Suryakumar Yadav: ಉಡುಪಿ ದೇವಸ್ಥಾನದಲ್ಲಿ ಹರಕೆ ತೀರಿಸಿದ ಸೂರ್ಯಕುಮಾರ್ ಯಾದವ್

Suryakumar Yadav - Devisha shetty: ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಮೂಲತಃ ಮಂಗಳೂರಿನವರು. ಮುಂಬೈನಲ್ಲಿ ನೆಲೆಸಿರುವ ದೇವಿಶಾ ಹಾಗೂ ಸೂರ್ಯ ಒಂದೇ ಕಾಲೇಜ್​ನಲ್ಲಿ ಓದಿದ್ದಾರೆ. ಇದೇ ವೇಳೆ ಇಬ್ಬರು ನಡುವೆ ಪ್ರೇಮಾಂಕುರವಾಗಿದ್ದು, 2016 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಪತ್ನಿಯ ಊರಿಗೆ ಬಂದು ಸೂರ್ಯಕುಮಾರ್ ಯಾದವ್ ವಿಶ್ವಕಪ್ ಗೆಲುವಿನ ಹರಕೆ ತೀರಿಸಿದ್ದಾರೆ.

|

Updated on: Jul 09, 2024 | 11:56 AM

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ (Suryakumar Yadav) ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ (Suryakumar Yadav) ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

1 / 5
ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಈ ಹರಕೆ ತೀರಿಸಲು ಇದೀಗ ಕಾಪುವಿನ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಈ ಹರಕೆ ತೀರಿಸಲು ಇದೀಗ ಕಾಪುವಿನ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

2 / 5
ಇನ್ನು ಕಾಪು ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ದಂಪತಿಯನ್ನು ದೇವಳದ ಆಡಳಿತ ಮಂಡಳಿ ಸನ್ಮಾನಿಸಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾ ಆಟಗಾರನಿಗೆ ಸೂಕ್ತ ಭದ್ರತೆ ಒದಗಿಸಲು ಮಾರಿಗುಡಿ ಸುತ್ತ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು.

ಇನ್ನು ಕಾಪು ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ದಂಪತಿಯನ್ನು ದೇವಳದ ಆಡಳಿತ ಮಂಡಳಿ ಸನ್ಮಾನಿಸಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾ ಆಟಗಾರನಿಗೆ ಸೂಕ್ತ ಭದ್ರತೆ ಒದಗಿಸಲು ಮಾರಿಗುಡಿ ಸುತ್ತ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು.

3 / 5
ಅದರಂತೆ ಮಂಗಳವಾರ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಹಾಗೂ ದೇವಿಶಾ ಮಾರಿಗುಡಿ ದೇವಸ್ಥಾನದಲ್ಲಿ ಹರಕೆ ತೀರಿಸಿ ತೆರಳಿದ್ದಾರೆ. ಇದೀಗ ಉಡುಪಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅದರಂತೆ ಮಂಗಳವಾರ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಹಾಗೂ ದೇವಿಶಾ ಮಾರಿಗುಡಿ ದೇವಸ್ಥಾನದಲ್ಲಿ ಹರಕೆ ತೀರಿಸಿ ತೆರಳಿದ್ದಾರೆ. ಇದೀಗ ಉಡುಪಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ 10 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ ಒಟ್ಟು 199 ರನ್ ಬಾರಿಸಿದ್ದರು. ಅದರಲ್ಲೂ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ ಗೆಲುವು ದಾಖಲಿಸಿತ್ತು. ಈ ಸಂಭ್ರಮದ ನಡುವೆ ಸೂರ್ಯಕುಮಾರ್ ಉಡುಪಿಗೆ ಬಂದು ತಮ್ಮ ಹರಕೆ ತೀರಿಸಿರುವುದು ವಿಶೇಷ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ 10 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ ಒಟ್ಟು 199 ರನ್ ಬಾರಿಸಿದ್ದರು. ಅದರಲ್ಲೂ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ ಗೆಲುವು ದಾಖಲಿಸಿತ್ತು. ಈ ಸಂಭ್ರಮದ ನಡುವೆ ಸೂರ್ಯಕುಮಾರ್ ಉಡುಪಿಗೆ ಬಂದು ತಮ್ಮ ಹರಕೆ ತೀರಿಸಿರುವುದು ವಿಶೇಷ.

5 / 5
Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ