AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chris Lynn: 6,6,6,6,6: ಕ್ರಿಸ್ ಲಿನ್ ತೂಫಾನ್ ಶತಕ

T20 BLAST 2023: ನಾರ್ಥಾಂಪ್ಟನ್‌ಶೈರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಲೀಸೆಸ್ಟರ್‌ಶೈರ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Jun 03, 2023 | 11:28 PM

T20 BLAST 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​ ಲೀಗ್​ನಲ್ಲಿ ಆಸ್ಟ್ರೇಲಿಯಾ ಆಟಗಾರ ಕ್ರಿಸ್ ಲಿನ್ ಸಿಡಿಲಬ್ಬರದ ಶತಕ ಸಿಡಿಸಿ ಅಬ್ಬರಿಸಿದ್ದಾರೆ.

T20 BLAST 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​ ಲೀಗ್​ನಲ್ಲಿ ಆಸ್ಟ್ರೇಲಿಯಾ ಆಟಗಾರ ಕ್ರಿಸ್ ಲಿನ್ ಸಿಡಿಲಬ್ಬರದ ಶತಕ ಸಿಡಿಸಿ ಅಬ್ಬರಿಸಿದ್ದಾರೆ.

1 / 8
ನಾರ್ಥಾಂಪ್ಟನ್‌ಶೈರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಲೀಸೆಸ್ಟರ್‌ಶೈರ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. 56 ರನ್​ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಆ ಬಳಿಕ ಲೂಯಿಸ್ ಕಿಂಬರ್ ಆಸರೆಯಾದರು.

ನಾರ್ಥಾಂಪ್ಟನ್‌ಶೈರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಲೀಸೆಸ್ಟರ್‌ಶೈರ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. 56 ರನ್​ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಆ ಬಳಿಕ ಲೂಯಿಸ್ ಕಿಂಬರ್ ಆಸರೆಯಾದರು.

2 / 8
27 ಎಸೆತಗಳನ್ನು ಎದುರಿಸಿದ ಕಿಂಬರ್ 3 ಭರ್ಜರಿ ಸಿಕ್ಸರ್ ಹಾಗೂ 2 ಫೋರ್​ನೊಂದಿಗೆ 41 ರನ್ ಚಚ್ಚಿದರು. ಪರಿಣಾಮ 20 ಓವರ್​ ಮುಕ್ತಾಯದ ವೇಳೆಗೆ ಲೀಸೆಸ್ಟರ್‌ಶೈರ್ ತಂಡವು 8 ವಿಕೆಟ್ ಕಳೆದುಕೊಂಡು 164 ರನ್​ ಕಲೆಹಾಕಿತು.

27 ಎಸೆತಗಳನ್ನು ಎದುರಿಸಿದ ಕಿಂಬರ್ 3 ಭರ್ಜರಿ ಸಿಕ್ಸರ್ ಹಾಗೂ 2 ಫೋರ್​ನೊಂದಿಗೆ 41 ರನ್ ಚಚ್ಚಿದರು. ಪರಿಣಾಮ 20 ಓವರ್​ ಮುಕ್ತಾಯದ ವೇಳೆಗೆ ಲೀಸೆಸ್ಟರ್‌ಶೈರ್ ತಂಡವು 8 ವಿಕೆಟ್ ಕಳೆದುಕೊಂಡು 164 ರನ್​ ಕಲೆಹಾಕಿತು.

3 / 8
165 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ನಾರ್ಥಾಂಪ್ಟನ್‌ಶೈರ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಎಮಿಲಿಯೋ ಕೇವಲ 13 ರನ್​ಗಳಿಸಿ ಔಟಾದರು. ಆದರೆ ಮತ್ತೊಂದೆಡೆ ಅಬ್ಬರ ಶುರು ಮಾಡಿದ ಕ್ರಿಸ್ ಲಿನ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

165 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ನಾರ್ಥಾಂಪ್ಟನ್‌ಶೈರ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಎಮಿಲಿಯೋ ಕೇವಲ 13 ರನ್​ಗಳಿಸಿ ಔಟಾದರು. ಆದರೆ ಮತ್ತೊಂದೆಡೆ ಅಬ್ಬರ ಶುರು ಮಾಡಿದ ಕ್ರಿಸ್ ಲಿನ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

4 / 8
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಲಿನ್ ಮೈದಾನದ ಮೂಲೆ ಮೂಲೆಗೆ ಚೆಂಡನ್ನಟ್ಟಿದರು. ಪರಿಣಾಮ 10 ಓವರ್​ ಮುಕ್ತಾಯದ ವೇಳೆಗೆ ತಂಡದ ಮೊತ್ತ 100ರ ಗಡಿದಾಟಿತು. ಇದಾಗ್ಯೂ ಲಿನ್ ಅಬ್ಬರ ಮಾತ್ರ ಕಡಿಮೆಯಾಗಿರಲಿಲ್ಲ.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಲಿನ್ ಮೈದಾನದ ಮೂಲೆ ಮೂಲೆಗೆ ಚೆಂಡನ್ನಟ್ಟಿದರು. ಪರಿಣಾಮ 10 ಓವರ್​ ಮುಕ್ತಾಯದ ವೇಳೆಗೆ ತಂಡದ ಮೊತ್ತ 100ರ ಗಡಿದಾಟಿತು. ಇದಾಗ್ಯೂ ಲಿನ್ ಅಬ್ಬರ ಮಾತ್ರ ಕಡಿಮೆಯಾಗಿರಲಿಲ್ಲ.

5 / 8
5 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳನ್ನು ಚಚ್ಚಿದ ಕ್ರಿಸ್ ಲಿನ್ ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಶತಕ ಪೂರೈಸಿದರು. ಅಲ್ಲದೆ 68 ಎಸೆತಗಳಲ್ಲಿ ಅಜೇಯ 110 ರನ್ ಬಾರಿಸುವ ಮೂಲಕ 18.5 ಓವರ್​ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದರು.

5 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳನ್ನು ಚಚ್ಚಿದ ಕ್ರಿಸ್ ಲಿನ್ ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಶತಕ ಪೂರೈಸಿದರು. ಅಲ್ಲದೆ 68 ಎಸೆತಗಳಲ್ಲಿ ಅಜೇಯ 110 ರನ್ ಬಾರಿಸುವ ಮೂಲಕ 18.5 ಓವರ್​ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದರು.

6 / 8
ಭರ್ಜರಿ ಸೆಂಚುರಿ ಸಿಡಿಸಿ ನಾರ್ಥಾಂಪ್ಟನ್‌ಶೈರ್ ತಂಡದ ಗೆಲುವಿನ ರೂವಾರಿಯಾದ ಕ್ರಿಸ್ ಲಿನ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

ಭರ್ಜರಿ ಸೆಂಚುರಿ ಸಿಡಿಸಿ ನಾರ್ಥಾಂಪ್ಟನ್‌ಶೈರ್ ತಂಡದ ಗೆಲುವಿನ ರೂವಾರಿಯಾದ ಕ್ರಿಸ್ ಲಿನ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

7 / 8
ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ 2 ಕೋಟಿ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಲಿನ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಶತಕ ಸಿಡಿಸುವ ಮೂಲಕ ಮತ್ತೊಮ್ಮೆ ಲಿನ್ ತಮ್ಮ ಸ್ಪೋಟಕ ಬ್ಯಾಟಿಂಗ್​ನ ಝಲಕ್ ತೋರಿಸಿದ್ದಾರೆ.

ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ 2 ಕೋಟಿ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಲಿನ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಶತಕ ಸಿಡಿಸುವ ಮೂಲಕ ಮತ್ತೊಮ್ಮೆ ಲಿನ್ ತಮ್ಮ ಸ್ಪೋಟಕ ಬ್ಯಾಟಿಂಗ್​ನ ಝಲಕ್ ತೋರಿಸಿದ್ದಾರೆ.

8 / 8
Follow us
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ