AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs SAW: ತ್ರಿಕೋನ ಸರಣಿ ಗೆದ್ದ ಆಫ್ರಿಕಾ: ಫೈನಲ್​ನಲ್ಲಿ ಭಾರತೀಯ ಮಹಿಳೆಯರ ಕಳಪೆ ಪ್ರದರ್ಶನ

South Africa women vs India Women: ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳೆಯರ ತ್ರಿಕೋನ ಟಿ20 ಸರಣಿಯನ್ನು ಭಾರತ ಕಳೆದುಕೊಂಡಿದೆ. ಫೈನಲ್ ಕಾದಾಟದಲ್ಲಿ ಹರಿಣಗಳ ದಾಳಿಗೆ ತತ್ತರಿಸಿದ ಹರ್ಮನ್​ಪ್ರೀತ್ ಪಡೆ ಸೋಲುಂಡಿದೆ.

Vinay Bhat
|

Updated on: Feb 03, 2023 | 7:59 AM

Share
ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳೆಯರ ತ್ರಿಕೋನ ಟಿ20 ಸರಣಿಯನ್ನು ಭಾರತ ಕಳೆದುಕೊಂಡಿದೆ. ರೌಂಡ್ ರಾಬಿನ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ಗೆ ಸೋಲುಣಿಸಿ ಫೈನಲ್ ತಲುಪಿದ್ದ ಭಾರತ ಮಹಿಳಾ ತಂಡ ಫೈನಲ್​ಗೆ ಪ್ರವೇಶ ಪಡೆದಿತ್ತು. ಆದರೆ, ಫೈನಲ್ ಕಾದಾಟದಲ್ಲಿ ಹರಿಣಗಳ ದಾಳಿಗೆ ತತ್ತರಿಸಿದ ಹರ್ಮನ್​ಪ್ರೀತ್ ಪಡೆ ಸೋಲುಂಡಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳೆಯರ ತ್ರಿಕೋನ ಟಿ20 ಸರಣಿಯನ್ನು ಭಾರತ ಕಳೆದುಕೊಂಡಿದೆ. ರೌಂಡ್ ರಾಬಿನ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ಗೆ ಸೋಲುಣಿಸಿ ಫೈನಲ್ ತಲುಪಿದ್ದ ಭಾರತ ಮಹಿಳಾ ತಂಡ ಫೈನಲ್​ಗೆ ಪ್ರವೇಶ ಪಡೆದಿತ್ತು. ಆದರೆ, ಫೈನಲ್ ಕಾದಾಟದಲ್ಲಿ ಹರಿಣಗಳ ದಾಳಿಗೆ ತತ್ತರಿಸಿದ ಹರ್ಮನ್​ಪ್ರೀತ್ ಪಡೆ ಸೋಲುಂಡಿದೆ.

1 / 8
ಈಸ್ಟ್‌ ಲಂಡನ್​ನ ಬಫೆಲೊ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮಹಿಳೆಯರು ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ತ್ರಿಕೋನ ಸರಣಿಯನ್ನು ವಶಪಡಿಸಿಕೊಂಡಿದೆ.

ಈಸ್ಟ್‌ ಲಂಡನ್​ನ ಬಫೆಲೊ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮಹಿಳೆಯರು ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ತ್ರಿಕೋನ ಸರಣಿಯನ್ನು ವಶಪಡಿಸಿಕೊಂಡಿದೆ.

2 / 8
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ಮುನಃ ಕಳಪೆ ಆರಂಭ ಪಡೆದುಕೊಂಡಿತು. ಸ್ಟಾರ್ ಬ್ಯಾಟರ್ ಸ್ಮೃತಿ ಮಂದಾನ ಶೂನ್ಯಕ್ಕೆ ಪೆವಿಲಿಯನ್ ಸೇರಿದರು. ಜೆಮಿಯಾ ರೋಡ್ರಿಗಸ್ 11 ರನ್​ಗೆ ಔಟಾದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ಮುನಃ ಕಳಪೆ ಆರಂಭ ಪಡೆದುಕೊಂಡಿತು. ಸ್ಟಾರ್ ಬ್ಯಾಟರ್ ಸ್ಮೃತಿ ಮಂದಾನ ಶೂನ್ಯಕ್ಕೆ ಪೆವಿಲಿಯನ್ ಸೇರಿದರು. ಜೆಮಿಯಾ ರೋಡ್ರಿಗಸ್ 11 ರನ್​ಗೆ ಔಟಾದರು.

3 / 8
ಈ ಸಂದರ್ಭ ಜೊತೆಯಾದ ಹರ್ಲಿನ್ ಡಿಯೋಲ್ ಹಾಗೂ ನಾಯಕಿ ಹರ್ಮನ್​ಪ್ರೀತ್ ಕೌರ್ ಕೆಲಹೊತ್ತು ತಂಡಕ್ಕೆ ಆಸರೆಯಾದರು. ಕೌರ್ 22 ಎಸೆತಗಳಲ್ಲಿ 21 ರನ್ ಕಲೆಹಾಕಿದರೆ, ಹರ್ಲಿನ್ 56 ಎಸೆತಗಳಲ್ಲಿ 46 ರನ್ ಬಾರಿಸಿದರು.

ಈ ಸಂದರ್ಭ ಜೊತೆಯಾದ ಹರ್ಲಿನ್ ಡಿಯೋಲ್ ಹಾಗೂ ನಾಯಕಿ ಹರ್ಮನ್​ಪ್ರೀತ್ ಕೌರ್ ಕೆಲಹೊತ್ತು ತಂಡಕ್ಕೆ ಆಸರೆಯಾದರು. ಕೌರ್ 22 ಎಸೆತಗಳಲ್ಲಿ 21 ರನ್ ಕಲೆಹಾಕಿದರೆ, ಹರ್ಲಿನ್ 56 ಎಸೆತಗಳಲ್ಲಿ 46 ರನ್ ಬಾರಿಸಿದರು.

4 / 8
ಕೊನೆಯಲ್ಲಿ ದೀಪ್ತಿ ಶರ್ಮಾ ಅಜೇಯ 16 ಹಾಗೂ ಪೂಜಾ ವಸ್ತ್ರಾಕರ್ ಅಜೇಯ 1 ರನ್ ಕಲೆಹಾಕಿದರು. ಭಾರತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿತು. ಆಫ್ರಿಕಾ ಪರ ನಾನ್‌ಕುಲುಲೆಕೊ ಮ್ಲಾಬಾ 2 ವಿಕೆಟ್ ಪಡೆದರೆ, ಅಯಬೊಂಗ ಖಾಕ ಹಾಗೂ ನಾಯಕಿ ಸ್ಯುನ್ ಲುಸ್ ತಲಾ 1 ವಿಕೆಟ್ ಪಡೆದರು.

ಕೊನೆಯಲ್ಲಿ ದೀಪ್ತಿ ಶರ್ಮಾ ಅಜೇಯ 16 ಹಾಗೂ ಪೂಜಾ ವಸ್ತ್ರಾಕರ್ ಅಜೇಯ 1 ರನ್ ಕಲೆಹಾಕಿದರು. ಭಾರತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿತು. ಆಫ್ರಿಕಾ ಪರ ನಾನ್‌ಕುಲುಲೆಕೊ ಮ್ಲಾಬಾ 2 ವಿಕೆಟ್ ಪಡೆದರೆ, ಅಯಬೊಂಗ ಖಾಕ ಹಾಗೂ ನಾಯಕಿ ಸ್ಯುನ್ ಲುಸ್ ತಲಾ 1 ವಿಕೆಟ್ ಪಡೆದರು.

5 / 8
ಭಾರತ ಗಳಿಸಿದ ಅಲ್ಪ ಮೊತ್ತವು ಗೆಲುವಿಗೆ ಸಾಕಾಗಲಿಲ್ಲ. ಭಾರತದ ಬೌಲರ್‌ಗಳ ಪ್ರಯತ್ನಕ್ಕೆ ಜಯದ ಫಲ ಸಿಗಲಿಲ್ಲ. ದೀಪ್ತಿ ಶರ್ಮಾ, ಸ್ನೇಹಾ ರಾಣಾ ಹಾಗೂ ರಾಜೇಶ್ವರಿ ಗಾಯಕವಾಡ ಅವರು ಉತ್ತಮ ಬೌಲಿಂಗ್ ಮಾಡಿದರು. ಅದರಿಂದಾಗಿ ದಕ್ಷಿಣ ಆಫ್ರಿಕಾ ತಂಡವು 47ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿತು.

ಭಾರತ ಗಳಿಸಿದ ಅಲ್ಪ ಮೊತ್ತವು ಗೆಲುವಿಗೆ ಸಾಕಾಗಲಿಲ್ಲ. ಭಾರತದ ಬೌಲರ್‌ಗಳ ಪ್ರಯತ್ನಕ್ಕೆ ಜಯದ ಫಲ ಸಿಗಲಿಲ್ಲ. ದೀಪ್ತಿ ಶರ್ಮಾ, ಸ್ನೇಹಾ ರಾಣಾ ಹಾಗೂ ರಾಜೇಶ್ವರಿ ಗಾಯಕವಾಡ ಅವರು ಉತ್ತಮ ಬೌಲಿಂಗ್ ಮಾಡಿದರು. ಅದರಿಂದಾಗಿ ದಕ್ಷಿಣ ಆಫ್ರಿಕಾ ತಂಡವು 47ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿತು.

6 / 8
ಆದರೆ ಈ ಹಂತದಲ್ಲಿ ಏಕಾಂಗಿ ಹೋರಾಟ ಮಾಡಿದ ಐದನೇ ಕ್ರಮಾಂಕದ ಶ್ಲೊಯೆ ಟ್ರಯಾನ್ ತಂಡಕ್ಕೆ ಗೆಲುವು ತಂದುಕೊಟ್ಟರು. ಟ್ರಯಾನ್ ಕೇವಲ 32 ಎಸೆತಗಳಲ್ಲಿ 6 ಫೋರ್, 2 ಸಿಕ್ಸರ್​ನೊಂದಿಗೆ ಅಜೇಯ 57 ರನ್ ಚಚ್ಚಿದರು.

ಆದರೆ ಈ ಹಂತದಲ್ಲಿ ಏಕಾಂಗಿ ಹೋರಾಟ ಮಾಡಿದ ಐದನೇ ಕ್ರಮಾಂಕದ ಶ್ಲೊಯೆ ಟ್ರಯಾನ್ ತಂಡಕ್ಕೆ ಗೆಲುವು ತಂದುಕೊಟ್ಟರು. ಟ್ರಯಾನ್ ಕೇವಲ 32 ಎಸೆತಗಳಲ್ಲಿ 6 ಫೋರ್, 2 ಸಿಕ್ಸರ್​ನೊಂದಿಗೆ ಅಜೇಯ 57 ರನ್ ಚಚ್ಚಿದರು.

7 / 8
ದಕ್ಷಿಣ ಆಫ್ರಿಕಾ 18 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 113 ರನ್ ಬಾರಿಸಿ 5 ವಿಕೆಟ್​ಗಳ ಜಯ ಸಾಧಿಸಿತು. ಭಾರತ ಪರ ಸ್ನೇಹ್ ರಾಣ 2 ವಿಕೆಟ್ ಪಡೆದರೆ, ದೀಪ್ತಿ ಶರ್ಮಾ, ರಾಜೇಶ್ವರಿ ಹಾಗೂ ರೇಣುಕಾ ಸಿಂಗ್ ತಲಾ 1 ವಿಕೆಟ್ ಪಡೆದರು.

ದಕ್ಷಿಣ ಆಫ್ರಿಕಾ 18 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 113 ರನ್ ಬಾರಿಸಿ 5 ವಿಕೆಟ್​ಗಳ ಜಯ ಸಾಧಿಸಿತು. ಭಾರತ ಪರ ಸ್ನೇಹ್ ರಾಣ 2 ವಿಕೆಟ್ ಪಡೆದರೆ, ದೀಪ್ತಿ ಶರ್ಮಾ, ರಾಜೇಶ್ವರಿ ಹಾಗೂ ರೇಣುಕಾ ಸಿಂಗ್ ತಲಾ 1 ವಿಕೆಟ್ ಪಡೆದರು.

8 / 8
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ