AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ವಿಶೇಷ ಶತಕ ಪೂರೈಸಿ ಬಾಬರ್ ದಾಖಲೆ ಮುರಿದ ಸೂರ್ಯಕುಮಾರ್

Suryakumar Yadav's Historic 100th T20I: ಭಾರತ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಒಂದು ವರ್ಷದಿಂದ ಫಾರ್ಮ್ ಕೊರತೆ ಎದುರಿಸುತ್ತಿದ್ದರೂ, 100ನೇ ಅಂತರರಾಷ್ಟ್ರೀಯ ಟಿ20 ಪಂದ್ಯ ಆಡುವ ಮೂಲಕ ಐತಿಹಾಸಿಕ ಮೈಲಿಗಲ್ಲು ತಲುಪಿದ್ದಾರೆ. ಅವರು ಕೇವಲ 1174 ದಿನಗಳಲ್ಲಿ ಈ ಸಾಧನೆ ಮಾಡಿ, ಬಾಬರ್ ಅಜಮ್ ಅವರ ವೇಗದ 100 ಟಿ20 ಪಂದ್ಯಗಳ ದಾಖಲೆ ಮುರಿದಿದ್ದಾರೆ. ಈ ಮೂಲಕ ರೋಹಿತ್, ಕೊಹ್ಲಿ ನಂತರ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಎನಿಸಿದ್ದಾರೆ.

ಪೃಥ್ವಿಶಂಕರ
|

Updated on: Jan 21, 2026 | 9:22 PM

Share
ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕಳೆದೊಂದು ವರ್ಷದಿಂದ ಉತ್ತಮ ಫಾರ್ಮ್​ನಲಿಲ್ಲ. ಅವರ ಬ್ಯಾಟ್​ನಿಂದ ಕಳೆದೊಂದು ವರ್ಷದಲ್ಲಿ ಒಂದೇ ಒಂದು ಅರ್ಧಶತಕ ಸಿಡಿದಿಲ್ಲ. ಆಗಿದ್ದರೂ ಅವರಿಗೆ ತಂಡದಲ್ಲಿ ಸತತ ಅವಕಾಶಗಳು ಸಿಗುತ್ತಿವೆ. ಅದಕ್ಕೆ ಕಾರಣ ಅವರಿಗೆ ತಂಡದ ನಾಯಕತ್ವವಹಿಸಿರುವುದು. ಈ ಮಾತನ್ನು ಹಲವಾರು ಪಂಡಿತರು ಹಲವು ಬಾರಿ ಹೇಳಿದ್ದಾರೆ.

ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕಳೆದೊಂದು ವರ್ಷದಿಂದ ಉತ್ತಮ ಫಾರ್ಮ್​ನಲಿಲ್ಲ. ಅವರ ಬ್ಯಾಟ್​ನಿಂದ ಕಳೆದೊಂದು ವರ್ಷದಲ್ಲಿ ಒಂದೇ ಒಂದು ಅರ್ಧಶತಕ ಸಿಡಿದಿಲ್ಲ. ಆಗಿದ್ದರೂ ಅವರಿಗೆ ತಂಡದಲ್ಲಿ ಸತತ ಅವಕಾಶಗಳು ಸಿಗುತ್ತಿವೆ. ಅದಕ್ಕೆ ಕಾರಣ ಅವರಿಗೆ ತಂಡದ ನಾಯಕತ್ವವಹಿಸಿರುವುದು. ಈ ಮಾತನ್ನು ಹಲವಾರು ಪಂಡಿತರು ಹಲವು ಬಾರಿ ಹೇಳಿದ್ದಾರೆ.

1 / 5
ಇದೀಗ 2026 ರ ವರ್ಷವನ್ನಾದರೂ ಸೂರ್ಯಕುಮಾರ್ ಯಾದವ್ ಉತ್ತಮವಾಗಿ ಆರಂಭಿಸುತ್ತಾರೆ ಎಂದು ಎಲ್ಲರೂ ಆಶಿಸಿದ್ದರು. ಅದರಂತೆ ಈ ಪಂದ್ಯದಲ್ಲಿ ಸೂರ್ಯ ಉತ್ತಮ ಆರಂಭ ಪಡೆದುಕೊಂಡರಾದರೂ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ ಸೂರ್ಯ 22 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 32 ರನ್ ಬಾರಿಸಿದರು.

ಇದೀಗ 2026 ರ ವರ್ಷವನ್ನಾದರೂ ಸೂರ್ಯಕುಮಾರ್ ಯಾದವ್ ಉತ್ತಮವಾಗಿ ಆರಂಭಿಸುತ್ತಾರೆ ಎಂದು ಎಲ್ಲರೂ ಆಶಿಸಿದ್ದರು. ಅದರಂತೆ ಈ ಪಂದ್ಯದಲ್ಲಿ ಸೂರ್ಯ ಉತ್ತಮ ಆರಂಭ ಪಡೆದುಕೊಂಡರಾದರೂ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ ಸೂರ್ಯ 22 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 32 ರನ್ ಬಾರಿಸಿದರು.

2 / 5
ಬ್ಯಾಟ್ಸ್‌ಮನ್ ಆಗಿ ಸೂರ್ಯನಿಗೆ ಈ ಪಂದ್ಯದಲ್ಲಿ ಕಮಾಲ್ ಮಾಡಲು ಸಾಧ್ಯವಾಗಲಿಲ್ಲ. ಆದಾಗ್ಯೂ ಆಟಗಾರನಾಗಿ ಸೂರ್ಯ ಈ ಪಂದ್ಯದಲ್ಲಿ ಮೈಲಿಗಲ್ಲು ದಾಟಿದರು. ವಾಸ್ತವವಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಇದು ಸೂರ್ಯಕುಮಾರ್​ಗೆ 100 ನೇ ಪಂದ್ಯವಾಗಿತ್ತು. ಈ ಮೂಲಕ ಸೂರ್ಯ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ನಂತರ 100 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ ನಾಲ್ಕನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಬ್ಯಾಟ್ಸ್‌ಮನ್ ಆಗಿ ಸೂರ್ಯನಿಗೆ ಈ ಪಂದ್ಯದಲ್ಲಿ ಕಮಾಲ್ ಮಾಡಲು ಸಾಧ್ಯವಾಗಲಿಲ್ಲ. ಆದಾಗ್ಯೂ ಆಟಗಾರನಾಗಿ ಸೂರ್ಯ ಈ ಪಂದ್ಯದಲ್ಲಿ ಮೈಲಿಗಲ್ಲು ದಾಟಿದರು. ವಾಸ್ತವವಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಇದು ಸೂರ್ಯಕುಮಾರ್​ಗೆ 100 ನೇ ಪಂದ್ಯವಾಗಿತ್ತು. ಈ ಮೂಲಕ ಸೂರ್ಯ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ನಂತರ 100 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ ನಾಲ್ಕನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

3 / 5
ಈ ಮೂಲಕ ಸೂರ್ಯಕುಮಾರ್ ಯಾದವ್,  ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ದಾಖಲೆಯನ್ನು ಮುರಿದರು. ಈ ಹಿಂದೆ ಪೂರ್ಣ ಸದಸ್ಯ ರಾಷ್ಟ್ರದ ಪರ ವೇಗವಾಗಿ 100 ಅಂತರರಾಷ್ಟ್ರೀಯ ಟಿ20  ಪಂದ್ಯಗಳನ್ನು ಆಡಿದ ದಾಖಲೆಯನ್ನು ಬಾಬರ್ ಆಝಂ ನಿರ್ಮಿಸಿದ್ದರು. ಈಗ ಈ ದಾಖಲೆ ಸೂರ್ಯಕುಮಾರ್ ಪಾಲಾಗಿದೆ.

ಈ ಮೂಲಕ ಸೂರ್ಯಕುಮಾರ್ ಯಾದವ್, ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ದಾಖಲೆಯನ್ನು ಮುರಿದರು. ಈ ಹಿಂದೆ ಪೂರ್ಣ ಸದಸ್ಯ ರಾಷ್ಟ್ರದ ಪರ ವೇಗವಾಗಿ 100 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ ದಾಖಲೆಯನ್ನು ಬಾಬರ್ ಆಝಂ ನಿರ್ಮಿಸಿದ್ದರು. ಈಗ ಈ ದಾಖಲೆ ಸೂರ್ಯಕುಮಾರ್ ಪಾಲಾಗಿದೆ.

4 / 5
ಬಾಬರ್ ಆಝಂ 100 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲು 2410 ದಿನಗಳನ್ನು ತೆಗೆದುಕೊಂಡಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಕೇವಲ 1174 ದಿನಗಳಲ್ಲಿ ಈ ಮೈಲಿಗಲ್ಲು ಪೂರ್ಣಗೊಳಿಸಿದ್ದಾರೆ. ಅಂದರೆ, ಬಾಬರ್​ಗಿಂತ 636 ಕಡಿಮೆ ದಿನಗಳನ್ನು ಸೂರ್ಯ ತೆಗೆದುಕೊಂಡಿದ್ದಾರೆ.

ಬಾಬರ್ ಆಝಂ 100 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲು 2410 ದಿನಗಳನ್ನು ತೆಗೆದುಕೊಂಡಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಕೇವಲ 1174 ದಿನಗಳಲ್ಲಿ ಈ ಮೈಲಿಗಲ್ಲು ಪೂರ್ಣಗೊಳಿಸಿದ್ದಾರೆ. ಅಂದರೆ, ಬಾಬರ್​ಗಿಂತ 636 ಕಡಿಮೆ ದಿನಗಳನ್ನು ಸೂರ್ಯ ತೆಗೆದುಕೊಂಡಿದ್ದಾರೆ.

5 / 5
Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ