AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂಬೈ ಇಂಡಿಯನ್ಸ್​ಗೆ ಆಘಾತ: ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಔಟ್

Suryakumar Yadav: ಸದ್ಯ ಸೂರ್ಯಕುಮಾರ್ ಯಾದವ್ ಗಾಯದ ಕಾರಣ ವಿಶ್ರಾಂತಿ ಪಡೆದಿದ್ದಾರೆ. ಏಕೆಂದರೆ ಐಪಿಎಲ್ ನಂತರ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ 20 ಸರಣಿಯನ್ನು ಆಡಬೇಕಾಗಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: May 09, 2022 | 7:29 PM

Share
ಐಪಿಎಲ್ 2022 ರಲ್ಲಿ ಮೊದಲ 8 ಪಂದ್ಯಗಳಲ್ಲಿ ಸೋತ ನಂತರ, ಮುಂಬೈ ಇಂಡಿಯನ್ಸ್ ತಂಡವು ಎರಡು ಪಂದ್ಯಗಳನ್ನು ಗೆದ್ದಿದೆ. ಆದರೆ ಈಗ ಈ ತಂಡಕ್ಕೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಮುಂಬೈ ಇಂಡಿಯನ್ಸ್‌ನ ಮ್ಯಾಚ್ ವಿನ್ನಿಂಗ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಐಪಿಎಲ್ 2022 ರಿಂದ ಹೊರಗುಳಿದಿದ್ದಾರೆ.

ಐಪಿಎಲ್ 2022 ರಲ್ಲಿ ಮೊದಲ 8 ಪಂದ್ಯಗಳಲ್ಲಿ ಸೋತ ನಂತರ, ಮುಂಬೈ ಇಂಡಿಯನ್ಸ್ ತಂಡವು ಎರಡು ಪಂದ್ಯಗಳನ್ನು ಗೆದ್ದಿದೆ. ಆದರೆ ಈಗ ಈ ತಂಡಕ್ಕೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಮುಂಬೈ ಇಂಡಿಯನ್ಸ್‌ನ ಮ್ಯಾಚ್ ವಿನ್ನಿಂಗ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಐಪಿಎಲ್ 2022 ರಿಂದ ಹೊರಗುಳಿದಿದ್ದಾರೆ.

1 / 5
ಸೂರ್ಯಕುಮಾರ್ ಯಾದವ್ ಅವರ ಎಡಗೈಗೆ ಗಾಯವಾಗಿದ್ದು, ಹೀಗಾಗಿ ಐಪಿಎಲ್ 2022 ರಿಂದ ಹೊರಗುಳಿದಿದ್ದಾರೆ. ಅದರಂತೆ ಮುಂಬೈ ಇಂಡಿಯನ್ಸ್ ತಂಡದ ಮುಂದಿನ ಪಂದ್ಯಗಳಿಗೆ ಸೂರ್ಯಕುಮಾರ್ ಯಾದವ್ ಅಲಭ್ಯರಾಗಲಿದ್ದಾರೆ.

ಸೂರ್ಯಕುಮಾರ್ ಯಾದವ್ ಅವರ ಎಡಗೈಗೆ ಗಾಯವಾಗಿದ್ದು, ಹೀಗಾಗಿ ಐಪಿಎಲ್ 2022 ರಿಂದ ಹೊರಗುಳಿದಿದ್ದಾರೆ. ಅದರಂತೆ ಮುಂಬೈ ಇಂಡಿಯನ್ಸ್ ತಂಡದ ಮುಂದಿನ ಪಂದ್ಯಗಳಿಗೆ ಸೂರ್ಯಕುಮಾರ್ ಯಾದವ್ ಅಲಭ್ಯರಾಗಲಿದ್ದಾರೆ.

2 / 5
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಸೂರ್ಯಕುಮಾರ್ ಯಾದವ್ ಗಾಯಗೊಂಡಿರುವ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದೆ. ಈ ಕುರಿತು ಹೇಳಿಕೆ ನೀಡಿರುವ ಮುಂಬೈ ಇಂಡಿಯನ್ಸ್, 'ಸೂರ್ಯಕುಮಾರ್ ಯಾದವ್ ಎಡಗೈಗೆ ಗಾಯವಾಗಿದ್ದು, ಹೀಗಾಗಿ ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ. ಬಿಸಿಸಿಐನ ವೈದ್ಯಕೀಯ ತಂಡದೊಂದಿಗೆ ಮಾತುಕತೆ ನಡೆಸಿದ ನಂತರವೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಂಬೈ ಇಂಡಿಯನ್ಸ್ ತಿಳಿಸಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಸೂರ್ಯಕುಮಾರ್ ಯಾದವ್ ಗಾಯಗೊಂಡಿರುವ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದೆ. ಈ ಕುರಿತು ಹೇಳಿಕೆ ನೀಡಿರುವ ಮುಂಬೈ ಇಂಡಿಯನ್ಸ್, 'ಸೂರ್ಯಕುಮಾರ್ ಯಾದವ್ ಎಡಗೈಗೆ ಗಾಯವಾಗಿದ್ದು, ಹೀಗಾಗಿ ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ. ಬಿಸಿಸಿಐನ ವೈದ್ಯಕೀಯ ತಂಡದೊಂದಿಗೆ ಮಾತುಕತೆ ನಡೆಸಿದ ನಂತರವೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಂಬೈ ಇಂಡಿಯನ್ಸ್ ತಿಳಿಸಿದೆ.

3 / 5
ಈ ಬಾರಿಯ ಐಪಿಎಲ್​ಗೂ ಮುನ್ನ ಗಾಯಗೊಂಡಿದ್ದ  ಸೂರ್ಯಕುಮಾರ್ ಯಾದವ್ ಮೊದಲ ಎರಡು ಪಂದ್ಯಗಳನ್ನು ಆಡಿರಲಿಲ್ಲ. ಅವರ ಅನುಪಸ್ಥಿತಿಯಿಂದ ಮುಂಬೈ ಇಂಡಿಯನ್ಸ್ ತಂಡ ಪ್ರದರ್ಶನ ಮೇಲೆ ಪರಿಣಾಮ ಬೀರಿತ್ತು. ಆ ಬಳಿಕ ತಂಡಕ್ಕೆ ಮರಳಿದ್ದ ಸೂರ್ಯಕುಮಾರ್  8 ಪಂದ್ಯಗಳಲ್ಲಿ 3 ಅರ್ಧ ಶತಕಗಳನ್ನು ಒಳಗೊಂಡಂತೆ 43 ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ 303 ರನ್ ಗಳಿಸಿ ಮಿಂಚಿದ್ದರು. ಇದೀಗ ಮತ್ತೆ ಗಾಯಗೊಂಡು ಹೊರನಡೆದಿದ್ದಾರೆ.

ಈ ಬಾರಿಯ ಐಪಿಎಲ್​ಗೂ ಮುನ್ನ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್ ಮೊದಲ ಎರಡು ಪಂದ್ಯಗಳನ್ನು ಆಡಿರಲಿಲ್ಲ. ಅವರ ಅನುಪಸ್ಥಿತಿಯಿಂದ ಮುಂಬೈ ಇಂಡಿಯನ್ಸ್ ತಂಡ ಪ್ರದರ್ಶನ ಮೇಲೆ ಪರಿಣಾಮ ಬೀರಿತ್ತು. ಆ ಬಳಿಕ ತಂಡಕ್ಕೆ ಮರಳಿದ್ದ ಸೂರ್ಯಕುಮಾರ್ 8 ಪಂದ್ಯಗಳಲ್ಲಿ 3 ಅರ್ಧ ಶತಕಗಳನ್ನು ಒಳಗೊಂಡಂತೆ 43 ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ 303 ರನ್ ಗಳಿಸಿ ಮಿಂಚಿದ್ದರು. ಇದೀಗ ಮತ್ತೆ ಗಾಯಗೊಂಡು ಹೊರನಡೆದಿದ್ದಾರೆ.

4 / 5
ಸದ್ಯ ಸೂರ್ಯಕುಮಾರ್ ಯಾದವ್ ಗಾಯದ ಕಾರಣ ವಿಶ್ರಾಂತಿ ಪಡೆದಿದ್ದಾರೆ. ಏಕೆಂದರೆ ಐಪಿಎಲ್ ನಂತರ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ 20 ಸರಣಿಯನ್ನು ಆಡಬೇಕಾಗಿದೆ. ಈ ಸರಣಿಯಲ್ಲಿ ಅನೇಕ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಈ ವೇಳೆ ತಂಡದಲ್ಲಿ ಸೂರ್ಯಕುಮಾರ್ ಅವರ ಉಪಸ್ಥಿತಿಯು ಬಹಳ ಮುಖ್ಯವಾಗಿರುತ್ತದೆ. ಹಾಗಾಗಿ ಐಪಿಎಲ್​ನ ಮುಂದಿನ ಪಂದ್ಯಗಳಿಂದ ಹೊರಗುಳಿಯುವ ಮೂಲಕ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.

ಸದ್ಯ ಸೂರ್ಯಕುಮಾರ್ ಯಾದವ್ ಗಾಯದ ಕಾರಣ ವಿಶ್ರಾಂತಿ ಪಡೆದಿದ್ದಾರೆ. ಏಕೆಂದರೆ ಐಪಿಎಲ್ ನಂತರ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ 20 ಸರಣಿಯನ್ನು ಆಡಬೇಕಾಗಿದೆ. ಈ ಸರಣಿಯಲ್ಲಿ ಅನೇಕ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಈ ವೇಳೆ ತಂಡದಲ್ಲಿ ಸೂರ್ಯಕುಮಾರ್ ಅವರ ಉಪಸ್ಥಿತಿಯು ಬಹಳ ಮುಖ್ಯವಾಗಿರುತ್ತದೆ. ಹಾಗಾಗಿ ಐಪಿಎಲ್​ನ ಮುಂದಿನ ಪಂದ್ಯಗಳಿಂದ ಹೊರಗುಳಿಯುವ ಮೂಲಕ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!