AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ದಾಖಲೆಯ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್

Suryakumar Yadav Records: ಟಿ20 ಇನಿಂಗ್ಸ್​ಗಳಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎಂಬ ಹಿರಿಮೆಗೂ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರಿನಲ್ಲಿತ್ತು.

TV9 Web
| Edited By: |

Updated on:Dec 14, 2023 | 11:35 PM

Share
ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು.

ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 9
ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶುಭ್​ಮನ್ ಗಿಲ್ 12 ರನ್​ಗಳಿಸಿ ಔಟಾದರೆ, ಇದರ ಬೆನ್ನಲ್ಲೇ ತಿಲಕ್ ವರ್ಮಾ ಶೂನ್ಯಕ್ಕೆ ಔಟಾಗಿ ನಿರ್ಗಮಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶುಭ್​ಮನ್ ಗಿಲ್ 12 ರನ್​ಗಳಿಸಿ ಔಟಾದರೆ, ಇದರ ಬೆನ್ನಲ್ಲೇ ತಿಲಕ್ ವರ್ಮಾ ಶೂನ್ಯಕ್ಕೆ ಔಟಾಗಿ ನಿರ್ಗಮಿಸಿದರು.

2 / 9
ಈ ಹಂತದಲ್ಲಿ ಜೊತೆಗೂಡಿದ ಯಶಸ್ವಿ ಜೈಸ್ವಾಲ್ ಹಾಗೂ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಎಡಗೈ ದಾಂಡಿಗ ಯಶಸ್ವಿ 41 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 60 ರನ್ ಬಾರಿಸಿ ಔಟಾದರು.

ಈ ಹಂತದಲ್ಲಿ ಜೊತೆಗೂಡಿದ ಯಶಸ್ವಿ ಜೈಸ್ವಾಲ್ ಹಾಗೂ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಎಡಗೈ ದಾಂಡಿಗ ಯಶಸ್ವಿ 41 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 60 ರನ್ ಬಾರಿಸಿ ಔಟಾದರು.

3 / 9
ಇದರ ಬೆನ್ನಲ್ಲೇ ಸಿಡಿಲಬ್ಬರ ಶುರು ಮಾಡಿದ ಸೂರ್ಯಕುಮಾರ್ ಯಾದವ್ ಸೌತ್ ಆಫ್ರಿಕಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 55 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಸ್ಪೋಟಕ ಶತಕ ಪೂರೈಸಿದರು.

ಇದರ ಬೆನ್ನಲ್ಲೇ ಸಿಡಿಲಬ್ಬರ ಶುರು ಮಾಡಿದ ಸೂರ್ಯಕುಮಾರ್ ಯಾದವ್ ಸೌತ್ ಆಫ್ರಿಕಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 55 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಸ್ಪೋಟಕ ಶತಕ ಪೂರೈಸಿದರು.

4 / 9
ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಶತಕ ಬಾರಿಸಿದ ರೋಹಿತ್ ಶರ್ಮಾ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಸರಿಗಟ್ಟಿದ್ದಾರೆ. ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನಲ್ಲಿ 4 ಶತಕಗಳನ್ನು ಬಾರಿಸಿದ್ದರು.

ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಶತಕ ಬಾರಿಸಿದ ರೋಹಿತ್ ಶರ್ಮಾ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಸರಿಗಟ್ಟಿದ್ದಾರೆ. ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನಲ್ಲಿ 4 ಶತಕಗಳನ್ನು ಬಾರಿಸಿದ್ದರು.

5 / 9
ಇದೀಗ ಸೂರ್ಯಕುಮಾರ್ ಯಾದವ್ ಕೂಡ ಟಿ20 ಕ್ರಿಕೆಟ್​ನಲ್ಲಿ 4 ಶತಕಗಳನ್ನು ಸಿಡಿಸುವ ಮೂಲಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದೀಗ ಸೂರ್ಯಕುಮಾರ್ ಯಾದವ್ ಕೂಡ ಟಿ20 ಕ್ರಿಕೆಟ್​ನಲ್ಲಿ 4 ಶತಕಗಳನ್ನು ಸಿಡಿಸುವ ಮೂಲಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

6 / 9
ಅಷ್ಟೇ ಅಲ್ಲದೆ ಅತೀ ಕಡಿಮೆ ಟಿ20 ಇನಿಂಗ್ಸ್​ಗಳಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎಂಬ ಹಿರಿಮೆಗೂ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರಿನಲ್ಲಿತ್ತು.

ಅಷ್ಟೇ ಅಲ್ಲದೆ ಅತೀ ಕಡಿಮೆ ಟಿ20 ಇನಿಂಗ್ಸ್​ಗಳಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎಂಬ ಹಿರಿಮೆಗೂ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರಿನಲ್ಲಿತ್ತು.

7 / 9
ಗ್ಲೆನ್ ಮ್ಯಾಕ್ಸ್​ವೆಲ್ 92 ಇನಿಂಗ್ಸ್​ಗಳ ಮೂಲಕ 4 ಟಿ20 ಶತಕಗಳನ್ನು ಬಾರಿಸಿದ್ದರು. ಇದೀಗ ಕೇವಲ 57 ಇನಿಂಗ್ಸ್​ಗಳ ಮೂಲಕ 4 ಭರ್ಜರಿ ಸೆಂಚುರಿ ಸಿಡಿಸಿ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಗ್ಲೆನ್ ಮ್ಯಾಕ್ಸ್​ವೆಲ್ 92 ಇನಿಂಗ್ಸ್​ಗಳ ಮೂಲಕ 4 ಟಿ20 ಶತಕಗಳನ್ನು ಬಾರಿಸಿದ್ದರು. ಇದೀಗ ಕೇವಲ 57 ಇನಿಂಗ್ಸ್​ಗಳ ಮೂಲಕ 4 ಭರ್ಜರಿ ಸೆಂಚುರಿ ಸಿಡಿಸಿ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

8 / 9
ಸೂರ್ಯಕುಮಾರ್ ಯಾದವ್ (100) ಅವರ ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿದೆ. ಈ ಮೂಲಕ ಸೌತ್ ಆಫ್ರಿಕಾ ತಂಡಕ್ಕೆ ಗೆಲ್ಲಲು 202 ರನ್​ಗಳ ಗುರಿ ನೀಡಿದೆ.

ಸೂರ್ಯಕುಮಾರ್ ಯಾದವ್ (100) ಅವರ ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿದೆ. ಈ ಮೂಲಕ ಸೌತ್ ಆಫ್ರಿಕಾ ತಂಡಕ್ಕೆ ಗೆಲ್ಲಲು 202 ರನ್​ಗಳ ಗುರಿ ನೀಡಿದೆ.

9 / 9

Published On - 10:08 pm, Thu, 14 December 23

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು