AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸಿಡಿಲಬ್ಬರದ ಸಿಡಿಲಮರಿ ಸೂರ್ಯನ ಬ್ಯಾಟ್​ನಿಂದ ತೂಫಾನ್ ಶತಕ

Suryakumar Yadav Century: ಮೊದಲ ವಿಕೆಟ್​ಗೆ 61 ರನ್ ಪೇರಿಸಿ ರೋಹಿತ್ ಶರ್ಮಾ ಔಟಾದರು. ಆ ಬಳಿಕ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಗುಜರಾತ್ ಟೈಟಾನ್ಸ್ ಬೌಲರ್​ಗಳ ಬೆಂಡೆತ್ತಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: May 12, 2023 | 9:45 PM

Share
IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸ್ಪೋಟಕ ಶತಕ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಅಬ್ಬರಿಸಿದ್ದಾರೆ. ಇದರೊಂದಿಗೆ ಮುಂಬೈ ಇಂಡಿಯನ್ಸ್ ಪರ ಅತೀ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸ್ಪೋಟಕ ಶತಕ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಅಬ್ಬರಿಸಿದ್ದಾರೆ. ಇದರೊಂದಿಗೆ ಮುಂಬೈ ಇಂಡಿಯನ್ಸ್ ಪರ ಅತೀ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಇಶಾನ್ ಕಿಶನ್ (31) ಹಾಗೂ ರೋಹಿತ್ ಶರ್ಮಾ (29) ಮುಂಬೈ ಇಂಡಿಯನ್ಸ್ ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಇಶಾನ್ ಕಿಶನ್ (31) ಹಾಗೂ ರೋಹಿತ್ ಶರ್ಮಾ (29) ಮುಂಬೈ ಇಂಡಿಯನ್ಸ್ ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿದ್ದರು.

2 / 7
ಮೊದಲ ವಿಕೆಟ್​ಗೆ 61 ರನ್ ಪೇರಿಸಿ ರೋಹಿತ್ ಶರ್ಮಾ ಔಟಾದರು. ಆ ಬಳಿಕ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಗುಜರಾತ್ ಟೈಟಾನ್ಸ್ ಬೌಲರ್​ಗಳ ಬೆಂಡೆತ್ತಿದ್ದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದ ಸೂರ್ಯ ರನ್ ಗಳಿಕೆ ವೇಗವನ್ನು ಹೆಚ್ಚಿಸಿದರು.

ಮೊದಲ ವಿಕೆಟ್​ಗೆ 61 ರನ್ ಪೇರಿಸಿ ರೋಹಿತ್ ಶರ್ಮಾ ಔಟಾದರು. ಆ ಬಳಿಕ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಗುಜರಾತ್ ಟೈಟಾನ್ಸ್ ಬೌಲರ್​ಗಳ ಬೆಂಡೆತ್ತಿದ್ದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದ ಸೂರ್ಯ ರನ್ ಗಳಿಕೆ ವೇಗವನ್ನು ಹೆಚ್ಚಿಸಿದರು.

3 / 7
ಅರ್ಧಶತಕದ ಬಳಿಕ ಅಬ್ಬರ ಮುಂದುವರೆಸಿದ ಸೂರ್ಯಕುಮಾರ್ ಯಾದವ್ ಗುಜರಾತ್ ಟೈಟಾನ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಅದರಂತೆ ಕೊನೆಯ ಓವರ್​ ವೇಳೆಗೆ ಸೂರ್ಯಕುಮಾರ್ ಯಾದವ್ 87 ರನ್​ಗಳಿಸಿದ್ದರು.

ಅರ್ಧಶತಕದ ಬಳಿಕ ಅಬ್ಬರ ಮುಂದುವರೆಸಿದ ಸೂರ್ಯಕುಮಾರ್ ಯಾದವ್ ಗುಜರಾತ್ ಟೈಟಾನ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಅದರಂತೆ ಕೊನೆಯ ಓವರ್​ ವೇಳೆಗೆ ಸೂರ್ಯಕುಮಾರ್ ಯಾದವ್ 87 ರನ್​ಗಳಿಸಿದ್ದರು.

4 / 7
ಅಲ್ಝಾರಿ ಜೋಸೆಫ್ ಎಸೆದ ಅಂತಿಮ ಓವರ್​ನ ಮೊದಲ ಎಸೆತದಲ್ಲಿ ಕ್ಯಾಮರೋನ್ ಗ್ರೀನ್ 1 ರನ್ ತೆಗೆದರು. ಆ ಬಳಿಕ ಸ್ಟ್ರೈಕ್​ಗೆ ಬಂದ ಸೂರ್ಯ 2 ರನ್ ಓಡಿದರು. 3ನೇ ಎಸೆತದಲ್ಲಿ ಯಾವುದೇ ರನ್ ಇಲ್ಲ. 4ನೇ ಎಸೆತದಲ್ಲಿ ಸೂರ್ಯಕುಮಾರ್ ಭರ್ಜರಿ ಸಿಕ್ಸ್ ಸಿಡಿಸಿದರು. ಆ ನಂತರ 2 ರನ್​. ಕೊನೆಯ ಎಸೆತದಲ್ಲಿ ಶತಕ ಪೂರೈಸಲು 3 ರನ್​ಗಳ ಅವಶ್ಯಕತೆಯಿತ್ತು.

ಅಲ್ಝಾರಿ ಜೋಸೆಫ್ ಎಸೆದ ಅಂತಿಮ ಓವರ್​ನ ಮೊದಲ ಎಸೆತದಲ್ಲಿ ಕ್ಯಾಮರೋನ್ ಗ್ರೀನ್ 1 ರನ್ ತೆಗೆದರು. ಆ ಬಳಿಕ ಸ್ಟ್ರೈಕ್​ಗೆ ಬಂದ ಸೂರ್ಯ 2 ರನ್ ಓಡಿದರು. 3ನೇ ಎಸೆತದಲ್ಲಿ ಯಾವುದೇ ರನ್ ಇಲ್ಲ. 4ನೇ ಎಸೆತದಲ್ಲಿ ಸೂರ್ಯಕುಮಾರ್ ಭರ್ಜರಿ ಸಿಕ್ಸ್ ಸಿಡಿಸಿದರು. ಆ ನಂತರ 2 ರನ್​. ಕೊನೆಯ ಎಸೆತದಲ್ಲಿ ಶತಕ ಪೂರೈಸಲು 3 ರನ್​ಗಳ ಅವಶ್ಯಕತೆಯಿತ್ತು.

5 / 7
ಅಲ್ಝಾರಿ ಜೋಸೆಫ್ ಅವರ ಕೊನೆಯ ಎಸೆತದಲ್ಲಿ ಲೆಗ್​ ಸೈಡ್​ನತ್ತ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಐಪಿಎಲ್​ನಲ್ಲಿ ಚೊಚ್ಚಲ ಶತಕ ಸಿಡಿಸಿದರು. ಅಂತಿಮವಾಗಿ 49 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ನೊಂದಿಗೆ ಅಜೇಯ 103 ರನ್ ಬಾರಿಸಿದರು.

ಅಲ್ಝಾರಿ ಜೋಸೆಫ್ ಅವರ ಕೊನೆಯ ಎಸೆತದಲ್ಲಿ ಲೆಗ್​ ಸೈಡ್​ನತ್ತ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಐಪಿಎಲ್​ನಲ್ಲಿ ಚೊಚ್ಚಲ ಶತಕ ಸಿಡಿಸಿದರು. ಅಂತಿಮವಾಗಿ 49 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ನೊಂದಿಗೆ ಅಜೇಯ 103 ರನ್ ಬಾರಿಸಿದರು.

6 / 7
ಸೂರ್ಯಕುಮಾರ್ ಯಾದವ್ ಅವರ ಈ ಸಿಡಿಲಬ್ಬರದ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 218 ರನ್​ ಕಲೆಹಾಕಿತು.

ಸೂರ್ಯಕುಮಾರ್ ಯಾದವ್ ಅವರ ಈ ಸಿಡಿಲಬ್ಬರದ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 218 ರನ್​ ಕಲೆಹಾಕಿತು.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!