AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!

India vs Pakistan T20 World Cup 2022: ಅಕ್ಟೋಬರ್ 23 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ 2022 ರ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Oct 15, 2022 | 9:24 PM

Share
ಟಿ20 ವಿಶ್ವಕಪ್​ನಲ್ಲಿನ ಮಹಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 23 ರಂದು ನಡೆಯಲಿರುವ ಭಾರತ-ಪಾಕ್ ನಡುವಣ ಪಂದ್ಯಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಈ ಬಾರಿ ಅದು ಕೇವಲ ಇಂಡೋ-ಪಾಕ್ ಕದನವಾಗಿರುವುದಿಲ್ಲ. ಬದಲಾಗಿ ಸೂರ್ಯಕುಮಾರ್ vs ಮೊಹಮ್ಮದ್ ರಿಜ್ವಾನ್ ಕೂಡ ಆಗಿರಲಿದೆ.

ಟಿ20 ವಿಶ್ವಕಪ್​ನಲ್ಲಿನ ಮಹಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 23 ರಂದು ನಡೆಯಲಿರುವ ಭಾರತ-ಪಾಕ್ ನಡುವಣ ಪಂದ್ಯಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಈ ಬಾರಿ ಅದು ಕೇವಲ ಇಂಡೋ-ಪಾಕ್ ಕದನವಾಗಿರುವುದಿಲ್ಲ. ಬದಲಾಗಿ ಸೂರ್ಯಕುಮಾರ್ vs ಮೊಹಮ್ಮದ್ ರಿಜ್ವಾನ್ ಕೂಡ ಆಗಿರಲಿದೆ.

1 / 6
ಏಕೆಂದರೆ ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅದರಲ್ಲೂ ಇತ್ತೀಚೆಗೆ ನ್ಯೂಜಿಲೆಂಡ್​ನಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದ ಮೂಲಕ ಈ ವರ್ಷ ಟಿ20ಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಏಕೆಂದರೆ ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅದರಲ್ಲೂ ಇತ್ತೀಚೆಗೆ ನ್ಯೂಜಿಲೆಂಡ್​ನಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದ ಮೂಲಕ ಈ ವರ್ಷ ಟಿ20ಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

2 / 6
ಆದರೆ ಇತ್ತ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಸಹ ಹಿಂದೆ ಬಿದ್ದಿಲ್ಲ. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯ ಈ ವರ್ಷ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇಲ್ಲಿ ಸೂರ್ಯಕುಮಾರ್ ಹಾಗೂ ಮೊಹಮ್ಮದ್ ರಿಜ್ವಾನ್ ನಡುವಣ ರನ್​ಗಳ ವತ್ಯಾಸ ಕೇವಲ 20. ಹೀಗಾಗಿಯೇ ಭಾರತ - ಪಾಕ್ ನಡುವಣ ಪಂದ್ಯದ ಮೂಲಕ ಯಾರು ನಂಬರ್ 1 ಆಗಲಿದ್ದಾರೆ ಎಂಬ ಕುತೂಹಲ ಕೂಡ ಮನೆ ಮಾಡಿದೆ.

ಆದರೆ ಇತ್ತ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಸಹ ಹಿಂದೆ ಬಿದ್ದಿಲ್ಲ. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯ ಈ ವರ್ಷ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇಲ್ಲಿ ಸೂರ್ಯಕುಮಾರ್ ಹಾಗೂ ಮೊಹಮ್ಮದ್ ರಿಜ್ವಾನ್ ನಡುವಣ ರನ್​ಗಳ ವತ್ಯಾಸ ಕೇವಲ 20. ಹೀಗಾಗಿಯೇ ಭಾರತ - ಪಾಕ್ ನಡುವಣ ಪಂದ್ಯದ ಮೂಲಕ ಯಾರು ನಂಬರ್ 1 ಆಗಲಿದ್ದಾರೆ ಎಂಬ ಕುತೂಹಲ ಕೂಡ ಮನೆ ಮಾಡಿದೆ.

3 / 6
2022 ರಲ್ಲಿ 23 ಟಿ20 ಇನಿಂಗ್ಸ್ ಮೂಲಕ ಸೂರ್ಯಕುಮಾರ್ ಯಾದವ್ 801 ರನ್​ ಕಲೆಹಾಕಿದರೆ, ಪಾಕ್ ಆಟಗಾರ ಮೊಹಮ್ಮದ್ ರಿಜ್ವಾನ್ 18 ಇನಿಂಗ್ಸ್​ನಲ್ಲಿ 821 ರನ್ ಬಾರಿಸಿದ್ದಾರೆ. ಹೀಗಾಗಿ ಪಾಕ್ ವಿರುದ್ಧದ ಪಂದ್ಯದ ಮೂಲಕ ರಿಜ್ವಾನ್ ಅವರನ್ನು ಹಿಂದಿಕ್ಕುವ ಅವಕಾಶ ಸೂರ್ಯಕುಮಾರ್ ಮುಂದಿದೆ.

2022 ರಲ್ಲಿ 23 ಟಿ20 ಇನಿಂಗ್ಸ್ ಮೂಲಕ ಸೂರ್ಯಕುಮಾರ್ ಯಾದವ್ 801 ರನ್​ ಕಲೆಹಾಕಿದರೆ, ಪಾಕ್ ಆಟಗಾರ ಮೊಹಮ್ಮದ್ ರಿಜ್ವಾನ್ 18 ಇನಿಂಗ್ಸ್​ನಲ್ಲಿ 821 ರನ್ ಬಾರಿಸಿದ್ದಾರೆ. ಹೀಗಾಗಿ ಪಾಕ್ ವಿರುದ್ಧದ ಪಂದ್ಯದ ಮೂಲಕ ರಿಜ್ವಾನ್ ಅವರನ್ನು ಹಿಂದಿಕ್ಕುವ ಅವಕಾಶ ಸೂರ್ಯಕುಮಾರ್ ಮುಂದಿದೆ.

4 / 6
ಅಷ್ಟೇ ಅಲ್ಲದೆ ಟಿ20 ಶ್ರೇಯಾಂಕ ಪಟ್ಟಿಯಲ್ಲೂ ಈ ಪೈಪೋಟಿ ಕಂಡು ಬರಲಿದೆ. ಅಂದರೆ ಪ್ರಸ್ತುತ ಟಿ20 ರ್ಯಾಂಕಿಂಗ್​ನಲ್ಲಿ ಮೊಹಮ್ಮದ್ ರಿಜ್ವಾನ್ ನಂಬರ್ 1 ಸ್ಥಾನದಲ್ಲಿದ್ದರೆ, ಸೂರ್ಯಕುಮಾರ್ ಯಾದವ್ 2ನೇ ಸ್ಥಾನ ಅಲಂಕರಿಸಿದ್ದಾರೆ.

ಅಷ್ಟೇ ಅಲ್ಲದೆ ಟಿ20 ಶ್ರೇಯಾಂಕ ಪಟ್ಟಿಯಲ್ಲೂ ಈ ಪೈಪೋಟಿ ಕಂಡು ಬರಲಿದೆ. ಅಂದರೆ ಪ್ರಸ್ತುತ ಟಿ20 ರ್ಯಾಂಕಿಂಗ್​ನಲ್ಲಿ ಮೊಹಮ್ಮದ್ ರಿಜ್ವಾನ್ ನಂಬರ್ 1 ಸ್ಥಾನದಲ್ಲಿದ್ದರೆ, ಸೂರ್ಯಕುಮಾರ್ ಯಾದವ್ 2ನೇ ಸ್ಥಾನ ಅಲಂಕರಿಸಿದ್ದಾರೆ.

5 / 6
ಹಾಗಾಗಿ ಸಾಂಪ್ರದಾಯಿಕ ಎದುರಾಳಿಗಳ ಕದನದಲ್ಲಿ ಉಭಯ ಆಟಗಾರರ ನಡುವೆ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಹಾಗಾಗಿ ಸಾಂಪ್ರದಾಯಿಕ ಎದುರಾಳಿಗಳ ಕದನದಲ್ಲಿ ಉಭಯ ಆಟಗಾರರ ನಡುವೆ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

6 / 6
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ