IND vs BAN: ಜಯದ ನಡುವೆಯೂ ತಂಡದ ನ್ಯೂನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಾರ್ದಿಕ್ ಪಾಂಡ್ಯ

T20 World Cup 2024 Hardik Pandya: ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ, ಸೆಮಿಫೈನಲ್‌ಗೂ ಮುನ್ನ ಟೀಂ ಇಂಡಿಯಾದ ಚಿಂತೆ ಏನು ಎಂಬುದನ್ನು ಬಹಿರಂಗಪಡಿಸಿದರು. ತಂಡದ ನ್ಯೂನತೆಯ ಬಗ್ಗೆ ಮಾತನಾಡಿದ ಹಾರ್ದಿಕ್ ಪಾಂಡ್ಯ, ತಂಡವಾಗಿ ನಾವು ಹಲವು ಕಡೆಗಳಲ್ಲಿ ಸುಧಾರಿಸಿಕೊಳ್ಳಬಹುದು. ನಾವು ನಿರಂತರವಾಗಿ ವಿಕೆಟ್ ಕಳೆದುಕೊಳ್ಳುವ ವಿಧಾನವನ್ನು ಸುಧಾರಿಸಬಹುದು ಎಂದರು.

|

Updated on: Jun 23, 2024 | 3:58 PM

ಐಪಿಎಲ್​ನಲ್ಲಿ ನಾಯಕನಾಗಿ ಹಾಗೂ ವೈಯಕ್ತಿಕವಾಗಿಯೂ ತನ್ನ ಕಳಪೆ ಪ್ರದರ್ಶನದಿಂದಾಗಿ ಕ್ರಿಕೆಟ್ ಪರಿಣಿತರಿಂದ ಹಿಡಿದು ಅಭಿಮಾನಿಗಳವರೆಗೆ ಎಲ್ಲರಿಂದಲೂ ಅಪಮಾನಕ್ಕೊಳಗಾಗಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲಿ ತಂಡದ ಪರ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡುತ್ತಿದ್ದಾರೆ.

ಐಪಿಎಲ್​ನಲ್ಲಿ ನಾಯಕನಾಗಿ ಹಾಗೂ ವೈಯಕ್ತಿಕವಾಗಿಯೂ ತನ್ನ ಕಳಪೆ ಪ್ರದರ್ಶನದಿಂದಾಗಿ ಕ್ರಿಕೆಟ್ ಪರಿಣಿತರಿಂದ ಹಿಡಿದು ಅಭಿಮಾನಿಗಳವರೆಗೆ ಎಲ್ಲರಿಂದಲೂ ಅಪಮಾನಕ್ಕೊಳಗಾಗಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲಿ ತಂಡದ ಪರ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡುತ್ತಿದ್ದಾರೆ.

1 / 6
ಇದುವರೆಗೆ ಆಡಿರುವ ಎಲ್ಲಾ ಪಂದ್ಯಗಳಲ್ಲೂ ಪಾಂಡ್ಯ, ಬ್ಯಾಟ್​ನಿಂದ ಅಥವಾ ಬಾಲ್​ನಿಂದ ಅದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿನ ಓಟದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ನಿನ್ನೆ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲೂ ಪಾಂಡ್ಯ ತನ್ನ ಆಲ್​ರೌಂಡರ್ ಆಟದಿಂದಾಗಿ ತಂಡದ ಗೆಲುವಿನ ರೂವಾರಿ ಎನಿಸಿಕೊಂಡರು.

ಇದುವರೆಗೆ ಆಡಿರುವ ಎಲ್ಲಾ ಪಂದ್ಯಗಳಲ್ಲೂ ಪಾಂಡ್ಯ, ಬ್ಯಾಟ್​ನಿಂದ ಅಥವಾ ಬಾಲ್​ನಿಂದ ಅದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿನ ಓಟದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ನಿನ್ನೆ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲೂ ಪಾಂಡ್ಯ ತನ್ನ ಆಲ್​ರೌಂಡರ್ ಆಟದಿಂದಾಗಿ ತಂಡದ ಗೆಲುವಿನ ರೂವಾರಿ ಎನಿಸಿಕೊಂಡರು.

2 / 6
ಮೊದಲು ಬ್ಯಾಟಿಂಗ್​ನಲ್ಲಿ ಕೇವಲ 27 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಅದ್ಭುತ ಸಿಕ್ಸರ್‌ಗಳ ನೆರವಿನಿಂದ 50 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಇದಲ್ಲದೇ ಬೌಲಿಂಗ್​ನಲ್ಲೂ ಮಿಂಚಿದ ಹಾರ್ದಿಕ್ 3 ಓವರ್​ಗಳಲ್ಲಿ 32 ರನ್ ನೀಡಿ ಒಂದು ವಿಕೆಟ್ ಪಡೆದರು. ಇದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಮೊದಲು ಬ್ಯಾಟಿಂಗ್​ನಲ್ಲಿ ಕೇವಲ 27 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಅದ್ಭುತ ಸಿಕ್ಸರ್‌ಗಳ ನೆರವಿನಿಂದ 50 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಇದಲ್ಲದೇ ಬೌಲಿಂಗ್​ನಲ್ಲೂ ಮಿಂಚಿದ ಹಾರ್ದಿಕ್ 3 ಓವರ್​ಗಳಲ್ಲಿ 32 ರನ್ ನೀಡಿ ಒಂದು ವಿಕೆಟ್ ಪಡೆದರು. ಇದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

3 / 6
ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ, ಸೆಮಿಫೈನಲ್‌ಗೂ ಮುನ್ನ ಟೀಂ ಇಂಡಿಯಾದ ಚಿಂತೆ ಏನು ಎಂಬುದನ್ನು ಬಹಿರಂಗಪಡಿಸಿದರು. ತಂಡದ ನ್ಯೂನತೆಯ ಬಗ್ಗೆ ಮಾತನಾಡಿದ ಹಾರ್ದಿಕ್ ಪಾಂಡ್ಯ, ತಂಡವಾಗಿ ನಾವು ಹಲವು ಕಡೆಗಳಲ್ಲಿ ಸುಧಾರಿಸಿಕೊಳ್ಳಬಹುದು. ನಾವು ನಿರಂತರವಾಗಿ ವಿಕೆಟ್ ಕಳೆದುಕೊಳ್ಳುವ ವಿಧಾನವನ್ನು ಸುಧಾರಿಸಬಹುದು.

ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ, ಸೆಮಿಫೈನಲ್‌ಗೂ ಮುನ್ನ ಟೀಂ ಇಂಡಿಯಾದ ಚಿಂತೆ ಏನು ಎಂಬುದನ್ನು ಬಹಿರಂಗಪಡಿಸಿದರು. ತಂಡದ ನ್ಯೂನತೆಯ ಬಗ್ಗೆ ಮಾತನಾಡಿದ ಹಾರ್ದಿಕ್ ಪಾಂಡ್ಯ, ತಂಡವಾಗಿ ನಾವು ಹಲವು ಕಡೆಗಳಲ್ಲಿ ಸುಧಾರಿಸಿಕೊಳ್ಳಬಹುದು. ನಾವು ನಿರಂತರವಾಗಿ ವಿಕೆಟ್ ಕಳೆದುಕೊಳ್ಳುವ ವಿಧಾನವನ್ನು ಸುಧಾರಿಸಬಹುದು.

4 / 6
ಇದರಿಂದಾಗಿ ತಂಡ ಇನ್ನಷ್ಟು ಉತ್ತಮ ಪ್ರದರ್ಶನ ನೀಡಬಲ್ಲದು. ನಾವು ನಿಜವಾಗಿಯೂ ಶ್ರೇಷ್ಠ ಕ್ರಿಕೆಟ್ ಆಡಿದ್ದೇವೆ. ತಂಡದ ಎಲ್ಲಾ ಆಟಗಾರರು ವೈಯಕ್ತಿಕವಾಗಿ ಅದ್ಭುತ ಪ್ರದರ್ಶನ ನೀಡಿದರು. ಅಲ್ಲದೆ ತಮ್ಮ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸಿದರು ಎಂದರು.

ಇದರಿಂದಾಗಿ ತಂಡ ಇನ್ನಷ್ಟು ಉತ್ತಮ ಪ್ರದರ್ಶನ ನೀಡಬಲ್ಲದು. ನಾವು ನಿಜವಾಗಿಯೂ ಶ್ರೇಷ್ಠ ಕ್ರಿಕೆಟ್ ಆಡಿದ್ದೇವೆ. ತಂಡದ ಎಲ್ಲಾ ಆಟಗಾರರು ವೈಯಕ್ತಿಕವಾಗಿ ಅದ್ಭುತ ಪ್ರದರ್ಶನ ನೀಡಿದರು. ಅಲ್ಲದೆ ತಮ್ಮ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸಿದರು ಎಂದರು.

5 / 6
ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 146 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಈ ಮೂಲಕ ಬಾಂಗ್ಲಾ ತಂಡದ ಸೆಮಿಫೈನಲ್ ಕನಸು ಭಗ್ನಗೊಂಡಿತು.

ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 146 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಈ ಮೂಲಕ ಬಾಂಗ್ಲಾ ತಂಡದ ಸೆಮಿಫೈನಲ್ ಕನಸು ಭಗ್ನಗೊಂಡಿತು.

6 / 6
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್