AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಮತ್ತೆ ಮುಗ್ಗರಿಸಿದ ರೋಹಿತ್ ಶರ್ಮಾ: ನಾಯಕನೇ ಈಗ ದೊಡ್ಡ ಚಿಂತೆ

T20 World Cup 2022: ಟೀಮ್ ಇಂಡಿಯಾ ಬೌಲಿಂಗ್ ವಿಭಾಗವು ಹೇಳಿಕೊಳ್ಳುವಂತಹ ಬಲಿಷ್ಠವಾಗಿಲ್ಲ ಎಂಬುದು ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾಕಪ್, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ಸರಣಿಗಳ ಮೂಲಕ ನಿರೂಪಿತವಾಗಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Oct 10, 2022 | 1:25 PM

Share
ಟಿ20 ವಿಶ್ವಕಪ್​ ಗೆಲ್ಲಬೇಕಾದರೆ ಟೀಮ್ ಇಂಡಿಯಾ ಅತ್ಯುತ್ತಮ ಆರಂಭ ಪಡೆಯಲೇಬೇಕು. ಅಷ್ಟೇ ಅಲ್ಲದೆ ದೊಡ್ಡ ಮೊತ್ತದತ್ತ ಮುಖ ಮಾಡಬೇಕಾಗುತ್ತದೆ. ಏಕೆಂದರೆ ಟೀಮ್ ಇಂಡಿಯಾ ಬೌಲಿಂಗ್ ವಿಭಾಗವು ಹೇಳಿಕೊಳ್ಳುವಂತಹ ಬಲಿಷ್ಠವಾಗಿಲ್ಲ ಎಂಬುದು ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾಕಪ್, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ಸರಣಿಗಳ ಮೂಲಕ ನಿರೂಪಿತವಾಗಿದೆ.

ಟಿ20 ವಿಶ್ವಕಪ್​ ಗೆಲ್ಲಬೇಕಾದರೆ ಟೀಮ್ ಇಂಡಿಯಾ ಅತ್ಯುತ್ತಮ ಆರಂಭ ಪಡೆಯಲೇಬೇಕು. ಅಷ್ಟೇ ಅಲ್ಲದೆ ದೊಡ್ಡ ಮೊತ್ತದತ್ತ ಮುಖ ಮಾಡಬೇಕಾಗುತ್ತದೆ. ಏಕೆಂದರೆ ಟೀಮ್ ಇಂಡಿಯಾ ಬೌಲಿಂಗ್ ವಿಭಾಗವು ಹೇಳಿಕೊಳ್ಳುವಂತಹ ಬಲಿಷ್ಠವಾಗಿಲ್ಲ ಎಂಬುದು ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾಕಪ್, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ಸರಣಿಗಳ ಮೂಲಕ ನಿರೂಪಿತವಾಗಿದೆ.

1 / 6
ಆದರೆ ಮತ್ತೊಂದೆಡೆ ಟೀಮ್ ಇಂಡಿಯಾ ಅತ್ಯುತ್ತಮ ಆರಂಭ ಪಡೆಯುವಲ್ಲಿಯೂ ವಿಫಲವಾಗುತ್ತಿದೆ. ಅದರಲ್ಲೂ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ನಾಯಕ ರೋಹಿತ್ ಶರ್ಮಾ ಬೇಗನೆ ಔಟ್ ಆಗುತ್ತಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಆದರೆ ಮತ್ತೊಂದೆಡೆ ಟೀಮ್ ಇಂಡಿಯಾ ಅತ್ಯುತ್ತಮ ಆರಂಭ ಪಡೆಯುವಲ್ಲಿಯೂ ವಿಫಲವಾಗುತ್ತಿದೆ. ಅದರಲ್ಲೂ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ನಾಯಕ ರೋಹಿತ್ ಶರ್ಮಾ ಬೇಗನೆ ಔಟ್ ಆಗುತ್ತಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ.

2 / 6
ಈ ಕಳಪೆ ಫಾರ್ಮ್​ ಇದೀಗ ಆಸ್ಟ್ರೇಲಿಯಾದಲ್ಲೂ ಮುಂದುವರೆದಿದೆ. ಟಿ20 ವಿಶ್ವಕಪ್​ಗೂ ಮುನ್ನ ನಡೆದ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 3 ರನ್ ಗಳಿಸಿ ಔಟಾದರು. ಜೇಸನ್ ಬೆಹ್ರೆನ್‌ಡಾರ್ಫ್ ಎಸೆತದಲ್ಲಿ ಹಿಟ್​ಮ್ಯಾನ್ ವಿಕೆಟ್ ಒಪ್ಪಿಸಿ ಹೊರನಡೆದರು. ಟೀಮ್ ಇಂಡಿಯಾ ನಾಯಕ ಬೇಗನೆ ಔಟ್ ಆಗುತ್ತಿರುವುದೇ ಈಗ ಹೊಸ ಚಿಂತೆಯನ್ನು ಹುಟ್ಟುಹಾಕಿದೆ.

ಈ ಕಳಪೆ ಫಾರ್ಮ್​ ಇದೀಗ ಆಸ್ಟ್ರೇಲಿಯಾದಲ್ಲೂ ಮುಂದುವರೆದಿದೆ. ಟಿ20 ವಿಶ್ವಕಪ್​ಗೂ ಮುನ್ನ ನಡೆದ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 3 ರನ್ ಗಳಿಸಿ ಔಟಾದರು. ಜೇಸನ್ ಬೆಹ್ರೆನ್‌ಡಾರ್ಫ್ ಎಸೆತದಲ್ಲಿ ಹಿಟ್​ಮ್ಯಾನ್ ವಿಕೆಟ್ ಒಪ್ಪಿಸಿ ಹೊರನಡೆದರು. ಟೀಮ್ ಇಂಡಿಯಾ ನಾಯಕ ಬೇಗನೆ ಔಟ್ ಆಗುತ್ತಿರುವುದೇ ಈಗ ಹೊಸ ಚಿಂತೆಯನ್ನು ಹುಟ್ಟುಹಾಕಿದೆ.

3 / 6
ಏಕೆಂದರೆ ರೋಹಿತ್ ಶರ್ಮಾ ತುಂಬಾ ಕೆಟ್ಟ ಫಾರ್ಮ್‌ನಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅವರು 3 ಪಂದ್ಯಗಳಲ್ಲಿ ಕೇವಲ 43 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಅದರಲ್ಲಿ ಎರಡು ಪಂದ್ಯಗಳಲ್ಲಿ ಖಾತೆ ತೆರೆದಿರಲಿಲ್ಲ. ಅಂದರೆ ಶೂನ್ಯಕ್ಕೆ ಔಟಾಗಿದ್ದರು. ಇದೀಗ ಮತ್ತೊಮ್ಮೆ ಒಂದಂಕಿ ಮೊತ್ತಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.

ಏಕೆಂದರೆ ರೋಹಿತ್ ಶರ್ಮಾ ತುಂಬಾ ಕೆಟ್ಟ ಫಾರ್ಮ್‌ನಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅವರು 3 ಪಂದ್ಯಗಳಲ್ಲಿ ಕೇವಲ 43 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಅದರಲ್ಲಿ ಎರಡು ಪಂದ್ಯಗಳಲ್ಲಿ ಖಾತೆ ತೆರೆದಿರಲಿಲ್ಲ. ಅಂದರೆ ಶೂನ್ಯಕ್ಕೆ ಔಟಾಗಿದ್ದರು. ಇದೀಗ ಮತ್ತೊಮ್ಮೆ ಒಂದಂಕಿ ಮೊತ್ತಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.

4 / 6
ಹಾಗೆಯೇ ಕಳೆದ 11 ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್‌ನಿಂದ ಕೇವಲ ಒಂದು ಅರ್ಧಶತಕ ಮಾತ್ರ ಮೂಡಿ ಬಂದಿದೆ. ಇನ್ನು ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ವಿರುದ್ದ ಸರಣಿಯಲ್ಲಿ ಸಂಪೂರ್ಣ ವಿಫಲರಾಗಿದ್ದರು.

ಹಾಗೆಯೇ ಕಳೆದ 11 ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್‌ನಿಂದ ಕೇವಲ ಒಂದು ಅರ್ಧಶತಕ ಮಾತ್ರ ಮೂಡಿ ಬಂದಿದೆ. ಇನ್ನು ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ವಿರುದ್ದ ಸರಣಿಯಲ್ಲಿ ಸಂಪೂರ್ಣ ವಿಫಲರಾಗಿದ್ದರು.

5 / 6
ಅಷ್ಟೇ ಅಲ್ಲದೆ ಈ ವರ್ಷ ಟಿ20 ಕ್ರಿಕೆಟ್​ನಲ್ಲಿ 23 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಕಲೆಹಾಕಿರುವುದು ಕೇವಲ 540 ರನ್​ಗಳು ಮಾತ್ರ. ಅಂದರೆ ಬ್ಯಾಟಿಂಗ್ ಸರಾಸರಿ ಕೇವಲ 25.71 ಇದೆಯಷ್ಟೇ. ಈ ವೇಳೆ ಅವರ ಬ್ಯಾಟ್‌ನಿಂದ ಮೂಡಿಬಂದಿರುವುದು ಕೇವಲ 2 ಅರ್ಧಶತಕಗಳು ಮಾತ್ರ. ಇದೀಗ ಅಭ್ಯಾಸ ಪಂದ್ಯದಲ್ಲೂ ರೋಹಿತ್ ಶರ್ಮಾ ಮುಗ್ಗರಿಸುವ ಮೂಲಕ ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದ್ದಾರೆ.

ಅಷ್ಟೇ ಅಲ್ಲದೆ ಈ ವರ್ಷ ಟಿ20 ಕ್ರಿಕೆಟ್​ನಲ್ಲಿ 23 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಕಲೆಹಾಕಿರುವುದು ಕೇವಲ 540 ರನ್​ಗಳು ಮಾತ್ರ. ಅಂದರೆ ಬ್ಯಾಟಿಂಗ್ ಸರಾಸರಿ ಕೇವಲ 25.71 ಇದೆಯಷ್ಟೇ. ಈ ವೇಳೆ ಅವರ ಬ್ಯಾಟ್‌ನಿಂದ ಮೂಡಿಬಂದಿರುವುದು ಕೇವಲ 2 ಅರ್ಧಶತಕಗಳು ಮಾತ್ರ. ಇದೀಗ ಅಭ್ಯಾಸ ಪಂದ್ಯದಲ್ಲೂ ರೋಹಿತ್ ಶರ್ಮಾ ಮುಗ್ಗರಿಸುವ ಮೂಲಕ ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದ್ದಾರೆ.

6 / 6
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?