AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Raina: ಐಷಾರಾಮಿ ರೆಸ್ಟೋರೆಂಟ್ ಆರಂಭಿಸಿದ ಮಿ. ಐಪಿಎಲ್ ಸುರೇಶ್ ರೈನಾ; ಫೋಟೋ ನೋಡಿ

Suresh Raina: ಮಿ. ಐಪಿಎಲ್ ಖ್ಯಾತಿಯ ಸುರೇಶ್ ರೈನಾ ನೆದರ್ಲೆಂಡ್ಸ್‌ನ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಭಾರತೀಯ ಶೈಲಿಯ ರೆಸ್ಟೊರೆಂಟ್ ತೆರೆದಿದ್ದಾರೆ.

ಪೃಥ್ವಿಶಂಕರ
|

Updated on: Jun 23, 2023 | 8:47 PM

Share
ಟೀಂ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿ ಹಲವು ವರ್ಷಗಳೇ ಕಳೆದಿವೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ರೈನಾ, ಈ ಹಿಂದೆ ಐಪಿಎಲ್​ಗೂ ವಿದಾಯ ಹೇಳಿದ್ದರು. ಸದ್ಯ ಕ್ರಿಕೆಟ್​ನಿಂದ ದೂರ ಉಳಿದಿರುವ ರೈನಾ ಇದೀಗ ಹೊಸ ಉದ್ಯಮಕ್ಕೆ ಕೈಹಾಕಿದ್ದಾರೆ.

ಟೀಂ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿ ಹಲವು ವರ್ಷಗಳೇ ಕಳೆದಿವೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ರೈನಾ, ಈ ಹಿಂದೆ ಐಪಿಎಲ್​ಗೂ ವಿದಾಯ ಹೇಳಿದ್ದರು. ಸದ್ಯ ಕ್ರಿಕೆಟ್​ನಿಂದ ದೂರ ಉಳಿದಿರುವ ರೈನಾ ಇದೀಗ ಹೊಸ ಉದ್ಯಮಕ್ಕೆ ಕೈಹಾಕಿದ್ದಾರೆ.

1 / 7
ಮಿ. ಐಪಿಎಲ್ ಖ್ಯಾತಿಯ ಸುರೇಶ್ ರೈನಾ ನೆದರ್ಲೆಂಡ್ಸ್‌ನ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಭಾರತೀಯ ಶೈಲಿಯ ರೆಸ್ಟೊರೆಂಟ್ ತೆರೆದಿದ್ದಾರೆ. ಸ್ವತಃ ಈ ವಿಚಾರನ್ನು ರೈನಾ ಅವರೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಖಚಿತಪಡಿಸಿದ್ದಾರೆ.

ಮಿ. ಐಪಿಎಲ್ ಖ್ಯಾತಿಯ ಸುರೇಶ್ ರೈನಾ ನೆದರ್ಲೆಂಡ್ಸ್‌ನ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಭಾರತೀಯ ಶೈಲಿಯ ರೆಸ್ಟೊರೆಂಟ್ ತೆರೆದಿದ್ದಾರೆ. ಸ್ವತಃ ಈ ವಿಚಾರನ್ನು ರೈನಾ ಅವರೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಖಚಿತಪಡಿಸಿದ್ದಾರೆ.

2 / 7
ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರೈನಾ, ಆ್ಯಮ್‌ಸ್ಟರ್‌ಡಾಂನಲ್ಲಿ ರೈನಾ ಇಂಡಿಯನ್ ರೆಸ್ಟೊರೆಂಟ್ ಅನ್ನು ನಿಮಗೆ ಪರಿಚಯಿಸಲು ನನಗೆ ಸಂತೋಷವಾಗಿದೆ. ನಾನು ಎಂತಹ ಭೋಜನ ಪ್ರಿಯ ಎಂಬುದು ನಿಮಗೆ ಈಗಾಗಲೇ ತಿಳಿದಿದೆ. ಇದೀಗ ಭಾರತದ ವಿಧವಿಧದ ಖಾದ್ಯಗಳನ್ನು ಇಲ್ಲಿನ ಭಾರತೀಯರಿಗೆ ಹಾಗೂ ಈ ದೇಶೀಯರಿಗೆ ಪರಿಚಯಿಸಲಿದ್ದೇನೆ ಎಂದಿದ್ದಾರೆ.

ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರೈನಾ, ಆ್ಯಮ್‌ಸ್ಟರ್‌ಡಾಂನಲ್ಲಿ ರೈನಾ ಇಂಡಿಯನ್ ರೆಸ್ಟೊರೆಂಟ್ ಅನ್ನು ನಿಮಗೆ ಪರಿಚಯಿಸಲು ನನಗೆ ಸಂತೋಷವಾಗಿದೆ. ನಾನು ಎಂತಹ ಭೋಜನ ಪ್ರಿಯ ಎಂಬುದು ನಿಮಗೆ ಈಗಾಗಲೇ ತಿಳಿದಿದೆ. ಇದೀಗ ಭಾರತದ ವಿಧವಿಧದ ಖಾದ್ಯಗಳನ್ನು ಇಲ್ಲಿನ ಭಾರತೀಯರಿಗೆ ಹಾಗೂ ಈ ದೇಶೀಯರಿಗೆ ಪರಿಚಯಿಸಲಿದ್ದೇನೆ ಎಂದಿದ್ದಾರೆ.

3 / 7
ವಾಸ್ತವವಾಗಿ ಸುರೇಶ್ ರೈನಾ ಅವರ ಪತ್ನಿ ಪ್ರಿಯಾಂಕಾ ಈ ಹಿಂದೆ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಕೆಲಸ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೈನಾ ಇಲ್ಲಿ ರೆಸ್ಟೊರೆಂಟ್ ಉದ್ಯಮ ಆರಂಭಿಸಿದ್ದಾರೆ ಎಂಬ ಮಾತು ಸಹ ಕೇಳಿಬರುತ್ತಿದೆ.

ವಾಸ್ತವವಾಗಿ ಸುರೇಶ್ ರೈನಾ ಅವರ ಪತ್ನಿ ಪ್ರಿಯಾಂಕಾ ಈ ಹಿಂದೆ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಕೆಲಸ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೈನಾ ಇಲ್ಲಿ ರೆಸ್ಟೊರೆಂಟ್ ಉದ್ಯಮ ಆರಂಭಿಸಿದ್ದಾರೆ ಎಂಬ ಮಾತು ಸಹ ಕೇಳಿಬರುತ್ತಿದೆ.

4 / 7
ಈ ಉದ್ಯಮಕ್ಕೂ ಮೊದಲು ರೈನಾ ಮಗುವಿನ ಉತ್ಪನ್ನಗಳನ್ನು ಮಾರಾಟ ಮಾಡುವ 'ಮಾಟೆ' ಕಂಪನಿಯನ್ನು ಸಹ ಆರಂಭಿಸಿದ್ದರು. ಇದರೊಂದಿಗೆ 'ಸಾಹಿಕಾಯಿನ್' ಎಂಬ ಸ್ಟಾರ್ಟ್ ಅಪ್ ಸ್ಟಾರ್ಟ್‌ಅಪ್‌ನಲ್ಲಿ ಹೂಡಿಕೆ ಮಾಡಿದ್ದಾರೆ.

ಈ ಉದ್ಯಮಕ್ಕೂ ಮೊದಲು ರೈನಾ ಮಗುವಿನ ಉತ್ಪನ್ನಗಳನ್ನು ಮಾರಾಟ ಮಾಡುವ 'ಮಾಟೆ' ಕಂಪನಿಯನ್ನು ಸಹ ಆರಂಭಿಸಿದ್ದರು. ಇದರೊಂದಿಗೆ 'ಸಾಹಿಕಾಯಿನ್' ಎಂಬ ಸ್ಟಾರ್ಟ್ ಅಪ್ ಸ್ಟಾರ್ಟ್‌ಅಪ್‌ನಲ್ಲಿ ಹೂಡಿಕೆ ಮಾಡಿದ್ದಾರೆ.

5 / 7
ಇನ್ನು ಕ್ರಿಕೆಟ್ ವಿಚಾರಕ್ಕೆ ಬಂದರೆ ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ಅವರ ಆಪ್ತ ಗೆಳೆಯನಾಗಿರುವ ರೈನಾ, 2020 ರ ಆಗಸ್ಟ್ 15 ರಂದು ಧೋನಿ ಕ್ರಿಕೆಟ್​ಗೆ ವಿದಾಯ ಘೋಷಿಸಿದ ಕೆಲವೇ ಗಂಟೆಗಳ ನಂತರ ತಾವು ಕೂಡ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು.

ಇನ್ನು ಕ್ರಿಕೆಟ್ ವಿಚಾರಕ್ಕೆ ಬಂದರೆ ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ಅವರ ಆಪ್ತ ಗೆಳೆಯನಾಗಿರುವ ರೈನಾ, 2020 ರ ಆಗಸ್ಟ್ 15 ರಂದು ಧೋನಿ ಕ್ರಿಕೆಟ್​ಗೆ ವಿದಾಯ ಘೋಷಿಸಿದ ಕೆಲವೇ ಗಂಟೆಗಳ ನಂತರ ತಾವು ಕೂಡ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು.

6 / 7
ಆ ಬಳಿಕ ಐಪಿಎಲ್​ನಲ್ಲಿ ಆಡುತ್ತಿದ್ದ ರೈನಾ 2022 ರ ಸೆಪ್ಟೆಂಬರ್​ನಲ್ಲಿ ಈ ಮಿಲಿಯನ್ ಡಾಲರ್​ ಟೂರ್ನಿಗೆ ವಿದಾಯ ಹೇಳಿದ್ದರು. ಇತ್ತೀಚಿಗೆ ರೈನಾ ಲಂಕಾ ಪ್ರಿಮಿಯರ್ ಆಡಲು ತಮ್ಮ ಹೆಸರನ್ನು ನೋಂದಾಯಿಸಿದ್ದರು. ಆದರೆ ಆಟಗಾರರ ಹರಾಜಿನಲ್ಲಿ ರೈನಾ ಅವರ ಹೆಸರನ್ನೇ ಪ್ರಸ್ತಾಪಿಸಲಿಲ್ಲ.

ಆ ಬಳಿಕ ಐಪಿಎಲ್​ನಲ್ಲಿ ಆಡುತ್ತಿದ್ದ ರೈನಾ 2022 ರ ಸೆಪ್ಟೆಂಬರ್​ನಲ್ಲಿ ಈ ಮಿಲಿಯನ್ ಡಾಲರ್​ ಟೂರ್ನಿಗೆ ವಿದಾಯ ಹೇಳಿದ್ದರು. ಇತ್ತೀಚಿಗೆ ರೈನಾ ಲಂಕಾ ಪ್ರಿಮಿಯರ್ ಆಡಲು ತಮ್ಮ ಹೆಸರನ್ನು ನೋಂದಾಯಿಸಿದ್ದರು. ಆದರೆ ಆಟಗಾರರ ಹರಾಜಿನಲ್ಲಿ ರೈನಾ ಅವರ ಹೆಸರನ್ನೇ ಪ್ರಸ್ತಾಪಿಸಲಿಲ್ಲ.

7 / 7
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ