AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನಿಗೆ ಬಿಗ್ ರಿಲೀಫ್; 3 ವರ್ಷಗಳ ನಿಷೇಧ ತೆರವು..!

KCA Lifts Sreesanth's Ban: ಕೇರಳ ಕ್ರಿಕೆಟ್ ಅಸೋಸಿಯೇಷನ್ ಶ್ರೀಶಾಂತ್ ಮೇಲೆ ಹೇರಿದ್ದ 3 ವರ್ಷಗಳ ನಿಷೇಧವನ್ನು ತೆರವುಗೊಳಿಸಿದೆ. ಸಂಜು ಸ್ಯಾಮ್ಸನ್ ಕುರಿತ ಹಿಂದಿನ ಹೇಳಿಕೆಗಳಿಗಾಗಿ ಶ್ರೀಶಾಂತ್ ಕ್ಷಮೆಯಾಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ಶ್ರೀಶಾಂತ್, ಕೆಸಿಎಲ್ ಸೀಸನ್ 3 ರಲ್ಲಿ ಏರೀಸ್ ಕೊಲ್ಲಂ ಸೈಲರ್ಸ್ ಫ್ರಾಂಚೈಸಿಯ ಸಹ-ಮಾಲೀಕರಾಗಿ ಮುಂದುವರಿಯಲಿದ್ದಾರೆ, ಕ್ರಿಕೆಟ್ ವಲಯದಲ್ಲಿ ಇದು ಒಂದು ದೊಡ್ಡ ಬೆಳವಣಿಗೆ.

ಪೃಥ್ವಿಶಂಕರ
|

Updated on: Jul 01, 2026 | 10:24 PM

Share
ಕೇರಳ ಕ್ರಿಕೆಟ್​ನಿಂದ ಮೂರು ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ಎಸ್. ಶ್ರೀಶಾಂತ್​ಗೆ ಸುಮಾರು ಒಂದು ವರ್ಷದ ನಂತರ ಬಿಗ್ ರಿಲೀಫ್ ಸಿಕ್ಕಿದೆ. ಕೇರಳ ಕ್ರಿಕೆಟ್ ಅಸೋಸಿಯೇಷನ್​ನ ಸಾಮಾನ್ಯ ಸಭೆಯಲ್ಲಿ ಶ್ರೀಶಾಂತ್ ಕ್ಷಮೆಯಾಚಿಸಿದ ಬಳಿಕ ಅವರ ವಿರುದ್ಧ ಹೇರಿದ್ದ ನಿಷೇಧದ ಶಿಕ್ಷೆಯನ್ನು ತೆರವುಗೊಳಿಸಲಾಗಿದೆ.

ಕೇರಳ ಕ್ರಿಕೆಟ್​ನಿಂದ ಮೂರು ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ಎಸ್. ಶ್ರೀಶಾಂತ್​ಗೆ ಸುಮಾರು ಒಂದು ವರ್ಷದ ನಂತರ ಬಿಗ್ ರಿಲೀಫ್ ಸಿಕ್ಕಿದೆ. ಕೇರಳ ಕ್ರಿಕೆಟ್ ಅಸೋಸಿಯೇಷನ್​ನ ಸಾಮಾನ್ಯ ಸಭೆಯಲ್ಲಿ ಶ್ರೀಶಾಂತ್ ಕ್ಷಮೆಯಾಚಿಸಿದ ಬಳಿಕ ಅವರ ವಿರುದ್ಧ ಹೇರಿದ್ದ ನಿಷೇಧದ ಶಿಕ್ಷೆಯನ್ನು ತೆರವುಗೊಳಿಸಲಾಗಿದೆ.

1 / 5
ವಾಸ್ತವವಾಗಿ ಕಳೆದ ವರ್ಷ ಸಂಜು ಸ್ಯಾಮ್ಸನ್ ಅವರನ್ನು ವಿಜಯ್ ಹಜಾರೆ ಟ್ರೋಫಿಗೆ ಕೇರಳ ತಂಡದಲ್ಲಿ ಆಯ್ಕೆ ಮಾಡದಿರುವುದರ ಬಗ್ಗೆ ಅಸಮಾಧಾನಗೊಂಡಿದ್ದ ಶ್ರೀಶಾಂತ್ ಕೇರಳ ಕ್ರಿಕೆಟ್ ಅಸೋಸಿಯೇಷನ್ ವಿರುದ್ಧ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದರು. ಹೀಗಾಗಿ ಅವರನ್ನು 3 ವರ್ಷಗಳ ಕಾಲ ಕೆರಳ ಕ್ರಿಕೆಟ್​ನಿಂದ ಬ್ಯಾನ್ ಮಾಡಲಾಗಿತ್ತು.

ವಾಸ್ತವವಾಗಿ ಕಳೆದ ವರ್ಷ ಸಂಜು ಸ್ಯಾಮ್ಸನ್ ಅವರನ್ನು ವಿಜಯ್ ಹಜಾರೆ ಟ್ರೋಫಿಗೆ ಕೇರಳ ತಂಡದಲ್ಲಿ ಆಯ್ಕೆ ಮಾಡದಿರುವುದರ ಬಗ್ಗೆ ಅಸಮಾಧಾನಗೊಂಡಿದ್ದ ಶ್ರೀಶಾಂತ್ ಕೇರಳ ಕ್ರಿಕೆಟ್ ಅಸೋಸಿಯೇಷನ್ ವಿರುದ್ಧ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದರು. ಹೀಗಾಗಿ ಅವರನ್ನು 3 ವರ್ಷಗಳ ಕಾಲ ಕೆರಳ ಕ್ರಿಕೆಟ್​ನಿಂದ ಬ್ಯಾನ್ ಮಾಡಲಾಗಿತ್ತು.

2 / 5
ಇದೀಗ ಶ್ರೀಶಾಂತ್ ಕೆಸಿಎಲ್ ಮುಂದೆ ಕ್ಷಮೆಯಾಚಿಸಿದ್ದು, ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕೇರಳ ಕ್ರಿಕೆಟ್ ಅಸೋಸಿಯೇಷನ್, ವಿಶೇಷ ಸಾಮಾನ್ಯ ಸಭೆಯಲ್ಲಿ ಶ್ರೀಶಾಂತ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಶ್ರೀಶಾಂತ್, ಕೆಸಿಎ ವಿರುದ್ಧದ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದೀಗ ಶ್ರೀಶಾಂತ್ ಕೆಸಿಎಲ್ ಮುಂದೆ ಕ್ಷಮೆಯಾಚಿಸಿದ್ದು, ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕೇರಳ ಕ್ರಿಕೆಟ್ ಅಸೋಸಿಯೇಷನ್, ವಿಶೇಷ ಸಾಮಾನ್ಯ ಸಭೆಯಲ್ಲಿ ಶ್ರೀಶಾಂತ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಶ್ರೀಶಾಂತ್, ಕೆಸಿಎ ವಿರುದ್ಧದ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

3 / 5
ನಿಷೇಧ ತೆರವಾದ ಬಳಿಕ ಶ್ರೀಶಾಂತ್, ಕೇರಳ ಕ್ರಿಕೆಟ್ ಲೀಗ್ ಸೀಸನ್ 3 ರಲ್ಲಿ ಏರೀಸ್ ಕೊಲ್ಲಂ ಸೈಲರ್ಸ್ ಫ್ರಾಂಚೈಸಿಯ ಸಹ-ಮಾಲೀಕರಾಗಿ ಮುಂದುವರಿಯಲಿದ್ದಾರೆ. ಕಳೆದ ಕೆಸಿಎಲ್ ಸೀಸನ್‌ಗೂ ಮೊದಲು ಕೆಸಿಎ ಅವರ ಮೇಲೆ ನಿಷೇಧ ಹೇರಿತ್ತು. ಭಾರತದ ಮಾಜಿ ವೇಗದ ಬೌಲರ್ ಶ್ರೀಶಾಂತ್ ದೇಶದ ಮೂರು ಅಂತರರಾಷ್ಟ್ರೀಯ ಸ್ವರೂಪಗಳಲ್ಲಿ ಆಡಿದ್ದು, 27 ಟೆಸ್ಟ್, 53 ಏಕದಿನ ಮತ್ತು 10 ಟಿ20ಪಂದ್ಯಗಳನ್ನು ಆಡಿದ್ದಾರೆ.

ನಿಷೇಧ ತೆರವಾದ ಬಳಿಕ ಶ್ರೀಶಾಂತ್, ಕೇರಳ ಕ್ರಿಕೆಟ್ ಲೀಗ್ ಸೀಸನ್ 3 ರಲ್ಲಿ ಏರೀಸ್ ಕೊಲ್ಲಂ ಸೈಲರ್ಸ್ ಫ್ರಾಂಚೈಸಿಯ ಸಹ-ಮಾಲೀಕರಾಗಿ ಮುಂದುವರಿಯಲಿದ್ದಾರೆ. ಕಳೆದ ಕೆಸಿಎಲ್ ಸೀಸನ್‌ಗೂ ಮೊದಲು ಕೆಸಿಎ ಅವರ ಮೇಲೆ ನಿಷೇಧ ಹೇರಿತ್ತು. ಭಾರತದ ಮಾಜಿ ವೇಗದ ಬೌಲರ್ ಶ್ರೀಶಾಂತ್ ದೇಶದ ಮೂರು ಅಂತರರಾಷ್ಟ್ರೀಯ ಸ್ವರೂಪಗಳಲ್ಲಿ ಆಡಿದ್ದು, 27 ಟೆಸ್ಟ್, 53 ಏಕದಿನ ಮತ್ತು 10 ಟಿ20ಪಂದ್ಯಗಳನ್ನು ಆಡಿದ್ದಾರೆ.

4 / 5
ಶ್ರೀಶಾಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ 37.59 ಸರಾಸರಿಯಲ್ಲಿ 87 ವಿಕೆಟ್‌ಗಳನ್ನು ಕಬಳಿಸಿದ್ದರೆ, ಏಕದಿನ ಕ್ರಿಕೆಟ್‌ನಲ್ಲಿ, 33.44 ಸರಾಸರಿಯಲ್ಲಿ 75 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಉಳಿದಂತೆ 10 ಟಿ20 ಪಂದ್ಯಗಳಲ್ಲಿ ಏಳು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಶ್ರೀಶಾಂತ್ ದೇಶೀಯ ಕ್ರಿಕೆಟ್‌ನಲ್ಲಿ 74 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು 213 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಇದಲ್ಲದೆ, ಅವರು 92 ಲಿಸ್ಟ್ ಎ ಪಂದ್ಯಗಳಲ್ಲಿ 124 ವಿಕೆಟ್‌ಗಳು ಮತ್ತು 65 ಟಿ20 ಪಂದ್ಯಗಳಲ್ಲಿ 54 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಶ್ರೀಶಾಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ 37.59 ಸರಾಸರಿಯಲ್ಲಿ 87 ವಿಕೆಟ್‌ಗಳನ್ನು ಕಬಳಿಸಿದ್ದರೆ, ಏಕದಿನ ಕ್ರಿಕೆಟ್‌ನಲ್ಲಿ, 33.44 ಸರಾಸರಿಯಲ್ಲಿ 75 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಉಳಿದಂತೆ 10 ಟಿ20 ಪಂದ್ಯಗಳಲ್ಲಿ ಏಳು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಶ್ರೀಶಾಂತ್ ದೇಶೀಯ ಕ್ರಿಕೆಟ್‌ನಲ್ಲಿ 74 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು 213 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಇದಲ್ಲದೆ, ಅವರು 92 ಲಿಸ್ಟ್ ಎ ಪಂದ್ಯಗಳಲ್ಲಿ 124 ವಿಕೆಟ್‌ಗಳು ಮತ್ತು 65 ಟಿ20 ಪಂದ್ಯಗಳಲ್ಲಿ 54 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

5 / 5
Follow Us
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ