಕೋರ್ ಗಳಿಸಿದೆ. ಇದೀಗ ಆರನೇ ಬಾರಿ ಇನ್ನೂರಕ್ಕಿಂತ ಅಧಿಕ ಮೊತ್ತ ಕಲೆಹಾಕುವ ಮೂಲಕ ಸೌತ್ ಆಫ್ರಿಕಾ ವಿಶ್ವಕಪ್‌ನಲ್ಲಿ ಇನ್ನೂರು ರನ್ ಗಳ ತನ್ನ ವಿಶ್ವ ದಾಖಲೆಯನ್ನು ಮುಂದುವರೆಸಿದೆ.

ಅಚ್ಚರಿ ವಿಷಯ ಎಂದರೆ ಸೌತ್ ಆಫ್ರಿಕಾ ತಂಡವನ್ನು ಹೊರತುಪಡಿಸಿ ಯಾವುದೇ ತಂಡ ವಿಶ್ವಕಪ್‌ನಲ್ಲಿ ಐದಕ್ಕಿಂತ ಹೆಚ್ಚು ಬಾರಿ 200+ ಸ್ಕೋರ್ ಗಳಿಸಿಲ್ಲ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ದ್ವಿತೀಯ ಸ್ಥಾನದಲ್ಲಿದ್ದು, ಮೂರು ಬಾರಿ 200+ ಸ್ಕೋರ್ ಗಳಿಸಿದೆ. ಇದೀಗ ಆರನೇ ಬಾರಿ ಇನ್ನೂರಕ್ಕಿಂತ ಅಧಿಕ ಮೊತ್ತ ಕಲೆಹಾಕುವ ಮೂಲಕ ಸೌತ್ ಆಫ್ರಿಕಾ ವಿಶ್ವಕಪ್‌ನಲ್ಲಿ ಇನ್ನೂರು ರನ್ ಗಳ ತನ್ನ ವಿಶ್ವ ದಾಖಲೆಯನ್ನು ಮುಂದುವರೆಸಿದೆ.

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ