AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs LSG: W,W,W,W.. ಸನ್‌ರೈಸರ್ಸ್​ಗೆ ಆರಂಭದಲ್ಲೇ ಮರ್ಮಾಘಾತ

SRH Crumbles to 4/26 Against LSG : ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್‌ ತಂಡವು ಆರಂಭದಲ್ಲೇ ಆಘಾತಕ್ಕೊಳಗಾಗಿದೆ. ಮೊದಲು ಬೌಲಿಂಗ್ ಆಯ್ದುಕೊಂಡ ಲಕ್ನೋ, ಕೇವಲ 26 ರನ್‌ಗಳಿಗೆ ಸನ್‌ರೈಸರ್ಸ್‌ನ ಪ್ರಮುಖ 4 ವಿಕೆಟ್‌ಗಳನ್ನು ಕಬಳಿಸಿತು. ಮೊಹಮ್ಮದ್ ಶಮಿ ಅವರ ಮಾರಕ ಬೌಲಿಂಗ್‌ನಿಂದ ಅಭಿಷೇಕ್ ಮತ್ತು ಟ್ರಾವಿಸ್ ಹೆಡ್ ಬೇಗನೆ ವಿಕೆಟ್ ಒಪ್ಪಿಸಿದರು. ಸನ್‌ರೈಸರ್ಸ್‌ನ ನಾಯಕ ಇಶಾನ್ ಕಿಶನ್ ಕೂಡ ಅಲ್ಪ ಮೊತ್ತಕ್ಕೆ ಔಟಾಗಿದ್ದಾರೆ.

ಪೃಥ್ವಿಶಂಕರ
|

Updated on: Apr 05, 2026 | 4:21 PM

Share
ತವರಿನಲ್ಲಿ ತನ್ನ ಮೊದಲ ಪಂದ್ಯವನ್ನಾಡುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಸನ್‌ರೈಸರ್ಸ್ ತಂಡಕ್ಕೆ ಆರಂಭದಲ್ಲೇ 4 ಆಘಾತಗಳು ಎದುರಾಗಿವೆ.

ತವರಿನಲ್ಲಿ ತನ್ನ ಮೊದಲ ಪಂದ್ಯವನ್ನಾಡುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಸನ್‌ರೈಸರ್ಸ್ ತಂಡಕ್ಕೆ ಆರಂಭದಲ್ಲೇ 4 ಆಘಾತಗಳು ಎದುರಾಗಿವೆ.

1 / 5
ಲೀಗ್​ನಲ್ಲಿ ಮೂರನೇ ಪಂದ್ಯವನ್ನಾಡುತ್ತಿರುವಸನ್‌ರೈಸರ್ಸ್ ತಂಡಕ್ಕೆ ಮೊದಲ ಪಂದ್ಯಸಲ್ಲಿ ಸಾಧಾರಣ ಆರಂಭ ಸಿಕ್ಕಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆರಂಭಿಕರಿಬ್ಬರು ಅಬ್ಬರಿಸಿದ್ದರು. ಹೀಗಾಗಿ ಮೂರನೇ ಪಂದ್ಯದಲ್ಲೂ ಅದನ್ನೇ ನಿರೀಕ್ಷಿಸಲಾಗಿತ್ತು. ಆದರೆ ಮೂರನೇ ಪಂದ್ಯದಲ್ಲಿ ಎಲ್ಲಾ ಲೆಕ್ಕಾಚಾರಗಳನ್ನು ಲಕ್ನೋ ವೇಗಿ ಮೊಹಮ್ಮದ್ ಶಮಿ ಬುಡಮೇಲು ಮಾಡಿದರು.

ಲೀಗ್​ನಲ್ಲಿ ಮೂರನೇ ಪಂದ್ಯವನ್ನಾಡುತ್ತಿರುವಸನ್‌ರೈಸರ್ಸ್ ತಂಡಕ್ಕೆ ಮೊದಲ ಪಂದ್ಯಸಲ್ಲಿ ಸಾಧಾರಣ ಆರಂಭ ಸಿಕ್ಕಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆರಂಭಿಕರಿಬ್ಬರು ಅಬ್ಬರಿಸಿದ್ದರು. ಹೀಗಾಗಿ ಮೂರನೇ ಪಂದ್ಯದಲ್ಲೂ ಅದನ್ನೇ ನಿರೀಕ್ಷಿಸಲಾಗಿತ್ತು. ಆದರೆ ಮೂರನೇ ಪಂದ್ಯದಲ್ಲಿ ಎಲ್ಲಾ ಲೆಕ್ಕಾಚಾರಗಳನ್ನು ಲಕ್ನೋ ವೇಗಿ ಮೊಹಮ್ಮದ್ ಶಮಿ ಬುಡಮೇಲು ಮಾಡಿದರು.

2 / 5
ಲಕ್ನೋ ಪರ ಬೌಲಿಂಗ್ ಆರಂಭಿಸಿದ ಮೊಹಮ್ಮದ್ ಶಮಿ ಮೊದಲ ಓವರ್​ನಲ್ಲೇ ಅಭಿಷೇಕ್ ವಿಕೆಟ್ ಉರುಳಿಸಿದರು. ಅಭಿಷೇಕ್​ಗೆ ಈ ಪಂದ್ಯದಲ್ಲಿ ಖಾತೆಯನ್ನು ತೆರೆಯಲು ಸಾಧ್ಯವಾಗಲಿಲ್ಲ. ಶಮಿ ಎಸೆದ ಈ ಓವರ್​ನ ಕೊನೆಯ ಎಸೆತದಲ್ಲಿ ಅಭಿಷೇಕ್, ಸ್ಲಿಪ್​ನಲ್ಲಿ ನಿಂತಿದ್ದ ಫಿಲ್ಡರ್​ಗೆ ಖ್ಯಾಚಿತ್ತು ನಿರ್ಗಮಿಸಿದರು. ಆಗ ತಂಡದ ಮೊತ್ತ ಕೇವಲ 1 ರನ್ ಆಗಿತ್ತು.

ಲಕ್ನೋ ಪರ ಬೌಲಿಂಗ್ ಆರಂಭಿಸಿದ ಮೊಹಮ್ಮದ್ ಶಮಿ ಮೊದಲ ಓವರ್​ನಲ್ಲೇ ಅಭಿಷೇಕ್ ವಿಕೆಟ್ ಉರುಳಿಸಿದರು. ಅಭಿಷೇಕ್​ಗೆ ಈ ಪಂದ್ಯದಲ್ಲಿ ಖಾತೆಯನ್ನು ತೆರೆಯಲು ಸಾಧ್ಯವಾಗಲಿಲ್ಲ. ಶಮಿ ಎಸೆದ ಈ ಓವರ್​ನ ಕೊನೆಯ ಎಸೆತದಲ್ಲಿ ಅಭಿಷೇಕ್, ಸ್ಲಿಪ್​ನಲ್ಲಿ ನಿಂತಿದ್ದ ಫಿಲ್ಡರ್​ಗೆ ಖ್ಯಾಚಿತ್ತು ನಿರ್ಗಮಿಸಿದರು. ಆಗ ತಂಡದ ಮೊತ್ತ ಕೇವಲ 1 ರನ್ ಆಗಿತ್ತು.

3 / 5
ಇನ್ನಿಂಗ್ಸ್​ನ ಮೂರನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಶಮಿ, ಈ ಓವರ್​ನಲ್ಲಿ ಮತ್ತೊಬ್ಬ ಆರಂಭಿಕ ಟ್ರಾವಿಸ್ ಹೆಡ್​ಗೆ ಖೆಡ್ಡಾ ತೊಡಿದರು. ಶಮಿಯ ನಿಧಾನಗತಿಯ ಎಸೆತವನ್ನು ಅರಿಯದ ಹೆಡ್, ಖ್ಯಾಚಿತ್ತು ಔಟಾದರು. ಆಗ ತಂಡದ ಮೊತ್ತ ಕೇವಲ 8 ರನ್​ಗಳಾಗಿತ್ತು.

ಇನ್ನಿಂಗ್ಸ್​ನ ಮೂರನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಶಮಿ, ಈ ಓವರ್​ನಲ್ಲಿ ಮತ್ತೊಬ್ಬ ಆರಂಭಿಕ ಟ್ರಾವಿಸ್ ಹೆಡ್​ಗೆ ಖೆಡ್ಡಾ ತೊಡಿದರು. ಶಮಿಯ ನಿಧಾನಗತಿಯ ಎಸೆತವನ್ನು ಅರಿಯದ ಹೆಡ್, ಖ್ಯಾಚಿತ್ತು ಔಟಾದರು. ಆಗ ತಂಡದ ಮೊತ್ತ ಕೇವಲ 8 ರನ್​ಗಳಾಗಿತ್ತು.

4 / 5
ಶಮಿ ಬಳಿಕ ಬೌಲಿಂಗ್​ಗೆ ಬಂದ ಪ್ರಿನ್ಸ್ ಯಾದವ್, ಈ ಓವರ್​ನ ಮೂರನೇ ಎಸೆತದಲ್ಲಿ ಎಸ್​ಆರ್​ಎಚ್ ನಾಯಕ ಇಶಾನ್ ಕಿಶನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಕಿಶನ್ ಕೇವಲ 1 ರನ್ ಬಾರಿಸಿ ಔಟಾದರು. ಸನ್‌ರೈಸರ್ಸ್ ಪರ ಮೊದಲ ಪಂದ್ಯವನ್ನಾಡಿದ ಲಿವಿಂಗ್​ಸ್ಟೋನ್ ಕೂಡ 14 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಸನ್‌ರೈಸರ್ಸ್ ತಂಡ 26 ರನ್​​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡಿತು.

ಶಮಿ ಬಳಿಕ ಬೌಲಿಂಗ್​ಗೆ ಬಂದ ಪ್ರಿನ್ಸ್ ಯಾದವ್, ಈ ಓವರ್​ನ ಮೂರನೇ ಎಸೆತದಲ್ಲಿ ಎಸ್​ಆರ್​ಎಚ್ ನಾಯಕ ಇಶಾನ್ ಕಿಶನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಕಿಶನ್ ಕೇವಲ 1 ರನ್ ಬಾರಿಸಿ ಔಟಾದರು. ಸನ್‌ರೈಸರ್ಸ್ ಪರ ಮೊದಲ ಪಂದ್ಯವನ್ನಾಡಿದ ಲಿವಿಂಗ್​ಸ್ಟೋನ್ ಕೂಡ 14 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಸನ್‌ರೈಸರ್ಸ್ ತಂಡ 26 ರನ್​​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡಿತು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?