AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಟಿ20 ತಂಡದ ನೂತನ ನಾಯಕ ಸೂರ್ಯಕುಮಾರ್ ಯಾದವ್?

Suryakumar Yadav: ಸೂರ್ಯಕುಮಾರ್ ಯಾದವ್ 7 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಅದು ಕೂಡ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಎಂಬುದು ವಿಶೇಷ. ಈ ಎರಡು ಸರಣಿಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಅಲ್ಲದೆ ಈ ಸರಣಿಯ 7 ಪಂದ್ಯಗಳಲ್ಲಿ 5 ರಲ್ಲಿ ಭಾರತ ತಂಡ ಜಯಭೇರಿ ಬಾರಿಸಿತ್ತು. ಹೀಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನ ಸ್ಥಾನಕ್ಕೆ ಪರಿಗಣಿಸಲಾಗಿದೆ.

ಝಾಹಿರ್ ಯೂಸುಫ್
|

Updated on:Jul 17, 2024 | 11:04 AM

Share
ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ (Suryakumar Yadav) ಆಯ್ಕೆಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಟಿ20 ತಂಡದ ಕ್ಯಾಪ್ಟನ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್​ಗೆ ನಾಯಕನ ಪಟ್ಟ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ ಸೂರ್ಯ ಭಾರತ ಟಿ20 ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ (Suryakumar Yadav) ಆಯ್ಕೆಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಟಿ20 ತಂಡದ ಕ್ಯಾಪ್ಟನ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್​ಗೆ ನಾಯಕನ ಪಟ್ಟ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ ಸೂರ್ಯ ಭಾರತ ಟಿ20 ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

1 / 5
ಸೂರ್ಯಕುಮಾರ್ ಯಾದವ್ ಇದಕ್ಕೂ ಮುನ್ನ ಭಾರತ ತಂಡವನ್ನು 7 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆ ಟೀಮ್ ಇಂಡಿಯಾದ ಸಾರಥ್ಯವಹಿಸಿದ್ದ ಸೂರ್ಯ 5 ಪಂದ್ಯಗಳಲ್ಲಿ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ. ಇದೀಗ ಜುಲೈ 27 ರಿಂದ ಶುರುವಾಗಲಿರುವ ಟಿ20 ಸರಣಿ ಮೂಲಕ ಪೂರ್ಣ ಪ್ರಮಾಣದ ನಾಯಕರಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಸೂರ್ಯಕುಮಾರ್ ಯಾದವ್ ಇದಕ್ಕೂ ಮುನ್ನ ಭಾರತ ತಂಡವನ್ನು 7 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆ ಟೀಮ್ ಇಂಡಿಯಾದ ಸಾರಥ್ಯವಹಿಸಿದ್ದ ಸೂರ್ಯ 5 ಪಂದ್ಯಗಳಲ್ಲಿ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ. ಇದೀಗ ಜುಲೈ 27 ರಿಂದ ಶುರುವಾಗಲಿರುವ ಟಿ20 ಸರಣಿ ಮೂಲಕ ಪೂರ್ಣ ಪ್ರಮಾಣದ ನಾಯಕರಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

2 / 5
ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಹೀಗಾಗಿ ಟಿ20 ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿತ್ತು. ಆದರಂತೆ ನಾಯಕರುಗಳ ರೇಸ್​ನಲ್ಲಿ ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಹೆಸರುಗಳು ಮುಂಚೂಣಿಯಲ್ಲಿದ್ದವು.

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಹೀಗಾಗಿ ಟಿ20 ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿತ್ತು. ಆದರಂತೆ ನಾಯಕರುಗಳ ರೇಸ್​ನಲ್ಲಿ ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಹೆಸರುಗಳು ಮುಂಚೂಣಿಯಲ್ಲಿದ್ದವು.

3 / 5
ಅದರಂತೆ ಇದೀಗ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯರನ್ನು ಹಿಂದಿಕ್ಕಿ ಭಾರತ ತಂಡದ ನಾಯಕತ್ವ ಪಡೆಯುವಲ್ಲಿ ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಇದರೊಂದಿಗೆ ರೋಹಿತ್ ಶರ್ಮಾರ ಉತ್ತರಾಧಿಕಾರಿಯಾಗಿ ಸೂರ್ಯಕುಮಾರ್ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಅದರಂತೆ ಇದೀಗ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯರನ್ನು ಹಿಂದಿಕ್ಕಿ ಭಾರತ ತಂಡದ ನಾಯಕತ್ವ ಪಡೆಯುವಲ್ಲಿ ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಇದರೊಂದಿಗೆ ರೋಹಿತ್ ಶರ್ಮಾರ ಉತ್ತರಾಧಿಕಾರಿಯಾಗಿ ಸೂರ್ಯಕುಮಾರ್ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

4 / 5
ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿತ್ತು. ಆದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಪ್ರತಿಯೊಂದು ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಲಭ್ಯತೆಯು ಅನಿಶ್ಚಿತತೆಯಾಗಿದೆ. ಹೀಗಾಗಿ ಖಾಯಂ ಸದಸ್ಯರೊಬ್ಬರಿಗೆ ನಾಯಕತ್ವ ನೀಡುವಂತೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ತಿಳಿಸಿದ್ದರು. ಅದರಂತೆ ಇದೀಗ ಸೂರ್ಯಕುಮಾರ್ ಯಾದವ್​​ಗೆ ನಾಯಕನ ಪಟ್ಟ ಒಲಿದಿದೆ ಎಂದು ತಿಳಿದು ಬಂದಿದೆ.

ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿತ್ತು. ಆದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಪ್ರತಿಯೊಂದು ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಲಭ್ಯತೆಯು ಅನಿಶ್ಚಿತತೆಯಾಗಿದೆ. ಹೀಗಾಗಿ ಖಾಯಂ ಸದಸ್ಯರೊಬ್ಬರಿಗೆ ನಾಯಕತ್ವ ನೀಡುವಂತೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ತಿಳಿಸಿದ್ದರು. ಅದರಂತೆ ಇದೀಗ ಸೂರ್ಯಕುಮಾರ್ ಯಾದವ್​​ಗೆ ನಾಯಕನ ಪಟ್ಟ ಒಲಿದಿದೆ ಎಂದು ತಿಳಿದು ಬಂದಿದೆ.

5 / 5

Published On - 11:04 am, Wed, 17 July 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್