AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್​ಗೆ ಇನ್ನೊಂದು ಚಾನ್ಸ್ ನೀಡಬೇಕೆಂದ ಮಾಜಿ ಕ್ರಿಕೆಟಿಗ

India vs Australia 2nd Test: ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕೆಎಲ್ ರಾಹುಲ್​ಗೆ ಅವಕಾಶ ನೀಡಬೇಕೆಂದು ಮಾಜಿ ಕ್ರಿಕೆಟಿಗ ಆಗ್ರಹಿಸಿದ್ದಾರೆ.

TV9 Web
| Edited By: |

Updated on: Feb 12, 2023 | 9:22 PM

Share
ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾಗೆ ಆರಂಭಿಕ ಆಟಗಾರನ ಚಿಂತೆ ಎದುರಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 20 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಕಳೆದ 8 ಟೆಸ್ಟ್​​ ಇನಿಂಗ್ಸ್​ಗಳಲ್ಲಿ ಕನ್ನಡಿಗ ಗರಿಷ್ಠ ಸ್ಕೋರ್ 23 ಮಾತ್ರ. ಹೀಗಾಗಿಯೇ ಕೆಎಲ್ ರಾಹುಲ್ ಅವರ ಆಯ್ಕೆ ಬಗ್ಗೆ ಪ್ರಶ್ನೆಗಳೆದ್ದಿವೆ.

ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾಗೆ ಆರಂಭಿಕ ಆಟಗಾರನ ಚಿಂತೆ ಎದುರಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 20 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಕಳೆದ 8 ಟೆಸ್ಟ್​​ ಇನಿಂಗ್ಸ್​ಗಳಲ್ಲಿ ಕನ್ನಡಿಗ ಗರಿಷ್ಠ ಸ್ಕೋರ್ 23 ಮಾತ್ರ. ಹೀಗಾಗಿಯೇ ಕೆಎಲ್ ರಾಹುಲ್ ಅವರ ಆಯ್ಕೆ ಬಗ್ಗೆ ಪ್ರಶ್ನೆಗಳೆದ್ದಿವೆ.

1 / 6
ಏಕೆಂದರೆ ತಂಡದಲ್ಲಿ ಇನ್​ ಫಾರ್ಮ್ ಆಟಗಾರ ಶುಭ್​ಮನ್ ಗಿಲ್ ಕೂಡ ಇದ್ದಾರೆ. ಆದರೆ ಕೆಎಲ್ ರಾಹುಲ್ ಅವರಿಗೆ ಅವಕಾಶ ನೀಡಿದ ಪರಿಣಾಮ ಗಿಲ್ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕಾಯಿತು. ಆದರೆ ಸಿಕ್ಕ ಅವಕಾಶದಲ್ಲಿ ರಾಹುಲ್ ವಿಫಲರಾಗಿದ್ದಾರೆ. ಇದೇ ಕಾರಣದಿಂದಾಗಿ 2ನೇ ಪಂದ್ಯದಿಂದ ಕೆಎಲ್​ಆರ್​ ಅವರನ್ನು ಕೈ ಬಿಡಬೇಕೆಂದು ಅನೇಕ ಮಾಜಿ ಕ್ರಿಕೆಟಿಗರು ಆಗ್ರಹಿಸಿದ್ದಾರೆ.

ಏಕೆಂದರೆ ತಂಡದಲ್ಲಿ ಇನ್​ ಫಾರ್ಮ್ ಆಟಗಾರ ಶುಭ್​ಮನ್ ಗಿಲ್ ಕೂಡ ಇದ್ದಾರೆ. ಆದರೆ ಕೆಎಲ್ ರಾಹುಲ್ ಅವರಿಗೆ ಅವಕಾಶ ನೀಡಿದ ಪರಿಣಾಮ ಗಿಲ್ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕಾಯಿತು. ಆದರೆ ಸಿಕ್ಕ ಅವಕಾಶದಲ್ಲಿ ರಾಹುಲ್ ವಿಫಲರಾಗಿದ್ದಾರೆ. ಇದೇ ಕಾರಣದಿಂದಾಗಿ 2ನೇ ಪಂದ್ಯದಿಂದ ಕೆಎಲ್​ಆರ್​ ಅವರನ್ನು ಕೈ ಬಿಡಬೇಕೆಂದು ಅನೇಕ ಮಾಜಿ ಕ್ರಿಕೆಟಿಗರು ಆಗ್ರಹಿಸಿದ್ದಾರೆ.

2 / 6
ಆದರೆ ಇದರ ನಡುವೆ ಕೆಎಲ್ ರಾಹುಲ್ ಅವರಿಗೆ ಇನ್ನೊಂದು ಅವಕಾಶ ನೀಡಬೇಕೆಂಬ ಅಭಿಪ್ರಾಯವನ್ನು ಟೀಮ್ ಇಂಡಿಯಾ ಲೆಜೆಂಡ್ ಸುನೀಲ್ ಗವಾಸ್ಕರ್ ವ್ಯಕ್ತಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಗವಾಸ್ಕರ್, ದೆಹಲಿ ಟೆಸ್ಟ್​ನಲ್ಲಿ ರಾಹುಲ್​ಗೆ ಮತ್ತೊಂದು ಅವಕಾಶ ನೀಡಬೇಕು. ಕೇವಲ 1 ಇನಿಂಗ್ಸ್​ ಮೂಲಕ ಆತನ ಸಾಮರ್ಥ್ಯವನ್ನು ಅಳೆಯಬಾರದು ಎಂದು ತಿಳಿಸಿದ್ದಾರೆ.

ಆದರೆ ಇದರ ನಡುವೆ ಕೆಎಲ್ ರಾಹುಲ್ ಅವರಿಗೆ ಇನ್ನೊಂದು ಅವಕಾಶ ನೀಡಬೇಕೆಂಬ ಅಭಿಪ್ರಾಯವನ್ನು ಟೀಮ್ ಇಂಡಿಯಾ ಲೆಜೆಂಡ್ ಸುನೀಲ್ ಗವಾಸ್ಕರ್ ವ್ಯಕ್ತಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಗವಾಸ್ಕರ್, ದೆಹಲಿ ಟೆಸ್ಟ್​ನಲ್ಲಿ ರಾಹುಲ್​ಗೆ ಮತ್ತೊಂದು ಅವಕಾಶ ನೀಡಬೇಕು. ಕೇವಲ 1 ಇನಿಂಗ್ಸ್​ ಮೂಲಕ ಆತನ ಸಾಮರ್ಥ್ಯವನ್ನು ಅಳೆಯಬಾರದು ಎಂದು ತಿಳಿಸಿದ್ದಾರೆ.

3 / 6
ಕಳೆದ 1-2 ವರ್ಷಗಳಲ್ಲಿ ಅವರು ಬ್ಯಾಟಿಂಗ್ ಮಾಡಿದ ರೀತಿಯನ್ನು ನೋಡಿ, ಆತ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾನೆ. ಹೀಗಾಗಿ ಇನ್ನೂ ಒಂದು ಅವಕಾಶ ನೀಡಬೇಕೆಂದು ನಾನು ಭಾವಿಸುತ್ತೇನೆ. ಅದರಂತೆ ದೆಹಲಿ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಅವರಿಗೆ ಚಾನ್ಸ್ ನೀಡಬೇಕೆಂದು ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.

ಕಳೆದ 1-2 ವರ್ಷಗಳಲ್ಲಿ ಅವರು ಬ್ಯಾಟಿಂಗ್ ಮಾಡಿದ ರೀತಿಯನ್ನು ನೋಡಿ, ಆತ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾನೆ. ಹೀಗಾಗಿ ಇನ್ನೂ ಒಂದು ಅವಕಾಶ ನೀಡಬೇಕೆಂದು ನಾನು ಭಾವಿಸುತ್ತೇನೆ. ಅದರಂತೆ ದೆಹಲಿ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಅವರಿಗೆ ಚಾನ್ಸ್ ನೀಡಬೇಕೆಂದು ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.

4 / 6
ಸದ್ಯ ಇನ್​ಫಾರ್ಮ್ ಆಟಗಾರನಾಗಿ ತಂಡದಲ್ಲಿ ಶುಭ್​ಮನ್ ಗಿಲ್ ಇದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಅವರಿಗೆ ಇನ್ನೊಂದು ಅವಕಾಶ ನೀಡಿದ ಬಳಿಕ ಬದಲಾವಣೆ ಬಗ್ಗೆ ಯೋಚಿಸಬಹುದು. ತಂಡದಲ್ಲಿ ಗಿಲ್ ಇರುವುದರಿಂದ ಹೆಚ್ಚು ಚಿಂತಿಸಬೇಕಾದ ಅಗತ್ಯ ಕೂಡ ಇಲ್ಲ.

ಸದ್ಯ ಇನ್​ಫಾರ್ಮ್ ಆಟಗಾರನಾಗಿ ತಂಡದಲ್ಲಿ ಶುಭ್​ಮನ್ ಗಿಲ್ ಇದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಅವರಿಗೆ ಇನ್ನೊಂದು ಅವಕಾಶ ನೀಡಿದ ಬಳಿಕ ಬದಲಾವಣೆ ಬಗ್ಗೆ ಯೋಚಿಸಬಹುದು. ತಂಡದಲ್ಲಿ ಗಿಲ್ ಇರುವುದರಿಂದ ಹೆಚ್ಚು ಚಿಂತಿಸಬೇಕಾದ ಅಗತ್ಯ ಕೂಡ ಇಲ್ಲ.

5 / 6
ಮುಂದಿನ ಅವಕಾಶದಲ್ಲಿ ರಾಹುಲ್ ವಿಫಲರಾದರೆ, ಯುವ ಆಟಗಾರನಿಗೆ ಚಾನ್ಸ್ ಸಿಗಲಿದೆ. ಆದರೆ ಅದಕ್ಕೂ ಮುನ್ನ ಟೀಮ್ ಇಂಡಿಯಾ ಉಪನಾಯಕನಾಗಿರುವ ಕೆಎಲ್ ರಾಹುಲ್​ಗೆ ಮತ್ತೊಂದು ಅವಕಾಶ ನೀಡಬೇಕೆಂಬುದು ನನ್ನ ಅಭಿಪ್ರಾಯ ಎಂದು ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.

ಮುಂದಿನ ಅವಕಾಶದಲ್ಲಿ ರಾಹುಲ್ ವಿಫಲರಾದರೆ, ಯುವ ಆಟಗಾರನಿಗೆ ಚಾನ್ಸ್ ಸಿಗಲಿದೆ. ಆದರೆ ಅದಕ್ಕೂ ಮುನ್ನ ಟೀಮ್ ಇಂಡಿಯಾ ಉಪನಾಯಕನಾಗಿರುವ ಕೆಎಲ್ ರಾಹುಲ್​ಗೆ ಮತ್ತೊಂದು ಅವಕಾಶ ನೀಡಬೇಕೆಂಬುದು ನನ್ನ ಅಭಿಪ್ರಾಯ ಎಂದು ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.

6 / 6
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?