AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs IND ODI Series: ಎಂಟು ಸ್ಟಾರ್ ಪ್ಲೇಯರ್ಸ್ ಔಟ್: ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ಏಕದಿನ ತಂಡದಲ್ಲಿ ದೊಡ್ಡ ಬದಲಾವಣೆ

India ODI squad for South Africa ODI Series: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ ಸಮಬಲದಿಂದ ಅಂತ್ಯಕಂಡಿದೆ. ಇದೀಗ ಏಕದಿನ ಸರಣಿಗೆ ಎರಡೂ ತಂಡಗಳು ಸಜ್ಜಾಗುತ್ತಿದೆ. ಮೊದಲ ಪಂದ್ಯವು ಜೋಹಾನ್ಸ್‌ಬರ್ಗ್‌ನಲ್ಲಿ ಭಾನುವಾರ ನಡೆಯಲಿದೆ. 50 ಓವರ್‌ಗಳ ಪಂದ್ಯಗಳಿಗೆ ಭಾರತ ತಂಡವನ್ನು ಕೆಎಲ್ ರಾಹುಲ್ ನಾಯಕನಾಗಿ ಮುನ್ನಡೆಸಲಿದ್ದಾರೆ.

Vinay Bhat
|

Updated on: Dec 15, 2023 | 9:22 AM

ಜೋಹಾನ್ಸ್‌ಬರ್ಗ್‌ನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ಗುರುವಾರ (ಡಿಸೆಂಬರ್ 14) ನಡೆದ ಮೂರು ಪಂದ್ಯಗಳ ಸರಣಿಯ ಮೂರನೇ ಮತ್ತು ಅಂತಿಮ ಟಿ20ಐ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 106 ರನ್‌ಗಳಿಂದ ಸೋಲಿಸಿತು. ಈ ಮೂಲಕ ಟಿ20 ಸರಣಿ ಸಮಬಲದಿಂದ ಅಂತ್ಯಕಂಡಿತು.

ಜೋಹಾನ್ಸ್‌ಬರ್ಗ್‌ನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ಗುರುವಾರ (ಡಿಸೆಂಬರ್ 14) ನಡೆದ ಮೂರು ಪಂದ್ಯಗಳ ಸರಣಿಯ ಮೂರನೇ ಮತ್ತು ಅಂತಿಮ ಟಿ20ಐ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 106 ರನ್‌ಗಳಿಂದ ಸೋಲಿಸಿತು. ಈ ಮೂಲಕ ಟಿ20 ಸರಣಿ ಸಮಬಲದಿಂದ ಅಂತ್ಯಕಂಡಿತು.

1 / 7
ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ದಾಖಲೆಯ ನಾಲ್ಕನೇ T20I ಶತಕವನ್ನು ಗಳಿಸಿ 201 ರನ್ ಗಳಿಸಲು ಸಹಾಯ ಮಾಡಿದರು. ನಂತರ ಹುಟ್ಟುಹಬ್ಬದ ಹುಡುಗ ಕುಲ್ದೀಪ್ ಯಾದವ್ 2.5 ಓವರ್‌ಗಳಲ್ಲಿ 17 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತದ ಅತಿದೊಡ್ಡ ಗೆಲುವಿಗೆ ಕಾರಣರಾದರು.

ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ದಾಖಲೆಯ ನಾಲ್ಕನೇ T20I ಶತಕವನ್ನು ಗಳಿಸಿ 201 ರನ್ ಗಳಿಸಲು ಸಹಾಯ ಮಾಡಿದರು. ನಂತರ ಹುಟ್ಟುಹಬ್ಬದ ಹುಡುಗ ಕುಲ್ದೀಪ್ ಯಾದವ್ 2.5 ಓವರ್‌ಗಳಲ್ಲಿ 17 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತದ ಅತಿದೊಡ್ಡ ಗೆಲುವಿಗೆ ಕಾರಣರಾದರು.

2 / 7
ಇದೀಗ ಟಿ20I ಸರಣಿಯ ಮುಕ್ತಾಯದ ನಂತರ, ಎರಡೂ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿ ಆಗಲಿದೆ. ಇದರ ಮೊದಲ ಪಂದ್ಯವು ಜೋಹಾನ್ಸ್‌ಬರ್ಗ್‌ನಲ್ಲಿ ಭಾನುವಾರ (ಡಿಸೆಂಬರ್ 17) ನಡೆಯಲಿದೆ. 50 ಓವರ್‌ಗಳ ಪಂದ್ಯಗಳಿಗೆ ಭಾರತ ತಂಡವನ್ನು ಕೆಎಲ್ ರಾಹುಲ್ ನಾಯಕನಾಗಿ ಮುನ್ನಡೆಸಲಿದ್ದಾರೆ.

ಇದೀಗ ಟಿ20I ಸರಣಿಯ ಮುಕ್ತಾಯದ ನಂತರ, ಎರಡೂ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿ ಆಗಲಿದೆ. ಇದರ ಮೊದಲ ಪಂದ್ಯವು ಜೋಹಾನ್ಸ್‌ಬರ್ಗ್‌ನಲ್ಲಿ ಭಾನುವಾರ (ಡಿಸೆಂಬರ್ 17) ನಡೆಯಲಿದೆ. 50 ಓವರ್‌ಗಳ ಪಂದ್ಯಗಳಿಗೆ ಭಾರತ ತಂಡವನ್ನು ಕೆಎಲ್ ರಾಹುಲ್ ನಾಯಕನಾಗಿ ಮುನ್ನಡೆಸಲಿದ್ದಾರೆ.

3 / 7
ಸೂರ್ಯಕುಮಾರ್, ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ಗಿಲ್ ಸೇರಿದಂತೆ ಭಾರತದ ಟಿ20I ತಂಡದ ಭಾಗವಾಗಿರುವ ಅನೇಕ ಆಟಗಾರರು ಏಕದಿನಗಳನ್ನು ಆಡುವುದಿಲ್ಲ. ಮುಂಬರುವ ಮೂರು ಪಂದ್ಯಗಳಲ್ಲಿ ಹೊಸ ಆಟಗಾರರು ತಂಡದಲ್ಲಿದ್ದಾರೆ. ಹಾಗಾದರೆ, ಆಫ್ರಿಕಾ ಸರಣಿಗಾಗಿ ಟಿ20I ತಂಡದಿಂದ ಭಾರತದ ಏಕದಿನ ತಂಡದಲ್ಲಿನ ಬದಲಾವಣೆಗಳ ಸಂಪೂರ್ಣ ಪಟ್ಟಿ ನೋಡೋಣ.

ಸೂರ್ಯಕುಮಾರ್, ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ಗಿಲ್ ಸೇರಿದಂತೆ ಭಾರತದ ಟಿ20I ತಂಡದ ಭಾಗವಾಗಿರುವ ಅನೇಕ ಆಟಗಾರರು ಏಕದಿನಗಳನ್ನು ಆಡುವುದಿಲ್ಲ. ಮುಂಬರುವ ಮೂರು ಪಂದ್ಯಗಳಲ್ಲಿ ಹೊಸ ಆಟಗಾರರು ತಂಡದಲ್ಲಿದ್ದಾರೆ. ಹಾಗಾದರೆ, ಆಫ್ರಿಕಾ ಸರಣಿಗಾಗಿ ಟಿ20I ತಂಡದಿಂದ ಭಾರತದ ಏಕದಿನ ತಂಡದಲ್ಲಿನ ಬದಲಾವಣೆಗಳ ಸಂಪೂರ್ಣ ಪಟ್ಟಿ ನೋಡೋಣ.

4 / 7
ಯಾರೆಲ್ಲ ಔಟ್?: ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿಕೆಟ್‌ಕೀಪರ್-ಬ್ಯಾಟರ್‌ಗಳಾದ ಜಿತೇಶ್ ಶರ್ಮಾ ಮತ್ತು ಇಶಾನ್ ಕಿಶನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್ ಮತ್ತು ರವಿ ಬಿಷ್ಣೋಯ್ ಏಕದಿನ ಸರಣಿಯ ಭಾಗವಾಗಿಲ್ಲ. ಗಿಲ್, ಜೈಸ್ವಾಲ್, ಕಿಶನ್, ಜಡೇಜಾ ಮತ್ತು ಸಿರಾಜ್ ಟೆಸ್ಟ್ ತಂಡದ ಭಾಗವಾಗಿರುವುದರಿಂದ ದಕ್ಷಿಣ ಆಫ್ರಿಕಾದಲ್ಲಿ ಉಳಿಯುತ್ತಾರೆ.

ಯಾರೆಲ್ಲ ಔಟ್?: ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿಕೆಟ್‌ಕೀಪರ್-ಬ್ಯಾಟರ್‌ಗಳಾದ ಜಿತೇಶ್ ಶರ್ಮಾ ಮತ್ತು ಇಶಾನ್ ಕಿಶನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್ ಮತ್ತು ರವಿ ಬಿಷ್ಣೋಯ್ ಏಕದಿನ ಸರಣಿಯ ಭಾಗವಾಗಿಲ್ಲ. ಗಿಲ್, ಜೈಸ್ವಾಲ್, ಕಿಶನ್, ಜಡೇಜಾ ಮತ್ತು ಸಿರಾಜ್ ಟೆಸ್ಟ್ ತಂಡದ ಭಾಗವಾಗಿರುವುದರಿಂದ ದಕ್ಷಿಣ ಆಫ್ರಿಕಾದಲ್ಲಿ ಉಳಿಯುತ್ತಾರೆ.

5 / 7
ಯಾರು ಇನ್?: ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತಕ್ಕೆ ಇನ್ನೂ ಪದಾರ್ಪಣೆ ಮಾಡದಿರುವ ರಜತ್ ಪಾಟಿದಾರ್ ತಮಿಳುನಾಡಿನ ಯುವ ಬ್ಯಾಟರ್ ಸಾಯಿ ಸುದರ್ಶನ್ ಜೊತೆಗೆ ಏಕದಿನ ತಂಡ ಸೇರಿಸಿಕೊಂಡಿದ್ದಾರೆ. ಅಕ್ಷರ್ ಪಟೇಲ್, ಅವೇಶ್ ಖಾನ್, ಚಹಲ್ ಮತ್ತು ಸ್ಯಾಮ್ಸನ್ ಕೂಡ ಇದ್ದಾರೆ.

ಯಾರು ಇನ್?: ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತಕ್ಕೆ ಇನ್ನೂ ಪದಾರ್ಪಣೆ ಮಾಡದಿರುವ ರಜತ್ ಪಾಟಿದಾರ್ ತಮಿಳುನಾಡಿನ ಯುವ ಬ್ಯಾಟರ್ ಸಾಯಿ ಸುದರ್ಶನ್ ಜೊತೆಗೆ ಏಕದಿನ ತಂಡ ಸೇರಿಸಿಕೊಂಡಿದ್ದಾರೆ. ಅಕ್ಷರ್ ಪಟೇಲ್, ಅವೇಶ್ ಖಾನ್, ಚಹಲ್ ಮತ್ತು ಸ್ಯಾಮ್ಸನ್ ಕೂಡ ಇದ್ದಾರೆ.

6 / 7
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಗೆ ಭಾರತದ ಏಕದಿನ ತಂಡ: ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ , ರಿಂಕು ಸಿಂಗ್, ರಜತ್ ಪಾಟಿದಾರ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಹರ್.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಗೆ ಭಾರತದ ಏಕದಿನ ತಂಡ: ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ , ರಿಂಕು ಸಿಂಗ್, ರಜತ್ ಪಾಟಿದಾರ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಹರ್.

7 / 7
Follow us
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್