AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಟಿ20 ತಂಡದ ನೂತನ ನಾಯಕ ಸೂರ್ಯಕುಮಾರ್ ಯಾದವ್?

Suryakumar Yadav: ಸೂರ್ಯಕುಮಾರ್ ಯಾದವ್ 7 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಅದು ಕೂಡ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಎಂಬುದು ವಿಶೇಷ. ಈ ಎರಡು ಸರಣಿಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಅಲ್ಲದೆ ಈ ಸರಣಿಯ 7 ಪಂದ್ಯಗಳಲ್ಲಿ 5 ರಲ್ಲಿ ಭಾರತ ತಂಡ ಜಯಭೇರಿ ಬಾರಿಸಿತ್ತು. ಹೀಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನ ಸ್ಥಾನಕ್ಕೆ ಪರಿಗಣಿಸಲಾಗಿದೆ.

ಝಾಹಿರ್ ಯೂಸುಫ್
|

Updated on:Jul 17, 2024 | 11:04 AM

Share
ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ (Suryakumar Yadav) ಆಯ್ಕೆಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಟಿ20 ತಂಡದ ಕ್ಯಾಪ್ಟನ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್​ಗೆ ನಾಯಕನ ಪಟ್ಟ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ ಸೂರ್ಯ ಭಾರತ ಟಿ20 ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ (Suryakumar Yadav) ಆಯ್ಕೆಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಟಿ20 ತಂಡದ ಕ್ಯಾಪ್ಟನ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್​ಗೆ ನಾಯಕನ ಪಟ್ಟ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ ಸೂರ್ಯ ಭಾರತ ಟಿ20 ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

1 / 5
ಸೂರ್ಯಕುಮಾರ್ ಯಾದವ್ ಇದಕ್ಕೂ ಮುನ್ನ ಭಾರತ ತಂಡವನ್ನು 7 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆ ಟೀಮ್ ಇಂಡಿಯಾದ ಸಾರಥ್ಯವಹಿಸಿದ್ದ ಸೂರ್ಯ 5 ಪಂದ್ಯಗಳಲ್ಲಿ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ. ಇದೀಗ ಜುಲೈ 27 ರಿಂದ ಶುರುವಾಗಲಿರುವ ಟಿ20 ಸರಣಿ ಮೂಲಕ ಪೂರ್ಣ ಪ್ರಮಾಣದ ನಾಯಕರಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಸೂರ್ಯಕುಮಾರ್ ಯಾದವ್ ಇದಕ್ಕೂ ಮುನ್ನ ಭಾರತ ತಂಡವನ್ನು 7 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆ ಟೀಮ್ ಇಂಡಿಯಾದ ಸಾರಥ್ಯವಹಿಸಿದ್ದ ಸೂರ್ಯ 5 ಪಂದ್ಯಗಳಲ್ಲಿ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ. ಇದೀಗ ಜುಲೈ 27 ರಿಂದ ಶುರುವಾಗಲಿರುವ ಟಿ20 ಸರಣಿ ಮೂಲಕ ಪೂರ್ಣ ಪ್ರಮಾಣದ ನಾಯಕರಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

2 / 5
ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಹೀಗಾಗಿ ಟಿ20 ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿತ್ತು. ಆದರಂತೆ ನಾಯಕರುಗಳ ರೇಸ್​ನಲ್ಲಿ ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಹೆಸರುಗಳು ಮುಂಚೂಣಿಯಲ್ಲಿದ್ದವು.

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಹೀಗಾಗಿ ಟಿ20 ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿತ್ತು. ಆದರಂತೆ ನಾಯಕರುಗಳ ರೇಸ್​ನಲ್ಲಿ ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಹೆಸರುಗಳು ಮುಂಚೂಣಿಯಲ್ಲಿದ್ದವು.

3 / 5
ಅದರಂತೆ ಇದೀಗ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯರನ್ನು ಹಿಂದಿಕ್ಕಿ ಭಾರತ ತಂಡದ ನಾಯಕತ್ವ ಪಡೆಯುವಲ್ಲಿ ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಇದರೊಂದಿಗೆ ರೋಹಿತ್ ಶರ್ಮಾರ ಉತ್ತರಾಧಿಕಾರಿಯಾಗಿ ಸೂರ್ಯಕುಮಾರ್ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಅದರಂತೆ ಇದೀಗ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯರನ್ನು ಹಿಂದಿಕ್ಕಿ ಭಾರತ ತಂಡದ ನಾಯಕತ್ವ ಪಡೆಯುವಲ್ಲಿ ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಇದರೊಂದಿಗೆ ರೋಹಿತ್ ಶರ್ಮಾರ ಉತ್ತರಾಧಿಕಾರಿಯಾಗಿ ಸೂರ್ಯಕುಮಾರ್ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

4 / 5
ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿತ್ತು. ಆದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಪ್ರತಿಯೊಂದು ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಲಭ್ಯತೆಯು ಅನಿಶ್ಚಿತತೆಯಾಗಿದೆ. ಹೀಗಾಗಿ ಖಾಯಂ ಸದಸ್ಯರೊಬ್ಬರಿಗೆ ನಾಯಕತ್ವ ನೀಡುವಂತೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ತಿಳಿಸಿದ್ದರು. ಅದರಂತೆ ಇದೀಗ ಸೂರ್ಯಕುಮಾರ್ ಯಾದವ್​​ಗೆ ನಾಯಕನ ಪಟ್ಟ ಒಲಿದಿದೆ ಎಂದು ತಿಳಿದು ಬಂದಿದೆ.

ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿತ್ತು. ಆದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಪ್ರತಿಯೊಂದು ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಲಭ್ಯತೆಯು ಅನಿಶ್ಚಿತತೆಯಾಗಿದೆ. ಹೀಗಾಗಿ ಖಾಯಂ ಸದಸ್ಯರೊಬ್ಬರಿಗೆ ನಾಯಕತ್ವ ನೀಡುವಂತೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ತಿಳಿಸಿದ್ದರು. ಅದರಂತೆ ಇದೀಗ ಸೂರ್ಯಕುಮಾರ್ ಯಾದವ್​​ಗೆ ನಾಯಕನ ಪಟ್ಟ ಒಲಿದಿದೆ ಎಂದು ತಿಳಿದು ಬಂದಿದೆ.

5 / 5

Published On - 11:04 am, Wed, 17 July 24

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್