AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಹೊಸ ವಿಶ್ವ ದಾಖಲೆ: ಸಿಕ್ಸರ್ ಕಿಂಗ್ ಸೂರ್ಯಕುಮಾರ್

Suryakumar Yadav: ಮುಂದಿನ ಪಂದ್ಯದಲ್ಲಿ 7 ರನ್​ ಬಾರಿಸಿದರೆ ಟೀಮ್ ಇಂಡಿಯಾ ಪರ ಟಿ20 ಯಲ್ಲಿ ಒಂದೇ ವರ್ಷದಲ್ಲಿ 800 ರನ್ ಕಲೆಹಾಕಿದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿರುವುದು ವಿಶೇಷ.

TV9 Web
| Edited By: |

Updated on:Oct 03, 2022 | 10:25 AM

Share
ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಗೌಹಾಟಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ  ಸೂರ್ಯ ಕೇವಲ 22 ಎಸೆತಗಳಲ್ಲಿ 61 ರನ್ ಚಚ್ಚಿದ್ದರು.

ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಗೌಹಾಟಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ ಸೂರ್ಯ ಕೇವಲ 22 ಎಸೆತಗಳಲ್ಲಿ 61 ರನ್ ಚಚ್ಚಿದ್ದರು.

1 / 7
ವಿಶೇಷ ಎಂದರೆ ಈ 61 ರನ್​ಗಳ ಸ್ಪೋಟಕ ಇನಿಂಗ್ಸ್​ನಲ್ಲಿ ಸೂರ್ಯ 5 ಸಿಕ್ಸ್ ಹಾಗೂ 5 ಫೋರ್ ಸಿಡಿಸಿದ್ದರು. ಈ ಐದು ಭರ್ಜರಿ ಸಿಕ್ಸ್​ಗಳೊಂದಿಗೆ ಸೂರ್ಯಕುಮಾರ್ ಯಾದವ್ ಒಂದೇ ವರ್ಷದಲ್ಲಿ 50 ಸಿಕ್ಸ್​ಗಳನ್ನು ಪೂರೈಸಿದ್ದಾರೆ.

ವಿಶೇಷ ಎಂದರೆ ಈ 61 ರನ್​ಗಳ ಸ್ಪೋಟಕ ಇನಿಂಗ್ಸ್​ನಲ್ಲಿ ಸೂರ್ಯ 5 ಸಿಕ್ಸ್ ಹಾಗೂ 5 ಫೋರ್ ಸಿಡಿಸಿದ್ದರು. ಈ ಐದು ಭರ್ಜರಿ ಸಿಕ್ಸ್​ಗಳೊಂದಿಗೆ ಸೂರ್ಯಕುಮಾರ್ ಯಾದವ್ ಒಂದೇ ವರ್ಷದಲ್ಲಿ 50 ಸಿಕ್ಸ್​ಗಳನ್ನು ಪೂರೈಸಿದ್ದಾರೆ.

2 / 7
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ 50 ಸಿಕ್ಸ್​​ಗಳನ್ನು ಬಾರಿಸಿದ ಮತ್ತೋರ್ವ ಬ್ಯಾಟ್ಸ್​​ಮನ್ ಇಲ್ಲ. ಇದೀಗ ಒಂದು ವರ್ಷದಲ್ಲಿ 50 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ಬರೆದಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ 50 ಸಿಕ್ಸ್​​ಗಳನ್ನು ಬಾರಿಸಿದ ಮತ್ತೋರ್ವ ಬ್ಯಾಟ್ಸ್​​ಮನ್ ಇಲ್ಲ. ಇದೀಗ ಒಂದು ವರ್ಷದಲ್ಲಿ 50 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ಬರೆದಿದ್ದಾರೆ.

3 / 7
ಇದಕ್ಕೂ ಮುನ್ನ 2021 ರಲ್ಲಿ 42 ಸಿಕ್ಸ್​ ಸಿಡಿಸಿ ಪಾಕಿಸ್ತಾನ್ ಮೊಹಮ್ಮದ್ ರಿಜ್ವಾನ್ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಉಡೀಸ್ ಮಾಡಿರುವ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ 2021 ರಲ್ಲಿ 42 ಸಿಕ್ಸ್​ ಸಿಡಿಸಿ ಪಾಕಿಸ್ತಾನ್ ಮೊಹಮ್ಮದ್ ರಿಜ್ವಾನ್ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಉಡೀಸ್ ಮಾಡಿರುವ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

4 / 7
ಇನ್ನು ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಅತಿರಥ ಮಹಾರಥರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಅಂದರೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಇದೀಗ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಶಿಖರ್ ಧವನ್ ಅವರ ಹೆಸರಿನಲ್ಲಿತ್ತು.

ಇನ್ನು ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಅತಿರಥ ಮಹಾರಥರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಅಂದರೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಇದೀಗ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಶಿಖರ್ ಧವನ್ ಅವರ ಹೆಸರಿನಲ್ಲಿತ್ತು.

5 / 7
ಈ ಹಿಂದೆ 2018 ರಲ್ಲಿ ಶಿಖರ್ ಧವನ್ 689 ರನ್​ ಬಾರಿಸುವ ಮೂಲಕ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಈ ಹಿಂದೆ 2018 ರಲ್ಲಿ ಶಿಖರ್ ಧವನ್ 689 ರನ್​ ಬಾರಿಸುವ ಮೂಲಕ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

6 / 7
ಅಲ್ಲದೆ ಈ ವರ್ಷ ಬರೋಬ್ಬರಿ 793 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶೇಷ ದಾಖಲೆಯನ್ನೂ ಕೂಡ ಸೂರ್ಯಕುಮಾರ್ ಯಾದವ್ ನಿರ್ಮಿಸಿದ್ದಾರೆ. ಇನ್ನು ಮುಂದಿನ ಪಂದ್ಯದಲ್ಲಿ 7 ರನ್​ ಬಾರಿಸಿದರೆ ಟೀಮ್ ಇಂಡಿಯಾ ಪರ ಟಿ20 ಯಲ್ಲಿ ಒಂದೇ ವರ್ಷದಲ್ಲಿ 800 ರನ್ ಕಲೆಹಾಕಿದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿರುವುದು ವಿಶೇಷ.

ಅಲ್ಲದೆ ಈ ವರ್ಷ ಬರೋಬ್ಬರಿ 793 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶೇಷ ದಾಖಲೆಯನ್ನೂ ಕೂಡ ಸೂರ್ಯಕುಮಾರ್ ಯಾದವ್ ನಿರ್ಮಿಸಿದ್ದಾರೆ. ಇನ್ನು ಮುಂದಿನ ಪಂದ್ಯದಲ್ಲಿ 7 ರನ್​ ಬಾರಿಸಿದರೆ ಟೀಮ್ ಇಂಡಿಯಾ ಪರ ಟಿ20 ಯಲ್ಲಿ ಒಂದೇ ವರ್ಷದಲ್ಲಿ 800 ರನ್ ಕಲೆಹಾಕಿದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿರುವುದು ವಿಶೇಷ.

7 / 7

Published On - 10:25 am, Mon, 3 October 22

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ