AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಹೊಸ ವಿಶ್ವ ದಾಖಲೆ: ಸಿಕ್ಸರ್ ಕಿಂಗ್ ಸೂರ್ಯಕುಮಾರ್

Suryakumar Yadav: ಮುಂದಿನ ಪಂದ್ಯದಲ್ಲಿ 7 ರನ್​ ಬಾರಿಸಿದರೆ ಟೀಮ್ ಇಂಡಿಯಾ ಪರ ಟಿ20 ಯಲ್ಲಿ ಒಂದೇ ವರ್ಷದಲ್ಲಿ 800 ರನ್ ಕಲೆಹಾಕಿದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್|

Updated on:Oct 03, 2022 | 10:25 AM

Share
ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಗೌಹಾಟಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ  ಸೂರ್ಯ ಕೇವಲ 22 ಎಸೆತಗಳಲ್ಲಿ 61 ರನ್ ಚಚ್ಚಿದ್ದರು.

ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಗೌಹಾಟಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ ಸೂರ್ಯ ಕೇವಲ 22 ಎಸೆತಗಳಲ್ಲಿ 61 ರನ್ ಚಚ್ಚಿದ್ದರು.

1 / 7
ವಿಶೇಷ ಎಂದರೆ ಈ 61 ರನ್​ಗಳ ಸ್ಪೋಟಕ ಇನಿಂಗ್ಸ್​ನಲ್ಲಿ ಸೂರ್ಯ 5 ಸಿಕ್ಸ್ ಹಾಗೂ 5 ಫೋರ್ ಸಿಡಿಸಿದ್ದರು. ಈ ಐದು ಭರ್ಜರಿ ಸಿಕ್ಸ್​ಗಳೊಂದಿಗೆ ಸೂರ್ಯಕುಮಾರ್ ಯಾದವ್ ಒಂದೇ ವರ್ಷದಲ್ಲಿ 50 ಸಿಕ್ಸ್​ಗಳನ್ನು ಪೂರೈಸಿದ್ದಾರೆ.

ವಿಶೇಷ ಎಂದರೆ ಈ 61 ರನ್​ಗಳ ಸ್ಪೋಟಕ ಇನಿಂಗ್ಸ್​ನಲ್ಲಿ ಸೂರ್ಯ 5 ಸಿಕ್ಸ್ ಹಾಗೂ 5 ಫೋರ್ ಸಿಡಿಸಿದ್ದರು. ಈ ಐದು ಭರ್ಜರಿ ಸಿಕ್ಸ್​ಗಳೊಂದಿಗೆ ಸೂರ್ಯಕುಮಾರ್ ಯಾದವ್ ಒಂದೇ ವರ್ಷದಲ್ಲಿ 50 ಸಿಕ್ಸ್​ಗಳನ್ನು ಪೂರೈಸಿದ್ದಾರೆ.

2 / 7
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ 50 ಸಿಕ್ಸ್​​ಗಳನ್ನು ಬಾರಿಸಿದ ಮತ್ತೋರ್ವ ಬ್ಯಾಟ್ಸ್​​ಮನ್ ಇಲ್ಲ. ಇದೀಗ ಒಂದು ವರ್ಷದಲ್ಲಿ 50 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ಬರೆದಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ 50 ಸಿಕ್ಸ್​​ಗಳನ್ನು ಬಾರಿಸಿದ ಮತ್ತೋರ್ವ ಬ್ಯಾಟ್ಸ್​​ಮನ್ ಇಲ್ಲ. ಇದೀಗ ಒಂದು ವರ್ಷದಲ್ಲಿ 50 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ಬರೆದಿದ್ದಾರೆ.

3 / 7
ಇದಕ್ಕೂ ಮುನ್ನ 2021 ರಲ್ಲಿ 42 ಸಿಕ್ಸ್​ ಸಿಡಿಸಿ ಪಾಕಿಸ್ತಾನ್ ಮೊಹಮ್ಮದ್ ರಿಜ್ವಾನ್ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಉಡೀಸ್ ಮಾಡಿರುವ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ 2021 ರಲ್ಲಿ 42 ಸಿಕ್ಸ್​ ಸಿಡಿಸಿ ಪಾಕಿಸ್ತಾನ್ ಮೊಹಮ್ಮದ್ ರಿಜ್ವಾನ್ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಉಡೀಸ್ ಮಾಡಿರುವ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

4 / 7
ಇನ್ನು ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಅತಿರಥ ಮಹಾರಥರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಅಂದರೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಇದೀಗ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಶಿಖರ್ ಧವನ್ ಅವರ ಹೆಸರಿನಲ್ಲಿತ್ತು.

ಇನ್ನು ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಅತಿರಥ ಮಹಾರಥರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಅಂದರೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಇದೀಗ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಶಿಖರ್ ಧವನ್ ಅವರ ಹೆಸರಿನಲ್ಲಿತ್ತು.

5 / 7
ಈ ಹಿಂದೆ 2018 ರಲ್ಲಿ ಶಿಖರ್ ಧವನ್ 689 ರನ್​ ಬಾರಿಸುವ ಮೂಲಕ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಈ ಹಿಂದೆ 2018 ರಲ್ಲಿ ಶಿಖರ್ ಧವನ್ 689 ರನ್​ ಬಾರಿಸುವ ಮೂಲಕ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

6 / 7
ಅಲ್ಲದೆ ಈ ವರ್ಷ ಬರೋಬ್ಬರಿ 793 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶೇಷ ದಾಖಲೆಯನ್ನೂ ಕೂಡ ಸೂರ್ಯಕುಮಾರ್ ಯಾದವ್ ನಿರ್ಮಿಸಿದ್ದಾರೆ. ಇನ್ನು ಮುಂದಿನ ಪಂದ್ಯದಲ್ಲಿ 7 ರನ್​ ಬಾರಿಸಿದರೆ ಟೀಮ್ ಇಂಡಿಯಾ ಪರ ಟಿ20 ಯಲ್ಲಿ ಒಂದೇ ವರ್ಷದಲ್ಲಿ 800 ರನ್ ಕಲೆಹಾಕಿದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿರುವುದು ವಿಶೇಷ.

ಅಲ್ಲದೆ ಈ ವರ್ಷ ಬರೋಬ್ಬರಿ 793 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶೇಷ ದಾಖಲೆಯನ್ನೂ ಕೂಡ ಸೂರ್ಯಕುಮಾರ್ ಯಾದವ್ ನಿರ್ಮಿಸಿದ್ದಾರೆ. ಇನ್ನು ಮುಂದಿನ ಪಂದ್ಯದಲ್ಲಿ 7 ರನ್​ ಬಾರಿಸಿದರೆ ಟೀಮ್ ಇಂಡಿಯಾ ಪರ ಟಿ20 ಯಲ್ಲಿ ಒಂದೇ ವರ್ಷದಲ್ಲಿ 800 ರನ್ ಕಲೆಹಾಕಿದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿರುವುದು ವಿಶೇಷ.

7 / 7

Published On - 10:25 am, Mon, 3 October 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!