AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ನಾಯಕ ಹಾರ್ದಿಕ್ ಪಾಂಡ್ಯ ನಡೆಯ ಬಗ್ಗೆ ಕಿಡಿಕಾರಿದ ಸುನಿಲ್ ಗವಾಸ್ಕರ್

IPL 2023 Kannada: ಗುಜರಾತ್ ಟೈಟಾನ್ಸ್-ಸಿಎಸ್​ಕೆ ನಡುವಣ ಫೈನಲ್ ಪಂದ್ಯವು​ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅದರಲ್ಲೂ ಕೊನೆಯ ಓವರ್​ನಲ್ಲಿ ಸಿಎಸ್​ಕೆಗೆ ಗೆಲ್ಲಲು 13 ರನ್​ಗಳ ಅಗತ್ಯವಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: May 31, 2023 | 10:29 PM

IPL 2023: ಐಪಿಎಲ್ ಫೈನಲ್ ಪಂದ್ಯ ಮುಗಿದರೂ ಚರ್ಚೆಗಳು ಮಾತ್ರ ಮುಂದುವರೆದಿದೆ. ಅದರಲ್ಲೂ ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಸೋತಿದ್ದು ಈ ಚರ್ಚೆಯನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯುತ್ತದೆ. ಇದೀಗ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕನ ನಡೆಯ ಬಗ್ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ.

IPL 2023: ಐಪಿಎಲ್ ಫೈನಲ್ ಪಂದ್ಯ ಮುಗಿದರೂ ಚರ್ಚೆಗಳು ಮಾತ್ರ ಮುಂದುವರೆದಿದೆ. ಅದರಲ್ಲೂ ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಸೋತಿದ್ದು ಈ ಚರ್ಚೆಯನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯುತ್ತದೆ. ಇದೀಗ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕನ ನಡೆಯ ಬಗ್ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ.

1 / 8
ಗುಜರಾತ್ ಟೈಟಾನ್ಸ್-ಸಿಎಸ್​ಕೆ ನಡುವಣ ಫೈನಲ್ ಪಂದ್ಯವು​ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅದರಲ್ಲೂ ಕೊನೆಯ ಓವರ್​ನಲ್ಲಿ ಸಿಎಸ್​ಕೆಗೆ ಗೆಲ್ಲಲು 13 ರನ್​ಗಳ ಅಗತ್ಯವಿತ್ತು. ಈ ಹಂತದಲ್ಲಿ ದಾಳಿಗಿಳಿದ ಮೋಹಿತ್ ಶರ್ಮಾ 4 ಎಸೆತಗಳಲ್ಲಿ ನೀಡಿದ್ದು ಕೇವಲ 3 ರನ್ ಮಾತ್ರ.

ಗುಜರಾತ್ ಟೈಟಾನ್ಸ್-ಸಿಎಸ್​ಕೆ ನಡುವಣ ಫೈನಲ್ ಪಂದ್ಯವು​ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅದರಲ್ಲೂ ಕೊನೆಯ ಓವರ್​ನಲ್ಲಿ ಸಿಎಸ್​ಕೆಗೆ ಗೆಲ್ಲಲು 13 ರನ್​ಗಳ ಅಗತ್ಯವಿತ್ತು. ಈ ಹಂತದಲ್ಲಿ ದಾಳಿಗಿಳಿದ ಮೋಹಿತ್ ಶರ್ಮಾ 4 ಎಸೆತಗಳಲ್ಲಿ ನೀಡಿದ್ದು ಕೇವಲ 3 ರನ್ ಮಾತ್ರ.

2 / 8
ಆದರೆ ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾ ಸಿಕ್ಸ್ ಹಾಗೂ ಫೋರ್ ಬಾರಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸ್ಮರಣೀಯ ಜಯ ತಂದುಕೊಟ್ಟರು. ಆದರೆ ಅದುವರೆಗೆ ಚೆನ್ನಾಗಿಯೇ ಬೌಲ್ ಮಾಡಿದ್ದ ಮೋಹಿತ್ ಶರ್ಮಾ ಕೊನೆಯ ಎಸೆತಗಳಲ್ಲಿ ಸಿಕ್ಸ್-ಫೋರ್ ಹೊಡೆಸಿಕೊಂಡಿದ್ದೇಕೆ ಎಂಬ ಪ್ರಶ್ನೆ ಇದೀಗ ಗುಜರಾತ್ ಟೈಟಾನ್ಸ್ ಅಭಿಮಾನಿಗಳನ್ನು ಕಾಡುತ್ತಿದೆ.

ಆದರೆ ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾ ಸಿಕ್ಸ್ ಹಾಗೂ ಫೋರ್ ಬಾರಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸ್ಮರಣೀಯ ಜಯ ತಂದುಕೊಟ್ಟರು. ಆದರೆ ಅದುವರೆಗೆ ಚೆನ್ನಾಗಿಯೇ ಬೌಲ್ ಮಾಡಿದ್ದ ಮೋಹಿತ್ ಶರ್ಮಾ ಕೊನೆಯ ಎಸೆತಗಳಲ್ಲಿ ಸಿಕ್ಸ್-ಫೋರ್ ಹೊಡೆಸಿಕೊಂಡಿದ್ದೇಕೆ ಎಂಬ ಪ್ರಶ್ನೆ ಇದೀಗ ಗುಜರಾತ್ ಟೈಟಾನ್ಸ್ ಅಭಿಮಾನಿಗಳನ್ನು ಕಾಡುತ್ತಿದೆ.

3 / 8
ಈ ಕಾಡುವ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಸುನಿಲ್ ಗವಾಸ್ಕರ್. ಮೋಹಿತ್ ಶರ್ಮಾ ಅವರ ಕೊನೆಯ ಎರಡು ಎಸೆತಗಳ ಮೇಲೆ ಪರಿಣಾಮ ಬೀರಿದ್ದು ಗುಜರಾತ್ ಟೈಟಾನ್ಸ್ ತಂಡದ ನಾಯಕ ನಿರ್ಧಾರ ಎಂದು ಗವಾಸ್ಕರ್ ಆರೋಪಿಸಿದ್ದಾರೆ.

ಈ ಕಾಡುವ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಸುನಿಲ್ ಗವಾಸ್ಕರ್. ಮೋಹಿತ್ ಶರ್ಮಾ ಅವರ ಕೊನೆಯ ಎರಡು ಎಸೆತಗಳ ಮೇಲೆ ಪರಿಣಾಮ ಬೀರಿದ್ದು ಗುಜರಾತ್ ಟೈಟಾನ್ಸ್ ತಂಡದ ನಾಯಕ ನಿರ್ಧಾರ ಎಂದು ಗವಾಸ್ಕರ್ ಆರೋಪಿಸಿದ್ದಾರೆ.

4 / 8
ಈ ಬಗ್ಗೆ ಮಾತನಾಡಿರುವ ಸುನಿಲ್ ಗವಾಸ್ಕರ್, ಮೋಹಿತ್ ಶರ್ಮಾ ಯೋಜನೆಗೆ ತಕ್ಕಂತೆ ಬೌಲಿಂಗ್ ಮಾಡುತ್ತಿದ್ದರು. ಮೊದಲ 4 ಎಸೆತಗಳಲ್ಲಿ ಕೇವಲ 3 ರನ್ ಮಾತ್ರ ನೀಡಿದ್ದರು. ಇದಾಗ್ಯೂ ಹಾರ್ದಿಕ್ ಪಾಂಡ್ಯ ಅವರ ಬಳಿ ಚರ್ಚಿಸುವ ಅಗತ್ಯವೇ ಇರಲಿಲ್ಲ.

ಈ ಬಗ್ಗೆ ಮಾತನಾಡಿರುವ ಸುನಿಲ್ ಗವಾಸ್ಕರ್, ಮೋಹಿತ್ ಶರ್ಮಾ ಯೋಜನೆಗೆ ತಕ್ಕಂತೆ ಬೌಲಿಂಗ್ ಮಾಡುತ್ತಿದ್ದರು. ಮೊದಲ 4 ಎಸೆತಗಳಲ್ಲಿ ಕೇವಲ 3 ರನ್ ಮಾತ್ರ ನೀಡಿದ್ದರು. ಇದಾಗ್ಯೂ ಹಾರ್ದಿಕ್ ಪಾಂಡ್ಯ ಅವರ ಬಳಿ ಚರ್ಚಿಸುವ ಅಗತ್ಯವೇ ಇರಲಿಲ್ಲ.

5 / 8
ಇನ್ನು ಕೊನೆಯ ಓವರ್​ನ 2 ಎಸೆತಗಳು ಬಾಕಿ ಇರುವಾಗ ಅವರಿಗೆ ನೀರು ಕಳುಹಿಸಿರುವುದು ಅಚ್ಚರಿ ಮೂಡಿಸಿತು. ಇದೇ ವೇಳೆ ಹಾರ್ದಿಕ್ ಪಾಂಡ್ಯ ಅವರ ಬಳಿ ಮಾತನಾಡಿದರು. ಬೌಲರ್ ಉತ್ತಮ ಲಯದಲ್ಲಿದ್ದಾಗ, ಮಾನಸಿಕವಾಗಿಯೂ ದೃಢವಾಗಿರುವಾಗ ಯಾರೂ ಕೂಡ ಏನು ಹೇಳಲು ಹೋಗಬಾರದು.

ಇನ್ನು ಕೊನೆಯ ಓವರ್​ನ 2 ಎಸೆತಗಳು ಬಾಕಿ ಇರುವಾಗ ಅವರಿಗೆ ನೀರು ಕಳುಹಿಸಿರುವುದು ಅಚ್ಚರಿ ಮೂಡಿಸಿತು. ಇದೇ ವೇಳೆ ಹಾರ್ದಿಕ್ ಪಾಂಡ್ಯ ಅವರ ಬಳಿ ಮಾತನಾಡಿದರು. ಬೌಲರ್ ಉತ್ತಮ ಲಯದಲ್ಲಿದ್ದಾಗ, ಮಾನಸಿಕವಾಗಿಯೂ ದೃಢವಾಗಿರುವಾಗ ಯಾರೂ ಕೂಡ ಏನು ಹೇಳಲು ಹೋಗಬಾರದು.

6 / 8
4 ಎಸೆತಗಳನ್ನು ಉತ್ತಮವಾಗಿಯೇ ಮಾಡಿದ್ದರಿಂದ ದೂರದಿಂದ ಚೆನ್ನಾಗಿ ಬೌಲಿಂಗ್ ಮಾಡಿದ್ದೀಯಾ ಎಂದು ಪ್ರೋತ್ಸಾಹಿಸಬೇಕಷ್ಟೇ. ಆದರೆ ಓವರ್​ ಮಧ್ಯೆ ನೀರು ತರಿಸಿ, ಹಾರ್ದಿಕ್ ಪಾಂಡ್ಯ ಬಂದು ಚರ್ಚಿಸಿದರು. ಈ ವೇಳೆ ಇದ್ದಕ್ಕಿದ್ದಂತೆ ಮೋಹಿತ್ ಶರ್ಮಾ ಅತ್ತ-ಇತ್ತ ನೋಡುತ್ತಿದ್ದರು. ಅದಕ್ಕೂ ಮೊದಲು ಅವರು ಸಂಪೂರ್ಣವಾಗಿ  ಕೇಂದ್ರೀಕೃತರಾಗಿದ್ದರು.

4 ಎಸೆತಗಳನ್ನು ಉತ್ತಮವಾಗಿಯೇ ಮಾಡಿದ್ದರಿಂದ ದೂರದಿಂದ ಚೆನ್ನಾಗಿ ಬೌಲಿಂಗ್ ಮಾಡಿದ್ದೀಯಾ ಎಂದು ಪ್ರೋತ್ಸಾಹಿಸಬೇಕಷ್ಟೇ. ಆದರೆ ಓವರ್​ ಮಧ್ಯೆ ನೀರು ತರಿಸಿ, ಹಾರ್ದಿಕ್ ಪಾಂಡ್ಯ ಬಂದು ಚರ್ಚಿಸಿದರು. ಈ ವೇಳೆ ಇದ್ದಕ್ಕಿದ್ದಂತೆ ಮೋಹಿತ್ ಶರ್ಮಾ ಅತ್ತ-ಇತ್ತ ನೋಡುತ್ತಿದ್ದರು. ಅದಕ್ಕೂ ಮೊದಲು ಅವರು ಸಂಪೂರ್ಣವಾಗಿ ಕೇಂದ್ರೀಕೃತರಾಗಿದ್ದರು.

7 / 8
ಈ ಎಲ್ಲಾ ಘಟನೆಗಳ ಬಳಿಕ ಮೋಹಿತ್ ಶರ್ಮಾರ 5ನೇ ಎಸೆತದಲ್ಲಿ ಜಡೇಜಾ ಸಿಕ್ಸ್ ಬಾರಿಸಿದರು. ಇನ್ನು ಕೊನೆಯ ಎಸೆತದಲ್ಲಿ ಫೋರ್ ಬಾರಿಸಿ ಸ್ಮರಣೀಯ ಜಯ ತಂದುಕೊಟ್ಟರು. ಅಂದರೆ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದ ಬೌಲರ್​ ಬಳಿ ಹೋಗಿ ಹಾರ್ದಿಕ್ ಪಾಂಡ್ಯ ಚರ್ಚಿಸಿದ್ದು ಅವರ ಲಯ ತಪ್ಪಲು ಕಾರಣವಾಯಿತು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಈ ಎಲ್ಲಾ ಘಟನೆಗಳ ಬಳಿಕ ಮೋಹಿತ್ ಶರ್ಮಾರ 5ನೇ ಎಸೆತದಲ್ಲಿ ಜಡೇಜಾ ಸಿಕ್ಸ್ ಬಾರಿಸಿದರು. ಇನ್ನು ಕೊನೆಯ ಎಸೆತದಲ್ಲಿ ಫೋರ್ ಬಾರಿಸಿ ಸ್ಮರಣೀಯ ಜಯ ತಂದುಕೊಟ್ಟರು. ಅಂದರೆ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದ ಬೌಲರ್​ ಬಳಿ ಹೋಗಿ ಹಾರ್ದಿಕ್ ಪಾಂಡ್ಯ ಚರ್ಚಿಸಿದ್ದು ಅವರ ಲಯ ತಪ್ಪಲು ಕಾರಣವಾಯಿತು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

8 / 8
Follow us
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು