AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ತೂಫಾನ್ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

Suryakumar Yadav Records: ಟೀಮ್ ಇಂಡಿಯಾ ಪರ 3 ಸ್ಪೋಟಕ ಶತಕ ಸಿಡಿಸಿದ ವಿಶೇಷ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಅಂದರೆ 50 ಕ್ಕಿಂತ ಕಡಿಮೆ ಬಾಲ್​ನಲ್ಲಿ ಸೂರ್ಯ ಮೂರು ಶತಕ ಬಾರಿಸಿದ್ದಾರೆ.

TV9 Web
| Edited By: |

Updated on:Jan 07, 2023 | 11:07 PM

Share
ರಾಜ್​ಕೋಟ್​ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್​ ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ ಸಿಡಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯ 45 ಎಸೆತಗಳಲ್ಲಿ ಶತಕ ಪೂರೈಸಿದರು.

ರಾಜ್​ಕೋಟ್​ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್​ ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ ಸಿಡಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯ 45 ಎಸೆತಗಳಲ್ಲಿ ಶತಕ ಪೂರೈಸಿದರು.

1 / 6
ಇದರೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 3 ಸ್ಪೋಟಕ ಶತಕ ಸಿಡಿಸಿದ ವಿಶೇಷ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಅಂದರೆ 50 ಕ್ಕಿಂತ ಕಡಿಮೆ ಬಾಲ್​ನಲ್ಲಿ ಸೂರ್ಯ ಮೂರು ಶತಕ ಬಾರಿಸಿದ್ದಾರೆ.

ಇದರೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 3 ಸ್ಪೋಟಕ ಶತಕ ಸಿಡಿಸಿದ ವಿಶೇಷ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಅಂದರೆ 50 ಕ್ಕಿಂತ ಕಡಿಮೆ ಬಾಲ್​ನಲ್ಲಿ ಸೂರ್ಯ ಮೂರು ಶತಕ ಬಾರಿಸಿದ್ದಾರೆ.

2 / 6
ಈ ಹಿಂದೆ ಇಂಗ್ಲೆಂಡ್ ವಿರುದ್ಧ 48 ಎಸೆತಗಳಲ್ಲಿ ಹಾಗೂ ನ್ಯೂಜಿಲೆಂಡ್ ವಿರುದ್ಧ 49 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಕೇವಲ 45 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 50 ಕ್ಕಿಂತ ಕಡಿಮೆ ಎಸೆತಗಳಲ್ಲಿ ಮೂರು ಶತಕ ಬಾರಿಸಿದ ಏಕೈಕ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಈ ಹಿಂದೆ ಇಂಗ್ಲೆಂಡ್ ವಿರುದ್ಧ 48 ಎಸೆತಗಳಲ್ಲಿ ಹಾಗೂ ನ್ಯೂಜಿಲೆಂಡ್ ವಿರುದ್ಧ 49 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಕೇವಲ 45 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 50 ಕ್ಕಿಂತ ಕಡಿಮೆ ಎಸೆತಗಳಲ್ಲಿ ಮೂರು ಶತಕ ಬಾರಿಸಿದ ಏಕೈಕ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

3 / 6
ಇದಲ್ಲದೆ ಭಾರತ ತಂಡದ ಪರ 3 ಟಿ20 ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ಒಟ್ಟು 4 ಟಿ20 ಶತಕ ಬಾರಿಸಿದ್ದಾರೆ. ಇದೀಗ 3 ಸೆಂಚುರಿ ಸಿಡಿಸುವ ಮೂಲಕ ಸೂರ್ಯ 2ನೇ ಸ್ಥಾನಕ್ಕೇರಿದ್ದಾರೆ.

ಇದಲ್ಲದೆ ಭಾರತ ತಂಡದ ಪರ 3 ಟಿ20 ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ಒಟ್ಟು 4 ಟಿ20 ಶತಕ ಬಾರಿಸಿದ್ದಾರೆ. ಇದೀಗ 3 ಸೆಂಚುರಿ ಸಿಡಿಸುವ ಮೂಲಕ ಸೂರ್ಯ 2ನೇ ಸ್ಥಾನಕ್ಕೇರಿದ್ದಾರೆ.

4 / 6
ಇನ್ನು ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್​ಮ್ಯಾನ್ 2017 ರಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದರು.

ಇನ್ನು ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್​ಮ್ಯಾನ್ 2017 ರಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದರು.

5 / 6
ಇದೀಗ ಶ್ರೀಲಂಕಾ ವಿರುದ್ಧವೇ 45 ಎಸೆತಗಳಲ್ಲಿ  ಶತಕ ಪೂರೈಸಿರುವ ಸೂರ್ಯಕುಮಾರ್ ಯಾದವ್ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಸೂರ್ಯ 9 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಅಜೇಯ 112 ರನ್​ ಚಚ್ಚಿದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಇದೀಗ ಶ್ರೀಲಂಕಾ ವಿರುದ್ಧವೇ 45 ಎಸೆತಗಳಲ್ಲಿ ಶತಕ ಪೂರೈಸಿರುವ ಸೂರ್ಯಕುಮಾರ್ ಯಾದವ್ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಸೂರ್ಯ 9 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಅಜೇಯ 112 ರನ್​ ಚಚ್ಚಿದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

6 / 6

Published On - 10:17 pm, Sat, 7 January 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ