Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಇಬ್ಬರು ಆಟಗಾರರು ನಿವೃತ್ತಿ

ODI retirement: ಬುಧವಾರ (ಮಾ.5) ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಇಬ್ಬರು ಆಟಗಾರರು ನಿವೃತ್ತಿ ಘೋಷಿಸಿದ್ದಾರೆ. ಅದು ಸಹ ಎರಡು ತಂಡಗಳ ಅತ್ಯಂತ ಹಿರಿಯ ಆಟಗಾರರು ಎಂಬುದು ವಿಶೇಷ. ಅಂದರೆ ಬಾಂಗ್ಲಾದೇಶ್ ತಂಡದಲ್ಲಿದ್ದ ವಿಕೆಟ್ ಕೀಪರ್ ಬ್ಯಾಟರ್ ಮುಶ್ಫಿಕುರ್ ರಹೀಮ್ ಹಾಗೂ ಆಸ್ಟ್ರೇಲಿಯಾ ತಂಡದ ಅನುಭವಿ ಆಟಗಾರ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 06, 2025 | 7:30 AM

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆ ಏಕದಿನ ಕ್ರಿಕೆಟ್​ನಿಂದ ಇಬ್ಬರು ಆಟಗಾರರು ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ನಿವೃತ್ತಿ ಘೋಷಿಸಿದ್ದರೆ, ಅತ್ತ ಬಾಂಗ್ಲಾದೇಶ್ ತಂಡದ ಹಿರಿಯ ಆಟಗಾರ ಮುಶ್ಫಿಕುರ್ ರಹೀಮ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆ ಏಕದಿನ ಕ್ರಿಕೆಟ್​ನಿಂದ ಇಬ್ಬರು ಆಟಗಾರರು ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ನಿವೃತ್ತಿ ಘೋಷಿಸಿದ್ದರೆ, ಅತ್ತ ಬಾಂಗ್ಲಾದೇಶ್ ತಂಡದ ಹಿರಿಯ ಆಟಗಾರ ಮುಶ್ಫಿಕುರ್ ರಹೀಮ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

1 / 5
ಆಸ್ಟ್ರೇಲಿಯಾ ಪರ 170 ಏಕದಿನ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 153 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಶತಕ ಹಾಗೂ 35 ಅರ್ಧಶತಕಗಳೊಂದಿಗೆ ಒಟ್ಟು 5800 ರನ್ ಕಲೆಹಾಕಿದ್ದಾರೆ. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಆಸ್ಟ್ರೇಲಿಯಾ ಪರ 170 ಏಕದಿನ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 153 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಶತಕ ಹಾಗೂ 35 ಅರ್ಧಶತಕಗಳೊಂದಿಗೆ ಒಟ್ಟು 5800 ರನ್ ಕಲೆಹಾಕಿದ್ದಾರೆ. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

2 / 5
ಇನ್ನು ಬಾಂಗ್ಲಾದೇಶ್ ಪರ 274 ಏಕದಿನ ಪಂದ್ಯಗಳನ್ನಾಡಿರುವ ಮುಶ್ಫಿಕುರ್ ರಹೀಮ್ 256	ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 7795 ರನ್ ಕಲೆಹಾಕಿದ್ದಾರೆ. ಇದರ ನಡುವೆ 9 ಶತಕ ಹಾಗೂ 49 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇನ್ನು ಬಾಂಗ್ಲಾದೇಶ್ ಪರ 274 ಏಕದಿನ ಪಂದ್ಯಗಳನ್ನಾಡಿರುವ ಮುಶ್ಫಿಕುರ್ ರಹೀಮ್ 256 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 7795 ರನ್ ಕಲೆಹಾಕಿದ್ದಾರೆ. ಇದರ ನಡುವೆ 9 ಶತಕ ಹಾಗೂ 49 ಅರ್ಧಶತಕಗಳನ್ನು ಬಾರಿಸಿದ್ದಾರೆ.

3 / 5
ಇದೀಗ 37ನೇ ವಯಸ್ಸಿಗೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಮುಶ್ಪಿಕುರ್ ರಹೀಮ್ ಮುಂಬರುವ ದಿನಗಳಲ್ಲಿ ಟೆಸ್ಟ್ ತಂಡದಲ್ಲಿ ಮುಂದುವರೆಯಲು ನಿರ್ಧರಿಸಿದ್ದಾರೆ. ಅತ್ತ ಸ್ಟೀವ್ ಸ್ಮಿತ್ ಕೂಡ ಟೆಸ್ಟ್ ಹಾಗೂ ಟಿ20 ತಂಡಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ಇದೀಗ 37ನೇ ವಯಸ್ಸಿಗೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಮುಶ್ಪಿಕುರ್ ರಹೀಮ್ ಮುಂಬರುವ ದಿನಗಳಲ್ಲಿ ಟೆಸ್ಟ್ ತಂಡದಲ್ಲಿ ಮುಂದುವರೆಯಲು ನಿರ್ಧರಿಸಿದ್ದಾರೆ. ಅತ್ತ ಸ್ಟೀವ್ ಸ್ಮಿತ್ ಕೂಡ ಟೆಸ್ಟ್ ಹಾಗೂ ಟಿ20 ತಂಡಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

4 / 5
ಆದರೆ 2024ರ ಟಿ20 ವಿಶ್ವಕಪ್​ ತಂಡದಲ್ಲಿ ಸ್ಟೀವ್ ಸ್ಮಿತ್​ಗೆ ಸ್ಥಾನ ನೀಡಲಾಗಿರಲಿಲ್ಲ. ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಮುಂಬರುವ ದಿನಗಳಲ್ಲಿ ಸ್ಮಿತ್ ಅವರನ್ನು ಟಿ20 ಕ್ರಿಕೆಟ್​ಗೆ ಪರಿಗಣಿಸುವ ಸಾಧ್ಯತೆಯಿಲ್ಲ. ಅದರಂತೆ ಸ್ಟೀವ್ ಸ್ಮಿತ್ ಹಾಗೂ ಮುಶ್ಫಿಕುರ್ ರಹೀಮ್ ಮುಂಬರುವ ದಿನಗಳಲ್ಲಿ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ ಎನ್ನಬಹುದು.

ಆದರೆ 2024ರ ಟಿ20 ವಿಶ್ವಕಪ್​ ತಂಡದಲ್ಲಿ ಸ್ಟೀವ್ ಸ್ಮಿತ್​ಗೆ ಸ್ಥಾನ ನೀಡಲಾಗಿರಲಿಲ್ಲ. ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಮುಂಬರುವ ದಿನಗಳಲ್ಲಿ ಸ್ಮಿತ್ ಅವರನ್ನು ಟಿ20 ಕ್ರಿಕೆಟ್​ಗೆ ಪರಿಗಣಿಸುವ ಸಾಧ್ಯತೆಯಿಲ್ಲ. ಅದರಂತೆ ಸ್ಟೀವ್ ಸ್ಮಿತ್ ಹಾಗೂ ಮುಶ್ಫಿಕುರ್ ರಹೀಮ್ ಮುಂಬರುವ ದಿನಗಳಲ್ಲಿ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ ಎನ್ನಬಹುದು.

5 / 5
Follow us
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ