AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಟಿ20 ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಸೂರ್ಯಕುಮಾರ್..! ರಿಜ್ವಾನ್ ದಾಖಲೆ ಪುಡಿಪುಡಿ

Suryakumar Yadav: ಸೂರ್ಯ ಈ ವರ್ಷ ಟಿ20 ಇಂಟರ್ನ್ಯಾಷನಲ್ನಲ್ಲಿ ತಮ್ಮ 1000 ರನ್ಗಳನ್ನು ಪೂರೈಸಿದ್ದಾರೆ. ಸೂರ್ಯ ಕೇವಲ 28 ಇನ್ನಿಂಗ್ಸ್‌ಗಳಲ್ಲಿ 186 ಸ್ಟ್ರೈಕ್ ರೇಟ್ ಹಾಗೂ 44.60 ಸರಾಸರಿಯಲ್ಲಿ 1026 ರನ್ ಗಳಿಸಿದ್ದಾರೆ.

TV9 Web
| Edited By: |

Updated on:Nov 06, 2022 | 4:45 PM

Share
ಟಿ20 ವಿಶ್ವಕಪ್‌ ಸೆಮಿಫೈನಲ್​ಗೂ ಮುನ್ನ ಟೀಮ್ ಇಂಡಿಯಾದ ಬ್ಯಾಟ್ಸ್‌ಮನ್​ಗಳು ತಮ್ಮ ಅಬ್ಬರವನ್ನು ತೋರಿಸಿದ್ದಾರೆ. ಅದರಲ್ಲೂ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಆಸ್ಟ್ರೇಲಿಯಾ ನೆಲದಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಟಿ20 ವಿಶ್ವಕಪ್‌ ಸೆಮಿಫೈನಲ್​ಗೂ ಮುನ್ನ ಟೀಮ್ ಇಂಡಿಯಾದ ಬ್ಯಾಟ್ಸ್‌ಮನ್​ಗಳು ತಮ್ಮ ಅಬ್ಬರವನ್ನು ತೋರಿಸಿದ್ದಾರೆ. ಅದರಲ್ಲೂ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಆಸ್ಟ್ರೇಲಿಯಾ ನೆಲದಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 5
ದಕ್ಷಿಣ ಆಫ್ರಿಕಾ ವಿರುದ್ಧ ಕಠಿಣ ಪರಿಸ್ಥಿತಿಯಲ್ಲಿ ಅರ್ಧಶತಕ ಬಾರಿಸಿದ ಸೂರ್ಯ, ಮತ್ತೊಮ್ಮೆ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡಿ ಜಿಂಬಾಬ್ವೆ ವಿರುದ್ಧ ಅಚ್ಚರಿಯ ಇನ್ನಿಂಗ್ಸ್ ಆಡಿದರು ಮತ್ತು ಪಂದ್ಯಾವಳಿಯಲ್ಲಿ ತಮ್ಮ ಮೂರನೇ ಅರ್ಧಶತಕವನ್ನು ಗಳಿಸಿದರು.

ದಕ್ಷಿಣ ಆಫ್ರಿಕಾ ವಿರುದ್ಧ ಕಠಿಣ ಪರಿಸ್ಥಿತಿಯಲ್ಲಿ ಅರ್ಧಶತಕ ಬಾರಿಸಿದ ಸೂರ್ಯ, ಮತ್ತೊಮ್ಮೆ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡಿ ಜಿಂಬಾಬ್ವೆ ವಿರುದ್ಧ ಅಚ್ಚರಿಯ ಇನ್ನಿಂಗ್ಸ್ ಆಡಿದರು ಮತ್ತು ಪಂದ್ಯಾವಳಿಯಲ್ಲಿ ತಮ್ಮ ಮೂರನೇ ಅರ್ಧಶತಕವನ್ನು ಗಳಿಸಿದರು.

2 / 5
ಸೂರ್ಯ ಕೇವಲ 23 ಎಸೆತಗಳಲ್ಲಿ ಬಿರುಸಿನ ಅರ್ಧಶತಕ ಗಳಿಸುವ ಮೂಲಕ ಭಾರತವನ್ನು 186 ರನ್‌ಗಳಿಗೆ ಕೊಂಡೊಯ್ದರು. ಸೂರ್ಯ ಕೇವಲ 25 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್‌ ಒಳಗೊಂಡಂತೆ ಅಜೇಯ 61 ರನ್‌ ಗಳಿಸಿದರು. ಭಾರತ 14ನೇ ಓವರ್‌ವರೆಗೆ ಕೇವಲ 101 ರನ್ ಗಳಿಸಿ 4 ವಿಕೆಟ್ ಕಳೆದುಕೊಂಡಿತ್ತು, ಆದರೆ ಸೂರ್ಯ ಏಕಾಂಗಿಯಾಗಿ ಭಾರತವನ್ನು ಸ್ಪರ್ಧಾತ್ಮಕ ಮತ್ತೊಕ್ಕೆ ಕೊಂಡೊಯ್ದರು.

ಸೂರ್ಯ ಕೇವಲ 23 ಎಸೆತಗಳಲ್ಲಿ ಬಿರುಸಿನ ಅರ್ಧಶತಕ ಗಳಿಸುವ ಮೂಲಕ ಭಾರತವನ್ನು 186 ರನ್‌ಗಳಿಗೆ ಕೊಂಡೊಯ್ದರು. ಸೂರ್ಯ ಕೇವಲ 25 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್‌ ಒಳಗೊಂಡಂತೆ ಅಜೇಯ 61 ರನ್‌ ಗಳಿಸಿದರು. ಭಾರತ 14ನೇ ಓವರ್‌ವರೆಗೆ ಕೇವಲ 101 ರನ್ ಗಳಿಸಿ 4 ವಿಕೆಟ್ ಕಳೆದುಕೊಂಡಿತ್ತು, ಆದರೆ ಸೂರ್ಯ ಏಕಾಂಗಿಯಾಗಿ ಭಾರತವನ್ನು ಸ್ಪರ್ಧಾತ್ಮಕ ಮತ್ತೊಕ್ಕೆ ಕೊಂಡೊಯ್ದರು.

3 / 5
ಇಷ್ಟೇ ಅಲ್ಲ, ಈ ಇನ್ನಿಂಗ್ಸ್‌ನೊಂದಿಗೆ, ಸೂರ್ಯ ಈ ವರ್ಷ ಟಿ20 ಇಂಟರ್ನ್ಯಾಷನಲ್ನಲ್ಲಿ ತಮ್ಮ 1000 ರನ್ಗಳನ್ನು ಪೂರೈಸಿದ್ದಾರೆ. ಸೂರ್ಯ ಕೇವಲ 28 ಇನ್ನಿಂಗ್ಸ್‌ಗಳಲ್ಲಿ 186 ಸ್ಟ್ರೈಕ್ ರೇಟ್ ಹಾಗೂ 44.60 ಸರಾಸರಿಯಲ್ಲಿ 1026 ರನ್ ಗಳಿಸಿದ್ದಾರೆ. ಅವರಿಗಿಂತ ಮೊದಲು, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಮಾತ್ರ ವರ್ಷದಲ್ಲಿ ಒಂದು ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ದಾಖಲೆ ಬರೆದಿದ್ದರು.

ಇಷ್ಟೇ ಅಲ್ಲ, ಈ ಇನ್ನಿಂಗ್ಸ್‌ನೊಂದಿಗೆ, ಸೂರ್ಯ ಈ ವರ್ಷ ಟಿ20 ಇಂಟರ್ನ್ಯಾಷನಲ್ನಲ್ಲಿ ತಮ್ಮ 1000 ರನ್ಗಳನ್ನು ಪೂರೈಸಿದ್ದಾರೆ. ಸೂರ್ಯ ಕೇವಲ 28 ಇನ್ನಿಂಗ್ಸ್‌ಗಳಲ್ಲಿ 186 ಸ್ಟ್ರೈಕ್ ರೇಟ್ ಹಾಗೂ 44.60 ಸರಾಸರಿಯಲ್ಲಿ 1026 ರನ್ ಗಳಿಸಿದ್ದಾರೆ. ಅವರಿಗಿಂತ ಮೊದಲು, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಮಾತ್ರ ವರ್ಷದಲ್ಲಿ ಒಂದು ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ದಾಖಲೆ ಬರೆದಿದ್ದರು.

4 / 5
ಈ ವಿಶ್ವಕಪ್‌ನಲ್ಲಿ, ಸೂರ್ಯಕುಮಾರ್ ಭಾರತದ ಪರ ಸತತವಾಗಿ ರನ್ ಗಳಿಸುತ್ತಿದ್ದು, ವಿರಾಟ್ ಕೊಹ್ಲಿ ನಂತರ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಸೂರ್ಯ 5 ಇನ್ನಿಂಗ್ಸ್‌ಗಳಲ್ಲಿ 3 ಅರ್ಧ ಶತಕ ಸೇರಿದಂತೆ 225 ರನ್ ಗಳಿಸಿದ್ದಾರೆ.

ಈ ವಿಶ್ವಕಪ್‌ನಲ್ಲಿ, ಸೂರ್ಯಕುಮಾರ್ ಭಾರತದ ಪರ ಸತತವಾಗಿ ರನ್ ಗಳಿಸುತ್ತಿದ್ದು, ವಿರಾಟ್ ಕೊಹ್ಲಿ ನಂತರ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಸೂರ್ಯ 5 ಇನ್ನಿಂಗ್ಸ್‌ಗಳಲ್ಲಿ 3 ಅರ್ಧ ಶತಕ ಸೇರಿದಂತೆ 225 ರನ್ ಗಳಿಸಿದ್ದಾರೆ.

5 / 5

Published On - 4:38 pm, Sun, 6 November 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು