AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I Player: ಐಸಿಸಿ ವರ್ಷದ ಟಿ20 ಆಟಗಾರ ಸೂರ್ಯಕುಮಾರ್ ಯಾದವ್

ICC T20I player of the year: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಪ್ರತಿ ವರ್ಷ ಪ್ರಧಾನ ಮಾಡುವ ವರ್ಷದ ಟಿ20 ಆಟಗಾರರ ಪ್ರಶಸ್ತಿಯು ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್​ಗೆ ಒಲಿದಿದೆ. ಈ ಮೂಲಕ ಈ ಪ್ರಶಸ್ತಿಯನ್ನು 2 ಬಾರಿ ಪಡೆದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jan 24, 2024 | 2:04 PM

Share
ಸೂರ್ಯಕುಮಾರ್ ಯಾದವ್ (Suryakumar Yadav) ಐಸಿಸಿ ವರ್ಷದ ಟಿ20 ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) 2023ರ ಸಾಲಿನ ಅತ್ಯುತ್ತಮ ಟಿ20 ಆಟಗಾರನಿಗೆ ನೀಡುವ ಈ ಪ್ರಶಸ್ತಿಯನ್ನು ಸೂರ್ಯಕುಮಾರ್ 2ನೇ ಬಾರಿ ಪಡೆಯುತ್ತಿರುವುದು ವಿಶೇಷ.

ಸೂರ್ಯಕುಮಾರ್ ಯಾದವ್ (Suryakumar Yadav) ಐಸಿಸಿ ವರ್ಷದ ಟಿ20 ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) 2023ರ ಸಾಲಿನ ಅತ್ಯುತ್ತಮ ಟಿ20 ಆಟಗಾರನಿಗೆ ನೀಡುವ ಈ ಪ್ರಶಸ್ತಿಯನ್ನು ಸೂರ್ಯಕುಮಾರ್ 2ನೇ ಬಾರಿ ಪಡೆಯುತ್ತಿರುವುದು ವಿಶೇಷ.

1 / 6
ಅಂದರೆ 2022 ರಲ್ಲೂ ವರ್ಷದ ಟಿ20 ಆಟಗಾರನ ಪ್ರಶಸ್ತಿಯನ್ನು ಸೂರ್ಯಕುಮಾರ್ ಯಾದವ್ ಮುಡಿಗೇರಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಟಿ20 ಕ್ರಿಕೆಟ್​ನ ಬೆಸ್ಟ್ ಆಟಗಾರನಾಗಿ ಮತ್ತೊಮ್ಮೆ ಐಸಿಸಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಮೂಲಕ 2 ಬಾರಿ ಐಸಿಸಿ ಟಿ20 ಆಟಗಾರನ ಗೌರವಕ್ಕೆ ಪಾತ್ರರಾದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಅಂದರೆ 2022 ರಲ್ಲೂ ವರ್ಷದ ಟಿ20 ಆಟಗಾರನ ಪ್ರಶಸ್ತಿಯನ್ನು ಸೂರ್ಯಕುಮಾರ್ ಯಾದವ್ ಮುಡಿಗೇರಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಟಿ20 ಕ್ರಿಕೆಟ್​ನ ಬೆಸ್ಟ್ ಆಟಗಾರನಾಗಿ ಮತ್ತೊಮ್ಮೆ ಐಸಿಸಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಮೂಲಕ 2 ಬಾರಿ ಐಸಿಸಿ ಟಿ20 ಆಟಗಾರನ ಗೌರವಕ್ಕೆ ಪಾತ್ರರಾದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 6
2023 ರಲ್ಲಿ ಟಿ20 ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸೂರ್ಯಕುಮಾರ್ 17 ಇನಿಂಗ್ಸ್​ಗಳಿಂದ 2 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 733 ರನ್ ಕಲೆಹಾಕಿದ್ದರು. ಈ ಮೂಲಕ ಕಳೆದ ವರ್ಷ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಪೇರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

2023 ರಲ್ಲಿ ಟಿ20 ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸೂರ್ಯಕುಮಾರ್ 17 ಇನಿಂಗ್ಸ್​ಗಳಿಂದ 2 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 733 ರನ್ ಕಲೆಹಾಕಿದ್ದರು. ಈ ಮೂಲಕ ಕಳೆದ ವರ್ಷ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಪೇರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 6
ಅದರಂತೆ ಇದೀಗ ಝಿಂಬಾಬ್ವೆಯ ಸಿಕಂದರ್ ರಾಝ, ನ್ಯೂಝಿಲೆಂಡ್​ನ ಮಾರ್ಕ್​ ಚಾಪ್ಮನ್ ಹಾಗೂ ಉಗಾಂಡ ಅಲ್ಪೇಶ್ ರಾಮ್​ಜಾನಿ ಅವರನ್ನು ಹಿಂದಿಕ್ಕಿ ಸೂರ್ಯಕುಮಾರ್ ಯಾದವ್ ಐಸಿಸಿ ವರ್ಷದ ಟಿ20 ಆಟಗಾರನಾಗಿ ಹೊರಹೊಮ್ಮಿದ್ದಾರೆ.

ಅದರಂತೆ ಇದೀಗ ಝಿಂಬಾಬ್ವೆಯ ಸಿಕಂದರ್ ರಾಝ, ನ್ಯೂಝಿಲೆಂಡ್​ನ ಮಾರ್ಕ್​ ಚಾಪ್ಮನ್ ಹಾಗೂ ಉಗಾಂಡ ಅಲ್ಪೇಶ್ ರಾಮ್​ಜಾನಿ ಅವರನ್ನು ಹಿಂದಿಕ್ಕಿ ಸೂರ್ಯಕುಮಾರ್ ಯಾದವ್ ಐಸಿಸಿ ವರ್ಷದ ಟಿ20 ಆಟಗಾರನಾಗಿ ಹೊರಹೊಮ್ಮಿದ್ದಾರೆ.

4 / 6
ಇದಲ್ಲದೆ ಐಸಿಸಿ ಪ್ರಕಟಿಸಿದ 2023 ರ ಟಿ20 ತಂಡದ ನಾಯಕರಾಗಿಯೂ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ. ಸೂರ್ಯಕುಮಾರ್ ಅವರನ್ನು ಹೊರತುಪಡಿಸಿ ಭಾರತದ ಯಶಸ್ವಿ ಜೈಸ್ವಾಲ್, ಅರ್ಷದೀಪ್ ಸಿಂಗ್ ಹಾಗೂ ರವಿ ಬಿಷ್ಣೋಯ್ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದಲ್ಲದೆ ಐಸಿಸಿ ಪ್ರಕಟಿಸಿದ 2023 ರ ಟಿ20 ತಂಡದ ನಾಯಕರಾಗಿಯೂ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ. ಸೂರ್ಯಕುಮಾರ್ ಅವರನ್ನು ಹೊರತುಪಡಿಸಿ ಭಾರತದ ಯಶಸ್ವಿ ಜೈಸ್ವಾಲ್, ಅರ್ಷದೀಪ್ ಸಿಂಗ್ ಹಾಗೂ ರವಿ ಬಿಷ್ಣೋಯ್ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

5 / 6
ಐಸಿಸಿ ಟಿ20 ತಂಡಳ ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್ (ಭಾರತ), ಫಿಲ್ ಸಾಲ್ಟ್ (ಇಂಗ್ಲೆಂಡ್), ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್), ಮಾರ್ಕ್ ಚಾಪ್ಮನ್ (ನ್ಯೂಝಿಲೆಂಡ್), ಸಿಕಂದರ್ ರಾಝ (ಝಿಂಬಾಬ್ವೆ), ಅಲ್ಪೇಶ್ ರಾಮ್​ಜಾನಿ (ಉಗಾಂಡ), ಮಾರ್ಕ್ ಅಡೈರ್ (ಐರ್ಲೆಂಡ್), ರವಿ ಬಿಷ್ಣೋಯ್ (ಭಾರತ), ರಿಚರ್ಡ್ ನಾಗರಾವ (ಝಿಂಬಾಬ್ವೆ), ಅರ್ಷದೀಪ್ ಸಿಂಗ್ (ಭಾರತ).

ಐಸಿಸಿ ಟಿ20 ತಂಡಳ ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್ (ಭಾರತ), ಫಿಲ್ ಸಾಲ್ಟ್ (ಇಂಗ್ಲೆಂಡ್), ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್), ಮಾರ್ಕ್ ಚಾಪ್ಮನ್ (ನ್ಯೂಝಿಲೆಂಡ್), ಸಿಕಂದರ್ ರಾಝ (ಝಿಂಬಾಬ್ವೆ), ಅಲ್ಪೇಶ್ ರಾಮ್​ಜಾನಿ (ಉಗಾಂಡ), ಮಾರ್ಕ್ ಅಡೈರ್ (ಐರ್ಲೆಂಡ್), ರವಿ ಬಿಷ್ಣೋಯ್ (ಭಾರತ), ರಿಚರ್ಡ್ ನಾಗರಾವ (ಝಿಂಬಾಬ್ವೆ), ಅರ್ಷದೀಪ್ ಸಿಂಗ್ (ಭಾರತ).

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ