AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಗರ್ವಭಂಗ… ಹೊಸ ಇತಿಹಾಸ ನಿರ್ಮಿಸಿದ ಸೌತ್ ಆಫ್ರಿಕಾ

India vs South Africa Test: ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಟೂರ್ನಿಯ ಮೊದಲ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಈ ಸರಣಿಯನ್ನು ಸಮಗೊಳಿಸಲು ದ್ವಿತೀಯ ಮ್ಯಾಚ್​ನಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

ಝಾಹಿರ್ ಯೂಸುಫ್
|

Updated on: Nov 25, 2025 | 5:53 PM

Share
ಭಾರತದಲ್ಲಿ ಸೌತ್ ಆಫ್ರಿಕಾ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಕಳೆದ 93 ವರ್ಷಗಳಿಂದ ತವರಿನಲ್ಲಿ ಟೀಮ್ ಇಂಡಿಯಾ ಮೆರೆದ ಪ್ರಾಬಲ್ಯವನ್ನು ಕೊನೆಗಾಣಿಸುವ ಮೂಲಕ. ಅಂದರೆ ಇದೇ ಮೊದಲ ಬಾರಿಗೆ ತಂಡವೊಂದು ಟೀಮ್ ಇಂಡಿಯಾಗೆ 548 ರನ್​​ಗಳ ಗುರಿ ನೀಡಿದೆ.

ಭಾರತದಲ್ಲಿ ಸೌತ್ ಆಫ್ರಿಕಾ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಕಳೆದ 93 ವರ್ಷಗಳಿಂದ ತವರಿನಲ್ಲಿ ಟೀಮ್ ಇಂಡಿಯಾ ಮೆರೆದ ಪ್ರಾಬಲ್ಯವನ್ನು ಕೊನೆಗಾಣಿಸುವ ಮೂಲಕ. ಅಂದರೆ ಇದೇ ಮೊದಲ ಬಾರಿಗೆ ತಂಡವೊಂದು ಟೀಮ್ ಇಂಡಿಯಾಗೆ 548 ರನ್​​ಗಳ ಗುರಿ ನೀಡಿದೆ.

1 / 5
93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಟೀಮ್ ಇಂಡಿಯಾಗೆ ಯಾವತ್ತೂ ತವರಿನಲ್ಲಿ ನಾಲ್ಕನೇ ಇನಿಂಗ್ಸ್​ನಲ್ಲಿ 545+ ರನ್​​​ಗಳ ಗುರಿ ಪಡೆದೇ ಇರಲಿಲ್ಲ. ಈ ಬಾರಿ ಭಾರತೀಯ ಬೌಲರ್​​​ಗಳ ಬೆಂಡೆತ್ತುವ ಮೂಲಕ ಸೌತ್ ಆಫ್ರಿಕಾ ಪಡೆ ಆಸ್ಟ್ರೇಲಿಯಾದ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದೆ.

93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಟೀಮ್ ಇಂಡಿಯಾಗೆ ಯಾವತ್ತೂ ತವರಿನಲ್ಲಿ ನಾಲ್ಕನೇ ಇನಿಂಗ್ಸ್​ನಲ್ಲಿ 545+ ರನ್​​​ಗಳ ಗುರಿ ಪಡೆದೇ ಇರಲಿಲ್ಲ. ಈ ಬಾರಿ ಭಾರತೀಯ ಬೌಲರ್​​​ಗಳ ಬೆಂಡೆತ್ತುವ ಮೂಲಕ ಸೌತ್ ಆಫ್ರಿಕಾ ಪಡೆ ಆಸ್ಟ್ರೇಲಿಯಾದ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದೆ.

2 / 5
ಇದಕ್ಕೂ ಮುನ್ನ 2004 ರಲ್ಲಿ ನಾಗ್ಪುರದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾಗೆ 542 ರನ್​​​ಗಳ ಗುರಿ ನೀಡಿತ್ತು. ಇದು ತವರಿನಲ್ಲಿ ತಂಡವೊಂದು ನಾಲ್ಕನೇ ಇನಿಂಗ್ಸ್​ನಲ್ಲಿ ನೀಡಿದ ಗರಿಷ್ಠ ಗುರಿಯಾಗಿತ್ತು. ಇದೀಗ ಬರೋಬ್ಬರಿ 21 ವರ್ಷಗಳ ಸೌತ್ ಆಫ್ರಿಕಾ ತಂಡ ಈ ದಾಖಲೆಯನ್ನು ಮುರಿದಿದೆ.

ಇದಕ್ಕೂ ಮುನ್ನ 2004 ರಲ್ಲಿ ನಾಗ್ಪುರದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾಗೆ 542 ರನ್​​​ಗಳ ಗುರಿ ನೀಡಿತ್ತು. ಇದು ತವರಿನಲ್ಲಿ ತಂಡವೊಂದು ನಾಲ್ಕನೇ ಇನಿಂಗ್ಸ್​ನಲ್ಲಿ ನೀಡಿದ ಗರಿಷ್ಠ ಗುರಿಯಾಗಿತ್ತು. ಇದೀಗ ಬರೋಬ್ಬರಿ 21 ವರ್ಷಗಳ ಸೌತ್ ಆಫ್ರಿಕಾ ತಂಡ ಈ ದಾಖಲೆಯನ್ನು ಮುರಿದಿದೆ.

3 / 5
ಮೊದಲ ಇನಿಂಗ್ಸ್​ನಲ್ಲಿ 288 ರನ್​​​ಗಳ ಮುನ್ನಡೆ ಪಡೆದಿದ್ದ ಸೌತ್ ಆಫ್ರಿಕಾ ತಂಡವು ದ್ವಿತೀಯ ಇನಿಂಗ್ಸ್​​ನಲ್ಲಿ ಬರೋಬ್ಬರಿ 260 ರನ್​ ಕಲೆಹಾಕಿದೆ. ಈ ಮೂಲಕ ಭಾರತದಲ್ಲಿ ನಾಲ್ಕನೇ ಇನಿಂಗ್ಸ್​​ನಲ್ಲಿ ಅತ್ಯಧಿಕ ರನ್​​ಗಳ ಟಾರ್ಗೆಟ್ (548) ನೀಡಿದ ದಾಖಲೆಯೊಂದನ್ನು ಸೌತ್ ಆಫ್ರಿಕಾ ತಂಡ ನಿರ್ಮಿಸಿದೆ.

ಮೊದಲ ಇನಿಂಗ್ಸ್​ನಲ್ಲಿ 288 ರನ್​​​ಗಳ ಮುನ್ನಡೆ ಪಡೆದಿದ್ದ ಸೌತ್ ಆಫ್ರಿಕಾ ತಂಡವು ದ್ವಿತೀಯ ಇನಿಂಗ್ಸ್​​ನಲ್ಲಿ ಬರೋಬ್ಬರಿ 260 ರನ್​ ಕಲೆಹಾಕಿದೆ. ಈ ಮೂಲಕ ಭಾರತದಲ್ಲಿ ನಾಲ್ಕನೇ ಇನಿಂಗ್ಸ್​​ನಲ್ಲಿ ಅತ್ಯಧಿಕ ರನ್​​ಗಳ ಟಾರ್ಗೆಟ್ (548) ನೀಡಿದ ದಾಖಲೆಯೊಂದನ್ನು ಸೌತ್ ಆಫ್ರಿಕಾ ತಂಡ ನಿರ್ಮಿಸಿದೆ.

4 / 5
ಇನ್ನು ಈ ಗುರಿಯನ್ನು ಬೆನ್ನತ್ತಿ ಟೀಮ್ ಇಂಡಿಯಾ ಗೆಲ್ಲುವುದು ಕೂಡ ಅಸಾಧ್ಯ. ಏಕೆಂದರೆ ಕೊನೆಯ ಇನಿಂಗ್ಸ್​ನಲ್ಲಿ 500+ ರನ್​​​ಗಳ ಗುರಿ ಬೆನ್ನತ್ತಿರುವುದು ಕೇವಲ ಒಮ್ಮೆ ಮಾತ್ರ. ಅದು ಕೂಡ 1939 ರಲ್ಲಿ. ಅಂದು ಸೌತ್ ಆಫ್ರಿಕಾ ನೀಡಿದ 696 ರನ್​​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 656 ರನ್​ಗಳಿಸಿ ಪಂದ್ಯವನ್ನು ಡ್ರಾಗೊಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಈ ಪಂದ್ಯದಲ್ಲಿ ಭಾರತದ ಗೆಲುವು ಅಸಾಧ್ಯ ಎಂದೇ ಹೇಳಬಹುದು.

ಇನ್ನು ಈ ಗುರಿಯನ್ನು ಬೆನ್ನತ್ತಿ ಟೀಮ್ ಇಂಡಿಯಾ ಗೆಲ್ಲುವುದು ಕೂಡ ಅಸಾಧ್ಯ. ಏಕೆಂದರೆ ಕೊನೆಯ ಇನಿಂಗ್ಸ್​ನಲ್ಲಿ 500+ ರನ್​​​ಗಳ ಗುರಿ ಬೆನ್ನತ್ತಿರುವುದು ಕೇವಲ ಒಮ್ಮೆ ಮಾತ್ರ. ಅದು ಕೂಡ 1939 ರಲ್ಲಿ. ಅಂದು ಸೌತ್ ಆಫ್ರಿಕಾ ನೀಡಿದ 696 ರನ್​​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 656 ರನ್​ಗಳಿಸಿ ಪಂದ್ಯವನ್ನು ಡ್ರಾಗೊಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಈ ಪಂದ್ಯದಲ್ಲಿ ಭಾರತದ ಗೆಲುವು ಅಸಾಧ್ಯ ಎಂದೇ ಹೇಳಬಹುದು.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ