AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಇಬ್ಬರು ಆಟಗಾರರು ನಿವೃತ್ತಿ

ODI retirement: ಬುಧವಾರ (ಮಾ.5) ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಇಬ್ಬರು ಆಟಗಾರರು ನಿವೃತ್ತಿ ಘೋಷಿಸಿದ್ದಾರೆ. ಅದು ಸಹ ಎರಡು ತಂಡಗಳ ಅತ್ಯಂತ ಹಿರಿಯ ಆಟಗಾರರು ಎಂಬುದು ವಿಶೇಷ. ಅಂದರೆ ಬಾಂಗ್ಲಾದೇಶ್ ತಂಡದಲ್ಲಿದ್ದ ವಿಕೆಟ್ ಕೀಪರ್ ಬ್ಯಾಟರ್ ಮುಶ್ಫಿಕುರ್ ರಹೀಮ್ ಹಾಗೂ ಆಸ್ಟ್ರೇಲಿಯಾ ತಂಡದ ಅನುಭವಿ ಆಟಗಾರ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 06, 2025 | 7:30 AM

Share
ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆ ಏಕದಿನ ಕ್ರಿಕೆಟ್​ನಿಂದ ಇಬ್ಬರು ಆಟಗಾರರು ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ನಿವೃತ್ತಿ ಘೋಷಿಸಿದ್ದರೆ, ಅತ್ತ ಬಾಂಗ್ಲಾದೇಶ್ ತಂಡದ ಹಿರಿಯ ಆಟಗಾರ ಮುಶ್ಫಿಕುರ್ ರಹೀಮ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆ ಏಕದಿನ ಕ್ರಿಕೆಟ್​ನಿಂದ ಇಬ್ಬರು ಆಟಗಾರರು ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ನಿವೃತ್ತಿ ಘೋಷಿಸಿದ್ದರೆ, ಅತ್ತ ಬಾಂಗ್ಲಾದೇಶ್ ತಂಡದ ಹಿರಿಯ ಆಟಗಾರ ಮುಶ್ಫಿಕುರ್ ರಹೀಮ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

1 / 5
ಆಸ್ಟ್ರೇಲಿಯಾ ಪರ 170 ಏಕದಿನ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 153 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಶತಕ ಹಾಗೂ 35 ಅರ್ಧಶತಕಗಳೊಂದಿಗೆ ಒಟ್ಟು 5800 ರನ್ ಕಲೆಹಾಕಿದ್ದಾರೆ. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಆಸ್ಟ್ರೇಲಿಯಾ ಪರ 170 ಏಕದಿನ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 153 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಶತಕ ಹಾಗೂ 35 ಅರ್ಧಶತಕಗಳೊಂದಿಗೆ ಒಟ್ಟು 5800 ರನ್ ಕಲೆಹಾಕಿದ್ದಾರೆ. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

2 / 5
ಇನ್ನು ಬಾಂಗ್ಲಾದೇಶ್ ಪರ 274 ಏಕದಿನ ಪಂದ್ಯಗಳನ್ನಾಡಿರುವ ಮುಶ್ಫಿಕುರ್ ರಹೀಮ್ 256	ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 7795 ರನ್ ಕಲೆಹಾಕಿದ್ದಾರೆ. ಇದರ ನಡುವೆ 9 ಶತಕ ಹಾಗೂ 49 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇನ್ನು ಬಾಂಗ್ಲಾದೇಶ್ ಪರ 274 ಏಕದಿನ ಪಂದ್ಯಗಳನ್ನಾಡಿರುವ ಮುಶ್ಫಿಕುರ್ ರಹೀಮ್ 256 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 7795 ರನ್ ಕಲೆಹಾಕಿದ್ದಾರೆ. ಇದರ ನಡುವೆ 9 ಶತಕ ಹಾಗೂ 49 ಅರ್ಧಶತಕಗಳನ್ನು ಬಾರಿಸಿದ್ದಾರೆ.

3 / 5
ಇದೀಗ 37ನೇ ವಯಸ್ಸಿಗೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಮುಶ್ಪಿಕುರ್ ರಹೀಮ್ ಮುಂಬರುವ ದಿನಗಳಲ್ಲಿ ಟೆಸ್ಟ್ ತಂಡದಲ್ಲಿ ಮುಂದುವರೆಯಲು ನಿರ್ಧರಿಸಿದ್ದಾರೆ. ಅತ್ತ ಸ್ಟೀವ್ ಸ್ಮಿತ್ ಕೂಡ ಟೆಸ್ಟ್ ಹಾಗೂ ಟಿ20 ತಂಡಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ಇದೀಗ 37ನೇ ವಯಸ್ಸಿಗೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಮುಶ್ಪಿಕುರ್ ರಹೀಮ್ ಮುಂಬರುವ ದಿನಗಳಲ್ಲಿ ಟೆಸ್ಟ್ ತಂಡದಲ್ಲಿ ಮುಂದುವರೆಯಲು ನಿರ್ಧರಿಸಿದ್ದಾರೆ. ಅತ್ತ ಸ್ಟೀವ್ ಸ್ಮಿತ್ ಕೂಡ ಟೆಸ್ಟ್ ಹಾಗೂ ಟಿ20 ತಂಡಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

4 / 5
ಆದರೆ 2024ರ ಟಿ20 ವಿಶ್ವಕಪ್​ ತಂಡದಲ್ಲಿ ಸ್ಟೀವ್ ಸ್ಮಿತ್​ಗೆ ಸ್ಥಾನ ನೀಡಲಾಗಿರಲಿಲ್ಲ. ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಮುಂಬರುವ ದಿನಗಳಲ್ಲಿ ಸ್ಮಿತ್ ಅವರನ್ನು ಟಿ20 ಕ್ರಿಕೆಟ್​ಗೆ ಪರಿಗಣಿಸುವ ಸಾಧ್ಯತೆಯಿಲ್ಲ. ಅದರಂತೆ ಸ್ಟೀವ್ ಸ್ಮಿತ್ ಹಾಗೂ ಮುಶ್ಫಿಕುರ್ ರಹೀಮ್ ಮುಂಬರುವ ದಿನಗಳಲ್ಲಿ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ ಎನ್ನಬಹುದು.

ಆದರೆ 2024ರ ಟಿ20 ವಿಶ್ವಕಪ್​ ತಂಡದಲ್ಲಿ ಸ್ಟೀವ್ ಸ್ಮಿತ್​ಗೆ ಸ್ಥಾನ ನೀಡಲಾಗಿರಲಿಲ್ಲ. ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಮುಂಬರುವ ದಿನಗಳಲ್ಲಿ ಸ್ಮಿತ್ ಅವರನ್ನು ಟಿ20 ಕ್ರಿಕೆಟ್​ಗೆ ಪರಿಗಣಿಸುವ ಸಾಧ್ಯತೆಯಿಲ್ಲ. ಅದರಂತೆ ಸ್ಟೀವ್ ಸ್ಮಿತ್ ಹಾಗೂ ಮುಶ್ಫಿಕುರ್ ರಹೀಮ್ ಮುಂಬರುವ ದಿನಗಳಲ್ಲಿ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ ಎನ್ನಬಹುದು.

5 / 5
Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​