AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸೂರ್ಯಕುಮಾರ್ ಯಾದವ್ ಐಪಿಎಲ್ ಭವಿಷ್ಯ ಇಂದು ನಿರ್ಧಾರ: ಬೆಂಗಳೂರಿನಲ್ಲಿ ಅಗ್ನಿಪರೀಕ್ಷೆ

Suryakumar Yadav Fitness Test: ಸೂರ್ಯಕುಮಾರ್ ಯಾದವ್ ಅವರು ಇಂದು ಬೆಂಗಳೂರಿನ ಎನ್‌ಸಿಎ ಅಂದರೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಫಿಟ್ನೆಸ್ ಪರೀಕ್ಷೆಯ ಫಲಿತಾಂಶಗಳತ್ತ ಎಲ್ಲರ ಕಣ್ಣಿದೆ. ಏಕೆಂದರೆ ಸೂರ್ಯಕುಮಾರ್ ಅವರ ಐಪಿಎಲ್ ಭವಿಷ್ಯ ಈ ಫಲಿತಾಂಶದ ಮೇಲೆ ಅವಲಂಬಿತವಾಗಿದೆ.

Vinay Bhat
|

Updated on: Mar 21, 2024 | 7:38 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​ಗೆ ಮಾರ್ಚ್ 22 ರಂದು ಅದ್ಧೂರಿ ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಿಂದ ದೊಡ್ಡ ಸುದ್ದಿ ಹೊರಬಿದ್ದಿದೆ. ಮಾರ್ಚ್ 21 ಗುರುವಾರ ಮುಂಬೈ ಇಂಡಿಯನ್ಸ್ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್‌ಗೆ ನಿರ್ಣಾಯಕ ದಿನವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​ಗೆ ಮಾರ್ಚ್ 22 ರಂದು ಅದ್ಧೂರಿ ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಿಂದ ದೊಡ್ಡ ಸುದ್ದಿ ಹೊರಬಿದ್ದಿದೆ. ಮಾರ್ಚ್ 21 ಗುರುವಾರ ಮುಂಬೈ ಇಂಡಿಯನ್ಸ್ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್‌ಗೆ ನಿರ್ಣಾಯಕ ದಿನವಾಗಿದೆ.

1 / 5
ಸೂರ್ಯಕುಮಾರ್ ಅವರು ಇಂದು ಬೆಂಗಳೂರಿನ ಎನ್‌ಸಿಎ ಅಂದರೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಫಿಟ್ನೆಸ್ ಪರೀಕ್ಷೆಯ ಫಲಿತಾಂಶಗಳತ್ತ ಎಲ್ಲರ ಕಣ್ಣಿದೆ. ಏಕೆಂದರೆ ಸೂರ್ಯಕುಮಾರ್ ಅವರ ಐಪಿಎಲ್ ಭವಿಷ್ಯ ಈ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಪುನಃ ಫೇಲ್ ಆದರೆ ಎಂಐ ತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ.

ಸೂರ್ಯಕುಮಾರ್ ಅವರು ಇಂದು ಬೆಂಗಳೂರಿನ ಎನ್‌ಸಿಎ ಅಂದರೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಫಿಟ್ನೆಸ್ ಪರೀಕ್ಷೆಯ ಫಲಿತಾಂಶಗಳತ್ತ ಎಲ್ಲರ ಕಣ್ಣಿದೆ. ಏಕೆಂದರೆ ಸೂರ್ಯಕುಮಾರ್ ಅವರ ಐಪಿಎಲ್ ಭವಿಷ್ಯ ಈ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಪುನಃ ಫೇಲ್ ಆದರೆ ಎಂಐ ತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ.

2 / 5
ಸೂರ್ಯಕುಮಾರ್ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಗಾಯಗೊಂಡು ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ನಂತರ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಗಾಯದಿಂದ ಸೂರ್ಯ ಚೇತರಿಸಿಕೊಂಡಿದ್ದಾರೆ. ಆದರೆ ತಾನು ಸಂಪೂರ್ಣ ಫಿಟ್ ಎಂದು ಎನ್​ಸಿಎಗೆ ಸಾಬೀತು ಮಾಡಬೇಕಿದೆ. ಆಗ ಮಾತ್ರ ಸೂರ್ಯನಿಗೆ ಆಡಲು ಅವಕಾಶ ಸಿಗುತ್ತದೆ.

ಸೂರ್ಯಕುಮಾರ್ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಗಾಯಗೊಂಡು ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ನಂತರ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಗಾಯದಿಂದ ಸೂರ್ಯ ಚೇತರಿಸಿಕೊಂಡಿದ್ದಾರೆ. ಆದರೆ ತಾನು ಸಂಪೂರ್ಣ ಫಿಟ್ ಎಂದು ಎನ್​ಸಿಎಗೆ ಸಾಬೀತು ಮಾಡಬೇಕಿದೆ. ಆಗ ಮಾತ್ರ ಸೂರ್ಯನಿಗೆ ಆಡಲು ಅವಕಾಶ ಸಿಗುತ್ತದೆ.

3 / 5
ಸೂರ್ಯಕುಮಾರ್ ಯಾದವ್ ಮಾರ್ಚ್ 19 ರಂದು ಎನ್​ಸಿಎನಲ್ಲಿ ಫಿಟ್ನೆಸ್ ಪರೀಕ್ಷೆಯನ್ನು ನೀಡಿದ್ದರು. ಆದರೆ ಸೂರ್ಯ ಇದರಲ್ಲಿ ವಿಫಲರಾದರು. ಈ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲ್ ಆದ ನಂತರ ಸೂರ್ಯ ಬ್ರೋಕನ್ ಹಾರ್ಟ್ ಎಮೋಜಿಯನ್ನು ಇನ್​ಸ್ಟಾಗ್ರಾಮ್​ನ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸೂರ್ಯ ಗುರುವಾರ ಮತ್ತೊಮ್ಮೆ ಅಗ್ನಿಪರೀಕ್ಷೆ ಎದುರಿಸಲಿದ್ದಾರೆ.

ಸೂರ್ಯಕುಮಾರ್ ಯಾದವ್ ಮಾರ್ಚ್ 19 ರಂದು ಎನ್​ಸಿಎನಲ್ಲಿ ಫಿಟ್ನೆಸ್ ಪರೀಕ್ಷೆಯನ್ನು ನೀಡಿದ್ದರು. ಆದರೆ ಸೂರ್ಯ ಇದರಲ್ಲಿ ವಿಫಲರಾದರು. ಈ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲ್ ಆದ ನಂತರ ಸೂರ್ಯ ಬ್ರೋಕನ್ ಹಾರ್ಟ್ ಎಮೋಜಿಯನ್ನು ಇನ್​ಸ್ಟಾಗ್ರಾಮ್​ನ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸೂರ್ಯ ಗುರುವಾರ ಮತ್ತೊಮ್ಮೆ ಅಗ್ನಿಪರೀಕ್ಷೆ ಎದುರಿಸಲಿದ್ದಾರೆ.

4 / 5
ಸೂರ್ಯಕುಮಾರ್ ಯಾದವ್ 1 ಟೆಸ್ಟ್, 37 ODI ಮತ್ತು 60 T20I ಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಈ ಮೂರು ಮಾದರಿಗಳಲ್ಲಿ ಕ್ರಮವಾಗಿ 8, 773 ಮತ್ತು 2 ಸಾವಿರದ 141 ರನ್ ಗಳಿಸಿದ್ದಾರೆ. ಸೂರ್ಯಕುಮಾರ್ 2012ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ 16ನೇ ಋತುವಿನ ತನಕ ಸೂರ್ಯ 139 ಪಂದ್ಯಗಳಲ್ಲಿ 1 ಶತಕ ಮತ್ತು 21 ಅರ್ಧಶತಕಗಳೊಂದಿಗೆ 3,249 ರನ್ ಗಳಿಸಿದ್ದಾರೆ.

ಸೂರ್ಯಕುಮಾರ್ ಯಾದವ್ 1 ಟೆಸ್ಟ್, 37 ODI ಮತ್ತು 60 T20I ಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಈ ಮೂರು ಮಾದರಿಗಳಲ್ಲಿ ಕ್ರಮವಾಗಿ 8, 773 ಮತ್ತು 2 ಸಾವಿರದ 141 ರನ್ ಗಳಿಸಿದ್ದಾರೆ. ಸೂರ್ಯಕುಮಾರ್ 2012ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ 16ನೇ ಋತುವಿನ ತನಕ ಸೂರ್ಯ 139 ಪಂದ್ಯಗಳಲ್ಲಿ 1 ಶತಕ ಮತ್ತು 21 ಅರ್ಧಶತಕಗಳೊಂದಿಗೆ 3,249 ರನ್ ಗಳಿಸಿದ್ದಾರೆ.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ